Pages

Monday, April 12, 2010

ಬಡವನಾರ್?

ಬಡವನಾರ್?
ಮಡದಿಯೊಲವಿನ ಸವಿಯನರಿಯದವನು|
ಹುಡುಗರಾಟದಿ ಬೆರೆತು ನಗಲರಿಯದವನು|
ಉಡುರಾಜನೋಲಗದಿ ಕುಳಿತು ಮೈಮರೆಯದವನು|
ಬಡಮನಸೆ ಬಡತನವೊ ಮರುಳ ಮುನಿಯ||

ಡಿ ವಿ ಜಿ ಯವರ ಚಿಂತನೆ ಎಂದರೆ ಅದ್ಭುತ! ಸಿರಿವಂತನಾರು? ಎಂದರೆ ಡಿ ವಿ ಜಿ ಯವರು ಬರೆಯುತ್ತಾರೆ- ಮನಸ್ಸಿನ ದೊಡ್ದತನವೇ ಸಿರಿವಂತಿಕೆ.ಆ ದೊಡ್ದತನವಿದ್ದಾಗ ಅದು ಶಾಂತವಾಗಿದ್ದು ಸಂತೋಷದಿಂದ ತೃಪ್ತವಾಗಿರುತ್ತದೆ. ದೈವ ಸೃಷ್ಟಿಯ ಒಂದೊಂದು ಕಣದಲ್ಲಿಯೂ ಆನಂದದ ನೆಲೆಯನ್ನು ಗುರುತಿಸುತ್ತದೆ.
ಬಡವನಾರು? ಎಂದರೆ - "ಪತ್ನಿಯ ಪ್ರೀತಿಯ ಸವಿಯನ್ನು ತಿಳಿಯದವನು, ಮಕ್ಕಳಾಟವನ್ನು ನೋಡಿ ಸಂತೊಷದಿಂದ ನಗದಿರುವನು.ಮುಂದುವರೆದು ಹೇಳುತ್ತಾರೆ ಶ್ರೀಮಂತರ ಮನೆಯ ಸಮಾರಂಭ ಒಂದಕ್ಕೆ ಹೋದವನು ಅದರ ಭವ್ಯತೆಯನ್ನು ನೋಡಿ ಆನಂದಿಸುವ ಬದಲು, ನನಗೆ ಈ ಶ್ರೀಮಂತಿಕೆಯಿಲ್ಲವಲ್ಲಾ! ಎಂದು ಅಸೂಯೆ ಪಡುವವನು. ಯಾರಲ್ಲಿ ಮನಸ್ಸು ಬಡವಾಗಿದೆ ಅವನೇ ಬಡವ."

1 comment: