Pages

Friday, July 23, 2010

ವೇದೋಕ್ತ ಜೀವನ ಪಥ

ಜೀವನ ಬುನಾದಿ -8
ವೇದ ಮತ್ತೆ ಮತ್ತೆ ಸಾರುತ್ತಲಿದೆ:
ಗೂಹತಾ ಗುಹ್ಯಂ ತಮೋ ವಿ ಯಾತ ವಿಶ್ವಮತ್ರಿಣಮ್ ಜ್ಯೋತಿಷ್ಕರ್ತಾ ಯದುಶ್ಮಸಿ (ಋಕ್.1.86.10)"ಮಾ ನೋ ದೀರ್ಘಾ ಅಭ ಸಹಸ್ತಮಿಸ್ರಾಃ" (ಋಕ್.2.27.14) -ಪ್ರಭೋ, ದೀರ್ಘವಾದ ಅಂಧಕಾರಗಳು ನಮ್ಮನ್ನು ಆವರಿಸದಿರಲಿ- ಎಂದೇ. ಭಕ್ತನ ಭಾವನಾಭರಿತ ಹೃದಯದ ಮೇಲೆ ಅಂಕಿತಗೊಳಿಸುವುದಾದರೂ - "ಜ್ಯೋತಿರ್ವೃಣೀತ ತಮಸೋ ವಿಜಾಸನ್""ಆರ್ಯಾ ಜ್ಯೋತಿಷಗ್ರಾಃ" (ಋಕ್.7.33.7)- ಜ್ಯೋತಿಯನ್ನು ಮುಂದಿಟ್ಟುಕೊಂಡು ಮುನ್ನಡೆಯುವವರೇ ಆರ್ಯರು- ಎಂಬ ಶಬ್ದಗಳಿಂದಲೇ. ವೇದಗಳ ಈ ಜ್ಯೋತಿ ಬೆಂಕಿಯಲ್ಲ, ಸೂರ್ಯನೂ ಅಲ್ಲ, ನಿಷ್ಕಲ್ಮಶವಾದ,ಪರಮ ಪರಿಷ್ಕೃತವಾದ ದಿವ್ಯಜ್ಞಾನ. (ಋಕ್.3.39.7) - ಅಂಧಕಾರದಿಂದ ದೂರಸರಿದು ಜ್ಯೋತಿಯನ್ನು ತುಂಬಿಕೊಳ್ಳಬೇಕು- ಎಂಬ ಪುನೀತ ಭಾವನೆಯನ್ನೇ. ಹೆಚ್ಚೇನು? ಆರ್ಯರ - ಶ್ರೇಷ್ಠರ ಸ್ಫುಟ ಚಿತ್ರವನ್ನು ಚಿತ್ರಿಸುವುದಾದರೂ

No comments:

Post a Comment