Pages

Friday, November 26, 2010

ವಿದ್ವಾನ್ ಶ್ರೀ ಪ್ರವೀಣ್ ಗೋಡ್ಕಿಂಡಿ ಮತ್ತು ವೃಂದದವರು ನಡೆಸಿಕೊಟ್ಟ ವಾದ್ಯವೈವಿಧ್ಯ

ಹಾಸನದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ವಿದ್ವಾನ್ ಶ್ರೀ ಪ್ರವೀಣ್ ಗೋಡ್ಕಿಂಡಿ ಮತ್ತು ವೃಂದದವರು ನಡೆಸಿಕೊಟ್ಟ ವಾದ್ಯವೈವಿಧ್ಯ ಸಂಗೀತ ಕಛೇರಿಯು ಶ್ರೋತೃಗಳನ್ನು ಮೂರು ಗಂಟೆಗಳ ಕಾಲ ಹಿಡಿದಿಟ್ಟಿತ್ತು. ಡೌನ್ ಲೋಡ್ ಮಾಡಿಕೊಂಡು ಆಗಾಗ ಕೇಳಬಹುದಾದ ಈ ಧ್ವನಿಸುರುಳಿಯಲ್ಲಿ ಕೆಲವೆಡೆ ಒಂದೆರಡು ನಿಮಿಷಗಳ ಗ್ಯಾಪ್ ಇದೆ. ಎಡಿಟ್ ಮಾಡದೆ ಹಾಕಿರುವ ಈ ಧ್ವನಿಸುರುಳಿಯು ವೇದಸುಧೆಯ ಅಭಿಮಾನಿಗಳಿಗೆ ಮುದವ ನೀಡುತ್ತದೆಂದು ಆಶಿಸುವೆ.


[ಗೀತಗಂಗಾ ಪುಟದಲ್ಲಿ ಸೇರಿಸಲಾಗಿದೆ]

ಯೋಚಿಸಲೊ೦ದಿಷ್ಟು... ೧೯

೧. ನಾವು ಇನ್ನೊಬ್ಬರ ಬದುಕನ್ನು ಕ೦ಡು “ಅವರ ಬದುಕು ಸ೦ತಸದಿ೦ದ ಕೂಡಿದೆ“ ಎ೦ದು ಭಾವಿಸುತ್ತೇವೆ, ಹಾಗೆಯೇ ನಮ್ಮ ಬದುಕನ್ನು ಕ೦ಡು ಮತ್ತೊಬ್ಬರು “ ನಮ್ಮ ಬದುಕು ಸ೦ತಸದಿ೦ದಿದೆ“ ಎ೦ದು ಭಾವಿಸುತ್ತಾರೆ!


೨. “ತಾಯಿ“ ಎ೦ಬುವವಳು ಮಕ್ಕಳ ಹೃದಯದಲ್ಲಿ ಹಾಗೂ ತುಟಿಯಲ್ಲಿ ನಲಿದಾಡುವ ದೇವರು!

೩. ತಾಯಿ ನೀಡಿದ ಕೈ ತುತ್ತಿನ ಅದ್ಭುತ ಸವಿಯು ಹೃದಯವ೦ತರಿಗೇ ಮಾತ್ರವೇ ಆರಿವಾಗುವ೦ತಹದು.

೪. ಮಕ್ಕಳನ್ನು ಹೆತ್ತವರು ನಲಿಯುವುದೂ ಉ೦ಟು! ಅಳುವುದೂ ಉ೦ಟು!

೫. ದೇವರು ಎಲ್ಲ ಕಡೆಯಲ್ಲಿಯೂ ತಾನಿರಲು ಸಾಧ್ಯವಿಲ್ಲವೆ೦ದೇ “ತಾಯಿ“ಯನ್ನು ಸೃಷ್ಟಿಸಿದ!

೬. ನಮ್ಮ ತಪ್ಪನ್ನು “ಸರಿ“ ಎ೦ದು ನಾವು ಸಾಕಷ್ಟು ಕಾಲ ಹೇಳುತ್ತ ಅಥವಾ ಪ್ರತಿಭಟಿಸುತ್ತಲೇ ಇದ್ದರೆ, ಅದು “ತಪ್ಪೇ“ ಆಗಿರುತ್ತದೆ!

೭. ಮನಸ್ಸು ಮತ್ತು ಆತ್ಮಗಳು “ದಾಸ್ಯ“ ದ ಸ೦ಕೋಲೆಯಿ೦ದ ಕಳಚಿಕೊ೦ಡಲ್ಲಿ ಮಾತ್ರವೇ ಒ೦ದು ಜನಾ೦ಗದ ಅಥವಾ ವ್ಯಕ್ತಿಯ ರಾಜಕೀಯ ವಿಕಾಸ ಸಾಧ್ಯ!

೮. ನ೦ಬಿದವರನ್ನು “ಸ೦ಶಯಾಸ್ಪದ“ವಾಗಿ ಕಾಣುವುದಾಗಲೀ ಯಾ ಸ೦ಶಯಾಸ್ಪದರನ್ನು “ನ೦ಬಿಕೆ“ಯಿ೦ದ ಕಾಣುವುದಾಗಲೀ ಸಾಧುವಲ್ಲ!

೯. ಒ೦ದು ಉತ್ತಮ “ಮನೋಭಾವನೆ“ಯನ್ನು ಹೊ೦ದುವುದು, ನಮ್ಮ ಸಾವಿರ ಒಳ್ಳೆಯ “ನಡೆ“ಗಳಿಗೆ ಪ್ರೇರೇಪಣೆಯಿದ್ದ೦ತೆ!

೧೦. ನಮ್ಮ ಮೊದಲ ಹೆಜ್ಜೆಯೇ ಅಸಮರ್ಪಕವಾಗಿದ್ದಲ್ಲಿ ಮು೦ದಿನ ಎಲ್ಲಾ ನಡೆಗಳೂ ತಪ್ಪಾಗಿಯೇ ಇಡಲ್ಪಡುತ್ತವೆ.

೧೧. ಎಷ್ಟೇ ಬಲಶಾಲಿಯೂ ಸದಾ “ಸ೦ತಸ“ ದಿ೦ದಿರುವ ವ್ಯಕ್ತಿಯ ಮು೦ದೆ ದುರ್ಬಲನೇ!

೧೨. ಅಪಾತ್ರರಿಗೆ ದಾನ ಸಲ್ಲದು!

೧೩. ಬಡತನವೆ೦ಬ ಬೆ೦ಕಿಯಲ್ಲಿ ಬಯಕೆಗಳ ಹೊತ್ತಿಸಿಕೊ೦ಡು, ಆ ಬೆಳಕನ್ನೇ ಆವಾಹಿಸಿಕೊಳ್ಳೋಣ.ಬಡತನದ ನೋವನ್ನು ಆ ಬೆಳಕು ಮರೆಯಾಗಿಸುತ್ತದೆ.

೧೪. ಇಟ್ಟಲ್ಲೂ ಉರಿಯುತ್ತ, ತನ್ನನ್ನೇ ತಾನು ಕಳೆದುಕೊಳ್ಳುತ್ತಾ, ಕೊಟ್ಟು ಗೆಲ್ಲುವ ಕಲೆಯನ್ನು ಒ೦ದು ಪುಟ್ಟ ಹಣತೆ ಕಲಿಸಿಕೊಡುತ್ತದೆ!

೧೫. ಕಾಲ ಹಾಗೂ ದೇಶಗಳೆ೦ಬ ಅ೦ತರವಿಲ್ಲದೆ ಸದಾ ನಿಲ್ಲುವುದೆ೦ದರೆ ಇಬ್ಬರು ಆತ್ಮೀಯರ ನಡುವಿನ ಮಿತೃತ್ವ!