Pages

Sunday, May 29, 2011

ಮೇಲಕ್ಕೇರಿದ ಮೈಲಾರಶರ್ಮ



     ನಾನು ಹಾಸನದ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದಾಗ ನನ್ನ ಸಹೋದ್ಯೋಗಿಯಾಗಿದ್ದವರು ಮೈಲಾರಶರ್ಮ. ನನಗೆ ಸುಮಾರು ೩೫-೩೬ ವರ್ಷಗಳಿಂದ ಪರಿಚಯಸ್ಥರು. ನನಗಿಂತ 8-10 ವರ್ಷ ದೊಡ್ಡವರು. ಎಲ್ಲರೊಂದಿಗೆ ಒಳ್ಳೆಯ ಬಾಂಧವ್ಯ ಹೊಂದಿದ್ದ ಸರಳ ವ್ಯಕ್ತಿ, ಸಂಪ್ರದಾಯಸ್ಥ. ನಿವೃತ್ತರಾದ ಮೇಲೆ ಪೂಜೆ, ಪುನಸ್ಕಾರ, ತೀರ್ಥಕ್ಷೇತ್ರಗಳಿಗೆ ಪ್ರವಾಸ ಮಾಡಿಕೊಂಡಿದ್ದವರು. ಅವರು ದಿನಾಂಕ ೨೭-೦೫-೨೦೧೧ರ ಬೆಳಿಗ್ಗೆ ವಿಧಿವಶರಾದರು. ನನಗೆ ಆಶ್ಚರ್ಯ ಮತ್ತು ಸಂತೋಷದ ವಿಷಯವಾಗಿ ತಿಳಿದದ್ದೇನೆಂದರೆ ಅವರ ದೇಹವನ್ನು ಹಾಸನದ ಮೆಡಿಕಲ್ ಕಾಲೇಜಿಗೆ ದಾನವಾಗಿ ನೀಡಿದ್ದು. ಅವರ ಕಣ್ಣುಗಳೂ ಸಹ ಉಪಯೋಗಕ್ಕೆ ಬಂದದ್ದು. ಅವರು ನಿಧನಾನಂತರ ತಮ್ಮ ದೇಹವನ್ನು ಮತ್ತು ಕಣ್ಣುಗಳನ್ನು ದಾನ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದರಂತೆ. ಅವರ ಇಚ್ಛೆಯನ್ನು ಅವರ ಕುಟುಂಬದವರು ನೆರವೇರಿಸಿದ್ದೂ ಸಹ ಒಂದು ಒಳ್ಳೆಯ ಬೆಳವಣಿಗೆಯಾಗಿ ನನಗೆ ಕಂಡಿತು. ಮೈಲಾರಶರ್ಮ, ನೀವು ಧನ್ಯ, ನಿಮ್ಮ ಕುಟುಂಬದವರೂ ಧನ್ಯರು. ನಿಮ್ಮ ಈ ಕೆಲಸ ಇತರರಿಗೆ ಮಾರ್ಗದರ್ಶಿಯಾಗಿದೆ. ನಿಮಗೆ ನನ್ನ ನಮಸ್ಕಾರಗಳು.
     ದೇಹದಲ್ಲಿ ಪ್ರಾಣವಿರುವವರೆಗೂ ದೇಹಕ್ಕೆ ಅರ್ಥವಿರುತ್ತದೆ. ನಂತರದಲ್ಲಿ ಅದು ವ್ಯಕ್ತಿಯೆಂದು ಗುರುತಿಸಲ್ಪಡದೆ ವ್ಯಕ್ತಿಯ ಹೆಣವೆಂದು ಕರೆಯಲ್ಪಡುತ್ತದೆ. ಸತ್ತ ನಂತರದಲ್ಲಿ ಜನರು ಹೆಣವನ್ನು ಸುಡುವುದೋ, ಹೂಳುವುದೋ, ಇತ್ಯಾದಿ ತಮ್ಮ ಸಂಪ್ರದಾಯಗಳಿಗನುಸಾರವಾಗಿ ಮಾಡುತ್ತಾರೆ. ಹಿಂದೂಗಳು ಪುನರ್ಜನ್ಮವನ್ನು ನಂಬುತ್ತಾರೆ. ಭಗವದ್ಗೀತೆಯಲ್ಲಿ, ವೇದದ ಉಲ್ಲೇಖಗಳಲ್ಲಿ ತಿಳಿಸಲ್ಪಟ್ಟಿರುವ ಪ್ರಕಾರ ಆತ್ಮ ಅವಿನಾಶಿ, ಅನಂತ. ಮರಣಾನಂತರ ಆತ್ಮ ಇನ್ನೊಂದು ಜೀವಿಯಾಗಿ ಜನ್ಮ ತಾಳುತ್ತದೆ. ಹಳೆಯ, ಹರಿದ ಅಂಗಿಯನ್ನು ತೊರೆದು ಹೊಸ ಅಂಗಿಯನ್ನು ತೊಡುವಂತೆ ಆತ್ಮ ಜೀರ್ಣ ಶರೀರ ತೊರೆದು ಇನ್ನೊಂದು ಶರೀರಧಾರಣೆ ಮಾಡುತ್ತದೆ ಎಂಬುದು ಪ್ರಚಲಿತ ನಂಬಿಕೆ. ಮೃತ ಶರೀರವನ್ನು ಉತ್ತರಕ್ರಿಯಾಕರ್ಮಗಳಿಂದ ಪಂಚಭೂತಗಳಲ್ಲಿ ಲೀನಗೊಳಿಸಲಾಗುತ್ತದೆ. ಆತ್ಮ ಅವಿನಾಶಿಯಾದ್ದರಿಂದ ಸಂಬಂಧಿಸಿದ ವ್ಯಕ್ತಿ ಅಪೇಕ್ಷೆ ಪಟ್ಟಿದ್ದಲ್ಲಿ ಅದನ್ನು ಅವನ ಇಚ್ಛೆಯಂತೆ ಆತನ ಮೃತಶರೀರವನ್ನು ವಿಲೇವಾರಿ ಮಾಡಿದರೆ ಅದರಲ್ಲಿ ತಪ್ಪಿಲ್ಲವೆಂದು ನನ್ನ ಅನಿಸಿಕೆ. ಆತ್ಮದ ಸದ್ಗತಿ ಕೋರಿ ಮಾಡುವ ಇತರ ಕರ್ಮಗಳನ್ನು ಸಂಬಂಧಿಕರು ಅವರು ಬಯಸಿದಲ್ಲಿ ಮಾಡಿಕೊಳ್ಳಬಹುದು. ಯಾವುದೇ ವ್ಯಕ್ತಿಗೆ ಆತನ ಕರ್ಮಾನುಸಾರ ಫಲಗಳು ಸಿಕ್ಕುವುದೆಂಬುದು ತಿಳಿದವರು ಹೇಳುವರು. ಹೀಗಿರುವಾಗ ಅವನಿಗೆ ಅವನ ಮರಣದ ನಂತರ ಇತರರು ಒಳ್ಳೆಯ ಫಲ ದೊರೆಯುವಂತೆ ಮಾಡುವುದು ಹೇಗೆ ಸಾಧ್ಯ? ಕೇಳಿದ ಉಪನ್ಯಾಸಗಳು, ಓದಿದ ಕೆಲವು ಗ್ರಂಥಗಳು, ಸಂಸ್ಕಾರವಶಾತ್ ಹೊಂದಿರುವ ಅಭಿಪ್ರಾಯಗಳು ಕಾರಣವಾಗಿ ಮೂಡಿದ ಕೆಲವು ಮುಕ್ತಕಗಳನ್ನು ತಮ್ಮ ಮುಂದಿಟ್ಟಿರುವೆ:


ತಾಯಿಯ ಸ್ವತ್ತಲ್ಲ ತಂದೆಯ ಸ್ವತ್ತಲ್ಲ
ಪತ್ನಿಯ ಸ್ವತ್ತಲ್ಲ ಮಕ್ಕಳ ಸ್ವತ್ತಲ್ಲ |
ಮಿತ್ರರ ಸ್ವತ್ತಲ್ಲ ತನ್ನದಲ್ಲವೆ ಅಲ್ಲ
ಶರೀರವಿದಾರ ಸ್ವತ್ತು ಗೊತ್ತಿಲ್ಲ ಮೂಢ ||


ಪಂಚಭೂತಗಳಿಂದಾದುದೀ ಮಲಿನ ದೇಹ
ಹೊಲಸು ತುಂಬಿರುವ ಕೊಳಕು ಚರ್ಮದ ಚೀಲ |
ಬಣ್ಣಬಣ್ಣದ ಬಟ್ಟೆಯಲಿ ಮುಚ್ಚುವರು ಕೊಳಕ
ಇಂತಪ್ಪ ದೇಹವನು ನಾನೆನಲೆ ಮೂಢ ||


ತನುವು ಸುಂದರವೆಂದು ಉಬ್ಬದಿರು ಮನುಜ
ಹೊಳೆವ ಚರ್ಮದೊಳಗಿಹುದು ಹೊಲಸು ||
ತನುವಿನೊಳಿಲ್ಲ ಬಣ್ಣದೊಳಿಲ್ಲ ಚೆಲುವು ಹೊರಗಿಲ್ಲ
ಒಳಗಿನ ಗುಣದಲ್ಲಿ ಚೆಲುವಿಹುದು ಮೂಢ ||


ದೇಹವೆಂಬುದು ಅನಂತ ಆಪತ್ತುಗಳ ತಾಣ
ಹೇಳದೆ ಕೇಳದೆ ಸಾವು ಬರುವುದು ಜಾಣ |
ದೇಹ ಚೈತನ್ಯ ಮೂಲಕೆ ಸಾವಿರದು ಕಾಣಾ
ಸಾಧು ಸಂತರ ಮಾತು ನೆನಪಿರಲಿ ಮೂಢ ||


ರಕ್ತ ಮಾಂಸ ಮೂಳೆಗಳ ತಡಿಕೆಯೀ ತನುವು
ಚೈತನ್ಯ ಒಳಗಿರೆ ತನುವರ್ಥ ಪಡೆಯುವುದು |
ದೇಹ ದೋಣಿಯಾಗಿಸಿ ಸಂಸಾರಸಾಗರವ
ದಾಂಟಿಸುವ ಅಂಬಿಗನೆ ಜೀವಾತ್ಮ ಮೂಢ ||


ಪ್ರಾಣವಿದ್ದರೆ ತ್ರಾಣ ಪ್ರಾಣದಿಂದಲೆ ನೀನು
ಪ್ರಾಣವಿರದಿರೆ ದೇಹಕರ್ಥವಿಹುದೇನು? |
ನಿನಗರ್ಥ ನೀಡಿರುವ ಜೀವಾತ್ಮನೇ ನೀನು
ನೀನಲ್ಲ ತನುವೆಂಬುದರಿಯೋ ಮೂಢ ||


ಹಿಂದೆ ಇರಲಿಲ್ಲ ಮುಂದೆ ಇರದೀ ದೇಹ
ಈಗಿರುವ ದೇಹಕರ್ಥ ಬಂದುದು ಹೇಗೆ ||
ಶುದ್ಧ ಬುದ್ಧಿಯಲಿ ನೋಡೆ ತಿಳಿದೀತು ನಿನಗೆ
ಅಂತರಾತ್ಮನ ಕರೆಯು ಕೇಳಿಪುದು ಮೂಢ ||


ಪರಮಾತ್ಮ ರಚಿಸಿಹನು ನವರಸದರಮನೆಯ
ನಡೆದಾಡುವೀ ಮಹಲಿನರಸ ಜೀವಾತ್ಮ |
ಬುದ್ಧಿಯದು ಮಂತ್ರಿ ಮನವು ಸೇನಾಧಿಪತಿ
ಇಂದ್ರಿಯಗಳು ಕಾವಲಿಗಿಹವು ಮೂಢ ||


ನೀರು ಹರಿಯುವುದು ಬೆಂಕಿ ಸುಡುವುದು
ಬಾಲನವನಂತ್ಯದಲಿ ಮುಪ್ಪಡರಿ ಕುಗ್ಗುವನು |
ಚಣಚಣಕೆ ತನುವು ಬದಲಾಗುತಿಹುದು
ಬದಲಾಗುವುದೆ ತನುಗುಣವು ಮೂಢ ||


ತನುವು ನೀನಲ್ಲವೆನೆ ಯಾವುದದು ನಿನದು?
ಆ ಜಾತಿ ಈ ಜಾತಿ ನಿನದಾವುದದು ಜಾತಿ? |
ಬಸವಳಿಯದಿರಳಿವ ದೇಹದಭಿಮಾನದಲಿ
ಜೀವರಹಸ್ಯವನರಿತವನೆ ಜ್ಞಾನಿ ಮೂಢ ||


ಜೀವಿಗಳಿವರು ಎಲ್ಲಿಂದ ಬಂದವರು
ಬಂದದ್ದಾಯಿತು ಮತ್ತೆಲ್ಲಿ ಹೋಗುವರು |
ಎಲ್ಲಿಂದ ಬಂದಿಹರಲ್ಲಿಗೇ ಹೋಗುವರು
ಕೆಲದಿನ ನಮ್ಮೊಡನಿರುವರು ಮೂಢ ||


ಅರಿತವರು ಹೇಳಿಹರು ಅಚ್ಚರಿಯ ಸಂಗತಿಯ
ಆತ್ಮಕ್ಕೆ ಅಳಿವಿಲ್ಲ ಹುಟ್ಟು ಸಾವುಗಳಿಲ್ಲ |
ಬದಲಾಗದು ಬೆಳೆಯದು ನಾಶವಾಗದು
ಚಿರಂಜೀವ ನಿತ್ಯ ಶಾಶ್ವತವು ಮೂಢ ||


ಕಾಣಿಸದು ಕಣ್ಣಿಗೆ ಕಿವಿಗೆ ಕೇಳಿಸದು
ಮುಟ್ಟಲಾಗದು ಕರ ತಿಳಿಯದು ಮನ |
ಬಣ್ಣಿಸಲು ಸಿಗದು ಪ್ರಮಾಣಕೆಟುಕದು
ಅವ್ಯಕ್ತ ಆತ್ಮದರಿವು ಸುಲಭವೆ ಮೂಢ ||


ಕಾಣುವುದು ನಿಜವಲ್ಲ ಕಾಣದಿರೆ ಸುಳ್ಳಲ್ಲ
ತಿಳಿದದ್ದು ನಿಜವಲ್ಲ ತಿಳಿಯದಿರೆ ಸುಳ್ಳಲ್ಲ |
ಕೇಳುವುದು ನಿಜವಲ್ಲ ಕೇಳದಿರೆ ಸುಳ್ಳಲ್ಲ
ಆತ್ಮಾನಾತ್ಮರರಿವು ಅವನೆ ಬಲ್ಲ ಮೂಢ ||


ಅಚ್ಚರಿಯು ಅಚ್ಚರಿಯು ಏನಿದಚ್ಚರಿಯು
ಆತ್ಮವಿದು ಅಚ್ಚರಿಯು ಹೇಳಲಚ್ಚರಿಯು |
ಕೇಳಲಚ್ಚರಿಯು ಅರಿಯಲಚ್ಚರಿಯು
ಆತ್ಮವನರಿಯದಿಹದಚ್ಚರಿಯು ಮೂಢ ||


ಭೂಮಿಯೊಂದಿರಬಹುದು ಮಣ್ಣಿನ ಗುಣ ಭಿನ್ನ
ಜಲವೊಂದಿರಬಹುದು ಜಲದಗುಣ ಭಿನ್ನ |
ಜ್ಯೋತಿಯೊಂದಿರಬಹುದು ಪ್ರಕಾಶ ಭಿನ್ನ
ಭಿನ್ನದೀ ಜಗದಿ ಆತ್ಮವವಿಚ್ಛಿನ್ನ ಮೂಢ ||


     ವೈಯಕ್ತಿಕವಾಗಿ ನಾನೂ ಸಹ ನನ್ನ ಮರಣಾನಂತರ ನನ್ನ ದೇಹದ ಉಪಯೋಗಕ್ಕೆ ಬರುವಂತಹ ಅಂಗಗಳನ್ನು ತೆಗೆದು ಯಾರಿಗಾದರೂ ಉಪಯೋಗಕ್ಕೆ ಬರುವಂತೆ ನೋಡಿಕೊಳ್ಳಲು ಮತ್ತು ನನ್ನ ದೇಹವನ್ನು ಸಹ ಹತ್ತಿರದ ಯಾವುದಾದರೂ ವೈದ್ಯಕೀಯ ಕಾಲೇಜಿಗೆ ದಾನ ಮಾಡುವ ಮನಸ್ಸನ್ನು ನನ್ನ ಸಂಬಂಧಿಕರು ಮಾಡಬೇಕೆಂದು ಬಯಸುತ್ತೇನೆ. ನನ್ನ ಸಂಬಂಧಿಕರಿಗಾಗಲೀ, ಮಿತ್ರರಿಗಾಗಲೀ ನಾನು ನನ್ನ ಈ ಅಭಿಪ್ರಾಯದಿಂದ ನೋವಾಗದಿರಲಿ ಎಂಬುದು ನನ್ನ ಮನದಾಳದ ಬಯಕೆ. ವಾಸ್ತವತೆ ಅರಿತಲ್ಲಿ, ಬದುಕಿನ ಮಹತ್ವ ತಿಳಿದಲ್ಲಿ ನನ್ನ ಈ ಬಯಕೆ ನಿಜವಾಗಿ ಬದುಕುವ ಬಯಕೆ ಎಂಬುದು ಅರ್ಥವಾಗಬಹುದು.

23 comments:

  1. [ಪತ್ನಿಯ ಸ್ವತ್ತಲ್ಲ ಮಕ್ಕಳ ಸ್ವತ್ತಲ್ಲ]
    ನನಗೆ ಒಪ್ಪಿಗೆ ಯಾಗಿಲ್ಲ. ಅಂದಮಾತ್ರಕ್ಕೆ ನನ್ನ ಅಭಿಪ್ರಾಯವು ನಿಮಗೆ ಒಪ್ಪಿಗೆ ಯಾಗಬೇಕೆಂದೇನೂ ಅಲ್ಲ. ಅಲ್ಲಾ! ಸಂಸಾರವೆಂದರೇನು? ಸಂಬಂಧವೆಂದರೇನು? ನಮ್ಮ ಶರೀರದ ಮೇಲೆ ನಮಗೇನು ಅಧಿಕಾರ? ಮದುವೆಯಾಗುವವರೆಗೂಒಂದು ಬಗೆ. ಮದುವೆಯಾದನಂತರ ಪತಿ-ಪತ್ನಿಯರು ಏನೆಲ್ಲಾ ಹಂಚಿಕೊಳ್ಳುವುದಿಲ್ಲಾ! ನನ್ನ ಅನುಭವದಲ್ಲಿ ಯಾರೊಡನೆ ಎಷ್ಟೇ ಗೆಳೆತನ-ಬಾಂಧವ್ಯವಿದ್ದರೂ ನಮ್ಮ ಮೊದಲ ಸರ್ಕಲ್ ಪತಿಪತ್ನಿ, ನಂತರ ಮಕ್ಕಳು, ನಂತರ ಉಳಿದೆಲ್ಲಾ. ಅನೇಕಭಾರಿ ಸ್ನೇಹಿತರು ನಮ್ಮ ಪತ್ನಿ-ಮಕ್ಕಳಿಗಿಂತಲೂ ಹತ್ತಿರವಾಗಿ ಕಾಣುತ್ತಾರೆ. ಆದರೂ ನನ್ನ ದೃಷ್ಟಿಯಲ್ಲಿ ಅವರೆಲ್ಲಾರೂ ನಮ್ಮ ಕುಟುಂಬದ ನಂತರವೇ.ಹೀಗಿದ್ದರೇನೇ ಚೆನ್ನಾ.ನಮ್ಮ ಶರೀರವು ಪ್ರಾಣ ಇರುವವರೆಗೂ ನಮ್ಮ ಸ್ವತ್ತು. ನಂತರ ಅದು ಪತಿ/ಪತ್ನಿ ಮಕ್ಕಳಿಗೆ ಬಿಟ್ಟ ವಿಚಾರ. ಒಂದು ದೇಹವು ಸಾವನಪ್ಪಿದ ಕೂಡಲೇ ಅದು ಹೆಣವೆಂದು ಯಾರೂ ಕೂಡ ಜಡವಸ್ತುವಿನಂತೆ ಕಾಣುವುದಿಲ್ಲ.ಆತ್ಮವು ದೇಹದಿಂದ ದೂರವಾದಮೇಲೆ ಅದರಲ್ಲೇನಿದೆ? ಅದೊಂದು ಹೆಣ ಎಂಬುದು ಸತ್ಯವಾದರೂ ಸುಮಾರು ೪೦-೫೦ ವರ್ಷಗಳು ಜೊತೆಗಿದ್ದ ಪತಿ/ಪತ್ನಿ/ಅಪ್ಪ/ಅಮ್ಮ [ದೇಹ+ಆತ್ಮ] ಸತ್ತಕೂಡಲೇ ಆತ್ಮ ವಿಲ್ಲವಾದರೂ ಜಡದೇಹವು ಅದರ ಅಂತ್ಯಸಂಸ್ಕಾರವಾಗುವವರೆಗೂ ಅದನ್ನು ನೋಡಬೇಕೆನಿಸುತ್ತದೆ. ಕಡೆಯಬಾರಿಗೆ ಕಣ್ತುಂಬ ನೋಡಿ ಬಿಡೋಣವೆನಿಸುತ್ತದೆ. ಇದು ಎಲ್ಲಾ ಮನುಷ್ಯರ ಸಹಜ ಸ್ವಭಾವ.ಹೀಗಿರುವಾಗ ನನ್ನ ಅಪ್ಪ/ಅಮ್ಮ/ಪತಿ/ಪತ್ನಿಯ ದೇಹವನ್ನು ಪಂಚಭೂತಗಳಲ್ಲಿ ಲೀನಮಾಡುವವರೆಗೂ ನಮ್ಮ ಮನಸ್ಸು ಒಪ್ಪುವುದಿಲ್ಲ. ಪಂಚಭೂತಗಳಿಂದ ಬಂದ ದೇಹವು ಪಂಚಭೂತಗಳಿಗೇ ಸೇರಬೇಕು. ಇದು ಧರ್ಮ.ಒಮ್ಮೆ ಅದು ಬೂದಿಯಾಯ್ತೆಂದ ಮೇಲೆ ಅದು ಮುಗಿದಕಥೆ. ಅನಂತರ ಸತ್ತವರ ನೆನಪು ಮಾತ್ರ.
    ಅಲ್ಲಾ, ಎಲ್ಲರೂ ಸತ್ತನಂತರ ತಮ್ಮ ಶರೀರವನ್ನು ದಾನಮಾಡುವುದೇ ಆದರೆ ಅದನ್ನು ಸ್ವೀಕರಿಸಲು ಮುಂದೊಂದು ದಿನ ಆಸ್ಪತ್ರೆಯವರೂ ಮುಂದೆಬರಲಾರರು. ತಿಳಿದಿರಲಿ.ನಾನಂತೂ ದೇಹವನ್ನು ದಾನಮಾಡುವ ವಿಚಾರದಲ್ಲಿ ಅದರ ವಿರೋಧಿ. ಇದೇ ಪ್ರವೃತ್ತಿ ಬೆಳೆದು ಬಂದರೆ ನಮ್ಮ ಶರೀರವು ಮಾರಾಟ/ದಾನ ಮಾಡುವ ಒಂದು ವಸ್ತುವಾಗಿಬಿಡಿತ್ತದೆ. ಅಲ್ಲಿಗೆ ನಮ್ಮ ಭಾವನೆಗಳೆಲ್ಲಾ ನುಚ್ಚುನೂರು.ನಾವು ಭಾವನೆಗಳೇ ಇಲ್ಲದ ಜಡವಸ್ತುವಿನಂತೆ. ಕ್ಷಮಿಸಿ. ನನಗೆ ಮನಸ್ಸಿಗೆ ದು:ಖವಾದಾಗ ಮನದೊಳಗೆ ಇರುವುದನ್ನೆಲ್ಲಾ ಹೊರಹಾಕಿ ಬಿಡುತ್ತೇನೆ.

    ReplyDelete
  2. ಶರೀರ ಮಾತ್ರಮ್ ಖಲು ಧರ್ಮ ಸಾಧನಂ !!... I beg to differ ಕವಿ ನಾಗರಾಜ್ !!.. This body has been given to us by God as a GIFT according to our past Karmas, for fulfillment of ultimate liberation ( Moksha )!!...Certainly we have no right to DONATE the GIFT which incidently still does not belong to us ...Mind you , it belongs to Him !!... And btw let me tell you that I cannot tolerate if somebody punctured the eyes of my Father - IN A PHOTO !!...It hurts me !!...Will you say ಕವಿ ನಾಗರಾಜ್ that after all IT'S ONLY A PHOTO ??? !!...Sorry to find that the vast majority of people are getting carried away by the so called lofty ideals, which is nothing but MISLEADING a kind of ‘ playing to the gallery ‘ !!....ನನ್ನ ಅನಿಸಿಕೆಯೆಂದರೆ ಇಂಥಹ ಬಾಲಿಶ ಹೇಳಿಕೆಗಳು ಕೇಳುವುದಕ್ಕೆ , ಹೇಳುವುದಕ್ಕೆ ಮಾತ್ರ ಚೆನ್ನ , ಆಚರಣೆಯಲ್ಲಲ್ಲ !! ಮನಸ್ಸು ನೋಯಿಸಿದ್ದರೆ ಕ್ಷಮೆ ಇರಲಿ ,ಉದ್ದ್ಹೇಶಪೂರ್ವಕವಲ್ಲ !...ಸವಿನಯ ವಂದನೆಗಳು !!

    ReplyDelete
  3. ಶ್ರೀಧರ್ Sir , I was dilighted to read your views which resonates with mine !!...Deep Bows !!...THANK YOU for sharing it !!!

    ReplyDelete
  4. ಶ್ರೀಧರ್ Sir ,
    Please correct the third word as ' delighted ' !...sorry for misspelling !...

    ReplyDelete
  5. ಹ್ಮ್.. ಲೋಕೋ ಭಿನ್ನರುಚಿ:... ನನಗಂತೂ ನಾಗರಾಜರು ಬರೆದಿದ್ದಕ್ಕೆ ಸಮ್ಮತಿಯಿದೆ. ಶ್ರೀಯುತ ಶ್ರೀಧರರು ಭಾವನೆ ಬಗ್ಗೆ ಹೇಳಿದರು. ಯಾರ ಭಾವನೆ ಅಂತ ಯೋಚಿಸುತ್ತಿದ್ದೇನೆ ನಾನು. ಸತ್ತವನ ಭಾವನೆ (ಸಾಯುವುದಕ್ಕೆ ಮೊದಲಿದ್ದ) ಯೋ ಅಥವಾ ಸತ್ತವನ ಮನೆಯವರ ಭಾವನೆಯೋ? ಸಾಯುವವನು ಸತ್ತ ಮೇಲೆ ತನ್ನ ದೇಹವನ್ನು ದಾನ ಮಾಡಬೇಕೆಂದು ಮೊದಲೇ ಹೇಳಿದ್ದರೆ ಅವನ ಮನೆಯವರು ಹಾಗೆ ಮಾಡಲೇ ಬೇಕು. ಮಾಡದಿದ್ದಲ್ಲಿ ಅದು ದ್ರೋಹ. ಸತ್ತ ಮೇಲೆ ದೇಹ ಹೊತ್ತಿಸಬೇಕೆಂದೆಣಿಸಿದವನ ದೇಹ ಸುಡಬೇಕು. ಅದನ್ನು ದಾನ ಮಾಡಿದಲ್ಲಿ ಅದು ದ್ರೋಹ. ಸಾಯುತ್ತಿರುವವನ/ಸತ್ತವನ ಭಾವನೆಗೆ ಮೊದಲು ಬೆಲೆ ಕೊಡಬೇಕೆಂದು ನಾನು ಹೇಳುತ್ತೇನೆ. ಸಾಯದೆ ಉಳಿದವರ ಭಾವನೆಗಳ ಪ್ರಶ್ನೆ ನಂತರದ್ದು.

    ReplyDelete
  6. ಬಿಕೆ ಜಗದೀಶ್ ಅವರಿಗೆ... ಶರೀರ ಮಾತ್ರಂ ಖಲು ಧರ್ಮಸಾಧನಂ ಅಂದಿರಿ.. ಸತ್ತ ಮೇಲೆ ದೇಹ ಅದೇನು ಧರ್ಮ ಸಾಧನೆ ಮಾಡುತ್ತದೆ ಹೇಳಿ ಸ್ವಾಮಿ! ಈ ಶ್ಲೋಕ ಹೇಳಿರುವುದು ಜೀವ ಇರುವ ದೇಹದ ಬಗ್ಗೆ. ಜೀವ ಇರುವಾಗಲೇ ಅಧ್ಯಾತ್ಮದ ಹೆಸರಿನಲ್ಲಿ ಶರೀರರದ ಬಗ್ಗೆ ಅಸಡ್ಡೆ ತೋರಿಸುವವರನ್ನು ಉದ್ದೇಶಿಸಿ ಬರೆದಿದ್ದು. ಇನ್ನು ಒಂದು ಕಡೆ ಮೋಕ್ಷ ಅನ್ನುತ್ತೀರಿ.. ಇನ್ನೊಂದು ಕಡೆ Hurts ಎನ್ನುತ್ತೀರಿ.. ನೋವಾಗುವಷ್ಟು ದುರ್ಬಲ ಮನಸ್ಸಿರುವವನು ಮೋಕ್ಷ ಪಡೆಯುವುದು ಅಷ್ಟರಲ್ಲೇ ಇದೆ! ಇನ್ನು ಶರೀರ ದಾನ ಮಾಡಲು ಹಕ್ಕಿಲ್ಲ ಎಂದಿದ್ದೀರಿ. ಹಾಗಿದ್ದಲ್ಲಿ ಅದನ್ನು ಸುಡಲು ಹಕ್ಕು ಇದೆಯೇ? ಇದ್ದರೆ ಅದೆಲ್ಲಿಂದ ಬಂತು! ದಾನ ಮಾಡಿದರೂ ಕೊನೆಗೆ ಅದು ಪಂಚಭೂತಗಳಲ್ಲೇ ಸೇರುತ್ತೆ ತಾನೆ! ಪಂಚಭೂತಗಳನ್ನು ಬಿಟ್ಟು ಆ ದೇಹ ಈ ಪ್ರಪಂಚದಲ್ಲಿ ಅದೆಲ್ಲಿ ಅಡಗಿ ಕುಳಿತೊಕೊಳ್ಳಬಹುದು ಎಂದು ಸ್ವಲ್ಪ ಯೋಚಿಸಿ. ಅಂತಹ ಜಾಗವೇ ಇಲ್ಲ. ಸುಟ್ಟರೋ ಬಿಸಾಕಿದರೂ ದಾನ ಮಾಡಿದರೂ ಅಥವಾ ಗೊಬ್ಬರ ಮಾಡಿದರೂ ಅದು ಸೇರುವುದು ಪಂಚಭೂತಗಳಿಗೆಯೇ! ಶ್ರೀ ನಾಗರಾಜರು ಹೇಳಿದ್ದು ಮಿಸ್ ಲೀಡಿಂಗ್ ಅನಿಸುತ್ತಿಲ್ಲ! ನಿಮ್ಮ ಯೋಚನಾಲಹರಿ, ನಿಮ್ಮ ಸಿಧ್ಧಾಂತ ಮಾತ್ರ ಸರಿ, ಉಳಿದದ್ದೆಲ್ಲ "lofty ideas" ಎನ್ನುವ ಮನಸ್ಥಿತಿ ಇದೆಯಲ್ಲ, ಅದು ಎಲ್ಲರನ್ನೂ ಮಿಸ್ ಲೀಡ್ ಮಾಡುವಂಥಾದ್ದು!

    ಶ್ರೀ ನಾಗರಾಜರವರ ಹೇಳಿಕೆಯನ್ನು ತಾವು ಬಾಲಿಶ ಎಂದು ಹೇಳಿದ್ದಕ್ಕೆ ಸ್ವಲ್ಪ ಖಾರವಾಗಿ ಪ್ರತಿಕ್ರಿಯಿಸಿದೆ.. ಅದು ಬಿಟ್ಟು ಯಾರನ್ನೂ ನೋಯಿಸುವ ಉದ್ದೇಶವಿಲ್ಲ. ನಾನು ಎಲ್ಲರೂ ದೇಹ ದಾನ ಮಾಡಬೇಕೆನ್ನುತ್ತಿಲ್ಲ. ನಾಗರಾಜರವರೂ ಹೇಳಿದಂತಿಲ್ಲ. ಮಾಡಬೇಕೆನ್ನುವವರು ಮಾಡಲಿ. ಬೇಡದಿರುವವರು ಬಿಡಲಿ. ಅಲ್ಲಿಗೆ ಎಲ್ಲರಿಗೂ ಸುಖ ಶಾಂತಿ!

    ReplyDelete
  7. Respected Mahesh , I just wish to humbly say in reply that you need to ' STUDY MORE ' in this context . As for your views ,I do respect the diversity in thinking !...

    ReplyDelete
  8. In this world of sin and sorrow there is always something to be thankful for; as for me, I rejoice that I am not a supporter of ' Body Donation '!! .

    ReplyDelete
  9. Dear Jagadish, In reply I humbly say that I am open to any kind of study in any regard. Please suggest me the books/websites.. which contain more details of what you referred to. I am more than willing to study. Om Shanti!

    ReplyDelete
  10. I have approximate answers and possible beliefs and different degrees of certainty about different things, but I'm not absolutely sure of anything, and many things I don't know anything about, such as whether it means anything to ask why we're here, and what the question might mean. I might think about it a little bit, but if I can't figure it out, then I go on to something else. But I don't have to know an answer.... I don't feel frightened by not knowing things, by being lost in the mysterious universe without having any purpose, which is the way it really is, as far as I can tell, possibly. It doesn't frighten me!!.

    ReplyDelete
  11. No one can know absolute of anything. Everything is relative to one another in physical domain. That is the reason I criticize (or rather question) the people who ridicule other view points.

    And there is no reason to be frightened for not knowing something! In fact, it is to be frightened if one happen to feel that he knows everything.

    ReplyDelete
  12. ಮಹೇಶ ಪ್ರಸಾದ ನೀರ್ಕಜೆ ಅವರಿಗೆ... To start with you may kindly refer to :

    Commentaries On SHREE BHASHYA

    by Dr N S Anantharangachar

    Happy Reading & Realization if I am permitted to say so, having lived on this planet for more than six decades!!...looks like that's the only thing I can count upon in my defense!!!....ha ha ha .... Thanks , Take Care !!...

    ReplyDelete
  13. ಮಹೇಶ ಪ್ರಸಾದ ನೀರ್ಕಜೆ ಅವರಿಗೆ,

    Alternatively , if you happen to live in Bangalore you can attend Discourses which Dr N S Anantharangachar's disciple gives 5 days a week ...If you are residing in Mahalaksmi Layout I will take you there . You may please decide as per your convenience.

    ReplyDelete
  14. Discourses are in the evenings ...after 6 pm

    ReplyDelete
  15. Dear Jagadish, I am not a big fan of this "In this world of sin and sorrow" line of philosophy. I believe that this world has many more things, not just sin and sorrow. I believe both laukika and alaukika are equally important. I have heard many of these "sin and sorrow" discourses, but unfortunately I wasn't convinced so far. Any way, thanks for the invitation.

    ReplyDelete
  16. Respected Mahesh Sir ,

    The phrase " sin and sorrow " , I had used with backdrop of Karma Siddhanta and nothing else ...My thinkng got moulded around that premise . I cannot shake a ' closed fist ' , it's upto you, with the spirit of inquiry ,to reconside my request . In fact I ventured on suggesting only on your query . If you prefer brushing it off / stonewalling it I have nithing new to add here but retire . Anyway THANK YOU for keeping the discussion going with your learned inputs .

    ReplyDelete
  17. ಶ್ರೀ ಮಹೇಶ್,
    ಮೊದಲಿಗೇ ಒಂದು ಮಾತು ಹೇಳಿಬಿಡುತ್ತೇನೆ. ನಾನು ಶಾಸ್ತ್ರಗಳನ್ನು ಅಧ್ಯಯನ ಮಾಡಿದವನಲ್ಲ. ನನಗೆ ಸತ್ತ ದೇಹವನ್ನು ಸುಡಬೇಕೆ? ದಾನ ಮಾಡಬೇಕೆ? ಮಣ್ಣಲ್ಲಿ ಹೂಳಬೇಕೆ? ಎಂದು ಯಾವ ಶಾಸ್ತ್ರದಲ್ಲಿ ಏನು ಬರೆದಿದೆಯೋ ಗೊತ್ತಿಲ್ಲ. ಆದರೆ ಈ ಭೂಮಿಯಲ್ಲಿ ಐದು ದಶಕಗಳಿಗೂ ಹೆಚ್ಚು ಕಾಲ ಬದುಕಿರುವೆ.ಒಂದಿಷ್ಟು ಸಾವು ನೋವು ಗಳನ್ನು ಕಂಡಿರುವೆ. ಸತ್ತಾಗ ಹತ್ತಿರದವರ ಸಂಕಟವನ್ನು ಕಂಡು ನಾನೂ ದು:ಖಿಸಿರುವೆ. ಒಂದು ತಾಜಾ ಉಧಾಹರಣೆ ಕೊಡುವೆ. ನನ್ನ ಸ್ನೇಹಿತರೊಬ್ಬರ ತಂದೆಯವರು ಇದ್ದಕ್ಕಿದ್ದಂತೆ ಹೊಳೇನರಸೀಪುರದಲ್ಲಿ ಒಂದು ಮದುವೆ ಮನೆಯಲ್ಲಿ ಕುಸಿದು ಬಿದ್ದು ಕೊನೆಯುಸಿರೆಳೆದರು.ಆ ಸ್ಥಳದಲ್ಲಿ ಅವರ ಪರಿಚಿತರು ನಾನೊಬ್ಬನೇ. ನನ್ನ ಸ್ನೇಹಿತರು ಹಾಸನದಲ್ಲಿದ್ದರು. ಅವರ ಮನೆಗೆ ಮೃತ ದೇಹವನ್ನು ತೆಗೆದುಕೊಂಡು ಹೋಗಬೇಕು.ಇಲ್ಲಿ ಉದ್ಧೇಶ ಹೆಣವನ್ನು ಸಾಗಿಸುವುದು ತಾನೇ? ಹೇಗೋ ಸಾಗಿಸಿದರಾಗಿತ್ತು. ಆದರೆ ಹಾಗೆ ಮಾಡಲಿಲ್ಲ. ಅವರ ಕರುಳುಕುಡಿಗೆ ಈಗಾಗಲೇ ಅಪ್ಪನ ಸಾವಿನಿಂದ ಆಗಿರುವ ದು:ಖದ ಜೊತೆಗೆ ಇನ್ನೂ ಹೆಚ್ಚು ದು:ಖವಾಗಬಾರದೆಂದು ಯೋಚಿಸಿ ಒಂದು ಕಾರ್ ನಲ್ಲಿ ಜೋಪಾನವಾಗಿ ತೆಗೆದುಕೊಂಡು ಹೋದೆವು. ಅದು ಹೆಣ. ಹೇಗೆ ತೆಗೆದುಕೊಂಡು ಹೋಗಿದ್ದರೂ ಅದಕ್ಕೇನೂ ಆಗುತ್ತಿರಲಿಲ್ಲ. ಆದರೆ ನಾವು ಗಮನದಲ್ಲಿಟ್ಟುಕೊಂಡಿದ್ದು ಅವರ ಮಕ್ಕಳನ್ನು ಮತ್ತು ಪತ್ನಿಯನ್ನು.
    ಇದೆಲ್ಲಾ ಭಾವನೆಗೆ ಸಂಬಂಧಿಸಿದ್ದು.ಸತ್ತವನು ಗೆದ್ದು ಬಿಡುತ್ತಾನೆ.ಇದ್ದ ಅವನ/ಅವಳ ಕರುಳ ಬಳ್ಳಿಗಳ ಬಗ್ಗೆಯೇ ಯೋಚಿಸಬೇಕಾದ್ದು. ಅವನು ಸತ್ತಾಗ ತನ್ನ ದೇಹದ ಮೇಲಿನ ಅಧಿಕಾರವನ್ನು ಕಳೆದುಕೊಂಡು ಬಿಟ್ಟ. ಅವನ/ಅವಳ ಕರುಳು ಬಳ್ಳಿಗಳದ್ದೇ ಅಧಿಕಾರ ಮತ್ತು ಕರ್ತವ್ಯ. ಮೆಡಿಕಲ್ ಕಾಲೇಜುಗಳಿದೆ ಪ್ರಯೋಗ ಮಾಡಲು ಎಷ್ಟು ಹೆಣ ಬೇಕು? ಎಲ್ಲರೂ ದೇಹವನ್ನು ದಾನಮಾಡುತ್ತೇನೆಂದರೆ ನಂತರದ ಪರಿಸ್ಥಿತಿಯನ್ನು ಊಹಿಸಿ ನೋಡಿ!! ಹೇಗೂ ಪಂಚಭೂತಗಳಲ್ಲಿ ಲೀನವಾಗುತ್ತದೆಂದು ಮೃತದೇಹವನ್ನು ತುಂಡರಿಸಲು ಸಾಧ್ಯವೇ?
    ಬದುಕು ಮತ್ತು ಭಾವನೆಗಳಿಗೆ ಅವಿನಾಭಾವ ಸಂಬಂಧವಿದೆ.ಭಾವನಾರಹಿತ ಜೀವನವು ಬದುಕೇ ಅಲ್ಲ.ಒಮ್ಮೆ ಭಾವನೆಗಳು ನಾಶವಾಗುತ್ತಾ ಬಂದರೆ ಬದುಕು ಯಾಂತ್ರಿಕ. ಇಂತಹ ಬದುಕು ಬೇಕೆ? ಅಥವಾ ಭಾವನೆಗಳ ಜೊತೆಗೆ ಪ್ರೀತಿವಾತ್ಸಲ್ಯ ಮಮಕಾರಗಳಿಂದ ಕೂಡಿದ ಜೀವನ ಬೇಕೆ? ಒಂದು ಆರೋಗ್ಯಕರ ಕುಟುಂಬವೆಂದರೆ ಇವೆಲ್ಲಾ ಅಂಶಗಳೂ ಗಣನೆಗೆ ಬರುತ್ತದೆ. ಯಾಂತ್ರಿಕ ಬದುಕಿಗೆ ಇವಲ್ಲಾ ಬೇಡ.
    ಸಾಯುವವನು ತನ್ನ ದೇಹವನ್ನು ದಾನಮಾಡುತ್ತೇನೆಂದು ವಾಗ್ದಾನ ಮಾಡಿದ್ದರೆ ದಾನ ಮಾಡದೇ ಹೋದಾಗ ದ್ರೋಹವಾಗುವುದಿಲ್ಲವೇ? ಎಂದಿರಿ. ಆದರೆ ವಾಗ್ದಾನ ಮಾಡುವ ಮುಂಚೆ ಪತಿ/ಪತ್ನಿ/ಮಕ್ಕಳು ಸೇರಿ ಸಮಾಲೋಚಿಸಿ ಮಾಡಬೇಕಾಗುತ್ತದೆ. ಸಾಮಾನ್ಯವಾಗಿ ಭಾವನಾರಹಿತವಾದ ಪತಿ/ಪತ್ನಿ/ಮಕ್ಕಳು ಮಾತ್ರ ದೇಹದಾನ ಮಾಡಲು ಒಪ್ಪ ಬಲ್ಲರು ಅಥವಾ ಆ ಮಟ್ಟಕ್ಕೆ[ಅದು ಅತ್ಯುನ್ನತ ಸ್ಥಿತಿ ಎಂದು ನಾನು ತಿಳಿಯುವೆ] ಕುಟುಂಬದವರೆಲ್ಲಾ ಬೆಳೆದಿರಬೇಕು. ಹೌದಲ್ಲವೇ?
    ಇದೆಲ್ಲಾ ನನ್ನ ಭಾವನೆಗಳು, ಒಪ್ಪಬೇಕೆಂದೇನೂ ಇಲ್ಲ.

    ReplyDelete
  18. Nice one Sridharji , I still feel , on propriety ground , that one has NO RIGHT to donate the thing which DOES NOT BELONG TO HIM/HER !!...

    ReplyDelete
  19. Of course in an emotional moment a person feels to hand over his body to a Hospital, or his Eyes. But the feelings of Family members need to be respected. The person who is dead is gone, but those who belonged to him, will not discard his remains with love. It is a controversial topic which does not come under Law, or Fundamental Rights.

    ReplyDelete
  20. {one has NO RIGHT to donate the thing which DOES NOT BELONG TO HIM/HER}
    - If one has not right to donate it, how come he has right to burn it! That is my basic question.. Any way, I am not interested in this kind of arguments. So I am not seeking any answers.. THank you

    ReplyDelete
  21. " I want to know God's thoughts; the rest are details. '

    ~Albert Einstein

    ReplyDelete
  22. " Someone has said that it requires less mental effort to condemn than to think."!!!


    ~Emma Goldman

    Oh ! what a thought !!..and how TRUE it is !!...

    ReplyDelete
  23. "The most difficult requirement

    of becoming knowledgable is

    that you must give up

    certainty." !!!!...

    ReplyDelete