Pages

Saturday, January 8, 2011

ಊಟವನ್ನು ಏಕೆ ಮಾಡಬೇಕು?ಯಾವಾಗ ಮಾಡಬೇಕು?ಏನು ಸೇವಿಸಬೇಕು? Part-2

(ಮುಂದುವರೆದಿದೆ)
ಪ್ರಕೃತಿಯು ಮನುಷ್ಯರಿಗಾಗಿ ಸಿದ್ಧಪಡಿಸಿರುವ ಆಹಾರವು ಅತ್ಯಂತ ಸತ್ವಭರಿತ, ಶ್ರೇಷ್ಠ. ಅವೇ ಹಣ್ಣುಗಳು. ಮಾನವರು ಶರೀರರಚನೆಯ ಆಧಾರದ ಮೇಲೆ ವೈಜ್ಞಾನಿಕವಾಗಿ ಹೇಳುವುದಾದರೆ ಬರೀ Vegetarian ಅಷ್ಟೇ ಅಲ್ಲ, Frutarian! Dry Fruits ಮತ್ತು Nuts ಕೂಡ ಇದರೊಂದಿಗೆ ಸೇರುತ್ತದೆ.
ಆ ಹಣ್ಣುಗಳನ್ನು ಬೆರೆಸುವ, ಅವಕ್ಕೆ ಸ್ವಲ್ಪ ಹಾಲು, ಬೆಲ್ಲ, ಜೇನು, ಕಾಯಿತುರಿ ಇತ್ಯಾದಿಗಳನ್ನು ಬೆರೆಸಿ/ಸಂಸ್ಕರಿಸಿ ಬಳಸಿದರೂ Good. ಮೊಳಕೆ ಬರಿಸಿ ಸೇವಿಸಿದರೂ Good. ಆದರೆ, ಸತ್ವಭರಿತದಲ್ಲೇ ಎರಡನೆಯ ದರ್ಜೆ.
ಆಹಾರವನ್ನು ಬೇಯಿಸಿ ತಿನ್ನುವುದು ಮುಂದಿನ ಕೆಳದರ್ಜೆ. ಈ ದರ್ಜೆಯಲ್ಲಿ ಬೇಯಿಸಿರುವುದಷ್ಟೇ. ಆದರೆ ಸಪ್ಪೆ. ಅಥವಾ ಅತ್ಯಂತ ಸ್ವಲ್ಪ ಉಪ್ಪು, ಹುಳಿ, ಖಾರ.
ಇಲ್ಲಿಂದ ಮುಂದೆ ಸೇವಿಸಲು ಅರ್ಹವಾದದ್ದಿಲ್ಲ. ಅವುಗಳ ವಿವರ ಹೀಗಿದೆ.
ಬೇಯಿಸಿದ ಆಹಾರ. ಯದ್ವಾತದ್ವಾ ಉಪ್ಪು, ಹುಳಿ, ಖಾರಗಳನ್ನು ಹಾಕಿ ತಿನ್ನುವುದು. (ಆದರೂ ಪರವಾಗಿಲ್ಲ! ಕಾಲಾನಂತರದಲ್ಲಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದಾಗ ಬಿಡಲೇಬೇಕಾಗುತ್ತದೆ!!)
ಮುಂದಿನದು ನಿಷಿದ್ಧ ಆಹಾರ.
ಹಿಂಸೆಯ ಪರಿಣಾಮವಾಗಿ ಬರುವ ಮಾಂಸಾಹಾರ.
(ಈ ಬಗ್ಗೆ ವ್ಯಾಪಕ ಚರ್ಚೆ ಯಾವಾಗಲೂ ನಡೆಯುತ್ತಿರುತ್ತದೆ. ಮಾಂಸಾಹಾರವನ್ನು ಸಮರ್ಥಿಸುವವರು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ತಮ್ಮ ನಾಲಿಗೆಗೆ/ಚಪಲಕ್ಕೆ ಸಿಲುಕಿರುತ್ತಾರೆ. ಹೃದಯವಾಗಲೀ, ಮಿದುಳಾಗಲೀ ಕೆಲಸ ಮಾಡುತ್ತಿರುವುದಿಲ್ಲ!)
ಇದರ ಬಗ್ಗೆ ಮತ್ತೊಮ್ಮೆ ವ್ಯಾಪಕವಾಗಿ ಚಿಂತಿಸೋಣ.
Golden Rule ಹೀಗಿದೆ -
ಪ್ರಕೃತಿಗೆ ಎಷ್ಟು ಹತ್ತಿರವಾಗಿರುತ್ತೇವೋ, ಸಂಸ್ಕರಣ ಎಷ್ಟು ಕಡಿಮೆಯಿರುತ್ತದೋ (Zero ಕೂಡ ಆಗಬಹುದು) ಅಷ್ಟೂ ಆ ಆಹಾರ ಸೇವಿಸಲು ಹೆಚ್ಚು ಹೆಚ್ಚು ಯೋಗ್ಯವಾಗಿರುತ್ತದೆ.
ಮುಂದಿನ ಪ್ರಶ್ನೆ ಹೇಗೆ ಸೇವಿಸಬೇಕು?
(ಮುಂದುವರೆಯುವುದು)
Sudhakarasharma