Pages

Saturday, January 15, 2011

ವೇದಸುಧೆ ವಾರ್ಷಿಕೋತ್ಸವದಲ್ಲಿ ಭಾಗವಹಿಸುವ ಬೆಂಗಳೂರಿನ ಅಭಿಮಾನಿಗಳ ಗಮನಕ್ಕಾಗಿ

ವೇದಸುಧೆವಾರ್ಷಿಕೋತ್ಸವವು ನಡೆಯುವ ದಿನ 30.01.2011 ರಂದು ಭಾನುವಾರ ಬೆಳಗ್ಗೆ 5.30 ರ ಸುಮಾರಿಗೆ ಬೆಂಗಳೂರಿನಿಂದ ಹೊರಟು ಹಾಸನವನ್ನು 9.00 ಗಂಟೆಗೆ ತಲುಪನುಕೂಲವಾಗುವಂತೆ ಒಂದು ವಾಹನದ ವ್ಯವಸ್ಥೆ ಮಾಡಬೇಕೆಂಬ ಯೋಜನೆ ಇದೆ. ವಾಹನವು ಯಾವುದಾಗಿರಬೇಕೆಂಬುದು ಹೊರಡುವ ಸಂಖ್ಯೆಯನ್ನು ಅವಲಂಭಿಸಿದೆ. ಹಾಗೊಂದು ವೇಳೆ ಬೆಂಗಳೂರಿನಿಂದ ವಾಹನವು ಹೊರಟರೆ  ಬಸವನಗುಡಿ, ವಿಜಯನಗರ ಮತ್ತು ಇನ್ನೊಂದೆರಡು ಪಿಕ್ ಅಪ್ ಪಾಯಿಂಟ್ ಗಳನ್ನು ಗುರುತಿಸಿ ಕರೆದುಕೊಂಡು ಬರುವ ವ್ಯವಸ್ಥೆ ಮಾಡಲಾಗುವುದು. ಸಮಾರಂಭವು ಮುಗಿದ ಮೇಲೆ ಹೊರಟು ಬೆಳಿಗ್ಗೆ ಬೆಂಗಳೂರಿನಲ್ಲಿಪಿಕ್ ಅಪ್ ಮಾಡಿದ ಸ್ಥಳಗಳಿಗೆ ರಾತ್ರಿ  ಡ್ರಾಪ್ ಮಾಡುವ ಉದ್ಧೇಶವಿದೆ. ಸಾಮಾನ್ಯವಾಗಿ ಈ ದಿನಗಳಲ್ಲಿ ಅಯ್ಯಪ್ಪಸ್ವಾಮಿ ಯಾತ್ರೆಗಾಗಿ  ವಾಹನಗಳು ಬಾಡಿಗೆಗೆ ಹೋಗುವುದರಿಂದ ಆದಷ್ಟು ಬೇಗ ನಮ್ಮ ಈ  ಪ್ರವಾಸಯೋಜನೆ ಫಿಕ್ಸ್ ಆಗಬೇಕು.ಇಲ್ಲವಾದರೆ ಸ್ವಂತ ವಾಹನದಲ್ಲೋ ಸರ್ಕಾರಿ ಬಸ್ ನಲ್ಲೋ ಹೊರಡಬೇಕಾಗುತ್ತದೆ. ಸಾಮೂಹಿಕವಾಗಿ ಒಂದು ಮಿನಿ ಬಸ್ ನಲ್ಲೋ ಅಥವಾ ಸಂಖ್ಯೆ ಹೆಚ್ಚಾದರೆ ದೊಡ್ದ ಬಸ್ ನಲ್ಲೋ ಹೊರಟರೆ ಎಲ್ಲರ ಪರಿಚಯ, ಮಾತುಕತೆ, ಹರಟೆ, ವಿಚಾರ ವಿನಿಮಯಕ್ಕೆ ಅವಕಾಶಗಳಿರುತ್ತದೆ. ಆದ್ದರಿಂದ ಬೆಂಗಳೂರಿನಿಂದ ಹೊರಡುವ  ಅಭಿಮಾನಿಗಳು  ಇಲ್ಲಿ ಪ್ರತಿಕ್ರಿಯೆ ಬರೆಯುವುದರ ಮೂಲಕ ಅಥವಾ ಕೆಳಗಿನ ಫೋನ್ ನಂಬರುಗಳಿಗೆ ದಿನಾಂಕ 20.01.2011 ರೊಳಗಾಗಿ ಕರೆಮಾಡಿ ತಿಳಿಸಬೇಕಾಗಿ ಕೋರುವೆ.
ಈಗಾಗಲೇ ವೇದಸುಧೆಯ ಗಮನಕ್ಕೆ ಬಂದಿರುವಂತೆ ಹಾಸನಕ್ಕೆ ಕುಟುಂಬ ಸಹಿತರಾಗಿ  ಹೊರಟಿರುವ ಅಭಿಮಾನಿಗಳ ಪಟ್ಟಿ
೧] ವೇದಾಧ್ಯಾಯೀ ಸುಧಾಕರ ಶರ್ಮ
೨] ಶ್ರೀ ವಿಷ್ಣುಭಟ್ 
೩] ಶ್ರೀ ವಿಶಾಲ್ 
೪] ಜಗದೀಶ್
೫] ಎಂ.ಡಿ.ಎನ್ ಪ್ರಭಾಕರ್ 
೬] ಶ್ರೀ ಹರೀಶ್ ಆತ್ರೇಯ
೭] ಶ್ರೀಮತಿ ಚಿತ್ರ ಮತ್ತು ಶ್ರೀ ಪ್ರಸನ್ನ
೮] ಶ್ರೀ ಕೃಷ್ಣಮೂರ್ತಿ
೯] ಡಾ|| ವಿವೇಕ್
೧೦] ಶ್ರೀ ದಕ್ಷಿಣಾಮೂರ್ತಿ

ಸಂಪರ್ಕಿಸಲು ದೂರವಾಣಿ:
ಶ್ರೀಸುಧಾಕರಶರ್ಮ: 9448842474 / 08022421950
ಶ್ರೀ ವಿಶಾಲ್:   9880455251
ಶ್ರೀ ಹರಿಹರಪುರಶ್ರೀಧರ್:  9663572406/ 08172250566
ಮೇಲ್ ಮೂಲಕ ಕೂಡ ನಿಮ್ಮೊಡನೆ  ಹಾಸನಕ್ಕೆ ಬರುವವರ ವಿವರವನ್ನು ದಿನಾಂಕ 20.01.2011 ರೊಳಗೆ ನೀಡಬಹುದಾಗಿದೆ.
ನಮ್ಮ ಮೇಲ್ ವಿಳಾಸ:  vedasudhe@gmail.com

ಹೊಸಬೆಳಕು











ವೇದಾಭಿಮಾನಿಗಳೇ,
ನಿನ್ನೆ ರಾತ್ರಿ [14.01.2011]ಚಂದನ ವಾಹಿನಿಯಲ್ಲಿ ಪ್ರಸಾರವಾಗಬೇಕಿದ್ದ ಈ ದಾರಾವಾಹಿಯು ಕಾರಣಾಂತರಗಳಿಂದ  ಎರಡುವಾರಗಳು ಮುಂದೂಡಲ್ಪಟ್ಟಿದೆ. ಬರುವ 28.01.2011 ರಿಂದ ಪ್ರತೀ ಶುಕ್ರವಾರ ರಾತ್ರಿ 8.00 ರಿಂದ 8.30 ರವರಗೆ ಪ್ರಸಾರವಾಗಲಿರುವ ಈ ದಾರಾವಾಹಿಯನ್ನು ನಿಮ್ಮ ಪರಿಚಿತರೆಲ್ಲರಿಗೂ ನೋಡುವಂತೆ ತಿಳಿಸಿ.ನಮ್ಮ ಜೀವನಕ್ಕೆ ಬೆಳಕಾಗಬಲ್ಲ ಈ ದಾರಾವಾಹಿಯು ಇಂದಿನ ದಿನಗಳಲ್ಲಿ ಒಂದು ಅತ್ಯಂತ ವಿನೂತನ ಮತ್ತು ಉತ್ತಮವಾದ ಪ್ರಯತ್ನ. ಸುಮಾರು 30 ಕ್ಕೂ ಹೆಚ್ಚು  ಕಂತುಗಳಲ್ಲಿ ಪ್ರಸಾರವಾಗಲಿರುವ  ಈ ದಾರಾವಾಹಿಯ ಬಗ್ಗೆ ನಿಮ್ಮ ಅನಿಸಿಕೆ  ಅಭಿಪ್ರಾಯಗಳನ್ನು ನೇರವಾಗಿ ಚಂದನ ವಾಹಿನಿಗೂ ಮತ್ತು ವೇದಸುಧೆಗೂ ಬರೆಯಿರಿ. ವೇದಸುಧೆಗೆ ಬರೆದ ನಿಮ್ಮ ಅಭಿಪ್ರಾಯಗಳನ್ನು ಗೌರವಪೂರ್ವಕವಾಗಿ ಪ್ರಕಟಿಸಲಾಗುವುದು. ಅಗತ್ಯವಿದ್ದರೆ ಈ ದಾರಾವಾಹಿಗಾಗಿಯೇ ಒಂದು ಪುಟ ತೆರೆಯಲಾಗುವುದು.