Pages

Thursday, January 20, 2011

ವೇದೋಕ್ತ ಜೀವನ ಪಥ: ಜೀವಾತ್ಮ ಸ್ವರೂಪ-4

ಭಗವಂತನ ಪ್ರೇರಣೆಯಂತೆಯೇ ಜೀವಾತ್ಮರು ಬೇರೆ ಬೇರೆ ಶರೀರಗಳಲ್ಲಿ ಜನ್ಮವೆತ್ತುತ್ತಾರೆ. ಕೇಳಿರಿ:-


ಅನಚ್ಛಯೇ ತುರಗಾತು ಜೀವಮೇಜತ್ ಧೃವಂ ಮಧ್ಯ ಆ ಹಸ್ತ್ಯಾನಾಮ್|
ಜೀವೋ ಮೃತಸ್ಯ ಚರತಿ ಸ್ವಧಾಭಿರಮರ್ತ್ಯೋ ಮರ್ತ್ಯೇನಾ ಸಯೋನಿಃ|| (ಋಕ್. ೧.೧೬೪.೩೦.)
     [ತುರಗಾತು] ವೇಗಶಾಲಿಯೂ [ಧೃವಮ್] ಧೃಢವೂ ಆದ ಪರಮಾತ್ಮ ತತ್ವವು, [ಅನತ್] ಎಲ್ಲರಿಗೂ ಜೀವದಾನ ಮಾಡುತ್ತಿದೆ. [ಶಯೇ] ಅಂತಃಸ್ಥಿತವಾಗಿದೆ. [ಜೀವಮ್] ಜೀವಾತ್ಮನನ್ನು [ಆಪಸ್ತ್ಯಾನಾಂ ಮಧ್ಯೇ] ಲೋಕಲೋಕಾಂತರಗಳ ನಡುವೆ [ಏಜತ್] ಪ್ರವೇಶಗೊಳಿಸುತ್ತದೆ. [ಮೃತಸ್ಯ ಜೀವಃ] ಮೃತನಾದವನ ಜೀವಾತ್ಮವು [ಅಮರ್ತ್ಯಃ] ಸ್ವತಃ ಅಮರವಾಗಿದ್ದು [ಮರ್ತ್ಯೇನಾ ಸಂಯೋನಿಃ] ಮೃತ್ಯುವಿಗೀಡಾಗುವ ಶರೀರದೊಂದಿಗೆ ಸಹಜೀವಿಯಾಗಿ [ಸ್ವಧಾಭಿಃ] ತನಗೆ ಪ್ರಾರಬ್ಧ ರೂಪದಲ್ಲಿ ಲಭಿಸಿದ ಅನ್ನ-ಜಲಗಳೊಂದಿಗೆ, [ಚರತಿ] ಸಂಚರಿಸುತ್ತದೆ.
     ಇದು ವೇದೋಕ್ತವಾದ ಸತ್ಯ. ಇದೆಂದಿಗೂ ಸುಳ್ಳಾಗಲಾರದು. ಈ ರೀತಿ ಜನ್ಮವೆತ್ತಿ ಅದೆಷ್ಟು ಸಾರಿ ಜಗತ್ತಿಗೆ ಬರುತ್ತಾರೋ, ಅಮರರಾದ ಜೀವಾತ್ಮರು. ಋಗ್ವೇದದ ಈ ಮಂತ್ರವೂ ಮನನೀಯವೇ ಆಗಿದೆ.


ಅಪಶ್ಯಂ ಗೋಪಾಮನಿಪದ್ಯಮಾನಮಾ ಚ ಪರಾ ಪಥಿಭಿಶ್ಚರಂತಮ್|
ಸ ಸಧ್ರೀಚೀಃ ಸ ವಿಷೂಚೀರ್ವಸಾನ ಆ ವರೀವರ್ತಿ ಭುವನೇಷ್ವಂತಃ|| (ಋಕ್. ೧.೧೬೪.೩೧.)
     [ಆ ಚ ಪರಾ ಚ ಪಥಿಭಿಃ ಚರಂತಮ್] ಆ ಮಾರ್ಗ ಈ ಮಾರ್ಗಗಳಿಂದ ಸಂಚರಿಸುವ [ಆನಿಪದ್ಯಮಾನಮ್] ಅವಿನಾಶಿಯಾದ [ಗೋಪಾಮ್] ಇಂದ್ರಿಯಗಳ ಪಾಲಕನಾದ ಜೀವಾತ್ಮನನ್ನು [ಆಪಶ್ಯಮ್] ನಾನು ನೋಡುತ್ತಿದ್ದೇನೆ. [ಸಃ] ಅವನು [ಸಧ್ರೀಚೀಃ] ನೇರವಾಗಿ ನಿಂತು ನಡೆಯುವ ಶರೀರಗಳನ್ನೂ [ಸಃ[ ಅವನೇ [ವಿಷೂಚೀಃ] ತೆವಳಿಕೊಂಡು ಹೋಗುವ ಶರೀರಗಳನ್ನೂ [ವಸಾನಃ] ನೆಲೆಗೊಳಿಸುತ್ತಾ [ಭುವನೇಷು ಅಂತಃ] ಲೋಕಗಳ ಒಳಕ್ಕೆ [ಆ ಪರೀವರ್ತಿ] ಬಂದು ಹೋಗಿ ಮಾಡುತ್ತಿರುತ್ತಾನೆ.
      ಇದೀಗ ಸ್ಪಷ್ಟ ತತ್ತ್ವ ದರ್ಶನ. ಅಥರ್ವವೇದದ ಇನ್ನೆರಡು ಮಂತ್ರಗಳನ್ನು ಉದ್ಧರಿಸಿದರೆ ಜೀವಾತ್ಮನ ನಿಜವಾದ ಸ್ವರೂಪ ಪಾಠಕರ ಚಿತ್ತಭಿತ್ತಿಗಳ ಮೇಲೆ ಸ್ಫುಟವಾಗಿ ಅಂಕಿತವಾಗುತ್ತದೆ.


ತ್ವಂ ಸ್ತ್ರೀ ತ್ವಂ ಪುಮಾನಸಿ ತ್ವಂ ಕುಮಾರ ಉತ ವಾ ಕುಮಾರೀ|
ತ್ವಂ ಜೀರ್ಣೋ ದಂಡೇನ ವಂಚಸಿ ತ್ವಂ ಜಾತೋ ಭವಸಿ ವಿಶ್ವತೋಮುಖಃ|| (ಅಥರ್ವ.೧೦.೮.೨೭)


     ಓ ಜೀವಾತ್ಮನ್! [ತ್ವಂ ಸ್ತ್ರೀ] ನೀನು ಸ್ತ್ರೀಯಾಗಿದ್ದೀಯೆ. [ತ್ವಂ ಪುಮಾನ್ ಅಸಿ] ನೀನು ಪುರುಷನಾಗಿದ್ದೀಯೆ. [ತ್ವಂ ಕುಮಾರಃ] ನೀನು ಕುಮಾರನಾಗಿದ್ದೀಯೆ. [ಉತ ವಾ] ಮತ್ತು [ಕುಮಾರೀ] ಕುಮಾರಿಯಾಗಿದ್ದೀಯೆ. [ತ್ಮ್] ನೀನು [ಜೀರ್ಣಃ] ವೃದ್ಧನಾಗಿ [ದಂಡೇನ ವಂಚಸಿ] ಕೋಲನ್ನೂರಿ ತಡವರಿಸುತ್ತಾ ನಡೆಯುತ್ತೀಯೆ. [ತ್ವಮ್] ನೀನು [ಜಾತಃ] ಜನ್ಮವೆತ್ತಿ [ವಿಶ್ವತೋಮುಖಃ ಅಸಿ] ಎಲ್ಲೆಡೆಯೂ ಮುಖ ಮಾಡುತ್ತೀಯೆ.
     ಪರಮಾತ್ಮನೆಂತೋ ಜೀವಾತ್ಮನೂ ಅಂತೆಯೇ ಲಿಂಗರಹಿತನು. ಆದರೆ ಧರಿಸಿದ ಶರೀರದ ದೃಷ್ಟಿಯಿಂದ ಸ್ತ್ರೀ ಅಥವಾ ಪುರುಷ, ಕುಮಾರ ಅಥವಾ ಕುಮಾರೀ ಎನ್ನಿಸಿಕೊಳ್ಳುತ್ತಾನೆ.


ಉತೈಷಾಂ ವಿತೋತ ವಾ ಪುತ್ರ ಏಷಾಮುತೈಷಾಂ ಜ್ಯೇಷ್ಠ ಉತ ವಾ ಕನಿಷ್ಠಃ|
ಏಕೋ ಹ ದೇವೋ ಮನಸಿ ಪ್ರವಿಷ್ಟಃ
ಪ್ರಥಮೋ ಜಾತಃ ಸ ಉ ಗರ್ಭೇ ಅಂತಃ|| (ಅಥರ್ವ.೧೦.೮.೨೮)


     [ಉತ] ಮತ್ತು [ಏಷಾಂ ಪಿತಾ] ಇವರ ತಂದೆ [ಉತ ವಾ] ಅಥವಾ [ಏಷಾಂ ಪುತ್ರಃ] ಇವರ ಮಗ [ಉತ] ಅಥವಾ [ಏಷಾಂ ಜ್ಯೇಷ್ಠಃ] ಇವರ ಅಣ್ಣ [ಉತ ವಾ] ಅಥವಾ [ಕನಿಷ್ಠಃ] ತಮ್ಮ [ಹ] ನಿಜವಾಗಿ [ಏಕ ದೇವಃ] ಒಬ್ಬನೇ ಜ್ಞಾನವಂತ ಚೇತನನು [ಮನಸಿ ಪ್ರವಿಷ್ಟಃ] ಮನಃಕಾಮನೆಯ ಒಳಹೊಕ್ಕಿದ್ದಾನೆ. [ಪ್ರಥಮಃ] ಆ ಶ್ರೇಷ್ಠ ಆತ್ಮನು [ಜಾತಃ] ಜನ್ಮವೆತ್ತಿದನು. [ಸ ಉ] ಅವನೇ ಮತ್ತೆ [ಗರ್ಭೇ ಅಂತಃ] ಗರ್ಭದಲ್ಲಿ ಪ್ರವೇಶ ಮಾಡಿದ್ದಾನೆ.
     ಪಾಠಕರಿಗೆ ಈಗ ಜೀವಾತ್ಮನ ವಿಷಯದಲ್ಲಿ ಒಂದು ಸ್ಪಷ್ಟ ಕಲ್ಪನೆ ಬಂದಿರಬಹುದು. ಹೀಗೆಯೇ ಜನ್ಮವೆತ್ತುತ್ತಾ, ಎತ್ತುತ್ತಾ ಕ್ರಮಕ್ರಮವಾಗಿ ವಿಕಾಸ ಹೊಂದಿ, ಪರಿಶುದ್ಧ ಧರ್ಮದ ಆಚರಣೆಯಿಂದ ವಿಶುದ್ಧ ಜ್ಞಾನ ಗಳಿಸಿ, ನಿಜವಾದ ಭಗವದುಪಾಸನೆ ಮಾಡಿ, ಸತ್ಕರ್ಮನಿಷ್ಠನಾಗಿ, ಪೂರ್ಣ ಪವಿತ್ರತೆಯನ್ನು ಗಳಿಸಿ, ಕೊನೆಗೆ ಮೋಕ್ಷ ಪಡೆಯುತ್ತಾನೆ. ಮೋಕ್ಷದ ಸ್ವರೂಪವೇನೆಂಬುದನ್ನು ಪಾಠಕರು ಮುಂದೆ ಓದುವರು. ಇಲ್ಲಿ ಗಮನಿಸಬೇಕಾದ ಮತ್ತೊಂದು ಮುಖ್ಯಾಂಶವಿದೆ. ಆ ದೇವಪುತ್ರನನ್ನು ನಂಬು, ಈ ದೇವದೂತನಿಗೆ ಶರಣಾಗು, ಈಮತಹ ಸಾಧು-ಸಂತರ ಸೇವೆ ಮಾಡು, ಅವರ ದಯೆಯಿಂದ, ಅವರ ಮಧ್ಯಸ್ತಿಕೆಯಿಂದ ದೇವರು ನಿನಗೆ ಮೋಕ್ಷ ನೀಡುವನು - ಈ ಮೊದಲಾದ ಅರ್ಥರಹಿತವಾದ, ಪಾಮರಕೋಟಿಯ ಕಣ್ಣಿಗೆ ಮಣ್ಣೆರಚುವ, ಆತ್ಮಘಾತುಕವಾದ ಟೊಳ್ಳು ಸಿದ್ಧಾಂತಗಳನ್ನು ವೇದಗಳು ಒಪ್ಪುವುದಿಲ್ಲ.

ವೇದಸುಧೆಯ ವಾರ್ಷಿಕೋತ್ಸವಕ್ಕೆ ಬನ್ನಿ

ಆತ್ಮೀಯ ವೇದಸುಧೆಯ ಅಭಿಮಾನಿ ಬಂಧುಗಳೇ, ನಮಸ್ತೆ,
    ವೇದಸುಧೆಯ ಪ್ರಥಮ ವಾರ್ಷಿಕೋತ್ಸವದ ಆಮಂತ್ರಣ ಇಲ್ಲಿದೆ. ದಯಮಾಡಿ ನಿಮ್ಮ  ಅಂಚೆಯ ವಿಳಾಸವನ್ನು ವೇದಸುಧೆಗೆ ಮೇಲ್ ಮಾಡಿದರೆ ಅಂಚೆಯ ಮೂಲಕ ಕೂಡ ನಿಮಗೆ ಆಮಂತ್ರಣ ಪತ್ರಿಕೆಯನ್ನು  ಕಳುಹಿಸಿಕೊಡಲಾಗುವುದು. ವಾರ್ಷಿಕೋತ್ಸವವು ಹಾಸನದಲ್ಲಿ ನಡೆಯುತ್ತಿರುವುದರಿಂದ ಈಗಾಗಲೇ ವೇದಸುಧೆಯ ಸಂಪರ್ಕದಲ್ಲಿರುವವರಿಗೆ  ಹಾಸನ ಬಹಳ ದೂರವೇನೂ ಆಗಲಾರದೆಂದು ಭಾವಿಸುವೆ.ಆದರೂ ಸಕಾಲಕ್ಕೆ ನೀವು ಬರಬೇಕಾದ್ದರಿಂದ ಕೆಳಗಿನ  ಕೆಲವು ಅಂಶಗಳನ್ನು ವೇದಸುಧೆಗೆ ಮೇಲ್ ಮೂಲಕ ತಿಳಿಸಿದರೆ ಸಾಧ್ಯವಾದಷ್ಟೂ ಉತ್ತಮ ವ್ಯವಸ್ಥೆ ಮಾಡಲಾಗುವುದು. ಬೆಂಗಳೂರಿನಿಂದ ಹಾಗೂ ಶಿವಮೊಗ್ಗಗಳಿಂದ ಬರುವವರು  ನಿಮ್ಮೂರಿನ ಬಸ್ ನಿಲ್ದಾಣದಿಂದ ಮುಂಜಾನೆ 5.30 ಕ್ಕೆ ಬಸ್ ನಲ್ಲಿ ಹೊರಟರೆ  ಸಕಾಲದಲ್ಲಿ ಹಾಸನ ತಲುಪಬಹುದು. ಸ್ವಂತ ಕಾರ್ ನಲ್ಲಿ ಬರುವವರಿಗೆ ಮೂರುವರೆ ಇಂದ ನಾಲ್ಕು ಗಂಟೆ ಬೇಕಾಗಬಹುದು.
ಆಮಂತ್ರಣದಲ್ಲಿ ಕಾರ್ಯಕ್ರಮಗಳ ವಿವರ ಇದೆ. 
ಇತರೆ ವ್ಯವಸ್ಥೆ ಗಳು:
* ಉಪಹಾರ: ಪ್ರಾತ: ಕಾಲ 8.30 ರಿಂದ 9.15
* ಚಹ/ಕಾಫೀ/ಬಾದಾಮಿ ಹಾಲು: ಕಾರ್ಯಕ್ರಮದ ನಡುವೆ ಬೆಳಿಗ್ಗೆ 11.00 ಕ್ಕೆ
ಮತ್ತು  ಮಧ್ಯಾಹ್ನ 4.00 ಕ್ಕೆ
* ಭೋಜನ: ಮಧ್ಯಾಹ್ನ 1.30 ರಿಂದ 2.30
* ಸಮಾರಂಭದ ಸ್ಥಳದಲ್ಲಿ ವೇದದ ಸಾಹಿತ್ಯಗಳು ಮಾರಾಟಕ್ಕೆ ಲಭ್ಯವಿರುತ್ತದೆ.
*  ಹಾಸನ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಾದ ಬೇಲೂರು, ಹಳೇಬೀಡು ಮತ್ತು ಶ್ರವಣ ಬೆಳಗೊಳ  ಗಳನ್ನು ನೋಡಬಯಸುವವರಿಗೆ ಬಾಡಿಗೆ ಕಾರ್ ವ್ಯವಸ್ಥೆ ಬೇಕಾದರೆ ಮುಂಚಿತವಾಗಿ ತಿಳಿಸಿ.
* ಶನಿವಾರ ರಾತ್ರಿ ಬರುವವರಿಗೆ ಉಳಿಯುವ ಮತ್ತು ಊಟೋಪಚಾರದ ಸಾಮಾನ್ಯ ವ್ಯವಸ್ಥೆ ಇರುತ್ತದೆ. ವಿಶೇಷವಾಗಿ ಹೋಟೆಲ್ ನಲ್ಲಿ ರೂಮ್ ಮಾಡಬಯಸುವವರು ಮುಂಚಿತವಾಗಿ ತಿಳಿಸಿದರೆ ಆರಕ್ಷಣೆ ಮಾಡಲಾಗುವುದು. 
----------------------------------------

*  ಹೆಸರು:
*  ಊರು:
*  ಮೊಬೈಲ್ ನಂಬರ್:
*  ನಿಮ್ಮೊಡನೆ ಎಷ್ಟು ಜನ ಬರುವರು?
*  ಯಾವ ಸಮಯಕ್ಕೆ ಹಾಸನ ತಲುಪುವಿರಿ?
*  29.1.2011 ರಂದು ರಾತ್ರಿ ಹಾಸನದಲ್ಲಿ  ವಸತಿ ವ್ಯವಸ್ಥೆ ಬೇಕೇ?
*  ನಿಮ್ಮ ಸ್ನೇಹಿತರುಗಳನ್ನು ಆಹ್ವಾನಿಸಲು ನಿಮಗೆ ಹೆಚ್ಚು ಆಮಂತ್ರಣ    
ಪತ್ರಿಕೆಗಳು ಬೇಕೆ?










ವಾರ್ಷಿಕೋತ್ಸವ ಬೆಳಗಿನ ಅವಧಿ


1. ವೇದಘೋಷ: 9.30-9.35
2. ಸ್ವಾಗತ ಪರಿಚಯ: 9.35-9.40
3. ಪ್ರಾಸ್ತಾವಿಕನುಡಿ: 9.40-9.50
4. ದೀಪ ನೃತ್ಯ ಮತ್ತು ಉದ್ಘಾಟನೆ: 9.50-10.00
5. ಉದ್ಘಾಟನಾ ಭಾಷಣ: 10.00-10.10
6. ಸಿ.ಡಿ ಪರಿಚಯ: 10.10-10.20
7. ಸಿ.ಡಿ ಬಿಡುಗಡೆ: 10.20-10.25
8. ಅಧ್ಯಕ್ಷರ ನುಡಿ: 10.25-10.35
9. ಚಹಾ ವಿರಾಮ: 10.35-10.40
10. ವಯೊಲಿನ್ ವಾದನ: 10.40-11.10
11. ವಿಚಾರ ಸಂಕಿರಣ   [1 ಗಂಟೆ]

11.10-12.30
12.ಗೀತಗಾಯನ [ 20 ನಿಮಿಷ]
13. ಸುಧಾಕರ    
      ಶರ್ಮರನುಡಿ:
 12.30- 1.20
14. ಅಭಿನಂದನೆ: 1.20-1.25
15. ಶಾಂತಿಪಾಠ: 1.25-1.30