Pages

Tuesday, March 1, 2011

ವಸುಧೈವ ಕುಟುಂಬಕಮ್


ವಸುಧೈವ ಕುಟುಂಬಕಮ್

ಹೃದಯವರಿತಮೇಲೆ ನಮ್ಮ ನಿಮ್ಮ ನಡುವೆ ಭೇದವೇ?
ಅದುವೆ ಮಂತ್ರವಾಗಲೊಮ್ಮೆ ಜಗದ ತುಂಬಾ ನಾದವೇ

ಒಂದೇ ತಾಯ ಹೊಟ್ಟೆಯಲ್ಲಿ ಹುಟ್ಟಿ ಬೆಳೆದ ಮರಿಗಳು
ತಿಂದು ಬೆಳೆದು ತಿಳಿಯದಾಗ ಜಗಳಮಾಳ್ಪ ಕುರಿಗಳು !

ಗರುವದಿಂದ ಹರಿದು ದೇಶ ಕೋಶ ರಾಜ್ಯಂಗಳ
ಮೆರೆದರೆಲ್ಲ ಮಣ್ಣಾದರು ಕರಗುತ ವ್ಯಾಜ್ಯಂಗಳ

ನಡೆವ ನಡತೆ ನುಡಿವ ನುಡಿಯು ಉತ್ತಮವಿರೆ ಯೋಗವ
ಒಡವೆ ವಸ್ತ್ರ ಕಡೆಗೆ ಕೀರ್ತಿ ಪಡೆವರೆಲ್ಲ ಭೋಗವ


ಹುಂಡು ಹೆಚ್ಚು-ಕಮ್ಮಿ ಇರಲು ಸಹಿಸಿ ನಡೆಯೆ ಮಾನವ
ತಂಡ ಕಟ್ಟಿ ಭುಜವ ತಟ್ಟಿ ಹೋರಲಾತ ದಾನವ

ಮುಂದೆ ನಮ್ಮ ಅಂತ್ಯವೆಂತೋ ಯಾರು ಅದನು ಬಲ್ಲರು ?
ಇಂದು ಇರುವ ಜಾಗದಲ್ಲಿ ಸುಖದಿ ಬದುಕಲೆಲ್ಲರು
---- ವಿ.ಆರ್ ಭಟ್