Pages

Tuesday, April 12, 2011

ವಾಕ್ಪಥ (vakpatha): ವಾಕ್ಪಥದ ಎರಡನೇ ಗೋಷ್ಠಿ

ವಾಕ್ಪಥ (vakpatha): ವಾಕ್ಪಥದ ಎರಡನೇ ಗೋಷ್ಠಿ

ವಾಕ್ಪಥದ ಗುಂಗಿನಲ್ಲಿ .............


ಈ ಸಾರಿಯ ವಾಕ್ಪಥ ಸರಿಯಾದ ದಿಸೆಯಲ್ಲಿಯೇ ಹೊರಳಿದೆ
ಪ್ರಭು ಅವರ ಗೈರು ಹಾಜರಿಯಲ್ಲಿ ಪಥಿಕರು ಬರುತ್ತಾರೋ ಇಲ್ಲವೋ ಅಂತ ಆತಂಕ ಬೇರೆಯಿತ್ತು ಮನದಲ್ಲಿ .
ಅದರಲ್ಲೂ ಮಂಜು ಅವರು ಮತ್ತು ಕೊನೆಗಳಿಗೆಯಲ್ಲಿ ಮಧ್ವೇಶ್ ಅವರು ರಜೆ ತೆಗೆದುಕೊಂಡ ಕಾರಣ ನನ್ನಲ್ಲೂ ಸಂದೇಹ ಮನೆಮಾಡಿತ್ತು .
ಆದರೆ ಪಥಿಕರ ಉತ್ಸಾಹ ಮತ್ತು ಬಂದವರ ಖುಷಿ ಯೋಚಿಸಿದಾಗ ನನಗೆ ತುಂಬಾ ತುಂಬಾ ಸಂತಸವಾಯ್ತು
.
ಮೊದಲಿಗೆ ಜಪಾನ್ ನ ಸುನಾಮಿಯ ಸಂತ್ರಸ್ತರಿಗೆ ವಾಕ್ಪಥಿಕರು ಎರಡು ನಿಮಿಷದ ಮೌನ ಶೃದ್ಧಾಂಜಲಿ ಅರ್ಪಿಸಿದ್ದರು.
ನನಗೆ ಮಾತು ಬರುವುದಿಲ್ಲ ಎನ್ನುತ್ತಲೇ ವಾಕ್ಪಥ ಕ್ಕೆ ಬಂದಿದ್ದ ಎಲ್ಲರೂ ತುಂಬಾನೇ ಚೆನ್ನಾಗಿ ತಮ್ಮ ತಮ್ಮ ಭಾವ ವ್ಯಕ್ತ ಪಡಿಸಿದ್ದರು.
ಜಾನಪದದ ಮನೋಜ್ಞ ಚಿತ್ರಣ ನಮ್ಮೆಲ್ಲರೆದುರಿಗೆ ಕಟ್ಟಿ ಕೊಟ್ಟಿದ್ದರು ಈ ಸಾರಿಯ ಭಾಷಣಕಾರರು.
ನಮ್ಮ ನಿಮ್ಮೆಲ್ಲರ ಪ್ರೀತಿಯ ವಾಕ್ಪಥದ ಎರಡನೇ ಹೆಜ್ಜೆಯಲ್ಲೇ
ಸಾಗಾರದಾಚೆಯ ಸಹಪಥಿಕರು ತಮ್ಮ ಸಂತೋಷ ವ್ಯಕ್ತ ಪಡಿಸಿದ್ದು ಹೀಗೆ :-

Prabhu avare,

vakPatha sabeya varadhi thumba chennagidhe, "vakpatha - Neladha nudiya Kampu " bahala arthagarbithavagiruva vaakya.

Dhanyavadagalu
Lokesh

This is absolutely wonderful Prabhu. I see that our Bangalore counterparts have already gone ahead of us in a couple of things - the very detailed KANNADA report of the meetingl the fact that they have not only speakers but other roles such as grammarian also signed up for the next session already (btw, I loved the role title of "ವ್ಯಾಕರಣ ಶುದ್ದಿ"...should it have been "ಶುದ್ಧಿ" as opposed to "ಶುದ್ದಿ" though?); it is noteworthy that the next session's speaker already has a topic decided!!

The report is beautifully written, however, it could use a little more structure - like listing the speakers and their speech titles before deliving into the details of hte speech. I was a bit lost reading through the second pargraph, where this strucutre could have helped...but that is a minor point anways.
The most beautiful aspect of the entire vAkpatha is the complete webpage, with very valuable pieces of information with distinct sections for the upcoming session details, pictures/videos (it is so nice to see them all in pictures...really!!), "ಹುಡುಕು ಪೆಟ್ಟಿಗೆ"!!!!, tracking visitor count and so on...

The most beautiful picture, and I still cannot belive this, is the one that shows vAkpathigaLu sitting on the floor listening to the speeches....Way to go guys!! All the very best to you!!


~Raghu

ವಾಕ್ಪಟುಗಳು ತಂಡದ ಸ್ಥಾಪಕರಾದ ರಘು ಹಾಲೂರ್ ಮತ್ತು ವಾಕ್ಪಟುಗಳು ತಂಡದ ಅತ್ಯಂತ ಪ್ರತಿಭಾವಂತ ಸದಸ್ಯರಾದ ಅಶೋಕ್ ಹಂದಿಗೋಳ್ ಅವರುಗಳ ಮೆಚ್ಚುಗೆಯ ನುಡಿಗಳು... ಈ ಎಲ್ಲಾ ಪ್ರಶಂಸೆಗೆ ಶೇ:೧೦೦ ಅರ್ಹತೆ ನಿಮ್ಮೆಲ್ಲರಿಗೂ!!!

ಪ್ರಭು

ಪೂಜ್ಯ ಪಂಡಿತ್ ಸುಧಾಕರ ಚತುರ್ವೇದಿಯವರ ಜನ್ಮದಿನ ವಿಶೇಷ










ಅಪ್ರತಿಮ ಸಾಧಕ-ಮಾರ್ಗದರ್ಶಿಗೆ ನಮಿಸೋಣ

ಇಂದು ಶ್ರೀಯುತ ಪಂಡಿತ ಸುಧಾಕರ ಚತುರ್ವೇದಿಯವರು 115ನೆಯ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅವರನ್ನು ನೆನೆಯೋಣ, ಅವರ ವಿಚಾರಗಳನ್ನು ತಿಳಿಯೋಣ, ನಮಿಸೋಣ, ಶುಭ ಹಾರೈಸೋಣ!






ಪಂಡಿತ ಸುಧಾಕರ ಚತುರ್ವೇದಿಯವರ ಕುರಿತು ಕೆಲವು ಮಾಹಿತಿ:
1. 1897ರ ರಾಮನವಮಿಯಂದು ಬೆಂಗಳೂರಿನ ಬಳೇಪೇಟೆಯಲ್ಲಿ ಜನಿಸಿದವರು, ಅಪ್ಪಟ ಕನ್ನಡಿಗರು.
2. 11ನೆಯ ವಯಸ್ಸಿಗೆ ಉತ್ತರ ಭಾರತದ ಪ್ರಸಿದ್ಧ ಕಾಂಗಡಿ ಗುರುಕುಲಕ್ಕೆ ಸೇರಿ ನಾಲ್ಕು ವೇದಗಳನ್ನು ಅಧ್ಯಯನ ಮಾಡಿದವರು.
3. ಇವರು ಚತುರ್ವೇದಿ ಮನೆತನದವರಲ್ಲ. ನಾಲ್ಕೂ ವೇದಗಳನ್ನು ಇಪ್ಪತ್ತೈದು ವರ್ಷಗಳ ಕಾಲ ಸತತ ಅಭ್ಯಾಸ ಮಾಡಿದ ನಿಜವಾದ ಪಂಡಿತರು. ಈ ಕಾರಣಕ್ಕಾಗಿ ಸಾರ್ವದೇಶಿಕ ಆರ್ಯ ಪ್ರತಿನಿಧಿ ಸಭೆಯ ನಿರ್ಣಯಾನುಸಾರ 'ಚತುರ್ವೇದಿ' ಎಂಬ ಉಪಾಧಿ ಪಡೆದವರು.
4. ವೈದಿಕ ವಾಗ್ಮಿಗಳು, ಬ್ರಹ್ಮಚರ್ಯವ್ರತಪಾಲಕರು, ಯಾವುದೇ ವೈದಿಕ ವಿಷಯಗಳನ್ನು ಸರಳವಾಗಿ ವಿವರಿಸುವ ನೈಪುಣ್ಯತೆ ಹೊಂದಿದವರು. ಇವರ ಅನೇಕ ಲೇಖನಗಳು, ವಿಚಾರಗಳು ಪುಸ್ತಕರೂಪದಲ್ಲಿ ಪ್ರಕಟಗೊಂಡಿವೆ. ಸತ್ಯಾನ್ವೇಶಿಗಳಿಗೆ ನಿಜವಾಗಿ ಮಾರ್ಗದರ್ಶಿಯಾಗಿವೆ.
5. ಭಾರತದ ಸ್ವಾತಂತ್ರ್ಯ ಸಂಗ್ರಾಮವನ್ನು ಹತ್ತಿರದಿಂದ ಕಂಡವರು. ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ಸಾಕ್ಷಿಯಾದವರು. ಆ ಕುರಿತು ಅವರ ಮಾತು: "1919ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡವನ್ನು ನೆನಸಿಕೊಂಡರೆ ಈಗಲೂ ಕಣ್ಣಲ್ಲಿ ನೀರು ಬರುತ್ತದೆ. ದೊಡ್ಡದಾದ ತೋಟದಂತಿದ್ದ ಅಲ್ಲಿ ಸುತ್ತಲೂ 3-4 ಅಂತಸ್ತಿನ ಗೋಡೆ, ಒಂದೇ ಬಾಗಿಲು. ನೋಡುತ್ತಿದ್ದಂತೆ ಎಲ್ಲರ ಮೇಲೂ ಗುಂಡಿನ ದಾಳಿ. ಸಾವಿರಕ್ಕೂ ಹೆಚ್ಚು ಜನ ಸತ್ತಿದ್ದರು. ಆದರೆ ಅಂದಿನ ಬ್ರಟಿಷ್ ಸರ್ಕಾರ ಕೇವಲ 670 ಜನ ಮಾತ್ರ ಸತ್ತಿದ್ದಾರೆ ಎಂದು ಹೇಳಿತು. ಮಂತ್ರ ಬರುತ್ತಿದ್ದರಿಂದ ಗಾಂಧೀಜಿಯವರು ನನ್ನ ಬಳಿ ಅಂತ್ಯ ಸಂಸ್ಕಾರ ಮಾಡಲು ಹೇಳಿದರು. ಅವರ ಆಜ್ಞೆಯಂತೆ ನದಿತಟದಲ್ಲಿ ಸಾವಿರಕ್ಕೂ ಹೆಚ್ಚು ಜನರ ಅಂತ್ಯಸಂಸ್ಕಾರ ಮಾಡಿದ್ದೆ."
6. ಸ್ವಾತಂತ್ರ್ಯ ಸಮರದಲ್ಲಿ ಪಾಲ್ಗೊಂಡವರು. ಗಾಂಧೀಜಿ ಸೇರಿದಂತೆ ಹಲವಾರು ಸ್ವಾತಂತ್ರ್ಯ ಸೇನಾನಿಗಳ ಒಡನಾಡಿಯಾಗಿದ್ದವರು. 13 ವರ್ಷಗಳ ಕಾಲ ಸೆರೆವಾಸ ಅನುಭವಿಸಿದವರು. ಅವರ ಅಂದಿನ ಸ್ಥಿತಿ ಹೇಗಿತ್ತೆಂದರೆ ಕಿತ್ತು ತಿನ್ನುತ್ತಿದ್ದ ಬಡತನ, ಹೊಟ್ಟೆಗೆ ಏನೂ ಇರುತ್ತಿರಲಿಲ್ಲ, 3-4 ದಿನಗಳು ಏನೂ ತಿನ್ನಲು ಸಿಗದೆ ನೀರು ಮಾತ್ರ ಕುಡಿದು ಹೊಟ್ಟೆ ತುಂಬಿಸಿಕೊಂಡಿದ್ದವರು. ಯಾರಾದರೂ ಆಲೂಗೆಡ್ಡೆ ಕೊಟ್ಟರೆ ಬೇಯಿಸಿಕೊಂಡು ತಿನ್ನಲೂ ಸಾಧನಗಳಿರಲಿಲ್ಲ. ಹಸಿವು ಕಚ್ಚಿಕೊಂಡಿದ್ದರೂ ಏನೂ ಮಾಡಲಾಗುತ್ತಿರಲಿಲ್ಲವೆಂದು ನೆನೆಸಿಕೊಳ್ಳುತ್ತಾರೆ.
7. ಲಾಹೋರಿನಲ್ಲಿದ್ದಾಗ ಭಗತ್ ಸಿಂಗ್ ಇವರ ವಿದ್ಯಾರ್ಥಿಯಾಗಿದ್ದ. ಗಣಿತದಲ್ಲಿ ತೇರ್ಗಡೆಯಾಗಲು ಆತನಿಗೆ 15 ಅಂಕಗಳು ಬೇಕಿದ್ದವು. ಇವರ ಹತ್ತಿರ ಅಂಕ ಕೊಡಲು ಭಗತ್ ಕೇಳಿದಾಗ "ಲಕ್ಷಣವಾಗಿ ಫೇಲಾಗು, ನನ್ನಿಂದ ಇಂತಹ ಕೆಲಸ ಅಸಾಧ್ಯ" ಎಂದು ಹೇಳಿದ್ದರು. ನಂತರದ ದಿನಗಳಲ್ಲಿ ಭಗತ್ ಮತ್ತು ಅವನ ಇತರ ಒಡನಾಡಿಗಳು ತಮ್ಮದೇ ಆದ ರೀತಿಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿ ಹುತಾತ್ಮರಾದವರು. ಹೋರಾಟದ ದಾರಿ ಬೇರೆಯಾದರೂ ಗಾಂಧೀಜಿ ಮತ್ತು ಅವರುಗಳ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿರಲಿಲ್ಲ.
8. ಕಷ್ಟಪಟ್ಟು ಗಳಿಸಿದ ಸ್ವಾತಂತ್ರ್ಯದ ಅರ್ಥ ತಿಳಿದುಕೊಳ್ಳುವ, ಅಭಿವೃದ್ಧಿ ಕಡೆಗೆ ಗಮನ ಹರಿಸುವುದರೊಂದಿಗೆ ಕಿರಿಯರಿಗೆ ಸ್ವಾತಂತ್ರ್ಯದ ಮಹತ್ವ ತಿಳಿಸುವ ಅಗತ್ಯ ಹೆಚ್ಚು ಎಂಬುದು ಅವರ ಅಭಿಮತ.
9. ಆಚಾರಕ್ಕಿಂತ ವಿಚಾರಕ್ಕೆ ಹೆಚ್ಚು ಮಹತ್ವ, ಪ್ರಾಧಾನ್ಯತೆ ಕೊಟ್ಟವರು. ನಂಬಿದ ತತ್ವ, ಆದರ್ಶಗಳಿಗೆ ಬದ್ಧರಾದವರು. ಅವರ ಮಾತುಗಳು ಕೆಲವರಿಗೆ ಕಠಿಣವೆನಿಸಿದರೂ ಅದರಲ್ಲಿ ಸತ್ಯವಿದೆ, ತತ್ವವಿದೆ. ಆದರೆ ಪೂರ್ವಾಗ್ರಹ ಪೀಡಿತರಲ್ಲ. ತಾವು ನಂಬಿದ ಯಾವುದೇ ವಿಚಾರ ತಪ್ಪು ಎಂದು ಸಾಧಾರವಾಗಿ ಯಾರೇ ತಿಳಿಸಿಕೊಟ್ಟರೂ ಇದುವರೆಗೂ ನಂಬಿದ ವಿಚಾರ ಬಿಟ್ಟು ಸತ್ಯದ ಹಾದಿ ತುಳಿಯಲು ಸಿದ್ಧವಿರುವವರು.
10. ವೇದ, ಭಗವದ್ಗೀತೆ, ಇತ್ಯಾದಿಗಳನ್ನು ಅರ್ಥವತ್ತಾಗಿ ಸರಳವಾಗಿ ಶ್ರೋತೃಗಳೆದುರಿಗೆ ಬಿಚ್ಚಿಡುವ ಕಲೆ ಇವರಿಗೆ ಒಲಿದಿದೆ. ಅನಿಷ್ಟ ಸಂಪ್ರದಾಯಗಳ ವಿರುದ್ಧದ ಇವರ ಸಮರ, ಇವರ ಸಾಹಿತ್ಯ ಸೇವೆಗಳಿಗಾಗಿ ಇವರು ವಂದನೀಯರು.
11. ಪ್ರಸ್ತುತ ಇವರು ಬೆಂಗಳೂರಿನ ಜಯನಗರ 5ನೆಯ ಬ್ಲಾಕಿನಲ್ಲಿರುವ ಶ್ರೀ ಕೃಷ್ಣ ಸೇವಾಶ್ರಮ ಆಸ್ಪತ್ರೆಯ ಎದುರು ಸಾಲಿನಲ್ಲಿರುವ ಮನೆಯೊಂದರಲ್ಲಿ ವಾಸವಿದ್ದಾರೆ.
12. ಎಲ್ಲಾ ಪಕ್ಷಗಳ ನಾಯಕರು, ಪ್ರತಿಷ್ಠಿತರು ಇವರನ್ನು ಕಂಡು ನಮಸ್ಕರಿಸಿ ಆಶೀರ್ವಾದ ಪಡೆದು ಹೋಗುತ್ತಾರೆ. ಆದರೆ ಇವರನ್ನೇ ಮರೆಯುತ್ತಾರೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಗುವ ಪಿಂಚಣಿಯನ್ನು ನಯವಾಗಿ ತಿರಸ್ಕರಿಸಿದ ಇವರಿಗೆ ಕೇಂದ್ರ ಸರ್ಕಾರದಿಂದಾಗಲೀ, ರಾಜ್ಯ ಸರ್ಕಾರದಿಂದಾಗಲೀ ಯಾವುದೇ ಅಧಿಕೃತ ಗೌರವವಾಗಲೀ, ಸನ್ಮಾನವಾಗಲೀ ದೊರೆತಿಲ್ಲ. ಇದಕ್ಕೆ ಅಡ್ಡಿಯಾಗಿರುವುದು ಸರ್ಕಾರದ ಕಟ್ಟಳೆಗಳು. ಅರ್ಜಿ ಹಾಕಿ ಸನ್ಮಾನ ಪಡೆಯಬೇಕು! ಅಂತಹ ಕೇಳಿ ಪಡೆಯುವ ಗೌರವದ ಅಗತ್ಯ ಈ ಹಿರಿಯ ಜೀವಕ್ಕಿಲ್ಲ!
ಈ ಮೇರು ವ್ಯಕ್ತಿತ್ವಕ್ಕೆ ನಮಿಸೋಣ! ಅವರ ವಿಚಾರಗಳನ್ನು ತಿಳಿಯೋಣ! ಅವರ ಮಾರ್ಗದರ್ಶನ ಸದಾ ಸಿಗಲಿ ಎಂದು ಬಯಸೋಣ!

*******************
-ಕ.ವೆಂ.ನಾಗರಾಜ್.