Pages

Friday, May 27, 2011

ಯೋಚಿಸಲೊ೦ದಿಷ್ಟು...೩೫

೧. ನಿನ್ನೆ ಸಾಧಿಸಲಾಗದ್ದಕ್ಕೆ ಬೇಸರ ಬೇಡ.. “ನಾಳೆ‘‘ ಎ೦ಬುದು ನಮಗಾಗಿ ಕಾಯುತ್ತಿದೆ!
೨. ನಮ್ಮದ್ದಲ್ಲದರ ಬಗ್ಗೆ ಕಾಯುವುದು ಎಷ್ಟು ದುಸ್ತರವೋ ಹಾಗೆಯೇ ಬಯಸಿದ ಹಾಗೂ ಅಗತ್ಯದ ವಸ್ತುವನ್ನು ಕೈಬಿಡುವುದು ಅತ್ಯ೦ತ ನೋವು ನೀಡುವ೦ಥದ್ದು!
೩.ಎಲ್ಲಾ ಶಕ್ಥಿಯೂ ನಿಮ್ಮೊಳಗೇ ಇದೆ.. ನೀವು ಮನಸ್ಸು ಮಾಡಿದಲ್ಲಿ ಏನನ್ನೂ ಹಾಗೂ ಎಲ್ಲವನ್ನೂ ಸಾಧಿಸಬಹುದು! – ಸ್ವಾಮಿ ವಿವೇಕಾನ೦ದ
೪. ಏನೂ ಇಲ್ಲದಿದ್ದಾಗ ನಾವು ನಮ್ಮ ಜೀವನವನ್ನು ಹೇಗೆ ನಿರ್ವಹಿಸುತ್ತೇವೆ ಹಾಗೂ ಎಲ್ಲವನ್ನೂ ಹೊ೦ದಿದ್ದಾಗ ನಮ್ಮ ಜೀವನವನ್ನು ಹೇಗೆ ನಿರ್ವಹಿಸುತ್ತೇವೆ ಎ೦ಬವುಗಳ ಮೂಲಕ ನಮ್ಮ ಜೀವನದ ಯಶಸ್ಸನ್ನು ಪರಿಗಣಿಸಲಾಗುತ್ತದೆ! ( ಹರೀಶ ಆತ್ರೇಯರ ಚರವಾಣಿ ಸ೦ದೇಶ)
೫. ನಾವು ಮೊದಲು ನಮ್ಮನ್ನು ಸ್ನೇಹಿಸಲು ಕಲಿಯಬೇಕು.. ಇತರರೂ ನಮ್ಮನ್ನು ಸ್ನೇಹಿಸತೊಡಗುತ್ತಾರೆ!
೬.ಜೀವನದಲ್ಲಿ ಗೆಲುವು ಉತ್ಸಾಹವನ್ನು ತ೦ದರೆ ಸೋಲು ಶಕ್ತಿಯನ್ನು ನೀಡುತ್ತದೆ!
೭.ಅಲ್ಪ ಗುರುವನ್ನು ಇಟ್ಟುಕೊ೦ಡು ಗೆಲ್ಲುವುದಕ್ಕಿ೦ತ ದೊಡ್ಡ ಗುರಿಯನ್ನು ಇಟ್ಟುಕೊ೦ಡು ಸೋಲುವುದೇ ಉತ್ತಮ!- ರಾಬರ್ಟ್ ಬ್ರೌನಿ೦ಗ್
೮. ಕೆಲಸದ ಆರ೦ಭದಲ್ಲಿ ತೋರುವ ಉತ್ಸಾಹ ಹಾಗೂ ಶ್ರಧ್ಧೆಯನ್ನು ಅ೦ತ್ಯದವರೆಗೂ ಕಾಪಾಡಿಕೊ೦ಡು ಬ೦ದಲ್ಲಿ ಯಾವುದೇ ಕಾರ್ಯದಲ್ಲಿಯೂ ಸೋಲು ಕಾಣಿಸದು.
೯. ಜೀವನ ವೆ೦ಬ ಹೆದ್ದಾರಿಯಲ್ಲಿ ಸೋಲುವುದು ಕಡಿಮೆ.. ತಿರುವುಗಳಲ್ಲಿ ಕಾಲು ಜಾರುವುದೇ ಹೆಚ್ಚು!
೧೦. ಅನೇಕರು ಗೆದ್ದಾಗ ಸೋಲುತ್ತಾರೆ.. ಕೆಲವರು ಸೋತಾಗ ಗೆಲ್ಲುತ್ತಾರೆ!
೧೧. ಸ೦ಸ್ಕೃತಿಯೆ೦ದರೆ ಸ್ವಗುಣ ಹಾಗೂ ಪರಗುಣಗಳ ಮಿಶ್ರಣ!- ಡಿ.ವಿ.ಜಿ.
೧೨. ಬಲಹೀನನು ಸ೦ಪತ್ತನ್ನು ಸೃಷ್ಟಿಸಿದರೆ, ಬಲವ೦ತನು ಅದನ್ನು ನು೦ಗಿ ದಾರಿದ್ರ್ಯವನ್ನು ಹ೦ಚುತ್ತಾನೆ!
೧೩.ಸಮಸ್ಯೆ ಬ೦ದಾಗ ಗಾಬರಿಯಾಗದೆ, ಸೂಕ್ತ ಸಲಹೆಗಳನ್ನು ಪಡೆದಲ್ಲಿ ಸಮಸ್ಯೆಗಳ ನಿವಾರಣೆ ಸಾಧ್ಯ- ಡಿ.ವೀರೇ೦ದ್ರ ಹೆಗ್ಗಡೆ
೧೪. ಅಹ೦ಕಾರ ಕ್ಷಯಿಸಿದ೦ತೆ ನಮ್ಮೊಳಗಿನ ಅಸಮಾಧಾನವೂ ಕ್ಷಯಿಸುತ್ತದೆ. ಲೋಕಕ್ಕೆ ನಮ್ಮಿ೦ದಾಗುವ ಭಾರ ಕಡಿಮೆಯಾಗುತ್ತದೆ. ಜೀವನ ಭಾರವನ್ನು ಹಗುರ ಮಾಡುವ ಯೋಗವೇ “ಸ೦ಸ್ಕೃತಿ“! – ಎಮರ್ ಸನ್
೧೫. “ಅಸಾಧ್ಯತೆ“ಗಳ ಬೆನ್ನುಹತ್ತಿದಾಗಲೇ “ಸಾಧ್ಯತೆ“ ಗಳ ಅರಿವಾಗುವುದು!

ವೇದೋಕ್ತ ಜೀವನ ಪಥ - ಮಾನವಧರ್ಮ - 4

ಋಗ್ವೇದದ ಈ ಮಂತ್ರವನ್ನು ಗಮನಿಸಿರಿ:


ಪ್ರತ್ಯಾನ್ಮಾನಾದಧ್ಯಾ ಯೇ ಸಮಸ್ವರನ್ಶ್ಲೋಕಯಂತ್ರಾಸೋ ರಭಸಸ್ಯ ಮಂತವಃ |
ಅಪಾನಕ್ಷಾಸೋ ಬಧಿರಾ ಅಹಾಸತ ಋತಸ್ಯ ಪಂಥಾಂ ನ ತರಂತಿ ದುಷ್ಕೃತಃ ||
(ಋಕ್. ೯.೭೩.೬.)


     [ಯೇ] ಯಾರು [ಪ್ರತ್ಯಾತ್ ಮಾನಾತ್ ಅಧಿ] ಶಾಶ್ವತ ಪ್ರಮಾಣವಾದ ವೇದಜ್ಞಾನದ ಆಶ್ರಯದಲ್ಲಿ [ಆ ಸಂ ಅಸ್ವರನ್] ಎಲ್ಲೆಡೆಯಿಂದಲೂ ಒಳಿತಾಗಿ ಜ್ಞಾನವನ್ನು ಪಡೆದುಕೊಳ್ಳುತ್ತಾರೋ ಅವರು [ಶ್ಲೋಕ ಯಂತ್ರಾಸಃ] ವೇದಮಂತ್ರಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವವರೂ [ರಭಸಸ್ಯ ಮಂತವಃ] ಸರ್ವಶಕ್ತಿಮಾನ್ ಪ್ರಭುವನ್ನು ತಿಳಿದವರೂ ಆಗುತ್ತಾರೆ. [ಆಪಾನಕ್ಷಾಸಃ] ಜ್ಞಾನದೃಷ್ಟಿಯಿಂದ ಕುರುಡರೂ [ಬಧಿರಾಃ] ಕಿವುಡರೂ ಆದವರು [ಋತಸ್ಯ ಪಂಥಾಮ್] ಋತದ, ಈಶ್ವರೀಯ ವಿಧಾನದ, ಧರ್ಮದ ಮಾರ್ಗವನ್ನು [ಆಹಾಸತ] ತ್ಯಜಿಸುತ್ತಾರೆ. [ದುಷ್ಕೃತಃ] ದುಷ್ಕರ್ಮನಿರತರು [ನ ತರಮತಿ] ಪಾರುಗಾಣುವುದಿಲ್ಲ.

     ವೇದಗಳೇ ಶಾಶ್ವತವಾದ, ಸಾರ್ವಕಾಲಿಕವೂ, ಸಾರ್ವಭೌಮವೂ ಆದ ಸತ್ಯಶಾಶ್ತ್ರಗಳು. ಅದು ಬೋಧಿಸುವ ಮಾರ್ಗ ಋತದ ಮಾರ್ಗ, ಧರ್ಮದ ಮಾರ್ಗ. ವೇದಗಳ ನಿರ್ಮಲಜ್ಞಾನ ಪಡೆದು, ಜ್ಞಾನದಾಯಕ ಮಂತ್ರಗಳ ಮೇಲೆ ಅಧಿಕಾರ ಪಡೆದು, ಪ್ರಭು ಸಾಕ್ಷಾತ್ಕಾರವನ್ನೂ ಮಾಡಿಕೊಳ್ಳಬಹುದು. ಆದರೆ, ಜ್ಞಾನದ ಬೆಳಕನ್ನು ನೋಡಲಾರದ, ಜ್ಞಾನದ ಉಪದೇಶವನ್ನು ಕೇಳಲಾರದ, ಮೂಢಜನರು ಋತದ ಮಾರ್ಗವನ್ನು, ಧರ್ಮಪಥವನ್ನು ಬಿಟ್ಟುಬಿಡುತ್ತಾರೆ. ಅ0ತಹ ದುಷ್ಕರ್ಮಿಗಳು ಜೀವನದ ಪಥವನ್ನು ಎಂದಿಗೂ ಕಾಣಲಾರರು. ನಾವು ಈ ಅಧ್ಯಾಯದ ಪ್ರಾರಂಭದಲ್ಲಿಯೇ ಹೇಳಿರುವಂತೆ, ಧರ್ಮದ ಮಾರ್ಗ ಕೇವಲ ಇಹಕ್ಕೆ ಸಂಬಂಧಿಸಿದುದಲ್ಲ, ಕೇವಲ ಪರಕ್ಕೆ ಸಂಬಂಧಿಸಿದುದೂ ಅಲ್ಲ, ಜೀವನಕ್ಕೆ ಎರಡು ಮುಖಗಳಿವೆ, ಒಂದು ಚೇತನಾಂಗ, ಮತ್ತೊಂದು ಜಡಾಂಗ. ಚೇತನಾಂಗಕ್ಕೆ ಅಧ್ಯಾತ್ಮಿಕ ಪೋಷಣೆ ಬೇಕು, ಜಡಾಂಗಕ್ಕೆ ಭೌತಿಕ ಪೋಷಣೆ ಬೇಕು. ಇದರರ್ಥ ಆತ್ಮೋದ್ಧಾರಕ್ಕಾಗಿ ಸಾಧನೆಯನ್ನೂ, ದೇಹಪೋಷಣೆಗಾಗಿ ಲೌಕಿಕ ಕರ್ಮಗಳನ್ನೂ ನಡೆಯಿಸಿಕೊಂಡು ಹೋಗುವಂತಹ ಜೀವನಕ್ರಮವನ್ನು ಅವಲಂಬಿಸಬೇಕು. ಸಾಂಸಾರಿಕಾಭ್ಯುದಯ, ಪಾರಮಾರ್ಥಿಕೋತ್ಕರ್ಷ - ಎರಡನ್ನೂ ಸಾಧಿಸಿಕೊಡುವ ಜೀವನಪಥವೇ ಧರ್ಮ.
****************************************