Pages

Thursday, June 16, 2011

ಆತ್ಮೀಯ ಅಭಿಮಾನೀ ಓದುಗರೇ,
ವೇದಸುಧೆಗೆ ಪ್ರೇರಕರಾಗಿರುವ ವೇದಾಧ್ಯಾಯೀ ಶ್ರೀ ಸುಧಾಕರಶರ್ಮರ ಆರೋಗ್ಯವು ಉತ್ತಮವಾಗಿಲ್ಲ.ಅವರಿಗೆ ಒಂದಿಷ್ಟು ದಿನಗಳ ವಿಶ್ರಾಂತಿ ಅನಿವಾರ್ಯವಾಗಿ ಬೇಕಾಗಿದೆ. ಆದ್ದರಿಂದ ಇನ್ನು ೫-೬ ತಿಂಗಳ ಕಾಲ ಮಾನ್ಯ ಓದುಗರು ಅವರೊಡನೆ ಸಮಾಲೋಚಿಸಲು ಸಾಧ್ಯವಾಗುವುದಿಲ್ಲ.ಆದರೆ ಅವರ ವಿಚಾರಗಳ ಧ್ವನಿಯನ್ನು ಈಗಾಗಲೇ ವೇದಸುಧೆಯಲ್ಲಿ ಸಾಕಷ್ಟು ಪ್ರಕಟಿಸಲಾಗಿದೆ.ಅದರ ಉಪಯೋಗವನ್ನು ಯಾವಾಗಲೂ ಪಡೆಯಬಹುದು.ವೇದಸುಧೆಯ ಹಲವು ಪುಟಗಳಲ್ಲಿ ಹರಡಿಹೋಗಿರುವ ಅವರ ವಿಚಾರಗಳನ್ನು "ಶರ್ಮರ ಪುಟ" ಕ್ಕೆ ವರ್ಗಾಯಿಸುವ ಪ್ರಯತ್ನ ಸಾಗಿದೆ. ಬ್ಲಾಗಿನ ತಲೆಬರಹದಡಿ ಕಾಣುವ "ಶರ್ಮರ ಪುಟ" ವನ್ನು ಕ್ಲಿಕ್ ಮಾಡಿದರೆ ಶರ್ಮರ ಹಲವು ಆಡಿಯೋ ಗಳನ್ನು ಕೇಳಬಹುದಾಗಿದೆ. ಎಲ್ಲರ ಸಹಕಾರ ಎಂದಿನಂತಿರಲಿ.
ನಮಸ್ಕಾರಗಳು.
-ಹರಿಹರಪುರಶ್ರೀಧರ್

ಯೋಚಿಸಲೊ೦ದಿಷ್ಟು...೩೭

೧.ಮದುವೆಯ ಬ೦ಧನ ಯಶಸ್ವಿಯಾದರೂ “ ಪರಸ್ಪರ ಕ್ಷಮಾಗುಣ“ ಇಲ್ಲದಿದ್ದರೆ ಬಹುಕಾಲ ಉಳಿಯುವುದಿಲ್ಲ- ಎಡ್ವೀಟ್
೨. ನಮಗೆ ನಾವೇ ಕೊಡಬಹುದಾದ ಮೆಚ್ಚಿನ ಕಾಣಿಕೆ “ಸ್ನೇಹಿತ“- ಅರಿಸ್ಟಾಟಲ್
೩. ನಮಗೆ ಸ್ನೇಹಿತರು ಬೇಕಾದರೆ ನಾವು ಸ್ನೇಹಿತರಾಗಿರಬೇಕು!- ಎಮರ್ ಸನ್
೪.ಸ್ನೇಹ ಸೌಧದ ಗಟ್ಟಿ ನೆಲೆಗೆ ಅದನ್ನು ಸದಾ ದುರಸ್ತಿಗೊಳಿಸುತ್ತಿರಬೇಕಾಗುತ್ತದೆ!
೫. ನಗು ಸ್ನೇಹಕ್ಕೆ ಅತ್ಯುತ್ತಮ “ಆರ೦ಭ“. ಅಲ್ಲದೇ ಸ್ನೇಹದ ಅತ್ಯುತ್ತಮ ಮುಕ್ತಾಯ ಸಹಾ ಅದೇ!- ಆಸ್ಕರ್ ವೈಲ್ಡ್
೬. ಸುಖ ಸ್ನೇಹಿತರನ್ನು ಕರೆತ೦ದರೆ, ಕಷ್ಟ ಅವರ ಅರ್ಹತೆಯನ್ನು ಪರಿಶೀಲಿಸುತ್ತದೆ!
೭.ಸ್ನೇಹವು ದು:ಖವನ್ನು ಕಡಿಮೆಗೊಳಿಸಿ, ಸುಖವನ್ನು ದ್ವಿಗುಣ ಗೊಳಿಸುತ್ತದೆ.
೮. ಅದೃಷ್ಟ ನಮ್ಮ ಬ೦ಧುಗಳನ್ನು ಕರೆತ೦ದರೆ, ಆಯ್ಕೆ ನಮ್ಮ ಸ್ನೇಹಿತರನ್ನು ತರುತ್ತದೆ-ಫ್ರಾನ್ಸಿಸ್ ಬೇಕನ್
೯. ಸ್ನೇಹಿತ ಅನುಕೂಲವಿದ್ದಾಗ ಆಹ್ವಾನ ಬ೦ದರೆ ಹೋಗಬೇಕು. ಆತನಿಗೆ ಅನಾನುಕೂಲವಾದರೆ ಆಹ್ವಾನ ಇಲ್ಲದೆಯೂ ಹೋಗಬೇಕು!
೧೦. ನಮ್ಮ ಯೋಗ್ಯತೆಯನ್ನು ನಾವು ಮತ್ತೊಬ್ಬರೊ೦ದಿಗೆ ಜಗಳವಾಡುವಾಗಿನ ನಮ್ಮ ನಡೆಯನ್ನು ನೋಡಿ ತೀರ್ಮಾನಿಸಬಹುದು- ಜಾರ್ಜ್ ಬರ್ನಾಡ್ ಷಾ
೧೧.ಮದುವೆಯಾಗದವನು “ಇದೆ೦ಥಾ ಬಾಳು“ ಎ೦ದು ಗೋಳಿಟ್ಟುಕೊ೦ಡರೆ ಮದುವೆಯಾದವನು “ಇದೆ೦ಥಾ ಗೋಳು“ ಎ೦ದು ಅಳುತ್ತಾನೆ- ಅಕಬರ ಅಲಿ
೧೨.ಪರಸ್ಪರ ಅರ್ಥೈಸಿಕೊಳ್ಳಲು ನಮ್ಮಲ್ಲಿ ಸ್ವಲ್ಪವಾದರೂ ಸಾಮರಸ್ಯವು ಹಾಗೆಯೇ ಪರಸ್ಪರ ಪ್ರೇಮಿಸಲು ನಮ್ಮಲ್ಲಿ ಸ್ವಲ್ಪವಾದರೂ ವ್ಯತ್ಯಾಸವಿರಲೇಬೇಕು.
೧೩. ಹೋರಾಟ ಅನಿವಾರ್ಯವಿದ್ದಲ್ಲಿ ನಮ್ಮೆಲ್ಲಾ ಬಲವನ್ನುಪಯೋಗಿಸಿಯೇ ಹೋರಾಡಬೇಕೇ ವಿನ: ಪ್ರತಿಸ್ಪರ್ಧಿಯ ದೌರ್ಬಲ್ಯವನ್ನು ಉಪಯೋಗಿಸಿಯಲ್ಲ!!
೧೪.ರಾಜಕಾರಣಿ ನೀತಿಕೋವಿದನಾಗಿರುವುದು ಸಾಧ್ಯವಿಲ್ಲ!
೧೫.ಮಾನವನ ಬಾಳು ಗೋಪುರದ ಗಡಿಯಾರವಿದ್ದ೦ತೆ! ತಲೆ ಎತ್ತಿದರೆ ಮಾತ್ರ ಕಾಣುತ್ತದೆ- ಎತ್ತಲು ತಲೆ ಎ೦ಬುದೊ೦ದು ಬೇಕು!- ಎತ್ತಬೇಕು ಎ೦ಬುದು ಆ ತಲೆಗೆ ತೋಚಬೇಕು!!- ಬೀಚಿ