Pages

Saturday, June 30, 2012

CONSCIOUS MEDITATION




You are sitting, and when you sit for meditation many thoughts will come — uninvited guests. They never come ordinarily. When you meditate, only then do they become interested in you. They will come, they will crowd, they will encircle you. Do not fight with them. Just say, “I have decided not to be disturbed by you,” and remain still. A thought comes to you; just say to the thought, “Go away.” Do not fight! By fighting you acknowledge; by fighting you accept; by fighting you will prove weaker. Just say, “Go away!” and remain still. You will be surprised. Just by saying to a thought, “Go away!” it goes away.

But say it with a will. Your mind must not be divided. It must not be something like a feminine no. It must not be like that, because with a feminine no, the more forcefully it is said the more forcefully it means yes. It must not be a feminine no. If you say, “Go away,” then do not mean inside, “Come nearer.” Then let it be “Go away!” Mean it, and the thought will disappear. If you are angry and you have decided not to be angry, do not suppress it. Just say to the anger, “I am not going to be angry,” and the anger will disappear.

There is a mechanism. Your will is needed because anger needs energy. If you say no with full energy, there is no energy left for the anger. A thought moves because deep down a hidden yes is there. That is why a thought moves in your mind. If you say no, that yes is cut from the very root. The thought becomes uprooted. It cannot be in you. But then with the no or yes you must mean what you say. Then the no must mean no and the yes must mean yes. But we go on saying yes, meaning no; telling no, meaning yes. Then the whole life becomes confused. And your mind, your body, they do not know what you mean, what you are saying.

This conscious effort to decide, to act, to be, is now going to be the evolution for man. A Buddha is different from you because of this effort and nothing else. Potentially there is no difference. Only this conscious effort makes the difference. Between man and man, the real difference is only of conscious effort. All else is just superficial. Only your clothes are different, so to speak. But when you have something conscious in you, a growth, an inward growth which is not natural, but which goes beyond, then you have a distinct individuality.


Source – Osho Book “The Ultimate Alchemy, Vol2″


ನಾನು ದೇವರನ್ನು ನೋಡಿದೆ!



ವೇದಸುಧೆಯಲ್ಲಿ   ಚಿಂತನೆಗೆ ಯೋಗ್ಯವಾದ ಅದ್ಭುತವಾದ ಲೇಖನಗಳನ್ನು ನಮ್ಮ ಪ್ರಕಾಶ್  ಬರೆಯುವಾಗ " ಒಂದಿಷ್ಟು ಹರಟೆ " ಎಂಬ ಶಿರೋನಾಮದಲ್ಲಿ ಬರೆಯುತ್ತಿದ್ದರು. ಹಲವರು ಅದನ್ನು "ಚಿಂತನೆ" ಎನ್ನಬಾರದೆ? ಎಂದಾಗ ಹರಟೆ ಜಾಗವನ್ನು ಚಿಂತನೆ ದಕ್ಕಿಸಿಕೊಂಡಿತು. ಈಗ ನಿಜವಾಗಿ ಹರಟೆ ಮಾಡಬೇಕೆಂದೇ ಈ ಲೇಖನದ ಉದ್ಧೇಶ. ತಲೆಹರಟೆ ಎಂದರೂ ಇನ್ನೂ ಸರಿಯೇ ಆದೀತು.... ........ವಿಷಯಕ್ಕೆ ಬರುವೆ....


          ಇವತ್ತು ಆಷಾಡಮಾಸದ ಏಕಾದಶಿ . ನಮ್ಮ ಮನೆಗೆ ಬೆಂಗಳೂರಿನಿಂದ ಬಂದಿರುವ  ನನ್ನ ಬೀಗರು ಮತ್ತು ಅವರ ಕುಟುಂಬ ಬೆಳಗಾಗೆದ್ದು  ಮಾವಿನಕೆರೆ ವೆಂಕಟರಮಣನ ದರ್ಶನಕ್ಕೆಂದು ಹೋಗಿ ಬಂದರು. ಅಲ್ಲಿಂದ ಬಂದಕೂಡಲೇ ನನ್ನ ಸೊಸೆಯ ತಮ್ಮ  ಗಣೇಶನನ್ನು "ದೇವರ ಸೇವೆ ಆಯ್ತೇನಪ್ಪಾ? " ಎಂದೆ.
- ಆಯ್ತು ಅಂಕಲ್  ಅಂದ


-"ದೇವರನ್ನು ನೋಡಿದ್ಯಾ? ಎಂದೆ
- ಹೂ ಅಂಕಲ್ ನೋಡಿದೆ, ಎಂದ.


ಆ ನಂತರದ ಸರದಿಯಲ್ಲಿ ಕಣ್ಣಿಗೆ ಬಿದ್ದವರು ನಮ್ಮ ಬೀಗರ ತಾಯಿ ಎಪ್ಪತ್ತೈದು ವರ್ಷದ ವೃದ್ಧೆ. ಕೈಲಾಗದಿದ್ದರೂ ಅವರು ತಮ್ಮ  ಮನೆದೇವರ ದರ್ಶನ ಮಾಡಲೇ ಬೇಕೆಂದು ಹಟ ಮಾಡಿ ಹೋಗಿದ್ದವರು.


-ಅಜ್ಜೀ, ದೇವರನ್ನು ನೋಡಿದಿರಾ? ಎಂದೆ.


- ಹೂ ನೋಡಿದೆ. ಚೆನ್ನಾಗಿ ದರ್ಶನವಾಯ್ತು, ಎಂದರು  ಆನಂತರ  ಹೋಗಿದ್ದ ಎಲ್ಲಾ  ಐದೂ     ಮಂದಿಯಿಂದಲೂ     ದೇವರ ದರ್ಶನ ವಾಯ್ತೆಂಬ ಉತ್ತರ ಸಿಕ್ಕಿತು.  ಹೋಗಿದ್ದ ಕಾರಲ್ಲಿ ಐದು ಜನ ಮಾತ್ರ ಹೋಗಲು ಅವಕಾಶ ಇತ್ತು, ಹಾಗಾಗಿ ಐದು ಜನರಿಗೆ ಮಾತ್ರ  ದರ್ಶನವಾಯ್ತು.  ಒಂದು ಟ್ರೈನ್ ನಲ್ಲಿ ಹೋಗಿದ್ದರೆ ನೂಕು ನುಗ್ಗಲಿನಲ್ಲಿ  ಸಾವಿರಾರು ಜನ ದರ್ಶನ ಪಡೆಯುತ್ತಿದ್ದರು! ಪುಣ್ಯಕ್ಷೇತ್ರಗಳಲ್ಲಿ ನೋಡ್ತೀವಲ್ಲವೇ?


ಹಾಂ, ತಲೆಹರಟೆ ಬೇಡ. ವಿಷಯ ಪ್ರವೇಶಿಸೋಣ.  ಈ ಐದೂ ಮಂದಿಗೂ ನಾಟಕೀಯವಾಗಿ ಉತ್ತರ ಕೊಡಬೇಕೆನಿಸಲಿಲ್ಲ. ಮುಗ್ಧವಾಗಿಯೇ ವಿಶಯ ತಿಳಿಸಿದ್ದರು.ಎಲ್ಲರ ಬಾಯಲ್ಲೂ " ನಾನು ದೇವರನ್ನು ನೋಡಿದೆ, ಎಂಬ ಉತ್ತರ!! ಎಲ್ಲರ ಮುಖದಲ್ಲೂ ಸಂತಸ.ತಮಾಶೆ ಮಾಡಬೇಕೆಂದಿದ್ದ ನನಗೆ ತಮಾಶೆಗೂ ವಾದ ಮಾಡಬೇಕೆನಿಸಲಿಲ್ಲ. ಇಷ್ಟು ಸಮಯ ಆನಂದವಾಗಿರುವ ಇವರೊ ಡ ನೆ ನಾನು ರಡ್ದುವಾದ ಮಾಡಿ ಅವರ ಮನಸ್ಸನ್ನು ಕೆಡಿಸಲು ನನಗೆ ಇಷ್ಟವಾಗಲಿಲ್ಲ. ಅವರು ನಿಜವಾಗಿಯೂ ದೇವರನ್ನು ನೋಡಿದರಾ? ನೋಡಿದರು, ಎಂದಾದರೆ ತರ್ಕ ಮಾಡುವವರಿಂದ ಪ್ರಶ್ನೆ ಸಿದ್ಧವಾಗಿರುತ್ತೆ. " ದೇವರು ಹೇಗಿದ್ದ?" ಆ ಪ್ರಶ್ನೆ ಬಂದಕೂಡಲೇ ಇವನ್ಯಾರೋ ತಲೆ ಹರಟೆ ಎಂಬುದು ಅವರಿಗೆ ಖಾತ್ರಿ ಯಾಗಿರುತ್ತೆ.  


ಅವರವರ ಭಾವಕ್ಕೆ
ಅವರವರ ಬಕುತಿಗೆ
ಅವರವರ ತೆರನಾಗಿ
ಇರುತಿಹನು ಶಿವಯೋಗಿ
ಹರನ ಭಕ್ತರಿಗೆ ಹರ
ಹರಿಯ ಭಕ್ತರಿಗೆ ಹರಿ
ನರರೇನು ಭಾವಿಪರೋ
ಅದರಂತೆ ತೋರುವನು||


ಎಷ್ಟು ಅದ್ಭುತವಾಗಿ ಬಣ್ಣಿಸಿದ್ದಾರೆ, ಅಲ್ಲವೇ? ಅವರು ತಲೆಹರಟೆ ಮಾಡ ಲಿಲ್ಲ."ನರರೇನು ಭಾವಿಪರೋ ಅದರಂತೆ ತೋರುವನು"-ಎಂದು ಬರೆಯುವಾಗ ಕವಿಯೂ ಕೂಡ ಭಗವಂತನು ಕಾಣಿಸುತ್ತಾನೆ, ಎಂದೇ ದೃಢ ವಿಶ್ವಾಸದಿಂದ ಹೇಳಿದ್ದಾನೆ. ಹೌದು, "ತೋರುವುದು" ಅಂದರೆ ಏನು? ಅದನ್ನೇ "ದರ್ಶನ" ಅನ್ನೋಣವೇ? ನಮ್ಮ ದೇಶದಲ್ಲಿ ಅನೇಕ ದಾರ್ಶನಿಕರು ಆಗಿಹೋಗಿದ್ದಾರೆ. ಅವರ ತಪಸ್ಸಿನಬಲದಿಂದ ಭಗವಂತನನ್ನು ಕಾಣಲು ಅವರಿಗೆ ತೋರಿದ ಹಾದಿ" ದರ್ಶನ" ಆಗಿರಬೇಕು. ಅಂದರೆ ಭಗವಂತನನ್ನು ಸಾಕಾರರೂಪದಲ್ಲಿಯೇ ನೋಡಬೇಕೇ? ನೋಡಲು ಸಾಧ್ಯವೇ? ಭಕ್ತರೆಲ್ಲಾ ದೇವರ ಗುಡಿಯಲ್ಲಿ ಸಾಮಾನ್ಯವಾಗಿ ನೋಡುವುದೇನು? ಗರ್ಭಗೃಹದಲ್ಲಿರುವ ವಿಗ್ರಹವನ್ನು ನೂಕುನುಗ್ಗಲಲ್ಲಿ ನೋಡಿದರೆ ಸಾಕು ಅವರಲ್ಲಿ ಕೃತಾರ್ಥ ಭಾವನೆ! ತಿರುಪತಿ ತಿಮ್ಮಪ್ಪನ ದರ್ಶನ ಮಾಡಲು ಇಡೀ ದಿನರಾತ್ರಿ ಕ್ಯೂ ನಲ್ಲಿ ನಿಲ್ಲಬೇಕು. ಅಯ್ಯಪ್ಪನ ದರ್ಶನ ಮಾಡಲು ನೂರಾರು ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ ಸಾಗಬೇಕು.............. ಅದೇ ಸಮಯದಲ್ಲಿ ಎಲ್ಲೋ ಒಬ್ಬ ಕಣ್ಮುಚ್ಚಿ ಕುಳಿತು ದೇವರನ್ನು ಕಾಣಲು ಹಂಬಲಿಸುತ್ತಾನೆ.


ದೇವಾಲಯಗಳಿಗೆ ಹೋಗದೆ   ಕಣ್ಮುಚ್ಚಿ ಕುಳಿತು ಅವನೊಳಗೆ   ಭಗವಂತನನ್ನು  ಕಾಣ ಬೇಕೆನ್ನುವವನು ದೇವಾಲಯಕ್ಕೆ ಹೋಗುವ ಜನರನ್ನು ಕನಿಷ್ಟವಾಗಿ ಕಾ ಣ ಬಾರದು. ಹಾಗೆಯೇ  ಗುಡಿಯ ವಿಗ್ರಹದಲ್ಲಿ ಭಗವಂತನನ್ನು ಕಾಣುವವರೂ ಕೂಡ.
ಇರಲಿ. ಭಗವಂತನಿಗೆ ಆಕಾರ ಕೊಡಲು ಸಾಧ್ಯವೇ? ಅವನು ನಿರಾಕಾರಿ.        ಅವನನ್ನು ದೇವಾಲಯದಲ್ಲಿ ಬಂಧಿಸಲು ಸಾಧ್ಯವೇ? ಅವನು ಸರ್ವ ವ್ಯಾಪಿ. ಅವನಿಗೆ ದೂಪ,ದೀಪ, ನೈವೇದ್ಯ ಬೇಕೇ? ಎಲ್ಲವೂ ಅವನೇ ಕೊಟ್ಟಿದ್ದು. ಭಗವಂತನೆಂಬುದು ಒಂದು ನಿಯಂತ್ರಕ ಶಕ್ತಿ. ಇಡೀ ಬ್ರಹ್ಮಾಂಡವನ್ನು ನಿಯಂತ್ರಿಸುತ್ತಿರುವ ಆ ಶಕ್ತಿಗೆ  ನಮ್ಮಿಂದ ಭಿಕ್ಷೆ ಬೇಕೇ? ಆದರೆ ನಾವು ಮಾಡುವ ಎಲ್ಲಾ ಕ್ರಿಯೆಗಳೂ ನಮ್ಮ ಆನಂದಕ್ಕಾಗಿ. ಆನಂದವೇ ದೇವರು. ದೇವರ ತಟ್ಟೆಗೆ ದಕ್ಷಿಣೆ ಹಾಕಲು ನಮಗೆ ಸಾಧ್ಯವೇ?


ದೇವರಿಗೆ ಕವಚ ಮಾಡಿಸಿಕೊಟ್ಟೆ! ಗುಡಿಯ ಕಟ್ಟಿಸಿಕೊಟ್ಟೆ!! ಸೀರೆ ಕೊಟ್ಟೆ! ರೇಶ್ಮೆ ಪಂಚೆ ಉಡಿಸಿದೆ!! ಹೀಗೆಲ್ಲಾ  ಹೇಳುವುದು ಎಷ್ಟು ಮಾತ್ರ ಸರಿ? ಎಂದು ಚಿಂತಿಸೋಣ.
ಕೊಸರು: ಇವತ್ತು ಏಕಾದಶಿ ,ಎಂದೆ ಅಲ್ಲವೇ? ಇವರೆಲ್ಲಾ ಉಪವಾಸ ಹೋಗಿ ದೇವರ ದರ್ಶನ!? ಮಾಡಿ ಬಂದರು. ಆದರೆ  "ಪುಳಿಯೋಗರೆ, ಪೊಂಗಲ್" ಮಾಡಿ ಅರ್ಚಕರು ಅಲ್ಲಿ ದೇವರಿಗೆ ನೈವೇದ್ಯ ಮಾಡಿದ್ದರು!! ಇವರಿಗೆಲ್ಲಾ ಪ್ರಸಾದ ಭರ್ಜರಿಯಾಗೇ ಸಿಕ್ಕಿತು.

Thursday, June 28, 2012

ಯೇಗ್ ದಾಗೆಲ್ಲಾ ಐತೆ-ಬೆನ್ನು ಹತ್ತಿ ಹೊರಟಾಗ- ಭಾಗ-4



ಆತ್ಮಕ್ಕೆಲ್ಲಿಯ ಸಾವು?
ಮುಕುಂದೂರ್ ಸ್ವಾಮೀಜಿ ಯವರ ಜೀವನ ಘಟನೆಗಳನ್ನು ಓದುತ್ತಿದ್ದನ್ತೆಲ್ಲಾ ಆನಂದವಾಗುತ್ತೆ. ಅಧ್ಯಾತ್ಮವನ್ನು ಎಷ್ಟು ಸರಳವಾಗಿ ಮನಮುಟ್ಟುವಂತೆ ಹೇಳ್ತಾ ಇದ್ರೂ ಅಂದ್ರೆ......
ಸ್ವಾಮೀಜಿಯವರ ಆಶ್ರಮಕ್ಕೆ ಒಬ್ಬ ಭಕ್ತ ಬರ್ತಾನೆ. " ಸ್ವಾಮಿ ದೊಡ್ದಬೋರೆಗೌಡ ಸತ್ತೋದ " ಎಂದು ದು:ಖದಿಂದ ಹೇಳ್ತಾನೆ.
-ಹಾ! ಸತ್ತು ಹೋದ! ದೊಡ್ದಬೋರೆಗೌಡ !![ನಕ್ಕು] ಎಲ್ಲಾರ ಉಂಟೆ?
-ಇಲ್ಲಾ ಸ್ವಾಮಿ ನಾನೇ ಖುದ್ದು ನೋಡಿ ಬಂದೆ ,ನಿನ್ನೆ ಸತ್ತು ಇವತ್ತು ಮಣ್ಣು ಮಾಡಿ ಅಲ್ಲಿಂದಲೇ ಬರ್ತಾ ಇದ್ದೀನಿ !!
-ಹೌದಾ? ನೀನೇ ಖುದ್ದು ನೋಡಿದ್ಯಾ? ಏನಪ್ಪಾ ಸತ್ತು ಹೋಗೋದು ಅಂದ್ರೆ? ಎಂದರು ಗಂಭೀರವಾಗಿ.
-ಹೌದು ಸ್ವಾಮಿ , ನಾನೇ ನೋಡ್ದೆ ಅಂತೀನಿ.
-ಸರಿ ಬಿಡಪ್ಪಾ, ನೀನೇ ಕಂಡೇ ಅಂದ್ಮ್ಯಾಕೆ ಇನ್ನೇನ್ ಐತೆ? [ಕೃಷ್ಣ ಶಾಸ್ತ್ರಿಗಳ ಕಡೆ ನೋಡುತ್ತಾ......]" ಸ್ವಾಮಿ ಸತ್ತು ಹೊಗೊದುಂಟೆ? ಅದು ಬಂದೂ ಇಲ್ಲಾ, ಹೋಗೋದೂ ಇಲ್ಲಾ. ಅದು ಎಂದೆಂದಿಗೂ ಇರೋದು, ಈ ಯಪ್ಪಾ ನೋಡಿದ್ರೆ ನಾನೇ ಕಂಡೇ ಅಂತಾನೆ,ಎಂಗಪ್ಪಾ ಬಾಳಿ ಬದುಕಿ ಸತ್ತು ವೋಗೋದು? ಇವನಂತೂ ಸತ್ತು ವೋಗಾಕಿಲ್ಲಾ. [ಅವರನ್ನೇ ನೋಡಿಕೊಂಡು ]
" ಹೀಗಂತಾ ಹೇಳಿ ಜೋರಾಗಿ ನಕ್ಕಾಗ ಎಲ್ಲರೂ ಕಕ್ಕಾ-ಬಿಕ್ಕಿ.
ದೇಹಕ್ಕಷ್ಟೇ ಸಾವು, ಆತ್ಮನಿಗೆ ಸಾವಿಲ್ಲಾ!! ಎಂಬುದನ್ನು ಎಷ್ಟು ಸರಳವಾಗಿ ನಿರೂಪಿಸಿಬಿಟ್ರು!!

-------------------------------------------------------------
ಹಿಂಗೇ ಬಿಡದಂಗೆ ಹಿಡ್ಕಂದ್ರೆ ಅವಾ ಬಿಡ೦ಗೇ ಇಲ್ಲಾ!!
ಸ್ವಾಮಿಗಳ ಆಶ್ರಮದ ಮುಂದೆ ನಿಂತು ದೂರಕ್ಕೆ ಕಣ್ಣು ಹಾಯಿಸಿದರೆ ಸಿದ್ಧರ ಬೆಟ್ಟ ಕಾಣುತ್ತೆ. ಆ ಬೆಟ್ಟ ವನ್ನು ಹತ್ತಲು ಕೃಷ್ಣ ಶಾಸ್ತ್ರಿಗಳೊಟ್ಟಿಗೆ ಒಮ್ಮೆ ಸ್ವಾಮೀಜಿ ಹೊರಟರು. ಆಶ್ರಮದಿಂದ ೭-೮ ಮೈಲಿ ನಡೆದು ಬೆಟ್ಟದ ಬುಡ ಸೇರಿದರು. ಸ್ವಾಮೀಜಿಗೆ ಬೆಟ್ಟಹತ್ತುವುದೆಂದರೆ ಬಲು ಸಲೀಸು.ಸ್ವಾಮೀಜಿಯಂತೂ ಬಂಡೆಯಿಂದ ಬಂಡೆಗೆ ಜಿಗಿಯುತ್ತಾ ನಿರಾಯಾಸವಾಗಿ ಹತ್ತುತ್ತಾ ಹೊರಟರು, ಆದರೆ ಕೃಷ್ಣಶಾಸ್ತ್ರಿಗಳಿಗೆ ಆಯಾಸವಾಗ್ತಾ ಇದೆ, ಎಷ್ಟು ಪ್ರಯತ್ನ ಪಟ್ಟರೂ ಸ್ವಾಮೀಜಿ ಯವರೊಟ್ಟಿಗೆ ಹೆಜ್ಜೆ ಹಾಕಲು ಶಾಸ್ತ್ರಿಗಳಿಗೆ ಸಾಧ್ಯವಾಗುತ್ತಿಲ್ಲ. ಒಂದು ಕಡೆಯಂತೂ ಎರಡು ಎತ್ತರವಾದ ಬಂಡೆಗಳ ನಡುವೆ ಆಳವಾದ ಕಂದಕ. ಸ್ವಾಮೀಜಿ ಸಲೀಸಾಗಿ ಜಿಗಿದೇ ಬಿಟ್ಟರು. ಆದರೆ ಶಾಸ್ತ್ರಿಗಳಿಗೆ ಸಾಧ್ಯವಾಗುತ್ತಿಲ್ಲ. ಆಗ ಸ್ವಾಮೀಜಿಯು ತಾವು ತಲೆಗೆ ಸುತ್ತಿದ್ದ ರುಮಾಲು ಬಿಚ್ಚಿ ಹಗ್ಗದಂತೆ ಉದ್ದಮಾಡಿ ಅದರ ಒಂದು ತುದಿಯನ್ನು ಶಾಸ್ತ್ರಿಗಳತ್ತ ಎಸೆಯುತ್ತಾರೆ, " ಈಗ ಹಗ್ಗ ಬಿಗಿಯಾಗಿ ಹಿಡ್ಕಾ ಇವ ನಿನ್ನ ಕರಕೊನ್ಡಾನು! " ಸ್ವಾಮೀಜಿ ನಗುತ್ತಾ ಹೇಳುತ್ತಾರೆ. ಶಾಸ್ತ್ರಿ ರುಮಾಲಿನ ಸಹಾಯದಿಂದ ಬನ್ದೆಮೇಲೇರುತ್ತಾರೆ.
ಸ್ವಾಮೀಜಿ ಮಾರ್ಮಿಕವಾಗಿ ಹೇಳುತ್ತಾರೆ" ನೋಡಪ್ಪಾ ಹಿಂಗೇ ಬಿಗಿಯಾಗಿ ಹಿಡ್ಕಂದ್ರೆ ಇವ ಕೈ ಬಿಡನ್ಗೇ ಇಲ್ಲಾ." ಭಗವಂತನನ್ನು ಕಾಣಲು ಎಷ್ಟು ದೃಢ ವಾದ ನಂಬಿಕೆ ಇರಬೇಕು , ಅನ್ನೋದನ್ನು ಸ್ವಾಮೀಜಿಯವರು ಚಿಕ್ಕ ಚಿಕ್ಕ ಘಟನೆಗಳಲ್ಲೂ ಮನಮುಟ್ಟುವಂತೆ ಹೇಳುತ್ತಿದ್ದ ಪರಿ ಇದು.
-----------------------------------------------------------------------
"ಎಲ್ಲಾ ರೂಪವು ತಾನಂತೆ ಶಿವ ಎಲ್ಲೆಲ್ಲಿಯೂ ಅವ ಇಹನಂತೆ"
ಬೆಟ್ಟವನ್ನು ಹತ್ತಿ ಹತ್ತಿ ಶಾಸ್ತ್ರಿಗಳಿಗೆ ಹೊಟ್ಟೆಯಲ್ಲಿ ಹಸಿವು ಜಾಸ್ತಿಯಾಗಿ ಬಿಟ್ಟಿತು. ಆಯಾಸ ಹೆಚ್ಚಾಗಿ ಬಂಡೆಯ ಮೇಲೆ ಮಲಗಿಬಿಟ್ರು, ಸ್ವಾಮೀಜಿಯಾದರೋ ಪ್ರಕೃತಿಯನ್ನೆಲ್ಲಾ ಬಣ್ಣಿಸ್ತಾ ಇದಾರೆ,
-ಯಾರಿಗೆ ಬೇಕು ಸ್ವಾಮೀಜಿ? ನನಗಂತೂ ತುಂಬಾ ಹಸಿವಾಗಿದೆ.
-ಬೆಟ್ಟಕ್ ಬಂದು ಹಸಿವಾಗ್ತದೆ ಅಂದ್ರೆ ಇಕ್ಕೊರ್ ಯಾರು? ಯೇನಾದ್ರ ಬುತ್ತಿ ತರ್ಬೇಕಿತ್ತಪ್ಪಾ!
- ಇಷ್ಟು ತಡವಾಗುತ್ತೆ ಅಂತಾ ನನಗೆ ಗೊತ್ತಾಗ್ಲಿಲ್ಲವಲ್ಲಾ
-ಅಂಗಾದ್ರೆ ಯಾರಾನ ತಂದಾಕಿದ್ರೆ ತಿಂದ ಬುಡ್ತೀಯಾ? ಹಾಸ್ಯಮಾಡಿ ಸ್ವಾಮೀಜಿ ನಕ್ಕರು, ಶಾಸ್ತ್ರಿಗಳೂ ನಕ್ಕರು.
-ಅಗೋ ಅಲ್ಲಿ ಯಾರೋ ಬಂದಂಗಾತು ,ಅವರನ್ನ ಕೇಳಾಣ " ಸ್ವಾಮೀಜಿ ಮಾತು ಕೇಳಿ ಶಾಸ್ತ್ರಿ ತಿರುಗಿ ನೋಡ್ತಾರೆ , ಯಾರೂ ಇಲ್ಲಾ.
-ಅಗೋ ಅಲ್ಲಿ ನೋಡು , ಆಕಾಶದಲ್ಲಿ ಬಹು ಎತ್ತರದಲ್ಲಿ ಹಾರಾಡ್ ತಿದ್ದ ಎರಡು ಹದ್ದುಗಳನ್ನು ಸ್ವಾಮೀಜಿ ತೋರಿಸಿ ಹೇಳ್ತಾರೆ, " ಎಲೆ ಅಪ್ಪಯ್ಯಗಳಾ ಈ ಹುಡುಗನಿಗೆ ಭಾರಿ ಹಸಿವಾಗೈತೆ, ವಸಿ ಎನಾದರ ಕೊಡ್ರಪ್ಪಾ!
ಸ್ವಾಮೀಜಿ ತಮಾಷೆ ಮಾಡ್ತಾರಲ್ಲಾ ಅಂತಾ ಶಾಸ್ತ್ರಿಗಳಿಗೆ ಬೇಸರವೇ ಆಗುತ್ತೆ,
ಅಷ್ಟರಲ್ಲಿ ಸ್ವಾಮೀಜಿ ಹೇಳ್ತಾರೆ" ಇಗಳಪ್ಪಾ, ಕೊಟ್ಟೆ ಬಿಟ್ರಲ್ಲಾ! ತಕೋ ತಿನ್ನು , ಬಾಳಾ ಹಸ್ದಿದ್ದೀಯಾ ,ಅಂತಾ ಕೈಲಿದ್ದ ಬಾಳೆಹಣ್ಣನ್ನು ಕೊಡ್ತಾರೆ.
-ತಿನ್ನು, ತಿನ್ನು, ಕೇಳಿದ್ರೆ ಇನ್ನೂ ಕೊಡ್ತಾರೆ,
ಶಾಸ್ತ್ರಿ ಹಣ್ಣನ್ನು ನೋಡ್ತಾರೆ; ಆಗತಾನೆ ಗುಡಾಣದಿನ್ದ ತೆಗೆದಂತಿದೆ. ಒಂದಾದ ಮೇಲೊಂದರಂತೆ ಮೂರು ಹಣ್ಣನ್ನು ಕೊಟ್ಟಿದ್ದಲ್ಲದೆ , ಸ್ವಾಮೀಜಿಯವರೂ ಮೂರು ಬಾಳೆ ಹಣ್ಣನ್ನು ತಿಂತಾರೆ.
ಆಗ ಶಾಸ್ತ್ರಿಗಳು ಕೇಳ್ತಾರೆ" ಸ್ವಾಮೀಜಿ ಈ ಹಣ್ಣು ಎಲ್ಲಿಂದ ಬಂತು?
-ಆವಾಗ ಬರೋವಾಗ ಅಲ್ಲೊಬ್ಬ ಬಂದಾ ನೋಡು, ಅವಾಕೊಟ್ಟ.
-ಯಾರು ಸ್ವಾಮೀಜಿ ಅವನು? ನಾನು ನೋಡಲೇ ಇಲ್ಲವಲ್ಲಾ?
-ನೀನು ನೋಡ್ಲಿಲ್ಲಾ ಅಂದ್ರೆ ಅವನು ಬಂದೆ ಇಲ್ಲಾ ಅನ್ನು? ಅವನು ಇಲ್ವೆ ಇಲ್ಲಾ ಅನ್ನು?
ಶಾಸ್ತ್ರಿಗಳಿಗೆ ಎಲವೂ ವಿಸ್ಮಯವಾಗಿ ಕಾಣುತ್ತೆ.
ಸ್ವಾಮೀಜಿ ನಗ್ತಾ ಹಾಡ್ತಾರೆ" ಎಲ್ಲಾ ರೂಪವೂ ತಾನಂತೆ ಶಿವಾ, ಎಲ್ಲೆಲ್ಲಿಯೂ ಅವಾ ಇಹನಂತೆ,
ಕಾಣಲಾರದವರಿಗೆ ಕಲ್ಲಂತೆ.....ಅವ ಇಲ್ಲಂತೆ...
ಹೀಗೆ ಅದೆಷ್ಟು ಘಟನೆಗಳೋ!
ಸ್ವಾಮೀಜಿಯವರೊಡನೆ ಶಾಸ್ತ್ರಿಗಳಿಗಾದ ಇಂತಹ ಅನುಭವಗಳನ್ನು ಓದುತ್ತಾ ಇದ್ದರೆ ಮೈ ಝುಂ .. ಎನ್ನುತ್ತೆ.
--------------------------------------------------------------


ಮನವಿ:

 ಶ್ರೀ ಬೆಳೆಗೆರೆ ಕೃಷ್ಣಶಾಸ್ತ್ರಿಗಳ  ಹತ್ತಾರುವರ್ಷಗಳ ಸ್ವಾಮೀಜಿಯವರ ಒಡನಾಟದ ಪರಿಣಾಮವಾಗಿ ಬಟ್ಟಿ ಇಳಿಸಿರುವ "ಯೇಗ್ ದಾಗೆ ಐತೆ "  ಪುಸ್ತಕದಿಂದ ಪ್ರೇರಿತರಾಗಿರುವ  ಹಾಸನದ    ಶ್ರೀ ಕವಿನಾಗರಾಜ್, ಶ್ರೀ ಪ್ರಕಾಶ್,ಬೇಲೂರಿನ ಡಾ.ಶ್ರೀವತ್ಸ ವಟಿ ಯವರು ಸೇರಿದಂತೆ ಕೆಲವು ಆತ್ಮೀಯರು ಸೇರಿ ಶ್ರೀ ಮುಕುಂದೂರು ಸ್ವಾಮಿಗಳ ಬಗ್ಗೆ ಪ್ರಕಟವಾಗದೇ ಇರಬಹುದಾದ    ಇನ್ನಷ್ಟು  ಮಾಹಿತಿಗಳನ್ನು  ಸಂಗ್ರಹಿಸಲು ಚಿಂತನೆ ನಡೆಸಿದ್ದೇವೆ. ಸ್ವಾಮೀಜಿಯವರು ಅರಸೀಕೆರೆ ತಾಲ್ಲೂಕು ಮತ್ತು ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ     ಸಾಕಷ್ಟು  ಓಡಾಟ ನಡೆಸಿರುವಂತಿದೆ.  ಹಾಗೂ ಹೊಳೇ ನರಸೀಪುರ ತಾಲ್ಲೂಕಿನ ಮುಕುಂದೂರು ಬೆಟ್ಟದಲ್ಲಿ ಕೆಲವು ಕಾಲ ತಪಸ್ಸು ಮಾಡಿ ಅವರಿಗೆ ಮುಕುಂದೂರಜ್ಜ ಅಥವಾ ಮುಕುಂದೂರು ಸ್ವಾಮಿಗಳು ಎಂಬ ಹೆಸರು ಬಂದಿದೆ.   ಈ ಭಾಗಗಳ ಪರಿಚಯವಿರುವ ಓದುಗ ಮಿತ್ರರು ಈ ಸತ್ಕಾರ್ಯದಲ್ಲಿ ಕೈಜೋಡಿಸಬೇಕಾಗಿ ಕೋರುವೆ.
ನೀವೇನು ಮಾಡಬಹುದು?
1. ಮುಕುಂದೂರು ಸ್ವಾಮಿಗಳ ಹೆಸರು ತಿಳಿದವರ ಮಾಹಿತಿ ನಮಗೆ ಕೊಡಿ.ಅವರನ್ನು ಭೇಟಿಯಾಗಲನುಕೂಲವಾಗುವ ವಿಳಾಸ ಮತ್ತು ದೂರವಾಣಿ ಸಂಖ್ಯೆ ಕೊಡಿ
2. ನಿಮಗೆ ಸಾಧ್ಯವಾದರೆ ಅವರ ಸಂದರ್ಶನ ನಡೆಸಿ ವೀಡಿಯೋ ಕ್ಲಿಪ್ ನಮಗೆ ಕಳಿಸಿಕೊಡಿ.
3. ಒಂದು ವಿಚಾರ ಸ್ಪಷ್ಟವಿರಲಿ. ಸ್ವಾಮೀಜಿಯವರು ಯಾವುದೇ ಸಂಪ್ರದಾಯ ಪೋಷಕರಲ್ಲ.
4. ನಮಗೆ ಅಗತ್ಯವಿರುವುದು ಅವರ ನೇರವಾದ ಆಧ್ಯಾತ್ಮಿಕನುಡಿಗಳು. ನೆನಪಿರಲಿ ಸ್ವಾಮೀಜಿಯವರು  ವಿಗ್ರಹದಲ್ಲಿ ಮಾತ್ರ ದೇವರನ್ನು ಕಂಡವರಲ್ಲ. ಪ್ರಕೃತಿಯಲ್ಲಿರುವ ಗಿದಮರ ಬಳ್ಳಿಗಳು, ಬಂಡೆಗಳು,ಪ್ರಾಣಿ ಪಕ್ಷಿಗಳನ್ನು ಮನುಷ್ಯನಷ್ತೇ ಸಹಜವಾಗಿ ಮಾತನಾಡಿಸುತ್ತಿದ್ದವರು. ಆದ್ದರಿಂದ ಈ ತಲಹದಿಯಮೇಲೆ  ನೀವು ಮಾತನಾಡಿಸುವವರಿಂದ ಮಾಹಿತಿ ಪಡೆಯುವುದು ಉತ್ತಮ.





Wednesday, June 27, 2012

ಪುಟ್ಟ ಕಣ್ಣುಗಳಲ್ಲಿ ದೊಡ್ಡ ಕನಸುಗಳು

ರಕ್ತ ಸಂಬಂಧಗಳು ಮತ್ತು ಜೀವಾತ್ಮ



     ಅಲ್ಪ ಶಕ್ತ ಜೀವಾತ್ಮನಿಗೆ ಯಾವುದೇ ಕ್ರಿಯೆ ಮಾಡಲು ಶರೀರವೆಂಬ ಮಾಧ್ಯಮದ ಅಗತ್ಯವಿದೆ, ಅದು ಮಾಧ್ಯಮದ ಸಹಾಯವಿಲ್ಲದೆ ತಾನೇ ತಾನಾಗಿ ಏನೂ ಮಾಡಲಾರದು ಎಂದು ತಿಳಿದವರು ಹೇಳುತ್ತಾರೆ. ಹಿಂದೂಗಳು ಪುನರ್ಜನ್ಮದಲ್ಲಿ ನಂಬಿಕೆಯಿರುವವರು. ಹಿಂದಿನ ಜನ್ಮದ ಮಾತಾ-ಪಿತರೇ ಇನ್ನೊಂದು ಜನ್ಮದ ಮಾತಾ-ಪಿತೃಗಳಾಗಲಾರರು. ತಂದೆ-ತಾಯಿಯರ ಗುಣ ವಿಶೇಷಗಳೇ ಮಕ್ಕಳಿಗೆ ಇರದಿರುವುದು, ಎಲ್ಲಾ ಮಕ್ಕಳೂ ಒಂದೇ ಸ್ವಭಾವದವರಾಗದಿರುವುದು, ಕುಟುಂಬದ ಸದಸ್ಯರುಗಳಲ್ಲಿ ಹೊಂದಾಣಿಕೆಯ ಕೊರತೆ ಕಾಣುವುದು, ಇತ್ಯಾದಿ ಅಂಶಗಳು ಪುನರ್ಜನ್ಮದ ನಂಬಿಕೆಗೆ ಪೂರಕವಾಗಿವೆ. ಹಿಂದಿನ ಜನ್ಮದಲ್ಲಿ ಸಂಬಂಧಿಗಳಾಗಿದ್ದವರು ಈ ಜನ್ಮದಲ್ಲೂ ಸಂಬಂಧಿಗಳಾಗಿದ್ದರೆ ಪರಸ್ಪರರಲ್ಲಿ ಮಧುರ ಸಂಬಂಧವಿರುತ್ತದೆ ಎಂದು ಹೇಳುತ್ತಾರೆ. ಇದೇನೇ ಇದ್ದರೂ ಕೆಲವು ಗುಣಗಳು ಅನುವಂಶಿಕವಾಗಿ ಬರುವುದನ್ನೂ ಕಾಣುತ್ತೇವೆ. ಸಂಬಂಧಗಳು, ಅದರಲ್ಲೂ ರಕ್ತ ಸಂಬಂಧಿಗಳ ನಡುವಣ ಸಂಬಂಧಗಳು ಚೆನ್ನಾಗಿರುವುದು ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು. ಈ ಹಿನ್ನೆಲೆಯಲ್ಲಿ ರಕ್ತ ಸಂಬಂಧಗಳು ಮತ್ತು ಜೀವಾತ್ಮರ ಸಂಬಂಧದ ಕುರಿತು ವೇದಾಧ್ಯಾಯಿ ಶ್ರೀ ಸುಧಾಕರ ಶರ್ಮರವರನ್ನು ವಿಚಾರಿಸಿದಾಗ ಅವರು ಕೊಟ್ಟ ಉತ್ತರ ಈ   ಆಡಿಯೋ ತುಣುಕಿನಲ್ಲಿದೆ: 


-  ಕವಿ ನಾಗರಾಜ್

ಯೇಗ್ ದಾಗೆಲ್ಲಾ ಐತೆ-ಬೆನ್ನು ಹತ್ತಿ ಹೊರಟಾಗ- ಭಾಗ-3

ತೋಟದ ಹಾದಿಯಲ್ಲಿ ಹೊರಟವರು ಆಶ್ರಮ ತಲುಪಿದೆವು.  ಅಲ್ಲಿನ ಒಬ್ಬ ಕೆಲಸಗಾರ  ಎಲ್ಲಾ ತೋರಿಸಿದವನು "ಕಾಫಿ ಮಾಡಿಸಿಕೊಂಡು ಬರಲಾ? ಬುದ್ಧಿಯೋರು ಮಲಗವ್ರೆ, ಅಂದ.
-ಪರವಾಗಿಲ್ಲ ,ನಾವು ಇಲ್ಲೇ ಎಲ್ಲಾ ನೋಡಿಕೊಂಡು ಎಲ್ಲಾ ನೋಡ್ತಾ ಇತೀವಿ..ಆಮೇಲೆ ಸ್ವಾಮೀಜಿ ನೋಡೋಣ, ಎಂದೆವು. ಆ ವ್ಯಕ್ತಿ ಆಶ್ರಮದ ಆವರಣದಲ್ಲಿರುವ ದೇವಾಲಯ, ಧ್ಯಾನ ಮಂದಿರ [ಈಗ ಕಲ್ಯಾಣ ಮಂಟಪವಾಗಿ        ಉಪಯೋಗವಾಗುತ್ತಿದೆ]   ಮುಕುಂದೂರು ಸ್ವಾಮಿಗಳಗದ್ದುಗೆ. ಸ್ವಾಮಿಗಳು ತಪಸ್ಸು ಮಾಡುತ್ತಿದ್ದ ಗುಹೆ, ಅವರು ಪೂಜಿಸುತ್ತಿದ್ದ  ಈಶ್ವರ ವಿಗ್ರಹ..ಎಲ್ಲವನ್ನೂ ನೋಡಿಕೊಂಡು ಸುತ್ತಮುತ್ತ ಇರುವ ಹಿರಿಯ ವ್ಯಕ್ತಿಗಳಿಂದ ಸ್ವಾಮಿಗಳ ಬಗ್ಗೆ ಒಂದಿಷ್ಟು ಮಾಹಿತಿ ಪಡೆಯೋನ ಎಂದು ಆಶ್ರಮದ ಹೊರಗೆ ಹೆಜ್ಜೆ ಹಾಕಿದೆವು. ಆಗ ಭೇಟಿಯಾದ ಮೊದಲ ವ್ಯಕ್ತಿಯನ್ನು ಮಾತನಾಡಿಸಿದಾಗ.......

[ವೀಡಿಯೋ ನೋಡುವುದು ಹಲವು ಭಾರಿ ಪ್ರಯಾಸದ ಕೆಲಸ. ಇದರ ಆಡಿಯೊ ಕೂಡ ಇಲ್ಲೇ ಕೆಳಗಿದೆ. ಆಡಿಯೋ ಕೇಳುವುದು ಸುಲಭ.]

ಈ ವ್ಯಕ್ತಿಯೊಡನೆ ಮಾತನಾಡುವಾಗ ಒಂದಂಶವಂತೂ ಸ್ಪಷ್ಟವಾಯ್ತು.ಸ್ವಾಮೀಜಿಯವರು ತಮ್ಮ ಭೌತಿಕ ಶರೀರವನ್ನು ತ್ಯಜಿಸಿದ ದಿನ ತಮಗೂ ದೇಹಮುಕ್ತಿ ಕೊಡಬೇಕೆಂದು ಪ್ರಾಥಿಸಿದವರು ಗೌರಜ್ಜಿ ಎಂಬ ಅಂಶ ಯೇಗ್ ದಾಗೆಲ್ಲಾ ಐತೆ ಪುಸ್ತಕದಲ್ಲಿ ಪ್ರಕಟಗೊಂದಿದೆ. ಆದರೆ ಆ ವ್ಯಕ್ತಿ ಗೌರಜ್ಜಿಯಲ್ಲಾ ಅವ೫ರು ಶರಣಮ್ಮ ಎಂದು ಅಂದು ಘಟನೆಯನ್ನು ಕಣ್ಣಾರೆ ಕಂಡವರು ಹೇಳಿದ್ದಾರೆ. ಸ್ವಾಮೀಜಿಯವರ ಬಗ್ಗೆ ಇಷ್ಟೆಲ್ಲಾ ವಿಚಾರಗಲನ್ನು ನಮಗೆ ತಿಳಿಯುವಂತೆ ಮಾಡಿರುವ ಶ್ರೀ ಬೆಳಗೆರೆ ಕೃಷ್ಣಶಾಸ್ತ್ರಿಗಳ ವಯೋಮಾನದ ಸಹಜ ಕುಂದಿದ ನೆನಪಿನ ಶಕ್ತಿಯ ಪರಿಣಾಮ ಹೆಸರು ಬದಲಾಗಿರಬಹುದು. ಆದರೆ ಧಾಖಲೆಯಲ್ಲಿ ತಪ್ಪಾಗದಿರಲಿ ಎಂದು ಈ ಅಂಶವನ್ನು ಪ್ರಕಟಿಸಿರುವೆ

 

 ಸ್ವಾಮೀಜಿಯವರ ಆಶ್ರಮದ ಭೇಟಿಯ ವಿಚಾರ ತಿಳಿದ ಮಿತ್ರ ಪ್ರಕಾಶ್ ಅವರು ಮಾಡಿರುವ ಪ್ರತಿಕ್ರಿಯೆಗೆ ಓದುಗರಿಗೆ ವಿಷಯ ತಲುಪಲೆಂಬ ಕಾರಣಕ್ಕೆ ಮುಖ್ಯ ಲೇಖನದಲ್ಲಿಯೇ ಪ್ರತಿಕ್ರಿಯಿಸಿರುವೆ.
 -ಹರಿಹರಪುರ ಶ್ರೀಧರ್ 

 ಆತ್ಮೀಯ ಪ್ರಕಾಶ್,
ನಿಜವಾಗಿ ನೋಡಲೇ ಬೇಕಾದ ಸ್ಥಳ.ಆದರೆ ಅಲ್ಲಿ ಏನ್ ಆಗಿದೆ ಅಂದ್ರೆ ಯಾವ ವಿಚಾರವನ್ನು ಸ್ವಾಮಿಗಳು ಹೃದಯಂಗಮ ಮಾಡಿಕೊಂದಿದ್ದರೋ ಅದನ್ನು ಬದಿಗಿಟ್ಟು ಅವರ ಆಶ್ರಮ ಅವರ ಹೆಸರಲ್ಲೇ ಒಂದು ಸಂಪ್ರದಾಯದ ಚೌಕಟ್ಟಿನಲ್ಲಿ ನಡೆಯುತ್ತಿದೆ. ಅದು ಅಲ್ಲಿನ ಜನರ ತಪ್ಪೆಂದು ನಾನು ಭಾವಿಸುವುದಿಲ್ಲ. ಆದರೆ ಸ್ವಾಮಿಗಳ ವಿಚಾರವನ್ನು ಒಪ್ಪಿರುವ ಸಹಸ್ರಾರು ಜನರು ಮುಂದೆ ಬಂದರೆ ನಿಜವಾಗಲೂ ಸ್ವಾಮಿಗಳ ವಿಚಾರವನ್ನು ಹರಡುವಂತೆ ಮಾಡಿದರೆ ನಿಜವಾದ ಅಧ್ಯಾತ್ಮದ ಕೆಲಸ ಅದಾಗುವುದರಲ್ಲಿ ಸಂಶಯವಿಲ್ಲ. ಸ್ವಾಮಿಗಳದ್ದು ಸ್ವತ: ತಪೋನುಭವ. ಭಾಷೆಯನ್ನೂ ಕಲಿಯದ ಅವರು ತಮಗೆ ತಿಳಿದಿದ್ದ ಹಳ್ಳಿ ಭಾಷೆಯಲ್ಲಿ ಬಹಳ ಮುಗ್ಧವಾಗಿ ಅಧ್ಯಾತ್ಮವನ್ನು ತಿಳಿಸುವ ಶೈಲಿಯಲ್ಲಿ ನಾವೂ ಕೂಡ  ಮಗುವಾಗಿಬಿಡುತ್ತೇವೆ. ಸ್ವಾಮಿಗಳು ಓಡಾಡಿದ ಸ್ಥಳಗಳಲ್ಲಿ ಈಗಲೂ ಅರವತ್ತಕ್ಕಿಂತ ಹೆಚ್ಚು ವಯಸ್ಸಾಗಿರುವ ಹಿರಿಯ ಜೀವಿಗಳಿಂದ ಸ್ವಾಮೀಜಿಯವರ ವಿಚಾರದ ಮೇಲೆ ಬೆಳಕು ಚೆಲ್ಲುವ ಸಂಗತಿಗಳನ್ನು ಸಂಗ್ರಹಿಸಲು ಇದುವೇ ಸಕಾಲ. ವರ್ಷ ಕಳೆದಂತೆ ಹಳಬರು ಇಲ್ಲವಾಗುತ್ತಾರೆ. ಇದುವರೆವಿಗೆ ಪ್ರಕಟವಾಗದೆ ಉಳಿದಿರುವ ಹಲವಾರು ಸಂಗತಿಗಳು ಕಾಲಗರ್ಭ ಸೇರಿಹೋಗುತ್ತವೆ.ಈಗ ಆ ದಿಕ್ಕಿನಲ್ಲಿ ಪ್ರಯತ್ನ ಮಾಡುವುದಾದರೆ ಸಮಾನ ಮಾನಸಿಕರ ಜೊತೆ ಪೂರ್ಣವಾಗಿ ಕೈ ಜೋಡಿಸಲು ನಾನಂತೂ ಸಿದ್ಧ.
------------------------------------------------------------------------
ಕೃಷ್ಣಶಾಸ್ತ್ರಿಗಳು ಶಾಲೆಯಲ್ಲಿ ಪಾಠ ಮಾಡ್ತಾ ಇರ್ತಾರೆ.ಇದ್ದಕ್ಕಿದ್ದಂತೆ ಮುಕುಂದೂರು ಸ್ವಾಮಿಗಳು ಶಾಲೆಗೆ ಬಂದುಬಿಡ್ತಾರೆ."ನಾನೂ ಒಂದಿಷ್ಟು ಪಾಠ ಕೇಳ್ತೀನಿ ಮಗಾ!" ಸ್ವಾಮಿಗಳ ಮಾತು ಕೇಳಿದ ಶಾಸ್ತ್ರಿಗಳಿಗೆ ಏನೂ ಹೇಳಲು ತೋಚಲೇ ಇಲ್ಲ. ಕೊನೆಯ ಬೆಂಚ್ ಮೇಲೆ ಸ್ವಾಮಿಗಳು ಕುಳಿತಿದ್ದು ಆಯ್ತು. " ನಿನ್ನ ಪಾಡಿಗೆ ನೀನು ಪಾಠ ಮಾಡು " ಸ್ವಾಮಿಜಿ ಅಪ್ಪಣೆ ಕೊಡಿಸಿದರು. ತೂಗಿ ಹಾಕಿದ್ದ ಭೂಪಟದಲ್ಲಿ ಬಂಗಾಳಕೊಲ್ಲಿ,ಅರಬ್ಬೀ ಸಮುದ್ರ, ಕಲ್ಕತ್ತಾ, ಬೊಂಬಾಯಿ, ಎಲ್ಲಾ ತೋರಿಸಿ ಪಾಠ ಮಾಡಿ ಮುಗಿಸಿದ್ದಾಯ್ತು. ಸ್ವಾಮೀಜಿ ಜೊತೆ ಶಾಸ್ತ್ರಿಗಳು ಹೊರಗೆ ಹೊರಟರು. ಸ್ವಾಮೀಜಿ " ಚೆನ್ನಾಗಿ ಪಾಠ ಮಾಡ್ತೀಯ." ಎಂದಾಗ ಶಾಸ್ತ್ರಿಗಳು" ಚೆನ್ನಾಗಿ ಮಾಡ್ತೀನಾ? ಸ್ವಾಮಿ ಎಂದು ಮತ್ತೆ ಕೇಳಿದರು. " ಹೌದು, ಸಮುದ್ರ ನೋಡಿದ್ದೀಯಾ? ಅಂತ ಮಕ್ಕಳನ್ನು ಯಾರಾದ್ರೂ ಕೇಳಿದ್ರೆ, ಅವರು ಏನ್ ಹೇಳತಾರೆ? ಇಸ್ಕೂಲಲ್ಲಿ ಪಟ ಹಾಕಿದ್ರು ಅದರಲ್ಲಿ ನೋಡಿದ್ದೀನಿ, ನೀವೂ ಪಟ ಹಾಕಿ, ಅದರಲ್ಲಿ ತೋರಿಸ್ತೀನಿ,ಅಂತಾವೆ ಅಲ್ವಾ? "ಅಂಗೇನೆ ಸನ್ಯಾಸೀನ "ದೇವರು ತೋರಿಸಿ" ಅಂದ್ರೆ ಗುಡಿಬಾಗಿಲು ತೆಗಿ" ಅಂತಾನೆ. ಗುಡಿ ವಿಗ್ರಹದಲ್ಲಿ ದೇವರು ಐತಾ? " ಸ್ವಾಮೀಜಿ ಮಾತಿನ ಅಂತರಾಳ ಅರ್ಥಮಾಡಿಕೊಂಡು ಶಾಸ್ತ್ರಿಗಳು ಬೆಪ್ಪಾಗಿ ನಿಲ್ತಾರೆ. ಮುಂದೆ ಸ್ವಲ್ಪ ದೂರದಲ್ಲಿ ಹೆದ್ದಾರಿ ಕಾಣುತ್ತೆ. " ನೋಡು ನಾವೀಗ ಸಣ್ಣ ದಾರಿಯಿಂದ ದೊಡ್ಡ ರಸ್ತೆ ಸೇರ್ತೀವಿ.ದೊಡ್ಡರಸ್ತೆ ಸಿಕ್ಕಿದ ಕೂಡ್ಲೆ ನಮಗೆ ಊರೇ ಸಿಕ್ತು ಅಂತಾ ಹೇಳಕ್ಕಾಯ್ತದ? ಸರಿಯಾಗಿ ಹೋಗಿಲ್ಲಾ ಅಂದ್ರೆ ಊರು ಸಿಕ್ದೆ ಇನ್ನೆಲ್ಲೋ ಹೋಗ್ ಬಹುದು ಅಲ್ವಾ? ಎಚ್ಚರ ಇರ್ಬೇಕಪ್ಪಾ!! ಸ್ವಾಮೀಜಿ ಮಾತು ಎಷ್ಟು ಅರ್ಥ ಗರ್ಬಿತ ಅಲ್ವಾ? ಇದಕ್ಕೆ ವಿವರಣೆ ಬೇಕಾಗಿಲ್ಲಾ, ಅಲ್ವಾ?

-----------------------------------------------------------------

ಮನವಿ: ಆಶ್ರಮಕ್ಕೆ ನಾವು ಹೋದವರು ಆಶ್ರಮದ ಜೊತೆಗೆ ಸುತ್ತ ಮುತ್ತಲಿನ ಕೆಲವರನ್ನು    ಅವರಿಂದ  ಮಾಹಿತಿ ಪಡೆಯುವ ಸಲುವಾಗಿ ಮಾತನಾಡಿಸಿದ್ದೇವೆ.  ಅಂತಹ ವೀಡಿಯೋ ಗಳನ್ನು ಪ್ರಕಟಿಸುತ್ತಾ  ಗ್ರಂಥದ ಕೆಲವು ಆಯ್ದ ಭಾಗಗಳನ್ನು  ಇನ್ನೂ ಹಲವು ಭಾಗಗಳಲ್ಲಿ ಪ್ರಕಟಿಸಲಿದ್ದೇವೆ.

ಹಿಂದಿನ ಭಾಗಗಳಿಗಾಗಿ ಕೊಂಡಿ:

ಯೇಗ್ ದಾಗೆಲ್ಲಾ ಐತೆ-ಬೆನ್ನು ಹತ್ತಿ ಹೊರಟಾಗ- ಭಾಗ-2

ಯೇಗ್ ದಾಗೆಲ್ಲಾ ಐತೆ-ಬೆನ್ನು ಹತ್ತಿ ಹೊರಟಾಗ- ಭಾಗ-1


ಯೌವನಂ ಧನ ಸಂಪತ್ತಿ :........

ಯೌವನಂ ಧನ ಸಂಪತ್ತಿ : ಪ್ರಭುತ್ವಂ ಅವಿವೇಕಿತಾ |
ಏಕೈಕಮ್ ಅಪ್ಯನರ್ತ್ಹಾಯ ಕಿಮು ಯತ್ರ ಚತುಷ್ಟಯಂ ||

ಯೌವನ, ಐಶ್ವರ್ಯ, ಒಡೆತನ, ಮತ್ತಿ ಅವಿವೇಕಿತನ, ಇವುಗಳು ಒಂದೊಂದು ಕೂಡಾ ಅನರ್ಥಗಳನ್ನೇ ಮಾಡಲ್ಪಡುವುವು, ಇವುಗಳೆಲ್ಲವೂ ಒಂದೇ ಕಡೆ ಸೇರಿದರೆ ಭಯಂಕರವಾದ ಅನರ್ಥಗಲೇ ನಡೆಯುವುವು. ಯೌವನದ ಉತ್ಸಾಹ ಅದರ ಜೊತಗೆ ಸಂಪತ್ತು ಜೊತೆಗೆ ನಾಯಕತ್ವ ದೊರೆತರೆ ಅವಿವೇಕಕ್ಕೆ ಬೇರೆ ಜಾಗ ಬೇಕೆನ್ದೆನು ಇಲ್ಲ,


-Sadyojata Bhatta

Monday, June 25, 2012

ಅಹಿಂಸಾ ........ಒಂದಷ್ಟು ಚಿಂತನೆ.

" ಅಹಿಂಸಾ, ಸತ್ಯ, ಆಸ್ತೆಯ, ಶೌಚ, ಇಂದ್ರೀಯನಿಗ್ರಹ " ಇವು ಪಂಚ ಮುಖ್ಯ ತತ್ವಗಳು ಎಂದು ಧರ್ಮ ಶಾಸ್ತ್ರಗಳು ಹೇಳುತ್ತವೆ. ಯಾರನ್ನು ಹಿಂಸೆಗೆ ಒಳಪಡಿಸದಿರುವುದು ;   ಸತ್ಯವನ್ನೇ ನುಡಿಯುವುದು ;  ಪರರ   ವಸ್ತುಗಳನ್ನು   ಕದಿಯದಿರುವುದು ;   ದೇಹ ,ಮನಸ್ಸು, ಮತ್ತು ನಾವಾಡುವ ಮಾತಿನಲ್ಲಿ ಪವಿತ್ರತೆಯನ್ನು ಸಾಧಿಸುವುದು ; ಮತ್ತು ಪಂಚೆಂದ್ರಿಯಗಳನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು.  ಇವೆ ಆ ಪಂಚ ಮಹಾ ತತ್ವಗಳು.  ಮಹಾಭಾರತದಲ್ಲಿ  ಇದರಲ್ಲಿ ಒಂದಾದ ಅಹಿಂಸೆಯ ಬಗ್ಗೆ ಹೇಳಿದೆ " ಅಹಿಂಸಾ ಪರಮೊಧರ್ಮಃ."  ಅಹಿಂಸೆ ಪರಮ ಪವಿತ್ರ ಧರ್ಮವಾಗಿದೆ. ಈ ತತ್ವವನ್ನು ಪ್ರಪಂಚದ ಎಲ್ಲ ಧರ್ಮಗಳು ಒಪ್ಪಿಕೊಂಡಿವೆ. ಬೌದ್ಧ ಮತ್ತು ಕ್ರೈಸ್ತ ಧರ್ಮಗಳು ತಮ್ಮ ಗ್ರಂಥಗಳಲ್ಲಿ ಈ ವಿಚಾರವನ್ನು ವಿಶೇಷವಾಗಿ ಪ್ರತಿಪಾದಿಸಿದೆ.

ಹಿಂಸೆ ಎಂದರೆ ಕೇವಲ ಒಂದು ಜೀವಕ್ಕೆ ಹಾನಿ ಮಾಡುವುದು ಮಾತ್ರವಾಗುವುದಿಲ್ಲ, ಯಾರೊಬ್ಬರ ಮನಸ್ಸಿಗೆ ನೋವುಂಟು ಮಾಡುವುದು, ಮತ್ತೊಬ್ಬರಿಗೆ ನಮ್ಮ ನಡವಳಿಕೆಯಿಂದ ಆಗಬಹುದಾದ ಮಾನಸಿಕ ಕಿರಿಕಿರಿಯು ಸೇರುತ್ತದೆ.  ಆದ್ದರಿಂದ, ಅಹಿಂಸೆ ಎಂದರೆ ಯಾರೊಬ್ಬರಿಗೂ ಯಾವ ರೀತಿಯಲ್ಲೂ ಹಿಂಸೆಯಾಗದಂತೆ ಬಾಳುವುದೇ ಆಗುತ್ತದೆ.  ಪ್ರಪಂಚದ ಎಲ್ಲಾ  ಧರ್ಮಗಳು ಅಹಿಂಸೆಯ ತತ್ವವನ್ನು  ಪಾಲಿಸಬೇಕೆಂದು ಮತ್ತು ಹಿಂಸಾ ಮಾರ್ಗವನ್ನು ತ್ಯಜಿಸಬೇಕೆಂದು ಹೇಳುತ್ತವೆ.  ಆದರೆ, ಯಾವುದೇ ರೀತಿಯಲ್ಲಿ ಹಿಂಸೆಗೆ ಆಸ್ಪದ ಕೊಡದ ಹಾಗೆ ಜೀವನವನ್ನು ನಡೆಸಲು ಸಾಧ್ಯವೇ?


ಒಂದು ಉದಾಹರಣೆಯನ್ನು ನೋಡೋಣ.  ಒಬ್ಬ ಕೊಲೆಪಾತಕ ನಮ್ಮ ಮನೆಗೆ ನುಗ್ಗಿದ್ದ ಎಂದೇ ಅಂದುಕೊಳ್ಳೋಣ. ಅವನ ಕೈಯಲ್ಲಿ ಮಾರಕಾಸ್ತ್ರವಿದೆ.  ಅವನು ನಮ್ಮ ಮಗನನ್ನೂ , ಮಗಳನ್ನೂ ಹೊಡೆಯಲು ಅಥವಾ ಅತ್ಯಾಚಾರ ಮಾಡಲು ಮುಂದಾಗಬಹುದು.  ಹೆಂಡತಿ ಮಕ್ಕಳ  ಪ್ರಾಣ ತೆಗೆಯಲು ಮುನ್ನುಗ್ಗಬಹುದು.  ಕೊಲೆಯ ಬೆದರಿಕೆ ಒಡ್ಡಬಹುದು. ಮನೆಯಲ್ಲಿರುವ ಹಣ , ಒಡವೆ ದೋಚಲು ಪ್ರಯತ್ನಿಸಬಹುದು.  ಒಬ್ಬೊಬ್ಬರಾಗಿ ಹಿಂಸೆಗೆ ಒಳಗಾಗಬಹುದು.  ಇಂತಹ ವಿಷಮ ಪರಿಸ್ಥಿತಿಯಲ್ಲಿ ನಾವು ನಮ್ಮ ಕುಟುಂಬದ ಸದಸ್ಯರನ್ನು ರಕ್ಷಿಸಲು ಮುಂದಾಗಬೇಡವೇ ? ನಮ್ಮನ್ನು ರಕ್ಷಿಸಲು ಯಾರು ಇಲ್ಲವೆಂದು ಹೇಳುತ್ತಾ ಕೂರಬೇಕೆ?  ಅಹಿಂಸಾ ಪರಮೋ ಧರ್ಮಃ  ಎಂದು ಕಣ್ಣು ಮುಚ್ಚಿ ಕೂರಬೇಕೆ?  ಅಥವಾ ಅಹಿಂಸಾ ತತ್ವವನ್ನು ಮನೆಯವರಿಗೆಲ್ಲ ಹೇಳಿ ಸಮಾಧಾನ ಪಡಿಸಬೇಕೇ?  ಅಥವಾ ನಮ್ಮ ಕುಟುಂಬದ ಎಲ್ಲಾ ಸದಸ್ಯರೂ  ಒಗ್ಗಟ್ಟಾಗಿ ನಮ್ಮ ಕೈಲಾದ ಮಟ್ಟಿಗೆ ಆ ಪಾತಕಿಯನ್ನ ಎದುರಿಸಬೇಕೆ? ಅವನ ತಪ್ಪಿಗೆ ಶಿಕ್ಷೆಯನ್ನು ಕೊಡಿಸುವಲ್ಲಿ ಶ್ರಮಿಸಬೇಕೆ?  ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಆ ಪಾತಕಿಯನ್ನು ಸಾಯಿಸಬೇಕಾದ ಪರಿಸ್ಥಿತಿ ಬಂದಾಗ ಏನು ಮಾಡಬೇಕು?  ಈ ರೀತಿಯ ಹಲವಾರು ಪ್ರಶ್ನೆಗಳು ಸಹಜವಾಗಿ ನಮ್ಮೊಳಗೇ ಹುಟ್ಟಬಹುದು.


ಅಹಿಂಸೆಯನ್ನು ಭೋದಿಸುವ ನಮ್ಮ ಧರ್ಮ ಶಾಸ್ತ್ರಗಳು ಇಂಥ   ವಿಷಮ ಪರಿಸ್ಥಿತಿಯಲ್ಲಿ    ಏನು  ಮಾಡಬೇಕೆಂದು   ತಿಳಿಸಿವೆ.  " ಯಾವುದೇ ವಿಚಾರ ಮಾಡದೆ ಇಂತಹ ಪಾತಕಿಗಳನ್ನು ಶಿಕ್ಷಿಸಲು ಮುಂದಾಗಬೇಕೆಂದು , ದಂಡಿಸಬೇಕೆಂದು ಹೇಳುತ್ತದೆ."  ಮುಂದುವರೆದು  " ಇಂತಹ ದುಷ್ಕೃತ್ಯ ಎಸಗುವ ವ್ಯಕ್ತಿ ಗುರುವಾಗಿರಬಹುದು , ಹಿರಿಯನಾಗಿರಬಹುದು, ಯುವಕನಾಗಿರಬಹುದು, ಅಥವಾ ವಿದ್ಯಾಸಂಪನ್ನನೆ  ಆಗಿರಬಹುದು.  ಆದರೆ ಇಂತಹವರಿಗೆ ಯಾವುದೇ ಕರುಣೆಯನ್ನು ತೋರಿಸಬಾರದು " ಎಂದೇ ಹೇಳುತ್ತದೆ. " ಇಂತಹ ಅನಿವಾರ್ಯ ಸಂಧರ್ಭದಲ್ಲಿ ಪಾತಕಿಯನ್ನು ಕೊಂದರು , ಮಾಡಿದ ಪಾಪ ಕೃತ್ಯಕ್ಕೆ  ಯಾವ ಪಾಪದ ಲೇಶವು ಅಂಟುವುದಿಲ್ಲ "  ಎನ್ನುತ್ತದೆ ಧರ್ಮ ಶಾಸ್ತ್ರಗಳು.    ಇಂದಿನ ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲೂ  " ವಿಶೇಷ ಸಂಧರ್ಭದಲ್ಲಿ ಸ್ವಯಂ ರಕ್ಷಣೆಗಾಗಿ ಅತ್ಯಾಚಾರಿ, ಕೊಲೆಗಡುಕರನ್ನು ಕೊಲ್ಲುವುದು  ಅಪರಾಧವಲ್ಲ " ಎನ್ನುವುದನ್ನು  ಹಲವಾರು ವಿಚಾರಣೆಯ ಸಂಧರ್ಭದಲ್ಲಿ ಸಮರ್ಥಿಸಿದೆ.


ಇಂತಹುದೇ ಸಂಧಿಗ್ದದಲ್ಲಿ ಅರ್ಜುನನು ಧರ್ಮರಾಯನನ್ನು ಅಹಿಂಸೆಯ ಬಗ್ಗೆ ಒಂದು ಪ್ರಶ್ನೆಯನ್ನು ಕೇಳುತ್ತಾನೆ.  " ಈ ಪ್ರಪಂಚದಲ್ಲಿ ನಮ್ಮ ಕಣ್ಣಿಗೆ ಕಾಣದ ಕೋಟ್ಯಾಂತರ ಜೀವಿಗಳು, ನಾವು ಊಹೆ ಕೂಡ ಮಾಡಿಕೊಳ್ಳಲಾಗದಂತೆ  ನಮ್ಮ ಕಣ್ಣ ರೆಪ್ಪೆಗೆ ಬಡಿತಕ್ಕೆ ಸಿಕ್ಕಿ ಸಾಯುವಾಗ  ಅಹಿಂಸಾ ತತ್ವ ಎಷ್ಟು ಸಮಂಜಸ? "   ಇಂತಹ ಪ್ರಶ್ನೆಗಳಿಗೆ ಸಮಂಜಸವಾದ ಉತ್ತರವನ್ನು ಭಾಗವತ ಹೀಗೆ ಹೇಳುತ್ತದೆ " ಜೀವೋ, ಜೀವಸ್ಯ , ಜೀವನಂ."  ಉಪನಿಷತ್ತು ಹೇಳುತ್ತದೆ "ಜೀವನದಲ್ಲಿ  ಪ್ರತಿಯೊಂದು ಅವಶ್ಯವೇ."


ಈ ಜಗತ್ತಿನಲ್ಲಿ  ಅಹಿಂಸೆಯನ್ನು ಎಲ್ಲರು ಭೋಧಿಸುವವರೆ ಆದರೆ ದುಷ್ಟರನ್ನು ಶಿಕ್ಷಿಸುವವರು ಯಾರು?  ದುಷ್ಟರಿಂದ ಸಾಮಾನ್ಯರಿಗೆ ರಕ್ಷಣೆ  ಹೇಗೆ?  ದುಷ್ಕೃತ್ಯ ಎಸಗುವವರನ್ನು ನಿಗ್ರಹಿಸುವ ಜೊತೆಗೆ ಶಿಷ್ಟರನ್ನು ರಕ್ಷಿಸುವ ಕಾರ್ಯ ಕೂಡಾ ಅಹಿಂಸಾ ತತ್ವದಷ್ಟೇ ಪ್ರಮುಖವಲ್ಲವೇ?  ಈ ಬದುಕಿನಲ್ಲಿ ಕೇವಲ ಒಳ್ಳೆಯತನವಷ್ಟೇ ಮುಖ್ಯವಲ್ಲ , ಜೊತೆಗೆ ಒಳ್ಳೆಯದನ್ನು ಉಳಿಸಿಕೊಳ್ಳಲು  ಹೋರಾಟವನ್ನು ನಡೆಸಬೇಕಾಗುತ್ತದೆ. ಇಂತಹ ಹೋರಾಟದ ಸಂಧರ್ಭದಲ್ಲಿ ಪಲಾಯನವಾದ ಎಂದಿಗೂ ಕೂಡದು.  ಸಮರ್ಥವಾಗಿ ಎದುರಿಸುವ ಮನೋಸ್ತೈರ್ಯ ಹೊಂದಬೇಕಾಗುತ್ತದೆ.  ಕೇವಲ ನೀತಿ ಪಾಠದಿಂದ ಜೀವನ ಸಾಗುವುದಿಲ್ಲ.  ನೀತಿ, ಅನೀತಿಯ ವ್ಯತ್ಸ್ಯಾವನ್ನು ತಿಳಿದು ಯಾವ ಸಂಧರ್ಭಕ್ಕೆ ಯಾವುದು ಅವಶ್ಯಕ ಎಂಬುದರ ನಿರ್ಧಾರ ಮಾಡಬೇಕಾದ ವಿವೇಚನೆ ಮತ್ತು ವಿವೇಕ ಅವಶ್ಯಕ.        ಇದನ್ನೇ ಶ್ರೀ ಕೃಷ್ಣ ಪರಮಾತ್ಮ     ಭಗವಧ್ಗೀತೆಯಲ್ಲಿ   ಅರ್ಜುನನಿಗೆ " ಕರ್ಮದಲ್ಲಿ ಆಕರ್ಮವನ್ನು, ಆಕರ್ಮದಲ್ಲಿ ಕರ್ಮವನ್ನು ಯಾವನು ನೋಡುತ್ತಾನೋ ಅವನೇ ಬುದ್ಧಿವಂತನು, ಅವನೇ ಯುಕ್ತನು, ಮತ್ತು ಸಕಲ ಕರ್ಮಗಳನ್ನು ಮಾಡಿದವನಾಗುತ್ತಾನೆ " ಎಂದು ಬೋಧಿಸಿದ್ದು .


ಹೆಚ್ ಏನ್ ಪ್ರಕಾಶ್


( ಈ ನನ್ನ ಚಿಂತನವು ಹಾಸನ ಆಕಾಶವಾಣಿ ಕೇಂದ್ರದಿಂದ ದಿನಾಂಕ 27 11 2009 ರಲ್ಲಿ ಬಿತ್ತರಗೊಂಡಿತ್ತು )

ಸಂಧ್ಯಾಕಾಲದಲ್ಲಿರುವವರೊಂದಿಗೆ ಸ್ವಲ್ಪ ಸಮಯ





     ನನ್ನ ಮೊಮ್ಮಗಳು ಚಿ. ಅಕ್ಷಯಳ 6ನೆಯ ವರ್ಷದ ಹುಟ್ಟುಹಬ್ಬವನ್ನು ಕಳೆದ ವಾರ ಬೆಂಗಳೂರಿನ ಮನೆಯಲ್ಲಿ ಸರಳವಾಗಿ ಆಚರಿಸಿದರು. ಆ ಸಂದರ್ಭದಲ್ಲಿ ಯಾವುದಾದರೂ ಸಾಮಾಜಿಕ ಚಟುವಟಿಕೆಗೆ ಧನಸಹಾಯ ಮಾಡಲು ಅಪೇಕ್ಷಿಸಿದ್ದ ಅಳಿಯ ರಾಘವೇಂದ್ರ ಮತ್ತು ಮಗಳು ಬಿಂದು ಮನೆಯ ಸಮೀಪದಲ್ಲಿ ವಿಸ್ತರಣೆಯಾಗುತ್ತಿದ್ದ ದೇವಸ್ಥಾನದ ಕಟ್ಟಡಕ್ಕೆ ಹಣ ನೀಡುವ ಬಗ್ಗೆ ಮಾತನಾಡುತ್ತಿದ್ದರು. ಅದರ ಬದಲು ಯಾವುದಾದರೂ ವೃದ್ಧಾಶ್ರಮದ ನಿವಾಸಿಗಳಿಗೆ ಅವರ ಅಗತ್ಯ ನೋಡಿ ಏನಾದರೂ ಸಹಾಯ ಮಾಡಬಹುದೆಂದು ಕೊಟ್ಟ ಸಲಹೆಯನ್ನು ತಕ್ಷಣ ಒಪ್ಪಿದ ಅವರು ಹಾಸನದಲ್ಲೇ ಇರುವ ವೃದ್ಧಾಶ್ರಮಕ್ಕೆ ಭೇಟಿ ನೀಡಿ ವಿಚಾರಿಸಿ ತಿಳಿಸುವ ಹೊಣೆಯನ್ನು ನನಗೇ ವಹಿಸಿದರು. ಆ ಕಾರಣದಿಂದ ನಾನು ಮಿತ್ರ ಹರಿಹರಪುರ ಶ್ರೀಧರರನ್ನೂ ಕರೆದುಕೊಂಡು ಹಾಸನ ನಗರದ ಜೊರವಲಯದಲ್ಲಿರುವ ಗವೇನಹಳ್ಳಿಯಲ್ಲಿರುವ ವೃದ್ಧಾಶ್ರಮ ಚೈತನ್ಯ ಮಂದಿರಕ್ಕೆ ಭೇಟಿ ನೀಡಿ ಕೆಲವು ಗಂಟೆಗಳ ಕಾಲ ಅಲ್ಲಿದ್ದ ಹಿರಿಯರೊಡನೆ ಕಳೆದೆವು.   
     ಕಾಮಧೇನು ಸಹಕಾರಿ ವಿದ್ಯಾಶ್ರಮದ ಅಂಗ ಸಂಸ್ಥೆ ಚೈತನ್ಯ ಮಂದಿರದಲ್ಲಿ ಈಗ 32 ವೃದ್ಧೆಯರು ಮತ್ತು 10 ವೃದ್ಧರು ಆಶ್ರಯ ಪಡೆದಿದ್ದಾರೆ. ಮೊದಲು 13 ವೃದ್ಧರಿದ್ದು ಅವರ ಪೈಕಿ ಮೂವರು ಕಳೆದ 15 ದಿನಗಳ ಅವಧಿಯಲ್ಲಿ ಇಹಲೋಕ ತ್ಯಜಿಸಿದ ವಿಷಯ ತಿಳಿದು ಮನಸ್ಸು ಭಾರವಾಯಿತು. ವೃದ್ಧಾಶ್ರಮದಲ್ಲಿ ಬಡವರಿಗೆ ಉಚಿತವಾಗಿ ಊಟ, ವಸತಿ, ವೈದ್ಯಕೀಯ ಚಿಕಿತ್ಸೆ, ಇತ್ಯಾದಿ ಅಗತ್ಯದ ಅವಶ್ಯಕತೆಗಳನ್ನು ಪೂರೈಸುತ್ತಿದ್ದಾರೆ. ಆರ್ಥಿಕವಾಗಿ ಅನುಕೂಲವಾಗಿದ್ದು, ಅಸಹಾಯಕತೆ ಹಾಗೂ ಅನಿವಾರ್ಯತೆಯ ಕಾರಣ ಇರಬಯಸುವ ವೃದ್ಧ, ವೃದ್ಧೆಯರಿಗೂ ಇಲ್ಲಿ ಸ್ವಲ್ಪ ಹಣವನ್ನು ಮುಂಗಡವಾಗಿ ಕಟ್ಟಿಸಿಕೊಂಡು ಮಾಸಿಕ ರೂ. 1500/- ಅನ್ನು ಊಟೋಪಚಾರದ ವೆಚ್ಚವಾಗಿ ಪಡೆದು ಇರಲು ಅನುಕೂಲ ಕಲ್ಪಿಸಿದ್ದಾರೆ. ಅಂತಹ 4-5 ವೃದ್ಧರೂ ಇಲ್ಲಿದ್ದಾರೆ. ಆರು ಶಿಶುಗಳನ್ನೂ ಅಲ್ಲಿ ಪಾಲಿಸಲಾಗುತ್ತಿದೆ. ಮೂರು ಮಕ್ಕಳು 2-3 ವರ್ಷದವರಾಗಿದ್ದರೆ ಮೂರು ಶಿಶುಗಳು ಇನ್ನೂ ಹಾಲು ಕುಡಿಯುವ ಕೆಲವೇ ತಿಂಗಳುಗಳ ಎಳೆ ಕಂದಮ್ಮಗಳು. ಒಂದು ಶಿಶುವಂತೂ ಜನಿಸಿ ಕೇವಲ 2-3 ದಿನಗಳಾಗಿದ್ದು ಸಕಲೇಶಪುರ ತಾಲ್ಲೂಕು ಹುರುಡಿ ಗ್ರಾಮದ ಬಸ್ ನಿಲ್ದಾಣದ ಬಳಿ ಬಿಟ್ಟು ಹೋಗಿದ್ದಾಗಿದ್ದು ಇಲ್ಲಿ ಆಶ್ರಯ ಪಡೆದಿದೆ. ಬೆಳಿಗ್ಗೆ ಮತ್ತು ಸಾಯಂಕಾಲ ಕಾಫಿ, ಟೀ, ಬೆಳಿಗ್ಗೆ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಲಾಗುತ್ತಿದೆ. ಡಾ. ಗುರುರಾಜ ಹೆಬ್ಬಾರರು ಸಂಸ್ಥೆಯ ಅಧ್ಯಕ್ಷರು ಹಾಗೂ ಬೆನ್ನೆಲುಬಾಗಿದ್ದಾರೆ. ಉತ್ತಮ ಸಹಕಾರಿಗಳು ಅವರೊಡನಿದ್ದಾರೆ. 
     ಗಂಡ ಮತ್ತು ಮಕ್ಕಳು ಇಲ್ಲದ ಕಾರಣ ಅನಿವಾರ್ಯವಾಗಿ ಅಲ್ಲಿರಬೇಕಾಗಿ ಬಂದವರು ಕೆಲವರಾದರೆ, ಕೆಲವರು ಪರಸ್ಪರರಲ್ಲಿನ ಹೊಂದಾಣಿಕೆಯ ಕೊರತೆ, ಅಸಹನಾ ಮನೋಭಾವ, ವೈಯಕ್ತಿಕ ಸ್ವಪ್ರತಿಷ್ಠೆ, ಸ್ವಾಭಿಮಾನ, ಬಡತನ, ಇತ್ಯಾದಿಗಳ ಕಾರಣದಿಂದ ಅಲ್ಲಿರುವುದು ಕೆಲವರನ್ನು ಮಾತನಾಡಿಸಿದಾಗ ತಿಳಿದು ಬಂದ ಸಂಗತಿ. ಹೊಂದಿಕೊಂಡು ಹೋಗದ ಅವರುಗಳ ಸ್ವಭಾವದಿಂದ ವೃದ್ಧಾಶ್ರಮದಲ್ಲೂ ಕಿರಿಕಿರಿಯಾಗುವ ಬಗ್ಗೆ ಸಹ ಗೊತ್ತಾಯಿತು. ಒಬ್ಬ ವೃದ್ಧೆಯನ್ನು ಮಕ್ಕಳ ಬಗ್ಗೆ ಕೇಳಿದಾಗ, "ಮಕ್ಕಳು ಅವ್ರೆ, ಸತ್ತಿಲ್ಲ, ಬದುಕವ್ರೆ" ಎಂದು ಸಿಡಿಮಿಡಿಗೊಂಡಿದ್ದಳು. ಆರು ವರ್ಷಗಳಿಂದ ಇಲ್ಲಿರುವ ಇನ್ನೊಬ್ಬ ವೃದ್ಧೆ ಹಿಂದೆ ಅಂಗಡಿ ನಡೆಸುತ್ತಿದ್ದು, ಆಕೆ ಕಷ್ಟಪಟ್ಟು ಉಳಿಸಿದ್ದ  1ಲಕ್ಷ ರೂಪಾಯಿ ಇತರರ ಪಾಲಾಯಿತೆಂದು ಹಲುಬಿದ್ದಳು. ಹಾಸನ ನಗರದ ಒಬ್ಬ ಪ್ರತಿಷ್ಠಿತ ವ್ಯಕ್ತಿಯ (ಈಗ ದಿವಂಗತ) ಪತ್ನಿ ಸಹ ಪಾವತಿ ಆಧಾರದ ಮೇಲೆ ಇಲ್ಲಿನ ನಿವಾಸಿಯಾಗಿದ್ದಾರೆ. ಅವರ ಮಕ್ಕಳು ಅಮೆರಿಕಾದಲ್ಲಿದ್ದಾರೆ. ವಿಶೇಷವೆಂದರೆ ವೃದ್ಧಾಶ್ರಮದ ಒಂದು ಕೊಠಡಿಯನ್ನು (ಸುಮಾರು 2.00ಲಕ್ಷ ಇರಬಹುದು) ಅವರೇ ಕಟ್ಟಿಸಿಕೊಟ್ಟಿದ್ದಾರೆ. ಸಿರಸಿ, ತಿಪಟೂರು, ಬೆಂಗಳೂರು, ಇತ್ಯಾದಿ ಹಲವಾರು ಊರುಗಳಿಂದ ಬಂದವರೂ ಇಲ್ಲಿದ್ದಾರೆ, ಇಲ್ಲಿನವರೂ ಇದ್ದಾರೆ. ಹೆಚ್ಚಿನವರಿಗೆ ವಿಧವಾ ವೇತನ, ವೃದ್ಧಾಪ್ಯ ವೇತನಗಳು ಬರುತ್ತಿವೆ. ವಿಳಾಸ ಬದಲಾವಣೆ, ಊರಿನಲ್ಲಿಲ್ಲ, ಇತ್ಯಾದಿ ಕಾರಣಗಳಿಂದ ಬರುತ್ತಿದ್ದ ವೇತನ ನಿಂತು ಹೋಗಿದ್ದನ್ನು ಮತ್ತೆ ಬರುವಂತೆ ಮಾಡಲು ಕೆಲವರು ನಮ್ಮನ್ನು ಕೋರಿದರು. ಮತ್ತೊಮ್ಮೆ ಬರುವುದಾಗಿಯೂ, ವಿವರಗಳನ್ನು ಪಡೆದು ಸಂಬಂಧಿಸಿದವರೊಡನೆ ವ್ಯವಹರಿಸುವುದಾಗಿ ತಿಳಿಸಿದೆವು. ಎಲ್ಲರನ್ನೂ ಪ್ರಾರ್ಥನಾ ಮಂದಿರಕ್ಕೆ ಬರುವಂತೆ ಕೋರಿ ಅಲ್ಲಿ ಒಟ್ಟಿಗೆ ಕೆಲವು ಭಜನೆಗಳನ್ನು ಹಾಡಿದೆವು. ಶ್ರೀಧರ್ ಸಹ ಎರಡು ಭಜನೆಗಳನ್ನು ಹೇಳಿಕೊಟ್ಟು ಹೇಳಿಸಿದರು. ವೃದ್ಧಾಶ್ರಮಗಳ ಅಗತ್ಯ ಬಾರದಂತೆ ಹೊಂದಿಕೊಂಡು ಹೋಗುವ ಮನೋಭಾವವನ್ನು ಎಲ್ಲರಿಗೂ ಕರುಣಿಸುವಂತೆ 'ಸನ್ಮತಿ ದೇ, ಹೇ ಭಗವಾನ್' ಎಂದು ಮನಸ್ಸಿನಲ್ಲೇ ಪ್ರಾರ್ಥಿಸಿದೆವು. ಸ್ವಾರ್ಥ ಇಲ್ಲೂ ಬಿಡಲಿಲ್ಲ, 'ನನಗೆ ದೈನ್ಯತೆಯಿಲ್ಲದೆ ಬಾಳುವ ಅವಕಾಶ, ಅನಾಯಾಸದ ಮರಣ ಬರಲಿ' ಎಂದೂ ಕೇಳಿಕೊಂಡೆ.
     ಸ್ನಾನ ಆದ ನಂತರ ತಮ್ಮ ತಮ್ಮ ಇಷ್ಟದ ದೇವರ ಫೋಟೋಗೆ (ತಮ್ಮ ಮಂಚದ ಬಳಿ ಹಾಕಿಕೊಂಡಿರುವುದು) ಮತ್ತು ಪ್ರಾರ್ಥನಾ ಮಂದಿರದಲ್ಲಿರುವ ದೇವರ ಫೋಟೋಗಳಿಗೆ ಪೂಜೆ ಸಲ್ಲಿಸುವವರು ಸಲ್ಲಿಸುತ್ತಾರೆ. ಸಾಯಂಕಾಲ ಎಲ್ಲರೂ ಒಟ್ಟಿಗೆ ಭಜನೆ ಮಾಡುತ್ತಾರೆ. ಬೆಂಗಳೂರಿನ ರುದ್ರಮ್ಮ ಭಜನೆ ಹೇಳಿಕೊಡುತ್ತಾರೆ. ಟಿ.ವಿ. ಇದೆ. ಕೆಲವು ಧಾರಾವಾಹಿಗಳನ್ನು ನೋಡುತ್ತಾರೆ. ಸಮಾನ ಮನಸ್ಕರು ಗುಂಪು ಕಟ್ಟಿಕೊಂಡು ಮಾತನಾಡುತ್ತಾರೆ. ರಾತ್ರಿ ಊಟ ಆದ ನಂತರ ಮಲಗುತ್ತಾರೆ. ಮಕ್ಕಳ ಹುಟ್ಟು ಹಬ್ಬ, ಮದುವೆ, ಇತ್ಯಾದಿ ಶುಭ ಸಂದರ್ಭಗಳಲ್ಲಿ ಇಲ್ಲಿನ ನಿವಾಸಿಗಳಿಗೆ ಊಟ, ತಿಂಡಿಗಾಗಿ ದಾನ ಕೊಡುವವರ ಸಂಖ್ಯೆಯೂ ಕಡಿಮೆಯೇನಿಲ್ಲ. ಇಚ್ಛುಕರು ರೂ. 5000/- ದಾನ ನೀಡಿದರೆ ಆ ದಿನದ ತಿಂಡಿ ಮತ್ತು ಎರಡು ಊಟಗಳ ವ್ಯವಸ್ಥೆಯಾಗುತ್ತದೆ. ಕೇವಲ ಒಂದು ಹೊತ್ತಿನ ತಿಂಡಿಗಾದರೆ ರೂ.1000/-, ಒಂದು ಹೊತ್ತಿನ ಊಟಕ್ಕಾದರೆ ರೂ. 2000/- ದಾನ ಕೊಡಬಹುದಾಗಿರುತ್ತದೆ.  ಕೆಲವು ಹಸುಗಳನ್ನೂ ಇಲ್ಲಿ ಸಾಕಿದ್ದು ನೋಡಿಕೊಳ್ಳಲು ಒಬ್ಬ ಗೋಪಾಲಕ ಇದ್ದಾರೆ. ಇಳಿ ವಯಸ್ಸಿನಲ್ಲಿ ಜೀವನದ ಸಿಹಿಕಹಿಗಳನ್ನು ಉಂಡು ಸೋತಿರುವ ಇಲ್ಲಿನ ಜೀವಗಳಿಗೆ ಅಗತ್ಯವಾಗಿರುವುದು ಆಧ್ಯಾತ್ಮಿಕ ಚಿಂತನೆ ಮತ್ತು ಪ್ರೀತಿಯ ಮಾತುಗಳು. ಆಗಾಗ್ಗೆ ಇಲ್ಲಿ ಸತ್ಸಂಗಗಳನ್ನು ಏರ್ಪಡಿಸುವ ಬಗ್ಗೆ ಶ್ರೀಧರ್ ಮತ್ತು ನಾನು ಮಾತನಾಡಿಕೊಂಡೆವು. ಮಳೆಗಾಲವಾದ್ದರಿಂದ ಮತ್ತು ಮುಂಬರುವ ಚಳಿಗಾಲದ ಕಾರಣದಿಂದ ಅವರುಗಳಿಗೆ ಸ್ವೆಟರ್‌ಗಳನ್ನು ಒದಗಿಸುವುದು ಸೂಕ್ತವೆಂದು ಅನ್ನಿಸಿ ವ್ಯವಸ್ಥೆ ಮಾಡಲು ಮಗಳಿಗೆ ದೂರವಾಣಿ ಕರೆ ಮಾಡಿದೆ. 
-ಕ.ವೆಂ.ನಾಗರಾಜ್.
- - - - - - - - - - - - - - - - - - - - - - - - - -
ವೃದ್ಧಾಶ್ರಮದ ಕೆಲವು ಫೋಟೋಗಳು:










     . 
        

ಮೂರ್ಖಸ್ಯ ಹೃದಯಂ ಶೂನ್ಯಂ




ಅಪುತ್ರಸ್ಯ ಗ್ರಹಮ್ ಶೂನ್ಯಂ ಸನ್ಮಿತ್ರ ರಹಿತಸ್ಯ ಚ |
ಮೂರ್ಖಸ್ಯ ಹೃದಯಂ ಶೂನ್ಯಂ ಸರ್ವ ಶೂನ್ಯಾ ದರಿದ್ರತಾ ||

ಮಕ್ಕಳಿಲ್ಲದವನ ಮನೆಯು ಶೂನ್ಯ (ಯಾವುದೇ ಸುಖ ಸಂತೋಷಗಳಿರಲಾರದು), ಒಳ್ಳೆಯ ಮಿತ್ರರನ್ನು ಪಡೆಯದವನ ಮನೆಯು ಕೂಡಾ ಶೂನ್ಯವೇ, ಮೂರ್ಖ ಜನರಿಗೆ ಯಾವುದೇ ಭಾವನೆಗಳು ಇರಲಾರದು ಅಂತವರ ಹೃದಯ ಶೂನ್ಯವು, ಇವೆಲ್ಲದಕ್ಕಿಂತಲೂ ಬಡತನ ಎನ್ನುವುದು ಸರ್ವ ಶೂನ್ಯವು. ಬಡತನ ಇದ್ದವರಿಗೆ ಮಕ್ಕಳಿದ್ದರೂ ಕಷ್ಟ, ಮಿತ್ರರಂತು ಸಿಗಲಾರರು.

-ಸದ್ಯೋಜಾತ ಭಟ್ಟ

ನನ್ನ ಮಾತು: ಮಕ್ಕಳಿಲ್ಲದವನ ಮನೆಯು ಶೂನ್ಯ ,ಎಂದಾಗ ಈ ಮಾತನ್ನು ಅಪಾರ್ಥ ಮಾಡುವವರೇ ಹೆಚ್ಚು. ಮಕ್ಕಳಿಲ್ಲ ಎಂದರೆ  ಆ ದಂಪತಿಗಳ ಗರ್ಭದಲ್ಲಿ ಮಕ್ಕಳು ಜನಿಸಿಲ್ಲದ ಮನೆ ಎಂದು ಭಾವಿಸಬೇಕಿಲ್ಲ. ಹಲವರ ಮನೆಯಲ್ಲಿ ತಂದೆತಾಯಿಗಳಿಗೆ ನಾಲ್ಕೈದು ಮಕ್ಕಳಿದ್ದರೂ ಮಕ್ಕಳು ಬೆಳೆದು ದೊಡ್ಡವರಾದಾಗ ತಂದೆತಾಯಿಯನ್ನು ತಬ್ಬಲಿ ಮಾಡಿ ಹೊರದೇಶದಲ್ಲೋ ದೂರದ ಊರಲ್ಲೋ ಇದ್ದುಕೊಂಡು ಸ್ವಂತ ಮನೆಯಲ್ಲಿ ತಂದೆ ಯಾಯಿ ಇಬ್ಬರೇ ಇರುವ ಹಲವು ಮನೆಗಳನ್ನು ನಾವು ಕಾಣಬಹುದು. ಅಷ್ಟೇಕೇ? ಮಕ್ಕಳು ಅಮೇರಿಕಾ ದೇಶದಲ್ಲಿದ್ದಾರೆ. ಕೋಟ್ಯಾಧಿಪತಿಗಳು. ತಂದೆ ತಾಯಿಗೆ ವೃದ್ಧ್ಹಾಶ್ರಮವೇ ಗತಿ!. ಈ ಬಗ್ಗೆ ತರ್ಕ ಮಾಡಿ ಈವ್ಯವಸ್ಥೆಯನ್ನೇ ಸರಿ ಎಂದು ಮಾತನಾಡುವವರಿದ್ದಾರೆ.  ಆ ಬಗ್ಗೆ ನನ್ನ ನಿಲುವು ಬದಲಾಗದು.


ಇರಲಿ.
ಅಂತೆಯೇ ಬಡತನದ ವ್ಯಾಖ್ಯೆಯೂ ಕೂಡ. ಈಗಿನ ಕಾಲದಲ್ಲಂತೂ ಬಡತನಕ್ಕೆ ಆಸ್ಪದವೇ ಇಲ್ಲ. ಸೋಮಾರಿ ಮಾತ್ರ ಬಡವನಾಗಿರುತ್ತಾನೆ. ಕಷ್ಟಪಟ್ಟು ದುಡಿಯುತ್ತೀನೆನ್ನುವವನಿಗೆ ಕೂಲಿ ಮಾಡಿದರೂ ತಿಂಗಳಿಗೆ ಹತ್ತು ಸಾವಿರ ರೂಪಾಯಿಗಿಂತ ಹೆಚ್ಚು ದುಡಿಮೆ ಸಾಧ್ಯ. ಅಡಿಗೆ ಕೆಲಸ ಮಾಡುವ,ಕೂಲಿ ಕೆಲಸ ಮಾಡುವ,ಡ್ರೈವರ್ ವೃತ್ತಿ ಮಾಡುವ ಹಲವರನ್ನು ನಾನು ಬಲ್ಲೆ.ಹಾಗಾಗಿ ಬಡತನ ಎನ್ನುವುದು ಅವನ ಮನೋ ಭೂಮಿಕೆ ಸಂಬಂಧಿಸಿದ್ದು. ತಿಂಗಳಲ್ಲಿ ಐವತ್ತು ಸಾವಿರ ರೂಪಾಯಿ ದುಡಿಮೆ ಇದ್ದು ಬಡತನದಲ್ಲಿರುವ ಮನೆಗಳನ್ನೂ ನೋಡಿರುವೆ. ಐದಾರು ಸಾವಿರ ರೂಪಾಯಿ ದುಡಿಮೆ ಮಾಡುತ್ತಾ ಮನೆಗೆ ಬಂದ ಅತಿಥಿ ಸತ್ಕಾರ ಮಾಡಿಕೊಂಡು ಸಂತೋಷವಾಗಿರುವ ಜನರನ್ನೂ ನೋಡಿರುವೆ.  ಬಡತನ/ಸಿರಿತನಕ್ಕೂ ಮನುಷ್ಯನ ಸಂತೋಷವಾದ ಬದುಕಿಗೂ ಸಂಬಂಧವಿಲ್ಲ.

ಯೇಗ್ ದಾಗೆಲ್ಲಾ ಐತೆ-ಬೆನ್ನು ಹತ್ತಿ ಹೊರಟಾಗ- ಭಾಗ-2

ಮಿತ್ರರಾದ ಅರಸೀಕೆರೆ ಸುಬ್ಬಣ್ಣ ನವರಿಗೆ ಫೋನ್ ಮಾಡಿದಾಗ  ಅವರು  ಯಗಟಿ ಎಂಬ ಊರಿಗೆ  ಬಸ್ ಪ್ರಯಾಣ ಮಾಡ್ತಾಇದ್ರು. " ಸಾsssರ್ ,ಎಂತಾ ಕೆಲ್ಸಾ ಆಯ್ತು, ನಾನೂ ಬಂದ್ ಬಿಡ್ತಾಇದ್ದೆ,ಕುಟುಂಬ ಸಮೇತ ಯಗಟಿಗೆ ಹೋಗ್ತಾ ಇದೀವಿ.ಏನ್ ಮಾಡೋದು"ಅಂದ್ರು.
-’ಪರವಾಗಿಲ್ಲಾ, ಸುಬ್ಬಣ್ಣ, ಇನ್ನೊಮ್ಮೆ ಒಟ್ಟಿಗೆ ಹೋಗೋಣ, ಇವತ್ತು ನಾನು ಹೋಗಲು ದಾರಿ ಹೇಳಿ" ಎಂದಾಗ ಸರಿಯಾಗಿ ಹೇಳಿದರು.

-"ಅರಸೀಕೆರೆಯಿಂದ ಬಾಣಾವರಕ್ಕೆ ಹೋಗಿ. ಅಲ್ಲಿಂದ ಜಾವಗಲ್ ಬಸ್ ಹತ್ತಿ    ಅರಕೆರೆಯಲ್ಲಿ ಇಳಿದುಕೊಳ್ಳಿ, ಅರಕೆರೆಯಲ್ಲಿ ಯಾರನ್ನಾದರೂ "ವಿರಕ್ತ ಮಠ ಎಲ್ಲಿ" ಅಂದ್ರೆ  ಹೇಳ್ತಾರೆ.  ಅರಕೆರೆ  ಮುಖ್ಯ ರಸ್ತೆ ಯಿಂದ ಒಂದು ಕಿಲೋ ಮೀಟರ್ ದೂರ ಕಚ್ಚಾ ರಸ್ತೆಯಲ್ಲಿ ಕಾಲು ನಡಿಗೆಯಲ್ಲಿ ಹೋಗ ಬೇಕು:-ಅಂದ್ರು.   ಅಲ್ಲಿಗೆ ತಲುಪಿದಷ್ಟೇ ಸಮಾಧಾನವಾಯ್ತು.

ಅಷ್ಟು ಹೊತ್ತಿಗೆ  ಕವಿನಾಗರಾಜ್ ಫೋನ್ ಮಾಡಿದರು-ಎಂಟು ಗಂಟೆ ಗೇ ಹೊರಡಲು ನನಗೆ ಸಾಧ್ಯವಾಗುವುದಿಲ್ಲ. ನೀವು ಹೋಗಿ ಬನ್ನಿ, ಎಂದ್ರು. ನಾನು ಮತ್ತೆ ನಿಮಗೆ ಫೋನ್ ಮಾಡುವೆನೆಂದು ಅವರಿಗೆ ತಿಳಿಸಿ ,ಬೇಲೂರಿನಲ್ಲಿರುವ ಮಿತ್ರ ಡಾ. ಶ್ರೀವತ್ಸ ಎಸ್.ವಟಿಯವರಿಗೆ ಫೋನ್ ಮಾಡಿ.-"ವಟಿ ಹೀಗೆ ಮಾಡಬಹುದಾ?"-ಎಂದು ಆಕ್ಷೇಪಿಸುವಂತೆ ಮಾತು ಆರಂಭಿಸಿದೆ.
-"ಏನ್ ಮಾಡ್ದೇ ಸ್ವಾಮಿ?"
-ನೀವು ನನ್ನನ್ನು   ಅರಕೆರೆಕೆ ಕರೆದುಕೊಂಡು ಹೋಗಿದ್ದಿರೀ ತಾನೇ? ಅಲ್ಲಿ ಬರೀ ದೇವಸ್ಥಾನ ತೋರಿಸಿಕೊಂಡು ಅದರ ಬಗ್ಗೆ  ಪತ್ರಿಕೆಗೆ ಲೇಖನ ಮಾಡಿಸಿದಿರೇ ಹೊರತೂ ಅಲ್ಲಿ "ಮುಕುಂದೂರು ಸ್ವಾಮಿಗಳ ಆಶ್ರಮವನ್ನೇ ತೋರಿಸಲಿಲ್ಲವಲ್ಲಾ! ತಪ್ಪಲ್ವಾ?

-ಅಲ್ಲೆಲ್ಲಿದೆ, ಆಶ್ರಮ ? ನಿಮಗ್ಯಾರು ಹೇಳಿದ್ರು?

-ಅಲ್ಲಿ ಇರೋದು ಗೊತ್ತಾಗಿದೆ. ನಾನು ಹೋಗ್ತಾ ಇದೀನಿ. ಬರ್ತೀರೋ?

-ಈಗೆಲ್ಲಾಗುತ್ತೆ ಸ್ವಾಮಿ?

-ಅದೇನೋ ನಂಗೊತ್ತಿಲ್ಲ. ನಾನು ಅರ್ಸೀಕೆರೆ ಮಾರ್ಗ ಬರ್ತೀನಿ. ನೀವು ಕಳೇಬೀಡುಮಾರ್ಗ ಬನ್ನಿ. ಅಷ್ಟೆ. ಅಂದೆ

ನಾಗರಾಜ್ ಗೆ  ಫೋನ್ ಮಾಡಿ "ಸಾರ್ 10.00 ಗಂಟೆಗೆ  ಮತ್ತೊಂದು ಟ್ರೈನ್ ಇದೆ. ಹೊರಡುತ್ತೀರಾ?" ಎಂದೆ

-ಆಯ್ತು ಶ್ರೀಧರ್. ನಾನು ನೇರವಾಗಿ ರೈಲ್ವೆ ಸ್ಟೇಶನ್ ಗೇ ಬರ್ತೀನಿ, ಅಂದ್ರು.

ಅವರಾಗಲೇ 9.30 ಕ್ಕೆ ರೈಲ್ವೆ ಸ್ಟೇಶನ್ ತಲುಪಿ ನನಗೆ ಫೋನಾಯಿಸಿ"ಏನೂ ಎಲ್ಲಿದ್ದೀರಿ?" ಎಂದ್ರು

ಆಗ ನಾನು ಆಟೋ ಹತ್ತಿ   ಸ್ಟೇಶನ್     ತಲುಪಿದರೆ ಟ್ರೈನ್ ಒಂದು ಗಂಟೆ ತಡವಾಗಿಬಂತು. ಆ ಹೊತ್ತಿಗೆ ವಟೀ ಕೂಡ ತಾವು ನೇರವಾಗಿ ಅರಕೆರೆಗೆ ಬರುವುದಾಗಿ ಫೋನ್ ಮಾಡಿದ್ರು. ನಾವು ಅರಸೀಕೆರೆ ತಲುಪಿ ಬಸ್ಸ್ ನಲ್ಲಿ ಅರಕೆರೆ ತಲುಪುವಹೊತ್ತಿಗೆ, ವಟೀ ಅಲ್ಲಿ ಹಾಜರಿದ್ದರು. ಮೂವರೂ ತೋಟದ ದಾರಿಯಲ್ಲಿ ಅಶ್ರಮದತ್ತ ಹೆಜ್ಜೆ ಹಾಕಿದೆವು........



                         

Sunday, June 24, 2012

ಯೇಗ್ ದಾಗೆಲ್ಲಾ ಐತೆ -ಬೆನ್ನು ಹತ್ತಿಹೊರಟಾಗ. ಭಾಗ-1

ಈಗ್ಗೆ ಐದಾರು ವರ್ಷಗಳ ಹಿಂದೆ  ನಮ್ಮ ಇಲಾಖೆಯ[ಕೆ.ಪಿ.ಟಿಸಿಎಲ್] ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶ್ರೀ ವೈ.ವಿ.ವೆಂಕಟಕೃಷ್ಣ ನನ್ನೊಡನೆ ಮಾತನಾಡುತ್ತಾ "ನೀವು ಯೇಗ್ ದಾಗೆಲ್ಲಾ ಐತೆ "ಪುಸ್ತಕ ಓದಿದ್ದೀರಾ? " ನಿಮ್ಮಂತವರು ಆ ಪುಸ್ತಕ ಓದಬೇಕು ಅಂತಾ ತಮ್ಮೊಡನಿದ್ದ   ಪುಸ್ತಕ [ಅದು ಮೊದಲ ಮುದ್ರಣವಿರಬೇಕು] ವನ್ನು ತೋರಿಸಿದರು. ಸರಿ "ಕೊಡಿ ಓದಿ ಕೊಡ್ತೀನೆಂದೆ. ಒಂದೆರಡು ದಿನಗಳಲ್ಲಿ ಕೊಟ್ಟುಬಿಡಬೇಕೆಂದು ಕೊಡುವಾಗಲೇ ಹೇಳಿ ಕೊಟ್ಟರು. ನನ್ನ ಕೆಲಸಗಳ ಒತ್ತಡದಲ್ಲಿ ಎರಡು ದಿನಗಳಲ್ಲಿ  ಆ ಪುಸ್ತಕವನ್ನು ಪೂರ್ಣವಾಗಿ ಓದಲಾಗಲಿಲ್ಲ. ಅಲ್ಲಲ್ಲಿ ಕೆಲವು ಪುಟ ಓದಿ ಕುತೂಹಲ ಮೂಡಿಸಿಕೊಂಡಿದ್ದೆ. ಅಷ್ಟರಲ್ಲಿ ಅವರಿಗೆ ಆ ಪುಸ್ತಕ ಹಿಂದಿರುಗಿಸಬೇಕಾಗಿ ಬಂತು. ಆನಂತರ ಒಂದೆರಡು ವರ್ಷಗಳು ಆ ಪುಸ್ತಕ ನೋಡಲಿಲ್ಲ. ಪುನ: ನನ್ನ ಅಂತರ್ಜಾಲದ ಚಟುವಟಿಕೆ ಆರಂಭವಾದಮೇಲೆ ಕಳೆದ ಎರಡು ಮೂರು ವರ್ಷಗಳಲ್ಲಿ ಮಿತ್ರರಾದ ಎಂ.ಡಿ.ಎನ್. ಪ್ರಭಾಕರ್  ಕೃಪೆಯಿಂದ  ಯೋಗ ಕೂಡಿ ಬಂತು" ಹೊಸ ಮುದ್ರಣವಾದ "ಯೇಗ್ದಾಗೆಲ್ಲಾ ಐತೆ" ನನ್ನ ಕೈ ತಲುಪಿತು. ಒಂದೆರಡು ಭಾರಿ ಓದಿದೆ. ಕುತೂಹಲ ಇಮ್ಮಡಿ ಯಾಗ್ತಾಹೋಯ್ತು. ನನ್ನ ಬ್ಲಾಗ್ ನಲ್ಲಿ  ಕೆಲವು ಪುಟ ಬರೆದೆ. ಪುನ: ಒಂದೆರಡು ವರ್ಷ ಬಿಡುವು. ಮೊನ್ನೆ ಯಾಕೋ ಮತ್ತೆ ನೆನಪಾಯ್ತು.  ಮುಕುಂದೂರು ಸ್ವಾಮಿಗಳ ಬಗ್ಗೆ  ಬರೆಯ ಬೇಕೆನಿಸಿತು. ಆರಂಭಮಾಡಿದ್ದು  ಸ್ವಾಮೀಜಿಯವರು ಶರೀರ ತ್ಯಜಿಸಿದ ದಿನ  ಶ್ರೀ ಬೆಳೆಗೆರೆ        ಕೃಷ್ಣ ಶಾಸ್ತ್ರಿಗಳಿಗೆ ಆದ  ದಿವ್ಯಾನುಭವ ಘಟನೆಯಿಂದ. 

ಯಾಕೋ ನನ್ನ ಮನದಲ್ಲಿ ಸ್ವಾಮಿಗಳ ಸ್ಮರಣೆ ತುಂಬಿತ್ತು." ಮುಕುಂದೂರು ಎಂಬ ಹಳ್ಳಿ ನಮ್ಮೂರಿನ ಸಮೀಪದಲ್ಲಿದೆ. ಅಲ್ಲಿನ ಸಿದ್ಧ ಪುರುಷರ ಬಗ್ಗೆಯೇ  ನನಗೆ ಅರಿವಿಲ್ಲವಲ್ಲಾ! " ನಾನು ಬರೆಯುವುದಕ್ಕಿಂತ ಮೊದಲು ಮುಕುಂದೂರು ಸ್ವಾಮೀಜಿ ಇದ್ದ ಜಾಗವನ್ನು ನೋಡಿ ಬರಬೇಕು " ಎಂದುಕೊಂಡೆ. ರಾತ್ರಿ  ಹನ್ನೆರಡವರೆಗೂ " ಯೇಗ್ ದಾಗೆಲ್ಲಾ ಐತೆ" ಪುಸ್ತಕದ ಕೆಲವು ಪುಟ ಓದಿದೆ. ಆಗಲೇ ನಿರ್ಧರಿಸಿದೆ. ಬೆಳಗಾಗೆದ್ದರೆ ಭಾನುವಾರ ಹೋಗಿಬಂದು ಬಿಡೋಣ..ಅವರಿದ್ದುದು ಅರಸೀಕೆರೆಯ ತಾಲ್ಲೂಕು ಬಾಣಾವರದ ಸುತ್ತಮುತ್ತ. ಅವರು ದೇಹತ್ಯಾಗ ಮಾಡಿರುವುದೂ ಅಲ್ಲೇ ಎಂದು ಪುಸ್ತಕದಿಂದ ಗೊತ್ತಾಗಿದೆ. ಸರಿ ಅರಸೀಕೆರೆರೆ ಮೂಲಕ ಬಾಣಾವರಕ್ಕೆ ಹೋದರೆ ಅಲ್ಲಿ ಯಾರನ್ನಾದರೂ ಕೇಳಿಕೊಂಡು ಹೋದರಾಯ್ತು.ಎಂದು  ಕೊಂಡೆ. ನನ್ನ ಮೇಜಿನ ಮೇಲಿದ್ದ  ರೈಲ್ವೆ ವೇಳಾಪಟ್ಟಿ ಕಣ್ಣಿನೆ ಬಿತ್ತು. ಅರಸೀಕೆರೆಗೆ ಬಸ್ ನಲ್ಲಿ ಹೋಗಬೇಕೆಂದರೆ ಹರಮ ಸಂಕಟ. ಟ್ರೈನ್ ನಲ್ಲಿ ಹೋದರಾಯ್ತು, ಎಂದು                           ವೇಳಾಪಟ್ಟಿ ನೋಡಿದೆ. ಬೆಳೆಗ್ಗೆ 8.00ಕ್ಕೆ ಟ್ರೈನ್ ಇದೆ. ಹೊರಡುವ ನಿರ್ಧಾರ ಮಾಡಿ ಮಲಗಿದೆ. ಬೆಳಿಗ್ಗೆ ಎದ್ದವನೇ ಮೊದಲ್ಯು ಮಾಡಿದ ಕೆಲಸವೆಂದರೆ  ವೇದಸುಧೆಯ ಗೌರವ ಸಂಪಾದಕರಾದ ಶ್ರೀ ಕವಿ ನಾಗರಾಜರಿಗೆ ಫೋನ್ ಮಾಡಿದ್ದು. ಅವರಾದರೋ ಮೊಬೈಲ್ ನೂ ಮನೆಯಲ್ಲಿಯೇ ಬಿಟ್ಟು ವಾಕಿಂಗ್ ಹೋಗಿದ್ದರು. ಪತ್ನಿ ಭಾರತಿ ಹಲೋ ಎಂದರು.ವಾಕಿಂಗ್ ಹೋಗಿರುವ ವಿಷಯ ತಿಳಿಸಿದರು. ಅವರಿಗೆ ವಿಷಯ ತಿಳಿಸಿ ವಾಕಿಂಗ್ ನಿಂದ ಬಂದ ಕೂಡಲೇ ಮಾತನಾಡಲು ಹೇಳಿದೆ. ನಂತರ  ಬಾಣಾವರದ ಸಮೀಪ  ಎಲ್ಲಿ ಅಂಬುದನ್ನು  ಗೊತ್ತು ಮಾಡಿಕೊಳ್ಳಲು ಅರಸೀಕೆರೆಯ ಮಿತ್ರ ಸುಬ್ಬಣ್ಣನಿಗೆ ಫೋನ್ ಮಾಡಿದೆ. ಅವರು ಸರಿಯಾಗಿ ಗುರುತು ಹೇಳಿದರು..................ಮುಂದೇನಾಯ್ತು ಎಂಬುದನ್ನು ನಾಳೆ ಬರೆಯುವೆ.

 
                       


                      


ಸ್ವಾಮಿಗಳ ಅಮೃತಶಿಲಾ ಮೂರ್ತಿ ಇರುವ ಆಶ್ರಮ

ಆಶ್ರಮದ ಮುಂಭಾಗದ ಗೋಪುರದಲ್ಲಿ ಸ್ವಾಮಿಗಳ ವಿಗ್ರಹ

ಇಲ್ಲಿ ಕಾಣುವ   ಮಂಗಳೂರು ಹಂಚಿನ ಮನೆಯೊಳಗೆ ಇರುವ ನೆಲಮಾಳಿಗೆಯೇ  ಸ್ವಾಮಿಗಳು ತಪಸ್ಸು ಮಾಡುತ್ತಿದ್ದ ಪುಣ್ಯಸ್ಥಳ.

ನೆಲಮಾಳಿಗೆಯಲ್ಲಿ ಸ್ವಾಮಿಗಳು ಪ್ತಪಸ್ಸು ಮಾಡುತ್ತಿದ್ದ ಸ್ಥಳದ ಜೀರ್ಣೋದ್ಧಾರವಾಗಿದ್ದು ಅಲ್ಲಿ ಸ್ವಾಮಿಗಳ ಫೋಟೋ ಇಟ್ಟು ಅದರೆದುರು ಕೃಷ್ಣಾಜಿನ  ಹಾಸಲಾಗಿದೆ.

ಆಶ್ರಮದ ದೇವಾಲಯದಲ್ಲಿ ಈಶ್ವರ ವಿಗ್ರಹ


ಆಶ್ರಮದಲ್ಲಿರುವ  ಮೈಸೂರು ಮಹಾರಾಜ ಚಾಮರಾಜ ಒಡೆಯರ್ ಮತ್ತು ಸಿದ್ದಗಂಗಾ ಶ್ರೀಗಳ ಆಳೆತ್ತರದ ಚಿತ್ರ.





ಶರಣೆಯರಾದ ಶರಣಮ್ಮ ಮತ್ತು ಕಲ್ಯಾಣಮ್ಮ ಇವರ ಸಮಾಧಿ ಇಲ್ಲಿದೆ

ಶರಣೆಯರ ಸಮಾಧಿ

ಶರಣೆಯರ ಸಮಾಧಿ

ಶರಣೆಯರ ಸಮಾಧಿ
ಧ್ಯಾನ ಮಂದಿರ ಮತ್ತು ಕಲ್ಯಾಣ ಮಂಟಪ


ಸ್ವಾಮೀಜಿಯರಕಾಲದ    ಜೊಂಬು ನೇರಲೆ ಮರ

ಬನ್ನಿ ಮಂಟಪ

ಸ್ವಾಮೀಜಿ ಉಪಯೋಗಿಸುತ್ತಿದ್ದ ಭಾವಿ

ಸ್ವಾಮೀಜಿಯವರ ಪೂರ್ವಾಶ್ರಮದ ಮರಿಮಗ ಪರಮೇಶ್ವರಪ್ಪನವರ ಮನೆಯಲ್ಲಿ ಸಾಹಿತಿ ಸಂಶೋದಕ ಡಾ. ಶ್ರೀವತ್ಸ ವಟಿಯವರೊಡನೆ

ಆಶ್ರಮದ ಚಟುವಟಿಗಳಿಗೆ ಸಾಕ್ಶಿ

ಈಗಿನ ಶ್ರೀ ಬಸವಲಿಂಗ ಸ್ವಾಮೀಜಿಯವರೊಡನೆ ವೇದಸುಧೆಯ ಗೌರವ ಸಂಪಾದಕರಾದ ಶ್ರೀ ಕವಿ ನಾಗರಾಜ್ ಮತ್ತು ಸಂಶೋಧಕ  ದಾ.ಶ್ರೀವತ್ಸ ಎಸ್.ವಟಿ

 ಶ್ರೀ ಬಸವಲಿಂಗ ಸ್ವಾಮೀಜಿಯವರು

ಶ್ರೀ ಬಸವಲಿಂಗ ಸ್ವಾಮೀಜಿಯವರೊಡನೆ ವೇದಸುಧೆಯ ಗೌರವ ಸಂಪಾದಕರಾದ ಶ್ರೀ ಕವಿ ನಾಗರಾಜ್ ಮತ್ತು ಸಂಪಾದಕ ಹರಿಹರಪುರಶ್ರೀಧರ್

ಯಾರು ನಿಜವಾದ ಮಿತ್ರರು?

 ಆಪತ್ಸು ಮಿತ್ರಂ ಜಾನೀಯಾತ್ ಯುದ್ಧೆ ಶೂರಂ ಧನೇ ಶುಚಿಂ |
 ಭಾರ್ಯಾಂ ಕ್ಷೀನೆಷು ವಿತ್ತೆಶು ವ್ಯಸನೆಶು ಚ ಬಾಂಧವಾನ್ ||

ತಾನು ಕಷ್ಟದಲ್ಲಿದ್ದಾಗ ಸ್ನೇಹಿತನನ್ನೂ, ಯುದ್ಧ ಸಂದರ್ಭದಲ್ಲಿ ಶೂರನನ್ನು, ಶ್ರೀಮಂತಿಕೆ ಬಂದಾಗ ಪ್ರಾಮಾಣಿಕತೆಯನ್ನು, ಬಡತನ ಬಂದಾಗ ಹೆಂಡತಿಯನ್ನು, ಕಷ್ಟ ಬಂದಾಗ ಬಂಧುಗಳನ್ನು ಪರೀಕ್ಷಿಸಿ ತಿಳಿಯ ಬೇಕು. ಈ ಸಂದರ್ಭಗಳಲ್ಲಿ ಯಾರು ಸಹಕಾರಿಗಲಾಗಿರುತ್ತಾರೋ ಅವರೇ ಮಿತ್ರರು ಬಾಂಧವರು ಎಲ್ಲರು.

-Sadyojata Bhatta



Saturday, June 23, 2012

ಮುಕುಂದೂರು ಸ್ವಾಮಿಗಳ ನೆನಪು


1966 ನೇ ಇಸವಿ. ಶಾಸ್ತ್ರಿಗಳು ಬೆಳೆಗೆರೆಯಲ್ಲಿ ಇದ್ದಾರೆ.ನಿತ್ಯವೂ ಬೆಳಿಗ್ಗೆ ಸಮಯ ಸ್ವಲ್ಪ ಹೊತ್ತು ಧ್ಯಾನಮಾಡುವ ಪದ್ದತಿ. ಅಂದು ಧ್ಯಾನದಲ್ಲಿ ಕುಳಿತಿದ್ದ    ಸ್ವಲ್ಪಹೊತ್ತಿನಲ್ಲೇ .........     . ಶಾಸ್ತ್ರಿಗಳು ಮುಕುಂದೂರು ಸ್ವಾಮಿಗಳ ಆಶ್ರಮದ ಬಾಗಿಲಲ್ಲಿ ನಿಂತಂತೆ..... ಕೌಪೀನವನ್ನು ಮಾತ್ರ ಧರಿಸಿದ್ದ ಸ್ವಾಮಿಗಳು.ಆಶ್ರಮದ ಒಳಗಿನಿಂದ ಛಂಗನೆ ನೆಗೆದು ಹೊರಬಂದು ಇವರ ಮುಂದೆ ನಿಂತಂತೆ ದೃಷ್ಯವನ್ನು ಕಂಡು ಶಾಸ್ತ್ರಿಗಳು ಚಕಿತರಾಗುತ್ತಾರೆ. ಪೈಲ್ವಾನರಂತೆ ತೊಡೆತಟ್ಟಿ "ಕರೆಯೋ ಅದ್ಯಾರು ಬರ್ತಾರೆ ಕುಸ್ತೀಗೆ" ...ಅಂತ ಹಸನ್ಮುಖರಾಗಿ ನಿಲ್ಲುತ್ತಾರೆ.
"ಏನ್ ಸ್ವಾಮಿ ,ನೀವು ಎಷ್ಟು ವರ್ಷಗಳಿಂದ ಒಂದೇ ತರ ಇದ್ದೀರಲ್ಲಾ! ಸ್ವಲ್ಪ ನಾದ್ರೂ ಏರು ಪೇರು ಕಾಣುವುದಿಲ್ಲವಲ್ಲಾ!!" ಅಂತಾ ಶಾಸ್ತ್ರಿಗಳು ಸ್ವಾಮಿಗಳಲ್ಲಿ ಹೇಳ್ತಾರೆ. ..." ಇವನೆಲ್ಲಿ ಬದಲಾಗ್ತಾನೆ..ಇದ್ ಹಂಗೇ ಇರ್ತಾನೆ...ಅಂತಾ ಹೇಳ್ತಾ ಆಶ್ರಮದ ಒಳ ಹೋಗುತ್ತಾರೆ......ಶಾಸ್ತ್ರಿಗಳಿಗೆ ಎಚ್ಚರವಾಗಿ ಕಣ್ ಬಿಡುತ್ತಾರೆ.ಮನದ ತುಂಬೆಲ್ಲಾ ಮುಕುಂದೂರು ಸ್ವಾಮಿಗಳೇ ತುಂಬಿಹೋಗಿದ್ದಾರೆ. ಧ್ಯಾನ ಸ್ಥಿತಿಯಲ್ಲಿದ್ದಾಗ  ಸ್ವಾಮಿಗಳ  ಅಂತಹಾ ಅದ್ಭುತ ದರ್ಶನ!!
ಒಂದು ದಿನ ಕಳೆಯುತ್ತೆ. ಅದರ ಮಾರನೆಯ ದಿನದ ಸಂಯುಕ್ತ ಕರ್ನಾಟಕ ದಿನ ಪತ್ರಿಕೆಯಲ್ಲಿ "ಮುಕುಂದೂರು ಸ್ವಾಮಿಗಳ  ನಿಧನ ವಾರ್ತೆ ಪ್ರಕಟವಾಗಿರುತ್ತೆ....... ಶಾಸ್ತ್ರಿಗಳಿಗೆ ಅಂದು ದರ್ಶನ ಕೊಟ್ಟ    ಅದೇ ಸಮಯಕ್ಕೆ  ಸ್ವಾಮಿಗಳು ಶರೀರವನ್ನು ತ್ಯಜಿಸಿರುತ್ತಾರೆ........


        ಯಾಕೋ ಇವತ್ತು ಮುಕುಂದೂರು ಸ್ವಾಮಿಗಳ ನೆನಪು ಬಹಳವಾಗಿ ಆಗ್ತಿದೆ. ಶಾಲೆಗೆ ಹೋಗಿಯೇ ಇಲ್ಲ. ತನ್ನ ಪೂರ್ವಾಶ್ರಮದ ಬಗ್ಗೆ ಎಲ್ಲೂ ಹೇಳಿಕೊಂಡೇ ಇಲ್ಲ.ಇವರ ವಯಸ್ಸಿನ ಬಗ್ಗೆ ಸರಿಯಾದ ಮಾಹಿತಿಯೇ ಇಲ್ಲ.ಯಾವ ಗುರುವಿನ ಹತ್ತಿರ ಏನು ಉಪದೇಶ ಪಡೆದರೋ ಗೊತ್ತಿಲ್ಲ. ಪಕ್ಕಾ ಹಳ್ಳೀ ಮಾತು. ಯೋಗ ಅನ್ನೋದಕ್ಕೆ ಯೇಗ ಅಂತಾಲೇ ಹೇಳ್ತಿದ್ರಂತೆ.ಆದರೆ ಪ್ರತಿಯೊಂದು ಮಾತಲ್ಲೂ ಅಧ್ಯಾತ್ಮ ಅಡಗಿರುತ್ತಿತ್ತು. ಸ್ವಾಮಿಗಳು ಶರೀರರವನ್ನು ತ್ಯಜಿಸಿದಾಗ ನಡೆದ ಪವಾಡವನ್ನು  ಕಂಡ ಜನ ಇನ್ನೂ ಬದುಕಿರುವುದರಿಂದ ಇದೊಂದು  ಕತೆಯಲ್ಲ. ನಡೆದ ಘಟನೆ.  ಮೊದಲಭಾಗದಲ್ಲಿ  ಆ ಘಟನೆಯನ್ನು ತಿಳಿಸಿ ನಂತರ  ಸ್ವಾಮೀಜಿಯವರನ್ನು ಕುರಿತಾದ ಬಿಳಿಗೆರೆ ಕೃಷ್ಣಶಾಸ್ತ್ರಿಗಳ  "ಯೇಗದಾಗೆಲ್ಲಾ ಐತೆ" ಪುಸ್ತಕದಿಂದ ಆಯ್ದ ಕೆಲವು ಘಟನೆಗಳನ್ನು ಮುಂದಿನ ದಾರಾವಾಹಿಯಾಗಿ    ಓದುಗರಲ್ಲಿ ಹಂಚಿಕೊಳ್ಳುತ್ತೇನೆ.


ಮರಳಿ ಮಾತೃಧರ್ಮಕ್ಕೆ 2000 ಮುಸಲ್ಮಾನರು!

25-12-2011ರಂದು ಉತ್ತರ ಪ್ರದೇಶದ ಆಲಿಘರ್ ನಲ್ಲಿ 2000 ಮುಸಲ್ಮಾನರು ಮಾತೃಧರ್ಮಕ್ಕೆ ಮರಳಿದ ಸಂದರ್ಭದ ವಿಡಿಯೋ:

ಅಭ್ಯಾಸ ಮಾಡದಿದ್ದರೆ ವಿದ್ಯೆಯು ವಿಷ


ಅನಭ್ಯಾಸೆ ವಿಷಂ ವಿದ್ಯಾ ಅಜೀರ್ಣೆ ಭೋಜನಂ ವಿಷಂ |...





5:57am Jun 23








ಅನಭ್ಯಾಸೆ ವಿಷಂ ವಿದ್ಯಾ ಅಜೀರ್ಣೆ ಭೋಜನಂ ವಿಷಂ |
ಮೂರ್ಖಸ್ಯಚ ವಿಷಂ ಗೋಷ್ಠಿ ವ್ರುದ್ಧಸ್ಯ ತರುಣಿ ವಿಷಂ ||


ಅಭ್ಯಾಸ ಮಾಡದಿದ್ದರೆ ವಿದ್ಯೆಯು ವಿಷ (ಅಭ್ಯಾಸ ಮಾಡದೆ ಇದ್ದರೆ ವಿದ್ಯೆಯ ಪರಿಪೂರ್ಣತೆ ಇಲ್ಲ), ಹೊಟ್ಟೆ ತುಂಬಿಕೊಂಡಾಗ ಬಾಯಿ ಚಪಲಕ್ಕೆ ಪುನಃ ತಿಂದರೆ ಅದು ಆರೋಗ್ಯದ ದೃಷ್ಟಿಯಿಂದ ವಿಷವಾಗುತ್ತದೆ ಅನಾರೋಗ್ಯಕ್ಕೆ ಕಾರಣವಾಗುತ್ತದೆ.ವಿದ್ವತ್ ನಿಂದ   ಕೂಡಿದ ಗಂಭೀರವಾದ ಸಭೆಯು ಮೂರ್ಖಜನರಿಗೆ ರುಚಿಸುವುದಿಲ್ಲ. ಅದು ಅವರಿಗೆ ವಿಷ.  ವೃದ್ಧ ರೆದುರು ಹುಡುಗಿಯರು ಬಂದಾಗ ಅದು ಅವರಿಗೆ ವಿಷವು. -

-Sadyojata Bhatta

Friday, June 22, 2012

ಪರಮಾತ್ಮನನ್ನು ಪೂಜಿಸುವ ಅಗತ್ಯವಿದೆಯೇ?

ವೇದಸುಧೆಯ ಗೌರವ ಸಂಪಾದಕರಾದ ಶ್ರೀ ಕವಿನಾಗರಾಜರು ವೇದಾಧ್ಯಾಯೀ ಶ್ರೀ ಸುಧಾಕರ ಶರ್ಮರನ್ನು ಅವರ ನಿವಾಸದಲ್ಲಿ ಭೇಟಿಮಾಡಿ  ಕೆಲವು ವಿಚಾರಗಳನ್ನು ವೀಡಿಯೋ ರೆಕಾರ್ಡ್ ಮಾಡಿಕೊಂಡು ಬಂದು ನಮಗೆ ನೀಡಿದ್ದಾರೆ.
---------------------------------------------------------------------------
 ದಿನಾಂಕ 13-06-2012ರಂದು ವೇದಾಧ್ಯಾಯಿ ಶ್ರೀ ಸುಧಾಕರಶರ್ಮರವರನ್ನು  ಕೆಲವು ಸಂಶಯಗಳಿಗೆ ಉತ್ತರ ಪಡೆಯುವ ಸಲುವಾಗಿ ಭೇಟಿ ಮಾಡಿದ್ದ ಸಂದರ್ಭದಲ್ಲಿ ನಾಗರಾಜರು ಕೇಳಿದ್ದ ಒಂದು ಪ್ರಶ್ನೆ ಇದು:
 "ಶರ್ಮಾಜಿ, ಜೀವಾತ್ಮ, ಪರಮಾತ್ಮ ಮತ್ತು ಜಡ ಪ್ರಕೃತಿ - ಈ ಮೂರೂ ಸಂಗತಿಗಳು ಅನಾದಿ, ಅನಂತ ಮತ್ತು ಶಾಶ್ವತವಾದವುಗಳು ಎಂದು ಹೇಳುತ್ತಾರೆ. ಜೀವಾತ್ಮ ಸ್ವತಃ ಅನಾದಿ, ಅನಂತ ಮತ್ತು ಶಾಶ್ವತವಾಗಿರುವಾಗ ಪರಮಾತ್ಮನನ್ನು ಏಕೆ ಪೂಜಿಸಬೇಕು? ಆ ಪರಮಾತ್ಮನಿಗೆ ಜೀವಾತ್ಮರ ಮೇಲೆ ಯಾವ ರೀತಿಯ ಅಧಿಕಾರವಿದೆ? ಈ ವಿಚಾರದಲ್ಲಿ ಬೆಳಕು ಚೆಲ್ಲುವಿರಾ?"
 ಶರ್ಮರವರು ನೀಡಿದ ಉತ್ತರವನ್ನು ಅವರ ಧ್ವನಿಯಲ್ಲೇ ಕೇಳಿ:

Wednesday, June 20, 2012

ಅಧ್ಯಾತ್ಮ ಜೀವನ .........ಒಂದಷ್ಟು ಚಿಂತನೆ



ನಮ್ಮ ದಿನನಿತ್ಯದ ಬದುಕಿನಲ್ಲಿ ಹಲವಾರು ದೋಷಗಳನ್ನು ನಾವು ಇತರರಲ್ಲಿ ಗುರುತಿಸುತ್ತೇವೆ.  ನಮ್ಮಲ್ಲೂ ಹಲವಾರು ದೋಷಗಳು ಇರುತ್ತವೆ.  ಆದರೆ,  ನಮ್ಮ ದೋಷಗಳು ನಮ್ಮ ಅರಿವಿಗೆ ಬಂದರು ಅದನ್ನು ಇತರರ ಜೊತೆ ಹೋಲಿಕೆ ಮಾಡಿಕೊಳ್ಳುತ್ತ ನಮ್ಮದೇನು ಪರವಾಗಿಲ್ಲ ಎಂದು ಸುಮ್ಮನಾಗಿ ಬಿಡುತ್ತೇವೆ.  ಸ್ನೇಹಿತರು, ಆಪ್ತರು ಗುರುತಿಸಿ ದೋಷ ಎತ್ತಿ ಹಿಡಿದಾಗ  ನಾವು ಸುಮ್ಮನೆ ಒಪ್ಪಿಕೊಳ್ಳುವುದಿಲ್ಲ,  ನಮ್ಮ ದೋಷಗಳನ್ನು,  ದೋಷವೇ ಅಲ್ಲವೆಂದು ಹಲವಾರು ರೀತಿಯಲ್ಲಿ  ಸಮಜಾಯಿಷಿ ಕೊಟ್ಟು ಸಾಬೀತು ಮಾಡಲು ಹವಣಿಸುತ್ತೇವೆ.  ತಾವು ನಂಬಿಕೊಂಡಿರುವ ಸತ್ಯ ಅದೆಂದು ವಾದಿಸುತ್ತೇವೆ,  ಕಾರಣಗಳನ್ನು ನೀಡಿ ಸರಿ ಇರಬಹುದೇನೋ ಎನ್ನುವಂತಹ ಭ್ರಮೆ ಹುಟ್ಟಿಸಲು ಪ್ರಯತ್ನಿಸುತ್ತೇವೆ. ಆದರೆ, ಈ ಯಾವ ಕಸರತ್ತುಗಳು ನಮ್ಮ ದೋಷವನ್ನು ಸರಿಪಡಿಸಲಾರವು.  ನಮ್ಮ ಅಹಂಕಾರದ ವಸ್ತ್ರ ಕಳಚಿಬಿದ್ದಾಗ, ಸತ್ಯದ ಎದುರು ಬೆತ್ತಲಾದಾಗ ಹೊಸ ಬೆಳಕು ದಾರಿ ತೋರುತ್ತವೆ. ಅಜ್ಞಾನದ ಅಂಧತ್ವ ಕಳೆದ ನಂತರವಷ್ಟೇ ಜ್ಞಾನದ ಕಣ್ಣು ತೆರೆಯುವುದು.

ಒಬ್ಬ ಪಂಡಿತ ಮಹಾಶಯ ಪ್ರತಿನಿತ್ಯ ಭಗವದ್ಗೀತೆಯ ಉಪನ್ಯಾಸ ಮಾಡುತ್ತಿದ್ದ .  ಈತನ  ಉಪನ್ಯಾಸ ಕೇಳಲು ಹತ್ತಿರದ ಹಳ್ಳಿಗಳಿಂದ ಜನ ಬರುತ್ತಿದ್ದರು.  ಈತನ ಉಪನ್ಯಾಸ ಕೇಳಿ ಭಕ್ತಿ ಭಾವದಿಂದ ಪಂಡಿತನ ಕಾಲಿಗೆರೆಗುತ್ತಿದ್ದರು.  ಉಪನ್ಯಾಸದ ಬಗ್ಗೆ ಪ್ರಶಂಸೆಯ ಮಾತುಗಳನ್ನು ಹೇಳುತ್ತಿದ್ದರು.  ಸರಸ್ವತಿಯೇ ನಿಮ್ಮ ಬಾಯಿಂದ ನುಡಿಸುತ್ತಿದ್ದಾಳೆ ಎಂದೆಲ್ಲ ಹೊಗಳುತ್ತಿದ್ದರು. ಇಂತಹ ಉಪನ್ಯಾಸ ಕೇಳಿದ ನಾವೇ ಧನ್ಯರು ಎಂದೆಲ್ಲ ಸಭಿಕರು ಮಾತನಾಡಿಕೊಳ್ಳುತಿದ್ದರು.  ದಿನಕಳೆದಂತೆ ಈ ಪಂಡಿತರ ಉಪನ್ಯಾಸದ ಜೊತೆಗೆ ಅಹಂಕಾರದ ಸ್ವಪ್ರಶಂಸೆ ನಿಧಾನವಾಗಿ ಸೇರ್ಪಡೆಯಾಯಿತು.   ಜನಗಳು ಮುಂಚಿನರೀತಿಯಲ್ಲಿ  ಬೆರೆಯಲು ಸ್ವಲ್ಪ ಹಿಂಜರಿಯಲು ಪ್ರಾರಂಭಿಸಿದರು.  ಒಂದೆರಡು ತಿಂಗಳುಗಳ ನಂತರದಲ್ಲಿ ಉಪನ್ಯಾಸಕ್ಕೆ ಬರುವವರ ಸಂಖ್ಯೆ ಇಳಿಮುಖವಾಯಿತು.  ಹೊಸ ವಿಚಾರಗಳೇನು ಇಲ್ಲ ಅದೇ ಹಳಸಲು ಮಾತು ಎಂದೆಲ್ಲ ಹೇಳಿಕೊಳ್ಳುವುದು ಪಂಡಿತ ಮಹಾಶಯರ ಕಿವಿಗೊ ಬಿತ್ತು.  ಈಗ ಪಂಡಿತರಿಗೆ ಚಿಂತೆ ಕಾಡಲು ಪ್ರಾರಂಭವಾಯಿತು.

ಇಂತಹ ಸಂದಿಗ್ದ ಸಮಯದಲ್ಲಿ ಪಂಡಿತನ ಆಪ್ತಸ್ನೇಹಿತನೊಬ್ಬ " ನಿನ್ನ ಉಪನ್ಯಾಸದಲ್ಲಿ ಹೊಸ ಹೊಸ ವಿಚಾರಗಳೇ ಇಲ್ಲವಾಗಿದೆ, ಅದೇ ಹಳೆಯ ವಿಚಾರಗಳು ಒಂದೇ ರೀತಿಯಲ್ಲಿ ಹೇಳಲಾಗುತ್ತಿದೆ. ನೀನು ನಿನ್ನ ಉಪನ್ಯಾಸದಲ್ಲಿ ಹೊಸ ವಿಚಾರಗಳ ಜೊತೆಗೆ  ಉಪನ್ಯಾಸದ  ಶೈಲಿಯನ್ನು ಬದಲಿಸಿಕೊ " ಎಂದು ಸಲಹೆಯನ್ನು ನೀಡಿದ.   ಈ ಸಲಹೆ ಕೇಳಿದ ಪಂಡಿತ ಹೌಹಾರಿದ. " ಇನ್ಯಾವ ರೀತಿ ಹೇಳಬೇಕು? ನನ್ನ ಉಪನ್ಯಾಸದಲ್ಲಿ ಅದೆಷ್ಟು ಉದಾಹರಣೆ ನೀಡಿದ್ದೇನೆ. ವಿಷಯದಲ್ಲಿ ನನ್ನ ಅನುಭವ ಕೂಡ ಹಂಚಿಕೊಂಡಿದ್ದೇನೆ.  ಇನ್ನೆನುಬೇಕು ಇವರಿಗೆ ? " ಎಂದು ತನ್ನ ಸಿಟ್ಟನ್ನು ಹೊರಹಾಕಿದ. ಇದನ್ನು ಗಮನಿಸಿದ ಸ್ನೇಹಿತ " ಅದೆಲ್ಲ ಸರಿ, ಆದರೂ ಏನೋ ಒಂದು ಕೊರತೆ ಇರಲೇಬೇಕಲ್ಲವೇ?  ಸ್ವಲ್ಪ ಯೋಚಿಸು.  ಒಂದು ಕೆಲಸ ಮಾಡೋಣ.  ನನ್ನ ಪರಿಚಯದ ಒಬ್ಬ ಮೇಧಾವಿ ಹತ್ತಿರದ ವನದಲ್ಲಿ ಇದ್ದಾರೆ.  ಅವರು ಗೀತಾರಹಸ್ಯ ತಿಳಿದಿರುವ ಮಹಾನ್ ಪಂಡಿತರು ಆಗಿದ್ದಾರೆ.   ಅವರಲ್ಲಿ ಏಕೆ ಹೋಗಿ ವಿಚಾರವಿನಿಮಯ ಮಾಡಬಾರದು? ನಿನ್ನ ವಿಚಾರಗಳ ಜೊತೆಗೆ ಅವರ ವಿಚಾರಗಳು ಬೆರೆತರೆ ನಿನ್ನ ಉಪನ್ಯಾಸದಲ್ಲಿ ಒಂದು ಹೊಸತನ ಬರಬಹುದಲ್ಲವೇ? " ಎಂದು ಮರುಸಲಹೆ ನೀಡಿದ.  ಈ ಮಾತು ಪ್ರಾರಂಭದಲ್ಲಿ ಇಷ್ಟವಾಗಲಿಲ್ಲ .  ಆದರೂ,  ಹೊಸ ವಿಚಾರ ನನಗಿಂತ ಆತನೇನು ಹೇಳಬಲ್ಲ? ಎಂಬುದನ್ನು ತಿಳಿದೆಬಿಡೋಣ ಎಂದು ಪರೀಕ್ಷಾರ್ಥವಾಗಿ ಸ್ನೇಹಿತನ ಜೊತೆ ಹೋಗಲು ಒಪ್ಪಿಕೊಂಡ.

ಇಬ್ಬರು ನಿಗಧಿಯಾದ ದಿನ ಆ ಮೇಧಾವಿಗಳಲ್ಲಿ ಹೋಗಿ ನಮಸ್ಕರಿಸಿ ಕುಶಲ ವಿಚಾರಿಸಿದರು.  ಬಂದ ವಿಷಯವನ್ನು ಹೇಳಿದರು.
ಆಗ ಪಂಡಿತ ಮಹಾಶಯರು " ಸ್ವಾಮೀ,  ನಾನು ತಮ್ಮ ಬಳಿ ಗೀತಾರಹಸ್ಯವನ್ನು ತಿಳಿಯಲು ಬಂದಿರುವೆ.  ಆದರೆ, ನನ್ನ ಬಳಿ ಬಹಳ ಕಡಿಮೆ ಸಮಯವಿದೆ.  ನನ್ನ ಕೆಲಸಗಳು ಬೇಕಾದಷ್ಟಿವೆ.   ಆದ ಕಾರಣ ತಾವು ದಯಮಾಡಿ ನನ್ನನ್ನು  ಬೇಗ ಕಳುಹಿಸುವ ಕೃಪೆ ಮಾಡಬೇಕು " ಎಂದು  ವಿನಂತಿಸಿದ.  ಮೇಧಾವಿಗಳು ಮುಗುಳುನಕ್ಕು " ತಮ್ಮಂತಹ ಪಂಡಿತರು ನಮ್ಮ ಕುಟೀರಕ್ಕೆ ದಯಮಾಡಿಸಿದ್ದೀರ,  ನಿಮಗೆ ಯಾವ  ಆತಿಥ್ಯವನ್ನು ನೀಡದೆ ಹೇಗೆ ಕಳುಹಿಸಲು ಸಾಧ್ಯ?  ಸ್ವಲ್ಪ ಟೀ ಕುಡಿದು ಹೋಗುವಿರಂತೆ."  ಎಂದು ಸ್ವಲ್ಪ ಸಮಯದ ನಂತರ ಟೀ ಡಿಕಾಕ್ಷನ್ ತುಂಬಿದ ಲೋಟವನ್ನು ಪಂಡಿತರ ಮುಂದೆ ಇರಿಸಿದರು. ಮುಖ ಕಿವುಚಿಕೊಂಡ ಪಂಡಿತ ಮಹಾಶಯರು  " ನನಗೆ ಕಪ್ಪು ಟೀ ಕುಡಿದು ಅಭ್ಯಾಸವಿಲ್ಲ, ಸ್ವಲ್ಪ ಹಾಲು ಕೊಟ್ಟರೆ ಬೆರೆಸಿ ಕುಡಿಯುತ್ತೇನೆ." ಎಂದರು.  ಆಗ ಮೇಧಾವಿಗಳು  ನಸುನಕ್ಕು  " ಹಾಲನ್ನು ಎಲ್ಲಿ ಹಾಕುತ್ತಿರಪ್ಪಾ?  ಈಗಾಗಲೇ ಲೋಟ ಭರ್ತಿಯಾಗಿದೆಯಲ್ಲ? " ಎಂದು ಛೇಡಿಸಿದರು.  " ಅದಕ್ಕೇನಂತೆ ಸ್ವಲ್ಪ ಟೀ ಖಾಲಿ ಮಾಡಿದರಾಯಿತು." ಎಂದು ಸಮಜಾಯಿಷಿ ಕೊಟ್ಟರು ಪಂಡಿತರು.   ಆಗ ಮೇಧಾವಿಗಳು ದೃಢತೆಯಿಂದ " ಈಗಿನ ನಿಮ್ಮ ಸ್ಥಿತಿಯೂ ಇದೆ ಆಗಿದೆ.ನಿಮ್ಮೊಳಗಿರುವ ವಿಚಾರವನ್ನು ಸ್ವಲ್ಪ ಖಾಲಿ ಮಾಡಿ ಹೊಸ ವಿಚಾರಗಳಿಗೆ ಜಾಗ ಕೊಡಿ,  ಆಗ ಹೊಸತು ತನ್ನಷ್ಟ್ತಕ್ಕೆ ತಾನೇ ಒಳಗೆ ಹೋಗುತ್ತದೆ.' ಎಂದು ಮುಗುಳುನಕ್ಕರು.

ಹೌದು, ಇದೆ ನಮ್ಮ ಸ್ಥಿತಿ ಕೂಡಾ!  ಬೇಡದ ವಿಚಾರಗಳು, ಸಿಟ್ಟು ಸೆಡವು, ಹೊಟ್ಟೆ ಕಿಚ್ಚು, ಬೇಡದ ನೆನಪುಗಳು, ದ್ವೇಷ ಇತ್ಯಾದಿಗಳು ನಮ್ಮೊಳಗೇ ಭರ್ತಿಯಾಗಿ ಕೂತುಬಿಟ್ಟಿದೆ.  ಅಗತ್ಯ ಅನಗತ್ಯ ವಿಚಾರಗಳು ನಮ್ಮ ತಲೆಯಲ್ಲಿ ತುಂಬಿಹೋಗಿವೆ. ಈ ಕಾರಣದಿಂದ ಹೊಸ ಚಿಂತನೆಗಳು ಒಳಗೆ ಹೋಗಲು ಸಾಧ್ಯವಾಗುತ್ತಿಲ್ಲ.  ನಮ್ಮ ತಂದೆ , ತಾಯಿ, ಗುರು ಹಿರಿಯರು ಕಲಿಸಿದ  ವಿದ್ಯೆ, ವಿಚಾರಗಳು, ಸಂಸ್ಕೃತಿಯ ಚಿಂತನೆಗಳು ಆಧುನಿಕತೆಯ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ.  ಹೀಗಾಗಿ ನಮ್ಮ ಅಹಂಕಾರ ತಲೆಯೆತ್ತಿ ನಿಂತು ಯಾವುದೇ ಇತರ ವಿಚಾರಗಳನ್ನು ಒಳಗೆ ಬರಲು ಬಿಡುತ್ತಲೇ ಇಲ್ಲ.  ಅಹಂಕಾರವನ್ನು ಕಡಿಮೆ ಮಾಡಿಕೊಂಡರೆ ವಿನಯವಂತಿಕೆ ನಮ್ಮಲ್ಲಿ ಉದಯಿಸಿ ಹೃದಯವಂತಿಕೆಗೆ ಜಾಗ ಮಾಡಿಕೊಡುತ್ತದೆ. ಬಿರುಗಾಳಿ ಬಂದಾಗ ನೆಲಹುಲ್ಲು  ತಲೆಬಾಗಿ ನಮಿಸುತ್ತದೆ. ಗಾಳಿನಿಂತಮೇಲೆ  ತಲೆ ಎತ್ತಿ ನಿಲ್ಲುತ್ತದೆ.  ಹೀಗೆಯೇ ನಮ್ಮ ಬದುಕು ಕೂಡಾ ಆಗಬೇಕು. ಒಳ್ಳೆಯ ವಿಚಾರಕ್ಕೆ  ತಲೆ ಬಾಗುವುದನ್ನು ಕಲಿತಾಗ ತಲೆ ಎತ್ತಿ ಬದುಕಲು ಸಾಧ್ಯವಾಗುತ್ತದೆ.  ಈ ಮಾರ್ಗ ಸಾಧನೆಯಲ್ಲಿ ನಮ್ಮ ತಪ್ಪನ್ನು ತಿದ್ದಿಕೊಂಡು, ದೋಷವನ್ನು ಒಪ್ಪಿಕೊಂಡು, ಸರಿ ಮಾರ್ಗದಲ್ಲಿ ಮುನ್ನಡೆಯುವ ಮನಸ್ಸು ಮಾಡಿದರೆ ಸಾಕು, ಅದುವೆ ಅದ್ಯಾತ್ಮ ಜೀವನ.  

ಹೆಚ್ ಏನ್ ಪ್ರಕಾಶ್ 

( ಈ ಚಿಂತನವು 23 12 2009 ರಂದು ಆಕಾಶವಾಣಿ ಹಾಸನ ಕೇಂದ್ರದಿಂದ ಬಿತ್ತರಗೊಂಡಿತ್ತು )

ಮನೆಯಲ್ಲಿ ಸುಖ ನೆಲಸಬೇಕೇ?

ಮನೆಯಲ್ಲಿ ಸುಖ ನೆಲಸಬೇಕೇ? ಅಥರ್ವವೇದದ ಒಂದು ಮಂತ್ರ ಹೀಗಿದೆ.
 ಅಸೌ ಯೋ ಅಧರಾದ್ ಗೃಹಸ್ತತ್ರ ಸನ್ತ್ವರಾಯ್ಯ: | 
ತತ್ರ ಸೇದಿರ್ನುಚ್ಯತು ಸರ್ವಾಶ್ಚ ಯಾತು ಧಾನ್ಯ:||


 [ಅಥರ್ವ :೨-೧೪-೩]


ಯ:=ಯಾವ ಗೃಹ: =ಮನೆಯು ಅಧರಾದ್= ಅಂಧಕಾರಬಂಧುರವಾಗಿ ,ಜಾರಿ ಬಿದ್ದ ಸ್ಥಿತಿಯಲ್ಲಿ ಇರುವುದೋ,
ತತ್ರ=ಅಲ್ಲಿ 
ಸರ್ವಾ:= ಎಲ್ಲಾ
ಯಾತುಧಾನ್ಯ:=ಪ್ರಜೆಗಳನ್ನು ಪೀಡಿಸುವ ವಿಪತ್ತುಗಳು,ರೋಗಗಳು, ಅರಾಯ್ಯ:=ಮನುಷ್ಯರ ಧನ ಸಂಪತ್ತುಗಳನ್ನು ,ಶೋಭೆಯನ್ನೂ ಹರಣ ಮಾಡುವಂತಹವು 
ಸನ್ತು=ಇರಬಲ್ಲವು, 
ತತ್ರ-ಅಲ್ಲಿ 
ಸೇದಿ:=ದು:ಖಗಳು 
ನೀ ಉಚ್ಚ್ಯತು=ಯಾವಾಗಲೂ ಇರುತ್ತವೆ


 ಭಾವಾರ್ಥ: ಸತ್ಪುರುಷರಿಲ್ಲದ,ಸತ್ ಕ್ರಿಯೆಗಳು ನಡೆಯದ ,ಸಜ್ಜನರು ಬಾರದ,ವಿದ್ಯೆ ವಿಜ್ಞಾನಗಳಿಲ್ಲದ ಮನೆಗಳು ಸಕಲ ಅನರ್ಥಗಳಿಗೂ ನಿಲಯಗಳಾಗುತ್ತವೆ, ಅಲ್ಲಿ ದುಷ್ಟರು,ವಿಷಕೀಟಗಳು,ವಿವಿಧ ವ್ಯಾಧಿಗಳು, ಅನೇಕ ಆಪತ್ತುಗಳು ದು:ಖಗಳು ನೆಲಸಲು ಅವಕಾಶವಾಗುತ್ತದೆ.ಇದರಿಂದ ಅಲ್ಲಿ ಒಳ್ಳೆಯವರು ಇರಲಾರರು.ಸಾದುಸತ್ಪುರುಷರ ಸಮಾಗಮ ,ಸತ್ಕರ್ಮಗಳು ನಡೆಯುವ ಗೃಹಗಳು ಸುಖದಾಯಕವಾಗಿ ಇರಬಲ್ಲವು.

 ಆಧಾರ: ವೇದೋದಯ ಪ್ರತಿಷ್ಟಾನ ಪ್ರಕಟಿತ ಶ್ರೀ ವಾ.ವೀ.ವೆಂ-ಅವರ "ಅಥರ್ವ ವೇದ ಶತಕ"

ಭೃಗುವಲ್ಲಿ





ಭೃಗುವಲ್ಲಿಯ ಆಡಿಯೋ ಇಲ್ಲಿ ಕೇಳಬಹುದು. ಭೃಗು ಮಹರ್ಷಿಯ ಕಥೆ ಕೇಳುವಾಗ  ಭೃಗುವಲ್ಲಿಯ ಅರ್ಥ ತಿಳಿದುಕೊಳ್ಳಬೇಕೆನಿಸುತ್ತದೆ.  ವೇದಸುಧೆಯ ಅಭಿಮಾನಿಗಳಾದ ನಿಮ್ಮಲ್ಲಿ ಯಾರಾದರೂ ಭೃಗುವಲ್ಲಿಯ  ಅರ್ಥ-ವಿವರಣೆಯನ್ನು ಬರೆದು ವೇದಸುಧೆಗೆ ಮೇಲ್ ಮಾಡಲು ವಿನಂತಿಸುವೆ. ಮೇಲ್ ನಲ್ಲಿ ಬರುವ  ಭೃಗುವಲ್ಲಿಯ  ಅರ್ಥ-ವಿವರಣೆಯನ್ನು ಬರೆದವರ ಹೆಸರಲ್ಲಿ ಪ್ರಕಟಿಸಲಾಗುವುದು.ಅಥವಾ ಹೊರಗಿನ ವಿದ್ವಾಂಸರಿಂದ  ಬರೆಸಲೂ ಬಹುದು, ಅಥವಾ ಅವರ ಧ್ವನಿಯಲ್ಲೇ ಆಡಿಯೋ ರೆಕಾರ್ಡ್ ಮಾಡಿ ಕೂಡ ಕಳಿಸಬಹುದು.
ಸಾಮಾನ್ಯ ಜನರಿಗೂ ವೇದದ ವಿಚಾರ ತಿಳಿಸಬೇಕೆಂಬ ಆಶಯದಿಂದ ವೇದಸುಧೆಯು ಆರಂಭಗೊಂಡಿದ್ದು ಇದುವರೆವಿಗೆ ಹಲವು ವಿದ್ವಾಂಸರು ಕೊಟ್ಟಿರುವ ಸಹಕಾರದಿಂದಲೇ ವೇದಸುಧೆಯು ನಡೆಯುತ್ತಿದ್ದು, ಇದು ಪೂರ್ಣವಾಗಿ ಸಾಮಾಜಿಕ ಸೇವೆಗಾಗಿ ಉಚಿತವಾಗಿ ಮಾಡಲಾಗುತ್ತಿದೆ. ಆದರೂ ವಿಶೇಷ ಸಂದರ್ಭದಲ್ಲಿ ವಿದ್ವಾಂಸರು ಸಂಭಾವನೆ ಅಪೇಕ್ಷಿಸಿದರೆ ಆ ಬಗ್ಗೆಯೂ ಗಮನ ಕೊಡಲಾಗುವುದು.  ನಿಮ್ಮ  ಸಹಕಾರವನ್ನು ವೇದಸುಧೆಗೆ ಮೇಲ್ ಮಾಡಿ ತಿಳಿಸಲು ವಿನಂತಿಸುವೆ.
ಶ್ರೀಧರ್
-ಸಂಪಾದಕ.


Tuesday, June 19, 2012

ವೇದಸುಧೆಯ ವಾರ್ಷಿಕೋತ್ಸವದ ನೆನಪು

ವೇದಸುಧೆಯ ಆತ್ಮೀಯ ಬಂಧುಗಳೇ, ಕಳೆದ ವರ್ಷ ನಡೆದ ವೇದಸುಧೆಯ ವಾರ್ಷಿಕೋತ್ಸವದ ವೀಡಿಯೋ ತುಣುಕು ನೋಡಿದಾಗ ಅಂದು ಪಾಲ್ಗೊಂಡಿದ್ದ ನೂರಾರು ಅಭಿಮಾನಿಗಳ ನೆನಪಾಯ್ತು. ನಿಮ್ಮೆಲ್ಲರಿಗೂ ಅದರ ನೆನಪು ಮಾಗದಿರಲೆಂದು ವಾರ್ಷಿಕೋತ್ಸವದ ವೀಡಿಯೋ ಟೈಟ್ಲ್ ಸಾಂಗ್ ಪ್ರಕಟಿಸಿರುವೆ.

Monday, June 18, 2012

ಹಾಸನದಲ್ಲಿ ಚಿನ್ಮಯ ಸತ್ಸಂಗದ ಶುಭಾರಂಭ

 ದಿನಾಂಕ 17.6.2012 ಭಾನುವಾರ  ಹಾಸನದಲ್ಲಿ  ಚಿನ್ಮಯ ಸತ್ಸಂಗದ ಶುಭಾರಂಭವಾಯ್ತು.   ಬೆಳಿಗ್ಗೆ 11.00 ಗಂಟೆಗೆ ನಡೆದ ಆಸಕ್ತರ ಸಭೆಯಲ್ಲಿ  ತಿಪಟೂರು ಚಿನ್ಮಯಾ ಸಂಸ್ಥೆಯ  ಬ್ರಹ್ಮಚಾರಿ ಶ್ರೀ ಸುಧರ್ಮ ಚೈತನ್ಯರು     ಮಾರ್ಗದರ್ಶನ ಮಾಡಿದರು. ಸಂಜೆ 6.00 ಗಂಟೆಗೆ  ನಡೆದ  ಸತ್ಸಂಗದಲ್ಲಿ ಹಾಸನದ ನೂರಾರು ಜನ ಭಕ್ತರು ಪಾಲ್ಗೊಂಡು ಸತ್ಸಂಗದ ಯಶಸ್ಸಿಗೆ ಕಾರಣರಾದರು. ಶ್ರೀಮತಿ ಲಲಿತಾರಮೇಶರ ಪ್ರಾರ್ಥನೆಯೊಂದಿಗೆ ಆರಂಭವಾದ ಸತ್ಸಂಗದಲ್ಲಿ ಶ್ರೀಹರಿಹರಪುರ ಶ್ರೀಧರರು ಹಾಸನದಲ್ಲಿ ಚಿನ್ಮಯ ಸಂಸ್ಥೆಯ ನ್ನು  ಆರಂಭಿಸಲು ಎಲ್ಲರ ಸಹಕಾರ ಕೋರಿ ಸಭೆಗೆ ಸ್ವಾಮೀಜಿಯವರನ್ನು ಪರಿಚಯಿಸಿದರು. ಸ್ವಾಮೀಜಿಯವರು ನಡೆಸಿಕೊಟ್ಟ ಭಜನೆ ಮತ್ತು ನಂತರದ ಉಪನ್ಯಾಸ ಕಾರ್ಯಕ್ರಮದಲ್ಲಿ ಅತ್ಯಂತ ಶ್ರದ್ಧೆಯಿಂದ  ಭಕ್ತರು ಪಾಲ್ಗೊಂಡು  ಕೊನೆಯಲ್ಲಿ ಸ್ವಾಮೀಜಿಯವರಿಂದ ಪ್ರಸಾದವನ್ನು ಪಡೆದರು.


 


 ಮುಂದಿನ ಸತ್ಸಂಗವು  ಈಶಾವಾಸ್ಯಮ್  ಸಭಾಂಗಣದಲ್ಲಿಯೇ  ಜುಲೈ 8 ರಂದು ಅಪರಾಹ್ನ 4.00 ಗಂಟೆಗೆ ನಡೆಯಲಿದ್ದು  ತದನಂತರ ಜುಲೈ 22 ರಂದು ಅದೇ ಸ್ಥಳದಲ್ಲಿ  ಅಪರಾಹ್ನ 4.00 ಗಂಟೆಗೆ ನಡೆಯುವ ಸತ್ಸಂಗದಲ್ಲಿ ಶ್ರೀ ಸುಧರ್ಮ ಚೈತನ್ಯರು ಪಾಲ್ಗೊಳ್ಳಲಿರುವರು.