Pages

Wednesday, June 27, 2012

ರಕ್ತ ಸಂಬಂಧಗಳು ಮತ್ತು ಜೀವಾತ್ಮ



     ಅಲ್ಪ ಶಕ್ತ ಜೀವಾತ್ಮನಿಗೆ ಯಾವುದೇ ಕ್ರಿಯೆ ಮಾಡಲು ಶರೀರವೆಂಬ ಮಾಧ್ಯಮದ ಅಗತ್ಯವಿದೆ, ಅದು ಮಾಧ್ಯಮದ ಸಹಾಯವಿಲ್ಲದೆ ತಾನೇ ತಾನಾಗಿ ಏನೂ ಮಾಡಲಾರದು ಎಂದು ತಿಳಿದವರು ಹೇಳುತ್ತಾರೆ. ಹಿಂದೂಗಳು ಪುನರ್ಜನ್ಮದಲ್ಲಿ ನಂಬಿಕೆಯಿರುವವರು. ಹಿಂದಿನ ಜನ್ಮದ ಮಾತಾ-ಪಿತರೇ ಇನ್ನೊಂದು ಜನ್ಮದ ಮಾತಾ-ಪಿತೃಗಳಾಗಲಾರರು. ತಂದೆ-ತಾಯಿಯರ ಗುಣ ವಿಶೇಷಗಳೇ ಮಕ್ಕಳಿಗೆ ಇರದಿರುವುದು, ಎಲ್ಲಾ ಮಕ್ಕಳೂ ಒಂದೇ ಸ್ವಭಾವದವರಾಗದಿರುವುದು, ಕುಟುಂಬದ ಸದಸ್ಯರುಗಳಲ್ಲಿ ಹೊಂದಾಣಿಕೆಯ ಕೊರತೆ ಕಾಣುವುದು, ಇತ್ಯಾದಿ ಅಂಶಗಳು ಪುನರ್ಜನ್ಮದ ನಂಬಿಕೆಗೆ ಪೂರಕವಾಗಿವೆ. ಹಿಂದಿನ ಜನ್ಮದಲ್ಲಿ ಸಂಬಂಧಿಗಳಾಗಿದ್ದವರು ಈ ಜನ್ಮದಲ್ಲೂ ಸಂಬಂಧಿಗಳಾಗಿದ್ದರೆ ಪರಸ್ಪರರಲ್ಲಿ ಮಧುರ ಸಂಬಂಧವಿರುತ್ತದೆ ಎಂದು ಹೇಳುತ್ತಾರೆ. ಇದೇನೇ ಇದ್ದರೂ ಕೆಲವು ಗುಣಗಳು ಅನುವಂಶಿಕವಾಗಿ ಬರುವುದನ್ನೂ ಕಾಣುತ್ತೇವೆ. ಸಂಬಂಧಗಳು, ಅದರಲ್ಲೂ ರಕ್ತ ಸಂಬಂಧಿಗಳ ನಡುವಣ ಸಂಬಂಧಗಳು ಚೆನ್ನಾಗಿರುವುದು ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು. ಈ ಹಿನ್ನೆಲೆಯಲ್ಲಿ ರಕ್ತ ಸಂಬಂಧಗಳು ಮತ್ತು ಜೀವಾತ್ಮರ ಸಂಬಂಧದ ಕುರಿತು ವೇದಾಧ್ಯಾಯಿ ಶ್ರೀ ಸುಧಾಕರ ಶರ್ಮರವರನ್ನು ವಿಚಾರಿಸಿದಾಗ ಅವರು ಕೊಟ್ಟ ಉತ್ತರ ಈ   ಆಡಿಯೋ ತುಣುಕಿನಲ್ಲಿದೆ: 


-  ಕವಿ ನಾಗರಾಜ್

No comments:

Post a Comment