Pages

Monday, July 28, 2014

ಲೋಭಕ್ಕೆ ಮದ್ದುಂಟೆ?



ಉಲೂಕಯಾತುಂ ಶುಶುಲೂಕಯಾತುಂ ಜಹಿ ಶ್ವಯಾತುಮುತಕೋಕಯಾತುಮ್ | 
ಸುಪರ್ಣಯಾತುಮುತ ಗೃಧ್ರಯಾತುಂ
ದೃಷದೇವ ಪ್ರ ಮೃಣ ರಕ್ಷ ಇಂದ್ರ || (ಋಕ್.೭.೧೦೪.೨೨)

ರಕ್ಷಸ್ ಎಂದರೆ ದುರ್ಭಾವನೆ. ಯಾರು ದುರ್ಭಾವನೆಗಳನ್ನು ಹೊಂದಿರುತ್ತಾರೋ ಅವರೇ ರಾಕ್ಷಸರು. ರಾಕ್ಷಸರು ಎಂದರೆ ಅವರು ಬೇರೆ ಯಾವುದೋ ಜೀವಿಗಳಲ್ಲ, ಮಾನವರೂಪಿಗಳಾಗೇ ಇದ್ದು ದುರ್ಭಾವನೆಗಳನ್ನು ಹೊಂದಿದವರು. ಈ ವೇದಮಂತ್ರದಲ್ಲಿ ಮಾನವನಲ್ಲಿ ಕಂಡು ಬರುವ ದುರ್ಭಾವನೆಗಳಾದ ಮೋಹವನ್ನು ಗೂಬೆಯ ನಡೆಗೂ, ಕ್ರೋಧವನ್ನು ತೋಳದ ಸ್ವಭಾವಕ್ಕೂ, ಮತ್ಸರವನ್ನು ನಾಯಿಯ ಗುಣಕ್ಕೂ, ಕೋಕ ಪಕ್ಷಿಯನ್ನು (ಚಕ್ರವಾಕ/ಜಕ್ಕವಕ್ಕಿ) ಕಾಮದ ಸಂಕೇತವಾಗಿಯೂ, ತಾನೇ ಮೇಲೆಂಬ ಗರ್ವ(ಮದ)ಕ್ಕೆ ಗರುಡ ಪಕ್ಷಿಯನ್ನೂ, ಹದ್ದನ್ನು ಲೋಭಕ್ಕೆ ಸಂಕೇತಿಸಿದ್ದು, ಈ ಗುಣಗಳನ್ನು ತೀಡಿ ಹಾಕು, ನಿರ್ಮೂಲ ಮಾಡು ಎಂದು ಜೀವಾತ್ಮರಿಗೆ ಕರೆ ಕೊಡಲಾಗಿದೆ. ಮಾನವನ ಶತ್ರುಗಳಾದ ಈ ಆರು ಗುಣಗಳು ಅವನನ್ನು ರಾಕ್ಷಸನನ್ನಾಗಿ ಮಾಡುವಲ್ಲಿ ಪ್ರಧಾನ ಪಾತ್ರ ವಹಿಸುತ್ತವೆ. ಕಾಮ, ಕ್ರೋಧ, ಮದ, ಮತ್ಸರ, ಮೋಹಗಳ ಕುರಿತು ಪ್ರತ್ಯೇಕ ಲೇಖನಗಳಲ್ಲಿ ಚರ್ಚಿಸಿದ್ದು, ಲೋಭದ ಕುರಿತು ಇಲ್ಲಿ ವಿಚಾರವನ್ನು ಹಂಚಿಕೊಳ್ಳೋಣ.

ಪೂರ್ಣ ಲೇಖನಕ್ಕೆ ಕೆಳಗೆ ಕ್ಲಿಕ್ಕಿಸಿ;

http://vedajeevana.blogspot.in/2014/07/blog-post_23.html
ಕ.ವೆಂ.ನಾಗರಾಜ್.

No comments:

Post a Comment