Pages

Tuesday, November 3, 2015

ನಿಮ್ಮ ಪಾತ್ರವೇನು?

ನಮ್ಮ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರಮೋದಿಯವರು ನಮ್ಮ ದೇಶದ ಯುವ ಸಂಪತ್ತಿನ ಬಗ್ಗೆ ಬಲು ವಿಶ್ವಾಸ ಹೊಂದಿದ್ದಾರೆ. ಇದೀಗ ಕಾಲ ಪಕ್ವವಾಗಿದೆ. ಯುವ ಮಿತ್ರರೇ, ನಿಮಗೆ ಈಗ ಪಂಥಾಹ್ವಾನವಿದೆ. ನಮ್ಮ ದೇಶದ ಸಂಸ್ಕೃತಿ, ಪರಂಪರೆ, ಆಚರಣೆಗಳನ್ನು ವಿಶ್ವದೆತ್ತರಕ್ಕೆ ಕೊಂಡುಯ್ಯುವ ಹೊಣೆ ನಿಮ್ಮ ಹೆಗಲ ಮೇಲಿದೆ. ಈಗ ನಿಮಗೆ ಸತ್ವ ಪರೀಕ್ಷೆಯ ಕಾಲ. ಧರ್ಮ ವಿರೋಧಿಗಳು, ಭಾರತದ ವಿರೋಧಿಗಳು ನಮ್ಮ ಧರ್ಮ, ಸಂಸ್ಕೃತಿಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಒಂದು ಸಣ್ಣ ಮೌಢ್ಯವನ್ನು ಹಿಡಿದು ಇಡೀ ಧರ್ಮವನ್ನು ವಿರೋಧಿಸುವ ಶಡ್ಯಂತ್ರ ನಡೆದಿದೆ. ಹೌದು, ಮೌಢ್ಯದ ವಿಚಾರದಲ್ಲಿ ನಾವೇಕೆ ಹೊಂದಾಣಿಕೆ ಮಾಡಿಕೊಳ್ಳಬೇಕು? ಅನ್ಯಮತಗಳ ವಿಚಾರ ಹಾಗಿರಲಿ. ಹಿಂದುಸಮಾಜದಲ್ಲಿ ಇಂದಿನ ಕಾಲಕ್ಕೆ ಬಾಹಿರವಾದ ಆಚರಣೆಗಳಿದ್ದರೆ ಅದನ್ನೇಕೆ ಬುಡ ಸಮೇತ ಕಿತ್ತುಹಾಕಬಾರದು? ಧರ್ಮವಿರೋಧಿಗಳ ಹಲ್ಲಿಗೆ ಆಹಾರವಾಗುವ ಯಾವ ಸಂಗತಿಗಳಿದ್ದರೂ ಅದನ್ನು ಬೇರು ಸಮೇತ ಕಿತ್ತು ಹಾಕಲೇ ಬೇಕು. ನಮ್ಮ ಮನೆಯನ್ನು ಅಚ್ಚುಕಟ್ಟಾಗಿ ಗುಡಿಸಿಕೊಂಡು, ಆನಂದವಾಗಿರಬೇಡವೇ? ಇಂತಾ ಸ್ವಚ್ಚತಾ ಆಂದೋಳನದಲ್ಲಿ ನಿಮ್ಮ ಪಾತ್ರವೇನು?

No comments:

Post a Comment