///// ಆನೋ ಭದ್ರಾಃ ಕ್ರತವೋ ಯಂತು ವಿಶ್ವತಃ ////// ಕೃಣ್ವಂತೋ ವಿಶ್ವಮಾರ್ಯಂ //// //// ಮಾತಾ ಭೂಮಿಃ ಪುತ್ರೋಹಂ ಪೃಥಿವ್ಯಾಃ /////
Tuesday, July 26, 2011
Monday, July 25, 2011
ಸಾಧನಾ ಪಂಚಕಮ್-ಭಾಗ -12
------------------------------------------
37. ಪ್ರಾಕ್ಕರ್ಮ ಪ್ರವಿಲಾಪ್ಯತಾಮ್
-ಸಂಚಿತ ಕರ್ಮಗಳ ಫಲವನ್ನು ಅನುಭವಿಸು
38. ಚಿತಿಬಲಾನ್ನಾಪ್ಯುತ್ತರೈ: ಶ್ಲಿಷ್ಯತಾಮ್
ಹಾಗೆಯೇ ಮನೋಬಲದಿಂದ ಭವಿಷ್ಯ ಬಗ್ಗೆಯೂ ಆತಂಕ ಪಡದಿರು
39. ಪ್ರಾರಬ್ಧಂ ತ್ವಿಹ ಭುಜ್ಯತಾಮ್
ಪ್ರಾರಬ್ಧ ಕರ್ಮಗಳನ್ನು ಇಲ್ಲಿ ಅನುಭವಿಸು.
40. ಅಥ ಪರಬ್ರಹ್ಮಾತ್ಮನಾ ಸ್ಥೀಯತಾಮ್
-ಅನಂತರ ಬ್ರಹ್ಮಾನುಭವದಲ್ಲಿ ಸ್ಥಿತನಾಗಿರು.
Sunday, July 24, 2011
ಸಾಧನಾ ಪಂಚಕಮ್-ಭಾಗ -11
ಸರ್ವವ್ಯಾಪಿಯಾಗಿರುವ ಆತ್ಮನನ್ನು ದರ್ಶಿಸು
36. ಜಗದಿದಂ ತದ್ಬಾಧಿತಂ ದೃಶ್ಯತಾಮ್
ಆ ಕ್ಷಣ ಭಂಗುರದ ಜಗತ್ತು ನಮ್ಮ ಮನಸ್ಸಿನ ಭ್ರಮೆ ಎಂಬುದನ್ನು ಮನಗಾಣು
Saturday, July 23, 2011
ಉತ್ತರ ಸಿಕ್ಕಿತು!
Friday, July 22, 2011
ಧಾವಂತದ ಬದುಕಿನಲ್ಲಿ ಬಡವಾದ ಸಮಾಜ
ಸರ್ವೇ ಭವಂತು ಸುಖಿನ: ಸರ್ವೇ ಸಂತು ನಿರಾಮಯಾ:
ಸರ್ವೇ ಭದ್ರಾಣಿ ಪಶ್ಯಂತು ಮಾ ಕಶ್ಚಿತ್ ದು:ಖ ಭಾಗ್ಭವೇತ್||
ಇದು ನಮ್ಮ ಪೂರ್ವಜರು ನಮಗೆ ನೀಡಿರುವ ನಿತ್ಯ ಸಂಕಲ್ಪ.ಇದರ ಅರ್ಥವನ್ನು ಸ್ವಲ್ಪ ನೋಡೋಣ. "ಎಲ್ಲರೂ ಸುಖವಾಗಿರಲಿ. ಎಲ್ಲರಿಗೂ ಒಳ್ಳೆಯ ಆರೋಗ್ಯ ಸಿಗಲಿ.ಯಾರೂ ದು:ಖ ಪಡುವುದು ಬೇಡ"
ಎಲ್ಲರೂ ಅಂದರೆ ಯಾರು? ನಮ್ಮ ಮನೆಯ ಎಲ್ಲಾ ಜನರೇ? ನಮ್ಮ ಜಾತಿಯ ಎಲ್ಲಾ ಜನರೇ? ನಮ್ಮ ಊರಿನ ಎಲ್ಲಾ ಜನರೇ? ನಮ್ಮ ಧರ್ಮದ ಎಲ್ಲಾ ಜನರೇ? ಅಥವಾ ಎಲ್ಲಾ ಮನುಕುಲವೇ?.....ನಮ್ಮ ಪೂರ್ವಜರ ಕಲ್ಪನೆ ಕೇವಲ ಮನುಷ್ಯ ರಿಗೂ ಸೀಮಿತಗೊಳ್ಳಲಿಲ್ಲ. ಭೂಮಂಡಲದಲ್ಲಿರುವ ಎಲ್ಲಾ ಜೀವ ಜಂತುಗಳು, ಗಿಡಮರ ಬಳ್ಳಿಗಳೂ ಕೂಡ ಸುಖವಾಗಿರಬೇಕೆಂಬ ಮಹತ್ತರ ಸಂಕಲ್ಪ. ಅಂದರೆ ಅಷ್ಟರ ಮಟ್ಟಿಗೆ ಉದಾರ ನೀತಿ. ಕೇವಲ ಮನುಷ್ಯ ಮಾತ್ರರೇ ಅಲ್ಲದೆ ಸಮಸ್ತ ಜೀವ ಜಂತುಗಳೂ ಸುಖವಾಗಿರಲೆನ್ನುವ ನಮ್ಮ ಪೂರ್ವಜರು ನಮಗೆ ಎಂತಹಾ ಉದಾರವಾದ ಬದುಕುವ ಶೈಲಿ ಕಲಿಸಿಕೊಟ್ಟಿದ್ದಾರಲ್ಲವೇ?
ಅದ್ವೇಷ್ಟಾ ಸರ್ವ ಭೂತಾನಾಮ್ ಮೈತ್ರ: ಕರುಣ ಏವ ಚ....ಎಂದು ಗೀತೆಯು ಸಾರುತ್ತದೆ. ಅಂದರೆ ಏನು? ಯಾರಮೇಲೂ ದ್ವೇಷ ಬೇಡ, ಎಲ್ಲರಲ್ಲೂ ಮೈತ್ರಿ, ಕರುಣೆ ಯಂತಹ ಸದ್ಗುಣಗಳನ್ನು ಬೆಳೆಸಿಕೊಳ್ಳೋಣ.....
ಸಮ: ಶತ್ರೌ ಚ ಮಿತ್ರೇ ಚ ತಥಾ ಮಾನಾಪಮಾನಯೋ:......
ಶತ್ರು ಮಿತ್ರರನ್ನು ಹಾಗೂ ಮಾನ ಅಪಮಾನಗಳನ್ನು ಸಮಭಾವದಿಂದ ಕಾಣೋಣ.
.........ಇಂತಹ ಸಾಕಷ್ಟು ಪ್ರೇರಣಾ ದಾಯಕ ವಿಚಾರಗಳನ್ನು ವೇದ ಉಪನಿಷತ್ತುಗಳಲ್ಲಿ, ಭಗವದ್ಗೀತೆಯಲ್ಲಿ ನಾವು ಕಾಣ ಬಹುದಾಗಿದೆ......
ಇವೆಲ್ಲಾ ನಮ್ಮ ಧಾರ್ಮಿಕ ಜೀವನಕ್ಕೆ ಪ್ರೇರಣಾದಾಯಕ ಅಂಶಗಳು. ಪರ ಮತವನ್ನು ದ್ವೇಶಿಸು, ಹಿಂದು ವಿಚಾರವನ್ನು ಒಪ್ಪದ ಅಥವಾ ನಮ್ಮ ಧಾರ್ಮಿಕ ಗ್ರಂಥಗಳನ್ನು ಒಪ್ಪದವರು ನರಕಕ್ಕೆ ಹೋಗಬೇಕಾಗುತ್ತದೆಂದು ನಮ್ಮ ಯಾವುದೇ ಧಾರ್ಮಿಕ ಗ್ರಂಥಗಳಲ್ಲಿ ಎಲ್ಲೂ ಹೇಳಿಲ್ಲ. ಅಥವಾ ಹಿಂದು ಧಾರ್ಮಿಕ ಗ್ರಂಥಗಳನ್ನು ಓದುವುದರಿಂದ ಮಾತ್ರ ನಿಮಗೆ ಸ್ವರ್ಗ ಸಿಗುತ್ತದೆಂದೂ ಕೂಡ ಎಲ್ಲೂ ಹೇಳಿಲ್ಲ.ಇಷ್ಟು ಭವ್ಯವಾದ ನಮ್ಮ ನೆಲದ ವಿಚಾರಗಳನ್ನು ನಾವು ಪ್ರಚಾರ ಮಾಡಲೇ ಇಲ್ಲವಲ್ಲ! ಇರಲಿ... ನಮ್ಮ ಮಕ್ಕಳಿಗೂ ಕಲಿಸಲಿಲ್ಲವಲ್ಲಾ!
ಈಗಿನ ನಮ್ಮ ಸಾಮಾಜಿಕ ಪರಿಸ್ಥಿತಿಯನ್ನು ನೋಡಿ.ವೃದ್ಧಾಶ್ರಮ ಸೇರುತ್ತಿರುವ ಅಪ್ಪ-ಅಮ್ಮ. ಹೆತ್ತ ಅಪ್ಪ-ಅಮ್ಮನ ಪ್ರೀತಿ ಕಾಣದೆ ಆಯಾಗಳ ಪೋಷಣೆಯಲ್ಲಿ ಯಾಂತ್ರಿಕವಾಗಿ ಬೆಳೆಯುವ ಮಕ್ಕಳು. ಇಂತಹ ಮಕ್ಕಳು ಬೆಳೆದು ದೊಡ್ದವರಾದಂತೆ ಅವರ ಕಣ್ಮುಂದಿನ ಆದರ್ಶವಾದರೂ ಏನು? ಕೈತುಂಬಾ ಸಂಬಳ ಸಿಗುವ ನೌಕರಿ.ಐಶಾರಾಮ ಜೀವನ. ಪ್ರೀತಿ ಪ್ರೇಮ, ಕಾಮದ ದೃಶ್ಯಗಳೇ ತುಂಬಿತುಳುಕುವ ದೂರದರ್ಶನ ದಾರಾವಾಹಿಗಳು! ಅಥವಾ ಕ್ರಿಕೆಟ್ ಆಟಗಳು!! ಕ್ರೈಮ್ ಡೈರಿಯೇ ಮೊದಲಾದ ಅಪರಾಧವನ್ನೇ ವೈಭವೀ ಕರಿಸುವ ದೃಶ್ಯಗಳು. ಇಷ್ಟಕ್ಕಿಂತ ಹೆಚ್ಚು ಚಟುವಟಿಕೆಗಳಿಗೆ ಬಿಡುವೆಲ್ಲಿಂದ ಬರಬೇಕು? ಮನಸ್ಸಿಗೆ ಮುದವನ್ನು ನೀಡಬಹುದಾದ ಪ್ರವಚನಗಳು, ಸಂಗೀತ-ನೃತ್ಯಗಳು, ಕಥೆ ಕಾದಂಬರಿಯನ್ನು ಓದುವ ಹವ್ಯಾಸಗಳು.... ಇವಕ್ಕೆಲ್ಲಾ ಸಮಯ ಎಲ್ಲಿಂದ ಬರಬೇಕು? ಹೀಗೆ ಸಮಾಜವು ದಿಕ್ಕುತಪ್ಪಿ ಧಾವಿಸುತ್ತಿರುವಾಗ ಸಹಜವಾಗಿ ಅಪರಾಧಗಳು, ಹೊಡೆದಾಟ ಬಡಿದಾಟಗಳು, ಕೋಮು ಗಲಭೆಗಳು, ಅಗ್ನಿ ಸ್ಪರ್ಷಗಳು, ಎಲ್ಲವೂ ಕಿಚ್ಚಿನಂತೆ ಹರಡಿ ಬಿಡುತ್ತವೆ. ಇದೆಲ್ಲಾ ಅತಿರೇಕವಾದಾಗ ಅದನ್ನು ನಿರ್ಬಂಧುಸಲು ಸರ್ಕಾರವು ಹೆಣಗುವ ಪರಿಸ್ಥಿತಿ!!
ಹೀಗೆ ಸಾಮಾಜಿಕವಾಗಿ ನೆಮ್ಮದಿ ಹಾಳಾಗುವುದನ್ನು ನಾವು ನೋಡುತ್ತಿರುವಂತೆಯೇ ವೈಯಕ್ತಿಕವಾಗಿಯೂ ಶಾಂತಿ ಇಲ್ಲದ ಜೀವನವನ್ನು ನೋಡುತ್ತಿದ್ದೇವೆ. ಮಾನಸಿಕವಾಗಿ ಶಾರೀರಿಕವಾಗಿಯೂ ಕೂಡ ಸ್ವಾಸ್ಥ್ಯವನ್ನು ಹಾಳುಮಾಡಿಕೊಂಡಿರುವ ಹಲವಾರು ಉಧಾಹರಣೆಗಳನ್ನು ಇಂದಿನ ಪೀಳಿಗೆಯಲ್ಲಿ ಕಾಣಬಹುದಾಗಿದೆ. ಈ ಪರಿಸ್ಥಿತಿಗೆ ಕಾರಣ ನಮಗೆ ಅರಿವಾಗಿದೆಯೇ?
ಸಾಧನಾ ಪಂಚಕಮ್-ಭಾಗ -10
-ಏಕಾಂತದ ಬದುಕನ್ನು ಆಶ್ರಯಿಸು
34. ಪರತರೇ ಚೇತ: ಸಮಾಧೀಯತಾಮ್
-ಚಿತ್ತವನ್ನು ಪರಮಾತ್ಮನಲ್ಲಿ ಲೀನಗೊಳಿಸು
