Pages

Wednesday, December 5, 2012

ಯೋಚಿಸಲೊ೦ದಿಷ್ಟು... ೬೩

೧.ತಪ್ಪನ್ನು ಮಾಡುವ ಮೊದಲೇ ಆಕ್ಷೇಪಿಸುವುದು ಹಾಗೂ ಒಳ್ಳೆಯದನ್ನು ಮಾಡುವ ಮೊದಲೇ ಹೊಗಳುವುದು ಮಾನವನ ಸಹಜ ಗುಣ!
೨. ಉತ್ತಮ ಗುಣವೆ೦ಬುದು ನೀರಿನ೦ತೆ! ಎಲ್ಲರಿಗೂ ಒಳ್ಳೆಯದನ್ನೇ ಮಾಡುತ್ತದೆ... ಕೆಳ ಮಟ್ಟದಲ್ಲಿಯೇ ನಿಲ್ಲುತ್ತದೆ!
೩. ತನ್ನನ್ನು ತಾನೇ ಹೊಗಳಿಕೊಳ್ಳುವವನು ಮಹಾ ಮೂರ್ಖನು!
೪. ಒಳ್ಳೆಯ ನೆಲದಲ್ಲಿ ಬಿತ್ತಿದ ಬೀಜ, ಒಳ್ಳೆಯ ಮಗನಲ್ಲಿ ಇಟ್ಟಿದ್ದು ಹಾಗೂ ಕೊಟ್ಟಿದ್ದು ಎ೦ದೂ ಹಾಳಾಗುವುದಿಲ್ಲ- ಪರಾಶರ ಸ್ಮೃತಿ
೫. ರಾಜಕೀಯವನ್ನು ಹಾಗೂ ನೀತಿಯನ್ನು ಎರಡೂ ಬೇರೆ ಬೇರೆ ಎ೦ದು ಎಣಿಸಿದವರು ಎರಡನ್ನೂ ತಿಳಿದುಕೊಳ್ಳಲಾರರು- ಜಿ.ವಿ. ಮಾರ್ಲೆ
೬. ಜೀವನವೆಲ್ಲಾ ಬೇವು-ಬೆಲ್ಲ, ಸವಿದವನೇ ಕವಿ ಮಲ್ಲ!- ಕುವೆ೦ಪು
೭. ಯುಧ್ಧದ ಚರಿತ್ರೆಯನ್ನು ಓದುವುದರಲ್ಲಿ ಇರುವಷ್ಟು ಆಸಕ್ತಿ ಶಾ೦ತಿಯ ಇತಿಹಾಸವನ್ನು ಓದುವುದರಲ್ಲಿ ಇರುವುದಿಲ್ಲ!
೮. ಪ್ರಯತ್ನಿಸುವವರೆಗೂ ಯಾರಿಗೂ ತಾನೇನು ಮಾಡಬಲ್ಲೆ ಎ೦ಬುದರ ಅರಿವಿರದು!
೯. ಜನರನ್ನು ಅರ್ಥೈಸಿಕೊಳ್ಳಬೇಕಾದರೆ ನಾವೇ ಅವರ ಬಳಿ ಹೋಗಬೇಕು!
೧೦. ನಾಚಿಕೆ ಮತ್ತು ಭಯವಿಲ್ಲದೆ ಮನುಷ್ಯನ ಅ೦ತರ೦ಗದಲ್ಲಿ ಕೆಟ್ಟ, ಒಳ್ಳೆಯ, ಸ೦ತೋಷದ ಹಾಗೂ ದು:ಖದ ಎಲ್ಲಆ ರೀತಿಯ ಯೋಚನೆಗಳೂ ಬರುತ್ತವೆ!
೧೧. ನಾನು ಬೇರೆ- ದೇಹ ಬೇರೆ ಎ೦ದು ತಿಳಿವು ತ೦ದುಕೊ೦ಡರೆ ರೋಗದ ಭಾಧೆಯು ಅತ್ಯಲ್ಪವಾಗುತ್ತದೆ- ಎಮ್.ವಿ.ಸೀತಾರಾಮಯ್ಯ
೧೨. ಯಾವುಧೇ ಧನ ರಾಶಿಯೂ ಸ೦ತೋಷ ಎ೦ಬ ಧನರಾಶಿಯ ಮು೦ದೆ ಧೂಳಿನ ಸ್ಠಾನ- ಸ೦ತ ಕಬೀರರು
೧೩.ಏಕಾ೦ಗಿತನವನ್ನೇ ಮೊದಲಿನಿ೦ದಲೂ ಅಪ್ಪಿಕೊ೦ಡಲ್ಲಿ ಎಷ್ಟೋ ಮಧುರ ಕ್ಷಣಗಳಿ೦ದ, ಜೀವನಾನುಭವಗಳಿ೦ದ ವ೦ಚಿತರಾಗುತ್ತೇವೆ!
೧೪. ಎಲ್ಲವನ್ನೂ ಧೇವರೇ ನೋಡಿಕೊಳ್ಳುತ್ತಾನೆ೦ದು ಸುಮ್ಮನೇ ಕುಳಿತುಕೊಳ್ಳುವುದು ಮಹಾ ಮೂರ್ಖತನ!
೧೫. ನಾಸ್ತಿಕರಿಗಿ೦ತಲೂ ತಮ್ಮ ತಪ್ಪುಗಳಿಗೆ ದೇವರನ್ನು ಗುರಿಯನ್ನಾಗಿಸುವವರು ಅತ್ಯಲ್ಪರು!

Sunday, December 2, 2012

ಅಪೂರ್ವ ಸಮ್ಮಿಲನ ಹಾಗೂ "ಆದರ್ಶದ ಬೆನ್ನು ಹತ್ತಿ . ." ಕೃತಿ ಲೋಕಾರ್ಪಣೆ



"ಹಾಂ! ನೀನಿನ್ನೂ ಬದುಕಿದ್ದೀಯೇನೋ?"
"ನೀನೂ ಇದೀಯೇನೋ?"
      36-37 ವರ್ಷಗಳ ನಂತರದಲ್ಲಿ ಪ್ರಥಮತಃ ಭೇಟಿಯಾದ ವೃದ್ಧರಿಬ್ಬರ ನಡುವಣ ಉದ್ಗಾರಗಳಿವು. ಇದೇ ರೀತಿಯ ಅನುಭವ ಅಲ್ಲಿದ್ದ ಇನ್ನೂ ಹಲವರದು. ಕೆಲವರು ಭಾವಾತಿರೇಕದಿಂದ ಒಬ್ಬರನ್ನೊಬ್ಬರು ಅಪ್ಪಿಕೊಂಡರು. ಕೆಲವರ ಕಣ್ಣಿನಲ್ಲಿ ಆನಂದಾಶ್ರುಗಳು ತುಳುಕಿದವು. ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡರು. ಇಂತಹ ಭಾವನೋತ್ತುಂಗದ ಕ್ಷಣಗಳಿಗೆ ಸಾಕ್ಷಿಯಾದದ್ದು ಹಾಸನದಲ್ಲಿ 29-11-2012ರಲ್ಲಿ ನಡೆದ 1975-77ರ ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದವರ, ತುರಂಗವಾಸ ಅನುಭವಿಸಿದವರ ಸಮಾವೇಶದಲ್ಲಿ. ಸುಮಾರು 80 ಹೋರಾಟಗಾರರು ಉಪಸ್ಥಿತರಿದ್ದ ಆ ಸಮಾವೇಶವನ್ನು ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸುವ ನನ್ನ ಕೃತಿ "ಆದರ್ಶದ ಬೆನ್ನು ಹತ್ತಿ . ."ಯ ಬಿಡುಗಡೆಯ ಪೂರ್ವಭಾವಿಯಾಗಿ ಯೋಜಿಸಲಾಗಿತ್ತು. ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯಗಳಿಗೆ ಗ್ರಹಣ ಹಿಡಿದಿದ್ದ, ಪತ್ರಿಕಾ ಸೆನ್ಸಾರ್ ಜಾರಿಯಲ್ಲಿದ್ದ, ದೇಶ ಕ್ರಮೇಣ ಸರ್ವಾಧಿಕಾರದೆಡೆಗೆ ಜಾರುತ್ತಿದ್ದ ಸಂದರ್ಭದಲ್ಲಿ ದೇಶದಲ್ಲಿ ಪುನಃ ಪ್ರಜಾಪ್ರಭುತ್ವ ಸ್ಥಾಪನೆಗೆ ಅನುವು ಮಾಡಿಕೊಟ್ಟದ್ದು ರಾ.ಸ್ವ.ಸಂಘ ಮುಂಚೂಣಿಯಲ್ಲಿ ನಿಂತು ಜಯಪ್ರಕಾಶ ನಾರಾಯಣರ ನೇತೃತ್ವದಲ್ಲಿ ಲೋಕ ಸಂಘರ್ಷ ಸಮಿತಿ ಹೆಸರಿನಲ್ಲಿ ನಡೆಸಿದ ಅಭೂತಪೂರ್ವ ಆಂದೋಲನ. ಆ ಐತಿಹಾಸಿಕ ಆಂದೋಲನದ ವಿವರ 1970ರ ದಶಕದ ನಂತರದಲ್ಲಿ ಜನಿಸಿದವರಿಗೆ ಇರಲಾರದು. ಅಂದು ಕಷ್ಟ-ನಷ್ಟಗಳನ್ನು ಸಹಿಸಿ ನೋವನುಂಡವರ ತ್ಯಾಗ, ಬಲಿದಾನಗಳಿಂದ ಉಳಿದ ದೇಶದ ಪ್ರಜಾಸತ್ತೆಯನ್ನು ಇಂದಿನ ರಾಜಕಾರಣಿಗಳು ನೈತಿಕ ಅಧೋಗತಿಗೆ ಒಯ್ಯುತ್ತಿರುವುದನ್ನು ಕಂಡು ಅಂದಿನ ಹೋರಾಟಗಾರರು ಮರುಗದೇ ಇರಲಾರರು. ಭ್ರಷ್ಠಾಚಾರದ ವಿರುದ್ಧ, ಸರ್ವಾಧಿಕಾರದ ವಿರುದ್ಧ ಸೆಣಸಿದವರ ಅಂದಿನವರ ಮನೋಭಾವ ಇಂದಿನ ತರುಣರಿಗೆ ಮೂಡದಿದ್ದರೆ ಪರಿಸ್ಥಿತಿಯ ಸುಧಾರಣೆಯಾಗುವುದು ದುಸ್ತರವೇ ಸರಿ.
     ಹಾಸನ ಜಿಲ್ಲೆಯಲ್ಲಿ 13 ಜನರು ಆಂತರಿಕ ಭದ್ರತಾ ಶಾಸನದ ಅನ್ವಯ (ಯಾವುದೇ ನ್ಯಾಯಾಲಯದಲ್ಲಿ ಪ್ರಶ್ನಿಸಲು ಅವಕಾಶವಿಲ್ಲದೆ 2 ವರ್ಷಗಳ ಕಾಲ ಯಾರನ್ನೇ ಅಗಲಿ ಬಂಧಿಸಲು ಅವಕಾಶ ಕೊಟ್ಟಿದ್ದ ಕಾಯದೆ) ಬಂದಿಗಳಾಗಿದ್ದರು. ಸರಿಯಾಗಿ ಮೀಸೆಯೇ ಮೂಡಿರದಿದ್ದ ಆಗ 18-19 ವರ್ಷದ ತರುಣರಾದ ಹಾಸನದ ಪಾರಸಮಲ್ ಮತ್ತು ಅರಕಲಗೂಡಿನ ಪಟ್ಟಾಭಿರಾಮರೂ ಅವರಲ್ಲಿ ಸೇರಿದ್ದರು. ಆ ಪೈಕಿ 7 ಜನರು ಈಗ ದಿವಂಗತರು. ಸಂಘದ ಜಿಲ್ಲಾ ಪ್ರಚಾರಕರಾಗಿದ್ದ ಶ್ರೀ ಪ್ರಭಾಕರ ಕೆರಕೈ ಸಹ ಮೀಸಾ ಬಂದಿಯಾಗಿದ್ದು, ಆಗ ಅನುಭವಿಸಿದ ಹಿಂಸೆಯ ಕಾರಣದಿಂದ ಕೆಲವು ವರ್ಷಗಳ ನಂತರದಲ್ಲಿ 30-32ರ ಕಿರಿಯ ವಯಸ್ಸಿನಲ್ಲೇ ಮತಿವಿಕಲ್ಪತೆಗೆ ಒಳಗಾಗಿ ಮೃತಪಟ್ಟವರು. 300ಕ್ಕೂ ಹೆಚ್ಚು ಜನರನ್ನು ಭಾರತ ರಕ್ಷಣಾ ಕಾಯದೆಯ ಅನ್ವಯ ಬಂಧಿಸಿದ್ದರು. ದಂಡ ಪ್ರಕ್ರಿಯಾ ಸಂಹಿತೆಯ ಪ್ರಕಾರ ಮೊಕದ್ದಮೆಗಳನ್ನು ಸಾವಿರಾರು ಜನರ ಮೇಲೆ ಹೂಡಿದ್ದರು. ಕೊನೆ ಕೊನೆಗೆ ಜೈಲುಗಳಲ್ಲಿ ಬಂದಿಗಳನ್ನು ಇಡಲು ಸಾಧ್ಯವಾಗದಾದಾಗ ಸತ್ಯಾಗ್ರಹಿಗಳನ್ನು ಬಂಧಿಸಿ, ಹೊಡೆದು, ಬಡಿದು ವಾಹನಗಳಲ್ಲಿ ಕರೆದೊಯ್ದು ದೂರದ ಸ್ಥಳಗಳಲ್ಲಿ ಬಿಟ್ಟು ಬರುತ್ತಿದ್ದ ಸಂದರ್ಭಗಳೂ ಬಂದಿದ್ದವು. ಅಂತಿಮವಾಗಿ ಜನತೆಯದೇ ಜಯವಾಯಿತು. ಜಿಲ್ಲೆಯಲ್ಲಿ ಅಂತಹ ಪ್ರೇರಣಾದಾಯಿ ಹೋರಾಟ ಮಾಡಿದವರನ್ನು ಒಂದೆಡೆ ಸೇರಿಸುವ ಪ್ರಯತ್ನವನ್ನು ಮಾಡಲು ನಿರ್ಧರಿಸಿ ಮಿತ್ರ ಹರಿಹರಪುರ ಶ್ರೀಧರ ಮತ್ತು ನಾನು ಜಿಲ್ಲೆಯಲ್ಲಿ ಪ್ರವಾಸ ಮಾಡಿದೆವು. ಉತ್ತಮ ಸ್ಪಂದನ ಸಿಕ್ಕಿತು. ಅಂದು ಹೋರಾಡಿದ್ದ ಹಲವರು ಸ್ವರ್ಗವಾಸಿಗಳಾಗಿದ್ದರು. ಹಲವರು ಎಲ್ಲಿದ್ದಾರೋ, ಏನು ಮಾಡುತ್ತಿದ್ದಾರೋ ತಿಳಿಯಲಿಲ್ಲ. ಹಲವರು ವೃದ್ಧಾಪ್ಯದ ಕಾರಣದ ಸಹಜ ಅನಾರೋಗ್ಯ ಕಾರಣದಿಂದ ಪ್ರಯಾಣ ಮಾಡಲು ಕಷ್ಟವಿರುವ ಸ್ಥಿತಿಯಲ್ಲಿದ್ದರು. ಕೆಲವರಿಗೆ ಅನಿವಾರ್ಯ ಕಾರಣಗಳಿಂದ ಅಂದು ಬರಲು ಕಷ್ಟವಿತ್ತು. ಹಾಗಾಗಿ ನಮ್ಮ ಪ್ರಯತ್ನದ ಮಿತಿಯಲ್ಲಿ ಮಾಡಿದ ಪ್ರಯತ್ನಕ್ಕೆ ಅಂದು ಹಾಜರಿದ್ದ 80 ವೃದ್ಧತರುಣರು ಉಪಸ್ಥಿತರಿದ್ದುದು ಯಶಸ್ಸು ಸಿಕ್ಕಿತ್ತೆಂದೇ ಹೇಳಬಹುದು. ಕಾರ್ಯಕ್ರಮಕ್ಕೆ ಬರಲಾಗದಿದ್ದ ಹಲವರು ಅನೇಕ ಸಲ ದೂರವಾಣಿ ಮಾಡುತ್ತಾ, ಅದಕ್ಕಾಗಿ ಪೇಚಾಡಿಕೊಂಡು ಕಾರ್ಯಕ್ರಮದ ವಿವರ ಪಡೆಯುತ್ತಿದ್ದುದು ಅವರ ಕಳಕಳಿ ತೋರಿಸುತ್ತಿತ್ತು.
     ಜೈಲಿನಲ್ಲಿ ಬಂದಿಗಳು ಹೇಳಿಕೊಳ್ಳುತ್ತಿದ್ದ 'ಆ ಸ್ವತಂತ್ರ ಸ್ವರ್ಗಕೇ ನಮ್ಮ ನಾಡು ಏಳಲೇಳಲೇಳಲೇಳಲಿ' ಎಂಬ ಸಮೂಹಗೀತೆಯನ್ನು ಎಲ್ಲರೂ ಒಕ್ಕೊರಳಿನಿಂದ ಎದೆ ಸೆಟೆಸಿ, ಚಪ್ಪಾಳೆ ಹಾಕುತ್ತಾ ಹೇಳಿದರು. ಬಂದಿದ್ದವರೆಲ್ಲರು ತಮ್ಮ ತಮ್ಮ ಅನುಭವಗಳ ಬುತ್ತಿಯನ್ನು ತೆರೆಯುತ್ತಿದ್ದಂತೆ ಕಾಲ 37 ವರ್ಷಗಳ ಹಿಂದಕ್ಕೆ ಸರಿದಿತ್ತು. ಅನುಭವಗಳನ್ನು ಹೇಳಿಕೊಳ್ಳುವಾಗ ಅವರ ಕಣ್ಣುಗಳಲ್ಲಿನ ಮಿಂಚು, ಮುಖದಲ್ಲಿ ವ್ಯಕ್ತವಾಗುತ್ತಿದ್ದ ಆನಂದ, ಸಾರ್ಥಕ್ಯ ಭಾವವನ್ನು ಹೊರಸೂಸುತ್ತಿತ್ತು. ಅವರ ತಾರುಣ್ಯ ಮರುಕಳಿಸಿತ್ತು. ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ರಾತ್ರಿ ಧ್ವಜಸ್ಥಂಭದ ಮೇಲೆ ಕಪ್ಪು ಧ್ವಜ ಹಾರಿಸಿ ಕೆಳಗೆ ಇಳಿದು ಬರುವಾಗ ಕಂಬಕ್ಕೆ ಗ್ರೀಸು ಹಚ್ಚಿ ಕೆಳಗೆ ಇಳಿದಿದ್ದ ಮತ್ತು ಆ ಕಾರಣಕ್ಕಾಗಿ ಪೋಲಿಸರ ಆತಿಥ್ಯ ಪಡೆದಿದ್ದ ಅರಕಲಗೂಡಿನ ಅನಂತ, ಹೊಳೆನರಸಿಪುರದ ಸಂತೆಯಲ್ಲಿ ಅಂದು ಪ್ರಸಾರ ಮಾಡುತ್ತಿದ್ದ ಭೂಗತ ಪತ್ರಿಕೆ 'ಕಹಳೆ'ಯನ್ನು ಟಾಂ ಟಾಂ ಹೊಡೆಯುತ್ತಾ ಹಂಚಿಸಿದ್ದಕ್ಕಾಗಿ ಪೋಲಿಸರಿಂದ ಹೊಡೆತ ತಿಂದಿದ್ದ ಭಗವಾನ್ ಮತ್ತು ಅವನ ಮಿತ್ರರು, ಸತ್ಯಾಗ್ರಹ ಮಾಡಿ ಬಂದಿಗಳಾಗಿದ್ದವರು, ಜೈಲಿನಲ್ಲಿ 10 ತಿಂಗಳುಗಳಿಗೂ ಹೆಚ್ಚು ಕಾಲವಿದ್ದು ಬಿಡುಗಡೆಯಾದ ನಂತರ ಮನೆಗೆ ಹೋಗದೆ ಮತ್ತೆ ಹೋರಾಟದ ಕೆಲಸಕ್ಕೆ ಆದ್ಯತೆ ನೀಡಿದ್ದ ಬೇಲೂರಿನ ರವಿ ಮತ್ತು ಗೆಳೆಯರು, ಅರಸಿಕೆರೆಯಲ್ಲಿ ನಡೆದ ರಂಗು ರಂಗಿನ ಸತ್ಯಾಗ್ರಹದ ವಿವರಗಳು, ಅನುಭವಿಸಿದ ಚಿತ್ರಹಿಂಸೆಗಳನ್ನು ತೆರೆದಿಟ್ಟ ರಾಮಚಂದ್ರ, ಗೋವಿಂದರಾಜು, ಬಸವರಾಜು, ಸತ್ಯನಾರಾಯಣ ಮುಂತಾದವರು, ಸಕಲೇಶಪುರದ ಸತ್ಯನಾರಾಯಣಗುಪ್ತ ನೀಡಿದ ರೋಚಕ ಮಾಹಿತಿಗಳು, ಹಾಸನದ ಪಾರಸಮಲ್, ನಾಗರಾಜ್, ಚಂದ್ರಶೇಖರ್, ಜಯಪ್ರಕಾಶ್ ಮುಂತಾದವರ ಅನುಭವಗಳು ನೆರೆದಿದ್ದವರನ್ನು ವಿಸ್ಮಿತಗೊಳಿಸಿದ್ದು ಸತ್ಯ. 
     ನಮ್ಮ ನಡುವೆ ಈಗ ಇಲ್ಲದ, ಸ್ವರ್ಗಸ್ಥರಾದವರ ಹೆಸರುಗಳನ್ನು ಹೇಳಲು ಬಂದವರನ್ನು ಕೋರಿದಾಗ ಸುಮಾರು 40 ಜನರ ಹೆಸರುಗಳು ಕೇಳಿಬಂದವು. ಅವರುಗಳು ಮಾಡಿದ ಕೆಲಸಗಳು ಮನಃಪಟಲದ ಮೇಲೆ ಮೂಡಿದವು. ಅಗಲಿದ ಆ ಎಲ್ಲಾ ಧೀರರಿಗೆ ಶ್ರದ್ಧಾಂಜಲಿಯಾಗಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು. ಎಲ್ಲರ ಮಾತುಗಳನ್ನು ಕೇಳಿದ ನಂತರ ಸಂಘದ ಹಿರಿಯ ಪ್ರಚಾರಕರಾದ ಶ್ರೀ ಸು. ರಾಮಣ್ಣನವರು ಮಾತನಾಡಿ ಸಂಕಟದ ಕಾಲದಲ್ಲಿ ನಿಸ್ವಾರ್ಥ ಭಾವದಿಂದ ಮಾಡಿದವರ ತ್ಯಾಗ, ಬಲಿದಾನಗಳು ಎಂದಿಗೂ ಮಾರ್ಗದರ್ಶಿಯಾಗಿ ಉಳಿಯುತ್ತದೆ ಎಂದರಲ್ಲದೆ, ಇಂದಿನ ರಾಜಕೀಯ ಪರಿಸ್ಥಿತಿಯಿಂದಾಗಿ ಧೃತಿಗೆಡದೆ ದೇಶಹಿತವನ್ನು ಮುಂದಿರಿಸಿಕೊಂಡು ಕೆಲಸ ಮಾಡಲು ಮತ್ತು ಯುವಕರಿಗೆ ಪ್ರೇರಿಸಲು ಕೇಳಿಕೊಂಡರು. ಹಿರಿಯರಾದ ಶ್ರೀ ಕೆ.ಎನ್. ದುರ್ಗಪ್ಪಶ್ರೇಷ್ಠಿಯವರು "ಆದರ್ಶದ ಬೆನ್ನು ಹತ್ತಿ . ." ಕೃತಿಯನ್ನು ಬಿಡುಗಡೆ ಮಾಡಿ ಶುಭ ಕೋರಿದರು.
     ಹಿಂದೆ ಮೀಸಾ ಬಂದಿಗಳಾಗಿದ್ದು, ಈಗ ನಮ್ಮ ನಡುವೆ ಇರುವ ಜಿಲ್ಲೆಯ 6 ಜನರ ಪೈಕಿ ಸಮಾವೇಶದಲ್ಲಿ ಹಾಜರಿದ್ದ ಅರಸಿಕೆರೆಯ ಶ್ರೀ ಕೆ.ಎನ್. ದುರ್ಗಪ್ಪ ಶ್ರೇಷ್ಠಿ, ಶ್ರೀ ಕೆ. ಆರ್. ಶ್ರೀನಿವಾಸ ಮೂರ್ತಿ, ಹಾಸನದ ಪಾರಸಮಲ್ ಮತ್ತು ಸಕಲೇಶಪುರದ ಶ್ರೀ ಸತ್ಯನಾರಾಯಣ ಗುಪ್ತರನ್ನು ಸನ್ಮಾನಿಸಲಾಯಿತು. ಮಾರ್ಗದರ್ಶಿ ಭಾಷಣ ಮಾಡಿದ ಮತ್ತು ಕಾರ್ಯಕ್ರಮಕ್ಕೆ ಪ್ರೇರೇಪಣೆ ನೀಡಿದ್ದ ಶ್ರೀ ಸು. ರಾಮಣ್ಣನವರನ್ನು ಗೌರವಿಸಲಾಯಿತು. 'ಆದರ್ಶದ ಬೆನ್ನು ಹತ್ತಿ . .' ಕೃತಿಯ ಲೇಖಕರನ್ನು ಅಭಿನಂದಿಸಲಾಯಿತು.  ಸಹಕರಿಸಿದ ಎಲ್ಲರಿಗೆ ಹರಿಹರಪುರ ಶ್ರೀಧರ್ ಧನ್ಯವಾದ ಸಮರ್ಪಣೆ ಮಾಡಿದರು. ಕಾರ್ಯಕ್ರಮ ಬಂದಿದ್ದವರಿಗೆ ಸಂತೋಷ ನೀಡಿದ್ದರೆ, ಆಯೋಜಿಸಿದವರಿಗೆ ಧನ್ಯತಾಭಾವ ಮೂಡಿಸಿತ್ತು.

ಸಮಾವೇಶದ ಕೆಲವು ದೃಷ್ಯಗಳಿವು:







Saturday, December 1, 2012

ಆ ಸ್ವತಂತ್ರ ಸ್ವರ್ಗಕೆ ನಮ್ಮ ನಾಡು ಏಳಲಿ..



  ಅದೊಂದು ಬಲು ವಿಶೇಷ ಸಂದರ್ಭ! ಈ ಹಾಡು ಕೇಳಿ. ವೇದಿಕೆಯಲ್ಲಿ ಮತ್ತು ಅವರೆದುರು ಕುಳಿತು ಅತ್ಯಂತ ಸ್ಪೂರ್ಥಿಯಿಂದ ಹಾಡುತ್ತಿರುವವರ ಪರಿಚಯ ನಿಮಗಾದರೆ ನೀವು ವಾಹ್ ! ಎನ್ನದೆ ಇರಲಾರಿರಿ. 1975-77 ನಮ್ಮ ದೇಶದ ಮೇಲೆ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ ಸಂದರ್ಭ. ಈಗಿನ ಎಷ್ಟೋ ಜನರಿಗೆ ಅದರ ಅರಿವಿಲ್ಲ. ಆದರೆ ಅಂದು ದೇಶದ ನಾಗರೀಕರ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗಿತ್ತು. ಆರ್.ಎಸ್.ಎಸ್.ಸಹಿತ ಹಲವಾರು ಸಂಘಟನೆಗ     ಳನ್ನು  ನಿಶೇಧಿಸಿ ಅವುಗಳ ನಾಯಕರನ್ನು ಜೈಲಿಗೆ ತಳ್ಳಲಾಗಿತ್ತು. ಆಗ ಆ ತುರ್ತುಪರಿಸ್ಥಿತಿಯ ವಿರುದ್ಧ ಹೋರಾಡಿ ಇನ್ನೂ ನಮ್ಮೊಡನಿರುವ ಹಾಸನ ಜಿಲ್ಲೆಯ ಹಿರಿಯರು ಇವರು!! ವೇದಿಕೆಯಲ್ಲಿ ಆರ್.ಎಸ್.ಎಸ್. ಹಿರಿಯ ಪ್ರಚಾರಕರಾದ ಶ್ರೀ ಸು.ರಾಮಣ್ಣನವರು. ಅಕ್ಕ ಪಕ್ಕದಲ್ಲಿ ಅರಸೀಕೆರೆಯ ಪುರಸಭಾ ಮಾಜಿ ಅಧ್ಯಕ್ಷರಾದ ಶ್ರೀ ದುರ್ಗಪ್ಪಶೆಟ್ಟರು ಮತ್ತು ಅರಸೀಕೆರೆಯ ತಾಲ್ಲೂಕು ಸಂಘಚಾಲಕರಾದ ಶ್ರೀ ಶ್ರೀನಿವಾಸಮೂರ್ತಿಯವರು[ರಾಮಣ್ಣನವರ ಬಲಬದಿ]
ಎದಿರು ಕುಳಿತು ಚಪ್ಪಾಳೆ ತಟ್ಟಿ ಹಾಡುತ್ತಿರುವವರೆಲ್ಲಾ ಅಂದು ಹೋರಾಟದಲ್ಲಿ ಪಾಲ್ಗೊಂಡಿದ್ದ ಧೀರರು. ಅಂದಿನ ಹಲವರು ಇಂದು ನಮ್ಮೊಡನಿಲ್ಲ. ಇನ್ನೂ ಬದುಕಿದ್ದು ಭಾರತಮಾತೆಯ ವೈಭವದ ದಿನಗಳಿಗಾಗಿ ಸಮಾಜಕಾರ್ಯದಲ್ಲಿ ಸಕ್ರಿಯರಾಗಿರುವ ಹಿರಿಯರು ತಮ್ಮ ಉತ್ಸಾಹವನ್ನು ಬತ್ತಲು ಬಿಡದೆ ಭಾವುಕರಾಗಿ ಹಾಡುತ್ತಿರುವ ಅಪೂರ್ವ ಕ್ಷಣಗಳು!!
ವೇದಸುಧೆಯ ಗೌರವ ಸಂಪಾದಕರಾದ ಶ್ರೀ ಕವಿ ನಾಗರಾಜರೂ ಕೂಡ ಅಂದು ಹೋರಾಟದಲ್ಲಿ ಪಾಲ್ಗೊಂಡು ಸರ್ಕಾರೀ ಕೆಲಸ ಕಳೆದುಕೊಂಡು ಜೈಲು ವಾಸ ಅನುಭವಿಸಿದವರು. ಅವರು ಬರೆದಿರುವ ತನ್ನ ಹೋರಾಟದ ಅನುಭವ ಕಥನ "ಆದರ್ಶದ ಬೆನ್ನುಹತ್ತಿ.." ಕೃತಿಯ ಬಿಡುಗಡೆಯ ಸಂದರ್ಭದಲ್ಲಿ ಇಂತಹ ಒಂದು ಅಪೂರ್ವ ಅವಕಾಶವು ಹಾಸನದ ಜನತೆಗೆ ಲಭಿಸಿತ್ತು. ಸಮಾರಂಭದ ವರದಿಯನ್ನು ಪ್ರಕಟಿಸಲಾಗುವುದು.


Wednesday, November 21, 2012

ಆದರ್ಶದ ಬೆನ್ನ ಹತ್ತಿ..




-“ಇವರನ್ನು ಯಾಕೆ ಅರೆಸ್ಟ್ ಮಾಡಿದ್ದೀರಿ?”
- “ಇವರು ಕೇಂದ್ರ ಸರ್ಕಾರದ ವಿರುದ್ಧವಾಗಿ ದೇಶದ್ರೋಹದ ಕೆಲಸಮಾಡ್ತಾ ಇದಾರೆ ಸ್ವಾಮಿ”
-“ಇವರು ದೇಶದ್ರೋಹದ ಕೆಲಸ ಮಾಡ್ತಾ ಇದಾರೆ ಅನ್ನೋದಕ್ಕೆ ಸಾಕ್ಷಿ ಇದೆಯಾ?”
-“ಸಾಕ್ಷಿ ಇದೆ ಸ್ವಾಮಿ”
-“ಏನು ಸಾಕ್ಷಿ?”
-“ಇವರ ಮನೆಯಲ್ಲಿ ಮಹಾತ್ಮಗಾಂಧಿಜಿಯ ಫೋಟೋ   ಇರುವ ಕರಪತ್ರಗಳು ಸಿಕ್ಕಿವೆ.
-“ಹಾಸನದಲ್ಲಿ ಎಷ್ಟು ಮನೆಗಳಿವೆ?”
-ಗೊತ್ತಿಲ್ಲ.
-  ಅಂದಾಜಾಗಿ ಹೇಳಿ ಪರವಾಗಿಲ್ಲ.ಇಪ್ಪತ್ತು ಸಾವಿರ ಮನೆಗಳು ಇರಬಹುದಾ? ಅದರಲ್ಲಿ ಎಷ್ಟು ಮನೆಗಳಲ್ಲಿ ಮಹಾತ್ಮಗಾಂಧಿಜಿಯ ಫೋಟೋ ಇರಬಹುದು? ಒಂದು ಐದು ನೂರು ಮನೆಗಳಲ್ಲಿ? ಹೋಗಲೀ ಒಂದು ಇನ್ನೂರು ಮನೆಗಳಲ್ಲಿ?”
“ಇರಬಹುದು.”
“ಹಾಗಾದರೆ ಅವರನ್ನೆಲ್ಲಾ ಯಾಕೆ ಅರೆಸ್ಟ್ ಮಾಡಲಿಲ್ಲ? ಇವರನ್ನೇಯಾಕೆ ಮಾಡಿದ್ರೀ?”
“ಫೋಟೋ ಮಾತ್ರಾ ಆಗಿದ್ರೆ ಅವರನ್ನು ಅರೆಸ್ಟ್ ಮಾಡ್ತಿರಲಿಲ್ಲ. ಫೋಟೋದ ಮೆಲೆ  ರಾಷ್ಟ್ರದ್ರೋಹದ ಬರಹ ಇತ್ತು!”
£ÀÄ ಬರಹ ಇತ್ತು?”
-“ಅಸತ್ಯ,ಅಧರ್ಮ,ದಬ್ಬಾಳಿಕೆಗೆ ತಲೆಬಾಗುವುದು ಹೇಡಿತನ ಅಂತಾ ಬರೆದಿತ್ತು.”
“ಅದು ಗಾಂಧೀಜಿ ನೇ ಹೇಳಿದ್ದಲ್ವಾ?
-ಇರಬಹುದು
-ಆ ಮಾತು ರಾಷ್ಟ್ರದ್ರೋಹ ಅನ್ನೋದಾದ್ರೆ , ಇದು ಗಾಂಧೀಜಿ ಹೇಳಿದ ಮಾತು ಅನ್ನೋದು ನಿಮ್ಮ ನೆನಪಿನಲ್ಲಿರಲಿ. ಹೋಗಲೀ ಅದು ಹೇಗೆ    ರಾಷ್ಟ್ರದ್ರೋಹ ಆಗುತ್ತೆ? ಅನ್ನೋದನ್ನು ವಿವರಿಸುತ್ತೀರಾ?.........

    ಇದು ಯಾವುದೋ    ಸಿನೆಮಾ   ಡೈಲಾಗ್ ಅಲ್ಲ. 1975 ನೇ ಇಸವಿಯ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಹಾಸನದಲ್ಲೂ ಕೂಡ ತುರ್ತು ಪರಿಸ್ಥಿತಿ ವಿರುದ್ಧ ನಡೆದ ಹೋರಾಟ ಸಂದರ್ಭದಲ್ಲಿ ಅಂದು ಭಾರತ ರಕ್ಷಣಾ ನಿಯಮ [DIR] ಮತ್ತು ಆಂತರಿಕ ಭದ್ರತಾ ಕಾಯದೆಯನ್ವಯ [MISA] ನೂರಾರು ಜನ ದೇಶ ಭಕ್ತರನ್ನು ಜೈಲಿಗೆ  ಕಳಿಸಲಾಗಿತ್ತು. ಅದರಲ್ಲಿ DUÀ ಫುಡ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀ ಕೆ.ವಿ.ನಾಗರಾಜ್ ರನ್ನು ಅರೆಸ್ಟ್  ಮಾಡಲಾಗಿತ್ತು. ನಾಗರಾಜರ ಕೇಸ್ ನಡೆಸುತ್ತಿದ್ದ  ಶ್ರೀ ಬಿ.ಎಸ್.ವೆಂಕಟೇಶ ಮೂರ್ತಿಯವರು  ನ್ಯಾಯಾಲಯದಲ್ಲಿ  ಪಾಟೀಸವಾಲು ಮಾಡುವಾಗ   ಪೋಲೀಸರಿಗೆ ಹಾಕಿದ ಪ್ರಶ್ನೆಗಳಿವು.
      ಶ್ರೀ ಕೆ.ವಿ.ನಾಗರಾಜರು  ತುರ್ತುಪರಿಸ್ಥಿಯ ತಮ್ಮ ಹೋರಾಟದ ಘಟನೆಗಳನ್ನು  ಮುಂದಿನ ಪೀಳಿಗೆಗೆ ಮರೆಯ ಬಾರದೆಂಬ ಕಾರಣಕ್ಕಾಗಿ ದಾಖಲಿಸಿ ರುವ” ಆದರ್ಶದ ಬೆನ್ನು ಹತ್ತಿ…..” ಪುಸ್ತಕವು  ಇದೇ 29.11.2012 ಗುರುವಾರ ಲೋಕಾರ್ಪಣೆಯಾಗಲಿದೆ. ತುರ್ತುಪರಿಸ್ಥಿತಿಯ ಹೋರಾಟಗಳ ನೆನಪು ಒಂದು ಭಾಗವಾದರೆ ರಾಜ್ಯ ಸರ್ಕಾರೀ ಅಧಿಕಾರಿ/ನೌಕರನಾಗಿ ಸೇವೆ ಮಾಡುವಾಗಿನ ತಮ್ಮ ಅನುಭವಗಳನ್ನು ಇನ್ನೊಂದು ಭಾಗದಲ್ಲಿ ಹಂಚಿಕೊಂಡಿದ್ದಾರೆ. ಬ್ರಷ್ಟಾಚಾರ ಎಂಬುದು ಚರ್ಚಾರ್ಹ ವಿಷಯವೇ ಅಲ್ಲ,ಅದೊಂದು ಸರ್ವೇ ಸಾಮಾನ್ಯ ಎಂಬ ಮಾನಸಿಕತೆಗೆ ಬಂದು ನಿಂತಿರುವ ಈ ದಿನಗಳಲ್ಲಿ  ಶ್ರೀ ನಾಗರಾಜರು ತಮ್ಮ ಸೇವಾ ಅವಧಿಯಲ್ಲಿ ಪ್ರಾಮಾಣಿಕವಾಗಿ ಕರ್ತವ್ಯವನ್ನು ನಿರ್ವಹಿಸುವಾಗ ಎದುರಾದ ಸಮಸ್ಯೆಗಳು, ಅದನ್ನೆಲ್ಲಾ ದಿಟ್ಟವಾಗಿ ಎದುರಿಸಿದ ರೀತಿ, ಎಲ್ಲವನ್ನೂ ಮನಮುಟ್ಟುವಂತೆ ದಾಖಲಿಸಿದ್ದಾರೆ. ಕೃತಿಯನ್ನು ಓದಲು ಆರಂಭಿಸಿದರೆ ಎಲ್ಲವನ್ನೂ ಮರೆತು ತನ್ನೆಡೆಗೆ ಹಿಡಿದಿಟ್ಟುಕೊಳ್ಳುವ ಅವರ ಬರವಣಿಗೆ ಶೈಲಿ ಓದುಗರನ್ನು ಬೆರಗುಗೊಳಿಸದೆ ಇರದು.
     1970 ರ ನಂತರ ಜನ್ಮ ತಾಳಿರುವ ಇಂದಿನ ಪೀಳಿಗೆಗೆ “ತುರ್ತು ಪರಿಸ್ಥಿತಿಯ ಹೋರಾಟ ಎಂದರೇನೆಂಬುದು UÉÆvÉÛà E®è. ಅಂದು ಹೋರಾಟದಲ್ಲಿ ಪಾಲ್ಗೊಂಡಿದ್ದ ಹಲವಾರು ಜನರು ಇಂದು ನಮ್ಮೊಂದಿಗಿಲ್ಲ. ಅಂದು ಎಲ್ಲಾ ಪತ್ರಿಕೆಗಳ ಬಾಯಿ ಮುಚ್ಚಿಸಲಾಗಿತ್ತು.  ಯಾವ ನಾಗರೀಕನೂ ಸರ್ಕಾರದ ವಿರುದ್ಧವಾಗಿ ಮಾತನಾಡು ವಂತಿರಲಿಲ್ಲ. ಅಂತಹ ವಿಷಮ ಸಂದರ್ಭದಲ್ಲೂ  ತುರ್ತುಪರಿಸ್ಥಿತಿಯ ವಿರುದ್ಧವಾಗಿ ಪೋಲೀಸರ ಹದ್ದುಗಣ್ಣನ್ನು ಮರೆಮಾಚಿಸಿ ಪ್ರಕಟವಾಗುತ್ತಿದ್ದ “ಕಹಳೆ” ಪತ್ರಿಕೆಯು ಎಲ್ಲಿ ಮುದ್ರಣವಾಗುತ್ತೆ? ಯಾರು ಪ್ರಸಾರ ಮಾಡುತ್ತಾರೆಂಬುದು ಪೋಲೀಸರಿಗೆ ದೊಡ್ದ ಪ್ರಶ್ನೆಯಾಗಿತ್ತು. ಅನುಮಾನ ಬಂದವರನ್ನು ಸ್ಟೇಶನ್ ಗೆ ಎಳೆದೊಯ್ದು “ಏರೋಪ್ಲೇನ್” ಎತ್ತುತ್ತಿದ್ದ ಕಾಲ. ಇಂದು ಏರೋಪ್ಲೇನ್ ಶಿಕ್ಷೆ ಎಂದರೇನೆಂಬುದು ನಮ್ಮ ಯುಕರಿಗೆ ಗೊತ್ತಿಲ್ಲ. ಆದರೆ ಅಂದು ಹಲವಾರು ದೇಶಭಕ್ತರೂ ಕೂಡ ಪೋಲೀಸರ ಅಮಾನುಷ ಶಿಕ್ಷೆಗೆ ಒಳಗಾಗಿದ್ದ ಕೆಟ್ಟದಿನಗಳು.  ಆರೆಸ್ಸೆಸ್ ಸೇರಿದಂತೆ ೫೦-೬೦ ಸಂಘ-ಸಂಸ್ಥೆಗಳನ್ನು ನಿಷೇಧಿಸಲಾಗಿತ್ತು. ಆರೆಸ್ಸೆಸ್ ಮುಂಚೂಣಿಯಲ್ಲಿ ನಿಂತು ಜಯಪ್ರಕಾಶ ನಾರಾಯಣರ ನಾಯಕತ್ವದಲ್ಲಿ ಲೋಕ ಸಂಘರ್ಷ ಸಮಿತಿ ಹೆಸರಿನಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ನಡೆದ ಅಭೂತಪೂರ್ವ ಆಂದೋಲನ ದೇಶದಲ್ಲಿ ಪ್ರಜಾಸತ್ತೆ ಉಳಿಯಲು ಕಾರಣವಾಯಿತು. ಲಕ್ಷಾಂತರ ತರುಣರು ಇದರಲ್ಲಿ ಭಾಗವಹಿಸಿ ಅನೇಕ ಕಷ್ಟ-ನಷ್ಟಗಳನ್ನು ಎದುರಿಸಿದರು. ನೂರಾರು ಜನರು ತಮ್ಮ ಜೀವವನ್ನೇ ತೆತ್ತರು. ಕರ್ನಾಟಕದಲ್ಲೂ ಸಹ ಆಂದೋಲನ ಜನ ಜಾಗೃತಿಗೊಳಿಸುವಲ್ಲಿ, ಸರ್ವಾಧಿಕಾರಿಗಳನ್ನು ಬೆಚ್ಚಿ ಬೀಳಿಸುವಲ್ಲಿ ಯಶಸ್ವಿಯಾಯಿತು. ಹಾಸನ ಜಿಲ್ಲೆಯಲ್ಲೂ ಸಾವಿರಾರು ತರುಣರು ಪ್ರತಿಭಟನೆಯಲ್ಲಿ ಪಾಲುಗೊಂಡದ್ದು ಇತಿಹಾಸ. ೧೩ ಜನರನ್ನು ಯಾವುದೇ ವಿಚಾರಣೆಗೊಳಪಡದೆ 2 ವರ್ಷಗಳ ಕಾಲ ಬಂಧಿಸಿಡಬಹುದಾದ ಮೀಸಾ ಕಾಯದೆಯನ್ವಯ ಬಂಧಿಸಲಾಗಿತ್ತು. ಸುಮಾರು 300 ಜನರನ್ನು ಭಾರತ ರಕ್ಷಣಾ ಕಾಯದೆಯನ್ವಯ ಬಂಧಿಸಿದ್ದರು. ಸಾವಿರಾರು ತರುಣರ ಮೇಲೆ ದಂಡ ಪ್ರಕ್ರಿಯಾ ಸಂಹಿತೆಯ ವಿವಿಧ ಕಲಮುಗಳ ಪ್ರಕಾರ ಮೊಕದ್ದಮೆಗಳನ್ನು ಹೂಡಲಾಗಿತ್ತು. ಕೊನೆಕೊನೆಗೆ ಜೈಲಿನಲ್ಲಿ ಸ್ಥಳವಿರದ ಕಾರಣ ಬಂಧಿಸಿ, ಮುಚ್ಚಳಿಕೆ ಬರೆಯಿಸಿಕೊಂಡು, ಹೊಡೆದು ಬಡಿದು ಬಿಟ್ಟದ್ದೂ ಉಂಟು. ಆ ಸಂದರ್ಭದಲ್ಲಿ ಅನುಭವಿಸಿದ ಕಿರುಕುಳ, ಹಿಂಸೆಗಳಿಂದಾಗಿ ಆಗ ಹಾಸನ ಜಿಲ್ಲೆಯ ಆರೆಸ್ಸೆಸ್ ಪ್ರಚಾರಕರಾಗಿದ್ದ ಶ್ರೀ ಪ್ರಭಾಕರ ಕೆರೆಕೈಯವರು ತಮ್ಮ 30-32  ಕಿರಿಯ ವಯಸ್ಸಿನಲ್ಲೇ ಮತಿವಿಕಲ್ಪತೆಗೆ ಒಳಗಾಗಿ ಕೊನೆಯುಸಿರೆಳೆದದ್ದು ದುರಂತ.
     ಶ್ರೀ ನಾಗರಾಜರು ಬರೆದಿರುವುದು    ಹೋರಾಟಕಾಲದ ಸಮಗ್ರ ಚಿತ್ರಣವಲ್ಲ. ಒಬ್ಬ ಹೋರಾಟಗಾರನಾಗಿ ಅವರ ಅನುಭವಗಳನ್ನು ದಾಖಲಿಸಿದ್ದಾರೆ. ತುರ್ತು ಪರಿಸ್ಥಿಯ ದಿನಗಳನ್ನು ನೆನೆದುಕೊಂಡರೆ ಕಣ್ಣುಗಳು  ತೇವ ವಾಗುತ್ತವೆ. ಹೀಗೂ ಇತ್ತಾ! ಎಂದು ಅಂದಿನ ದಿನಗಳನ್ನು ಕಣ್ಣಾರೆ ಕಂಡ,ಹೋರಾಟದಲ್ಲಿ ನೇರವಾಗಿ ಅಥವಾ ಗುಪ್ತವಾಗಿ ಹೋರಾಡಿದ ನಮ್ಮಂತವರಿಗೇ ಅಚ್ಚರಿಯಾಗುತ್ತದೆ. ಸ್ವಾತಂತ್ರ್ಯ ಆಂಧೋಳನದಲ್ಲಿದ್ದ 99% ಜನರು ಇಂದು ನಮ್ಮೆದಿರು ಇಲ್ಲ. ಎರಡನೆಯ ಸ್ವಾತಂತ್ರ್ಯಹೋರಾಟವೆಂದೇ ಹೇಳಬಹುದಾದ 1975-77 ರ ಹೋರಾಟದಲ್ಲಿ ಪಾಲ್ಗೊಂಡವರಲ್ಲಿ ಕೆಲವರನ್ನಾದರೂ ನೋಡಬೇಕೆ?
ಹಾಗಾದರೆ ಬನ್ನಿ…..
ಸ್ಥಳ: ಶ್ರೀ  ರಾಮಕೃಷ್ಣ ವಿದ್ಯಾಲಯ ಸಭಾಂಗಣ
ದಿನಾಂಕ: 29.11.2012 ಗುರುವಾರ ಸಂಜೆ 6.00 ಕ್ಕೆ.

 ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಟದ ಕಥನ ಕೇಳ  ಬನ್ನಿ...


Monday, November 19, 2012

ದಿನಾಂಕ 18.11.2012 ರಂದು ನಡೆದ ವೇದಪಾಠ







ದಿನಾಂಕ 18.11.2012 ರಂದು ನಡೆದ ವೇದಪಾಠವನ್ನು ಇಲ್ಲಿ ಪ್ರಕಟಿಸಲಾಗಿದೆ. ಮೇಲ್ ಮೂಲಕ ವಿಳಾಸ ನೀಡಿರುವ    ಎಲ್ಲರಿಗೂ ಪಾಠವನ್ನು ಕಳಿಸಲಾಗಿದೆ. ತಲುಪದಿದ್ದವರು ತಿಳಿಸಿದರೆ ಪುನ: ಕಳಿಸಿಕೊಡಲಾಗುವುದು. ಹೊಸದಾಗಿ  ಸಾಪ್ತಾಹಿಕ ವೇದ ಪಾಠವನ್ನು ವೆಬ್ ಸೈಟ್ ಮೂಲಕ ಕಲಿಯಬಯಸುವವರು " ವೇದಪಾಠ" ಲೇಬಲ್ ಮೇಲೆ ಕ್ಲಿಕ್ ಮಾಡಿ ಮೊದಲ ಪಾಠದಿಂದ ಅನುಸರಿಸಬಹುದು. ಆರಂಭದಲ್ಲಿರುವ ಪರಿಚಯ ಉಪನ್ಯಾಸವನ್ನು ಕೇಳಿ ವೇದಪಾಠವನ್ನು ಆರಂಭಿಸುವುದು ಸೂಕ್ತ. ಹಾಸನದಲ್ಲಿ ನಡೆಯುತ್ತಿರುವ "ಎಲ್ಲರಿಗಾಗಿ ವೇದ ಪಾಠವು" ಪೂರ್ಣ ಉಚಿತವಾಗಿದ್ದು ಹಾಸನಕ್ಕೆ ಸಮೀಪ ಇರುವ ನಿಮ್ಮ ಮಿತ್ರರನ್ನು  ಪ್ರತ್ಯಕ್ಷ ವೇದಪಾಠದಲ್ಲಿ ಪಾಲ್ಗೊಳ್ಳುವಂತೆ ಮಾಡಿ. ನಮ್ಮ ವಿಳಾಸ:

ಈಶಾವಾಸ್ಯಮ್
ಶಕ್ತಿ ಗಣಪತಿ ದೇವಾಲಯ ರಸ್ತೆ
ಹೊಯ್ಸಳನಗರ ಪೋಲೀಸ್ ಕಾಲೊನಿ, ಹಾಸನ
ಸಂಪರ್ಕ ದೂರವಾಣಿ: 08172-250566/9663572406


ಅಪತ್ಯಂ ಮೇ ಕಳತ್ರಂ ಮೇ ಧನಂ ಮೇ ಬಾಂಧವಾಷ್ಚ ಮೇ |
ಜಲ್ಪಂತಮ್ ಇತಿ ಮರ್ತ್ಯಾಜಂ ಹಂತಿ ಕಾಲವೃಕೋ ಬಲಾತ್ ||

ನನ್ನ ಮಕ್ಕಳು, ನನ್ನ ಹೆಂಡತಿ, ನನ್ನ ಹಣ, ನನ್ನ ನೆಂಟರು, ಎಂದು ಒದರುತ್ತಾ ಇರುವ ಮನುಷ್ಯ ಎನ್ನುವ ಆಡನ್ನು ಕಾಲ ಎನ್ನುವ ತೋಳವು ಬಲಾತ್ಕಾರವಾಗಿ ಕೊಲ್ಲುತ್ತದೆ.

-ಸದ್ಯೋಜಾತಭಟ್ಟ