Pages

Thursday, February 7, 2013

“ಹಿಂದು” ಈ ದೇಶದ ಹೆಸರು


    ಮತ ಎಂದರೇನು? ಚುನಾವಣೆ ಬಂದಾಗ ಸಹಜವಾಗಿ ಕೇಳುವ ಮಾತು " ನಿಮ್ಮ ಮತ ಯಾರಿಗೆ? " ಅಂದರೆ ನೀವು ಯಾರನ್ನು ಒಪ್ಪುತ್ತೀರಿ? ನಿಮ್ಮ ಅಭಿಪ್ರಾಯವೇನು? ಮತ-ಧರ್ಮದ ಹೆಸರು ಬಂದಾಗಲೂ ಇದೇ ಆಧಾರದಲ್ಲಿ ಅರ್ಥಮಾಡಿಕೊಳ್ಳಬೇಕು. ಮತ ಎಂದೊಡನೆ ಅದಕ್ಕೊಬ್ಬ ಸ್ಥಾಪಕ/ಪ್ರವಾದಿ.          [ ಪ್ರವಾದಿ ಎಂದರೆ   ವಿಶೇಷ ವಾಗಿ ವಿಚಾರ ಮಂಡಿಸುವವನು] ಅದಕ್ಕೊಂದು ಆಧಾರ ಗ್ರಂಥ.
ಹೀಗೆ  ವಿಚಾರ ಮಾಡುವಾಗ ನಮ್ಮ ಮುಂದೆ ಕ್ರೈಸ್ತ, ಇಸ್ಲಾಮ್, ಜೈನ, ಬೌದ್ಧ.......ಹೀಗೆ ಹಲವು ಮತಗಳು ಕಣ್ಣೆದುರು ಬರುತ್ತ್ತವೆ. ಕ್ರೈಸ್ತ ಮತದ ಪ್ರವಾದಿ ಏಸೂಕ್ರಿಸ್ತ, ಆಧಾರ ಗ್ರಂಥ ಬೈಬಲ್,ಅನುಯಾಯಿಗಳು ಕ್ರೈಸ್ತರು,  ಇಸ್ಲಾಮ್ ಸ್ಥಾಪಕ/ಪ್ರವಾದಿ ಮೊಹಮದ್ ಪೈಗಂಬರ್.ಆಧಾರಗ್ರಂಥ ಖುರಾನ್. ಅನುಯಾಯಿಗಳು ಮುಸಲ್ಮಾನರು. ಹೀಗೆಯೇ ಜೈನರು, ಬೌದ್ಧರು, ಸಿಕ್ಖರು.....ಮುಂತಾದ ಉಧಾಹರಣೆಗಳು ಬರುತ್ತವೆ. 
 ಆದರೆ ಹಿಂದು ಹೆಸರು ಬಂದಾಗ ಇದು ಮತವೇ? ಇದರ ಸ್ಥಾಪಕರಾರು? ಇದರ ಧರ್ಮಗ್ರಂಥ ಯಾವುದು? ಎಂದು ವಿಚಾರ ಮಾಡಿದಾಗ  ಒಬ್ಬ ಪ್ರವಾದಿಗೆ ,ಒಂದು  ಮತಗ್ರಂಥಕ್ಕೆ ಇದು ಸೀಮಿತವಾಗುವುದಿಲ್ಲ. ಹಾಗಾಗಿ ಇದು ಒಂದು ಮತವೇ ಅಲ್ಲ   , ನಿಜವಾದ ಮತವೆಂದರೆ ಕ್ರೈಸ್ತ, ಇಸ್ಲಾಮ್ ಉಳಿದವರೇನಿದ್ದರೂ ನೂರಾರು ಜಾತಿಗಳಲ್ಲಿ ಹಂಚಿಹೋಗಿರುವವರು ಎಂದು ವಾದ ಮಾಡುವ ಜನರಿದ್ದಾರೆ. 
ಹಾಗಾದರೆ   " ಹಿಂದು "  ಎಂದರೇನು? 
ಹಿಂದು ಎಂಬುದು ಈ ದೇಶದ ಹೆಸರು, ಇಲ್ಲಿನ ಸಂಸ್ಕೃತಿಯ ಹೆಸರು, ಇಲ್ಲಿನ ಪರಂಪರೆಯ ಹೆಸರು. ಇಲ್ಲಿನ ಧರ್ಮದ ಹೆಸರು. ಧರ್ಮ ಎಂದೊಡನೆ ವಿಚಲಿತರಾಗುವ ಅಗತ್ಯವಿಲ್ಲ. ಧರ್ಮ ಎಂದರೆ ಜೀವನ ಪದ್ದತಿ. ಮಾನವೀಯ ಮೌಲ್ಯಗಳನ್ನು ಧರಿಸಿಕೊಂಡು ನಡೆಸುವ ಜೀವನ ಪದ್ದತಿ ಯೇ ಧರ್ಮ. ಆದರೆ ದುರ್ದೈವ ವೆಂದರೆ ಧರ್ಮದ ಹೆಸರಲ್ಲಿ ಈ ದೇಶದಲ್ಲಿ ಸಂಘರ್ಷ ನಡೆಯುತ್ತದೆ. 
ಸಾವಿರಾರು ಋಷಿಮುನಿಗಳು ತಪಸ್ಸನ್ನು ಮಾಡಿ ಕಂಡುಕೊಂಡ ಜೀವನ ಮಾರ್ಗವೇ ಧರ್ಮ. ಯಾಕೆ ಇದನ್ನು ಹಿಂದು ಧರ್ಮವೆಂದು ಕರೆದರು? ಯಾಕಾಗಿ ಇದನ್ನು ಹಿಂದು ದೇಶವೆಂದು ಕರೆದರು?
ಆಧಾರ ವಿದೆ.......
ಬೃಹಸ್ಪತಿ ಆಗಮದಂತೆ  ಹಿಮಾಲಯ ಪದದ “ಹಿ” ಮತ್ತು ಇಂದು ಸರೋವರದ  “ಇಂದು” ಪದಗಳೆ ಸೇರಿ “ಹಿಂದು” ಆಗಿದೆ. ಇವೆರಡೂ ಕೂಡಿ ನಮ್ಮ ಮಾತೃಭೂಮಿಯ ವಿಸ್ತಾರವನ್ನು ಹೇಳುತ್ತದೆ.
ಹಿಮಾಲಯಮ್ ಸಮಾರ್ಭ್ಯ ಯಾವದಿಂ ದು   ಸರೋವರಮ್
ತಮ್ ದೇವ ನಿರ್ಮಿತಮ್ ದೇಶಂ ಹಿಂದುಸ್ಥಾನಮ್ ಪ್ರಚಕ್ಷತೇ||

ಅಂದರೆ ದೇವತೆಗಳಿಂದ ನಿರ್ಮಿತಿಗೊಂಡು ಉತ್ತರದ ಹಿಮಾಲಯದಿಂದ ದಕ್ಷಿಣದ  ಹಿಂದು ಮಹಾಸಾಗರದ ವರಗೆ ಪಸರಿಸಿರುವ ಈ ನಾಡನ್ನು ಹಿಂದುಸ್ಥಾನ ಎಂದು ಕರೆಯುತ್ತಾರೆ.
ಅಂದರೆ ಈ ದೇಶದ ಹೆಸರು “ಹಿಂದುಸ್ಥಾನ”. ಇಲ್ಲಿರುವವರು “ಹಿಂದುಗಳು” .ಅಷ್ಟೆ. very simple. ಆದರೆ  “ಹಿಂದು” ಎಂಬ ಶಬ್ಧಕ್ಕೆ  ಯಾಕೆ ಇಷ್ಟು ಸಂಘರ್ಷ? ನಮ್ಮ ಒಬ್ಬ ನಾಯಕರಂತೂ ಹೇಳಿಯೇ ಬಿಟ್ಟರು “ ನನ್ನನ್ನು    ಕತ್ತೆ ಎಂದು ಬೇಕಾದರೂ ಕರೆಯಿರಿ, ನನ್ನನ್ನು “ಹಿಂದು” ಎಂದು ಮಾತ್ರ ಕರೆಯಬೇಡಿ. ಅವರನ್ನು ಕತ್ತೆ ಎಂದೇ ಜನರುಬೇಕಾದರೆ ಕರೆದುಕೊಳ್ಳಲಿ. ನಮ್ಮ ಮತ್ತೊಬ್ಬ ನಾಯಕರು ಹೇಳಿದ್ದರು “ Un fortunately I took birt as Hindu” ನಮ್ಮ ಧರ್ಮ ಶಾಸ್ತ್ರಗಳು ಹೇಳುತ್ತವೆ “ “ಇದು ದೇವ ನಿರ್ಮಿತ ದೇಶ-ಹಿಂದುಸ್ಥಾನ”  ಆದರೆ ನಮ್ಮ ನಾಯಕ ಶಿರೋಮಣಿ ಇಲ್ಲಿ ದುರ್ದೈವದಿಂದ ಹುಟ್ಟಿದರಂತೆ.
ಅಂದರೆ ರಾಜಕಾರಣಿಗಳು “ಎಲ್ಲಿ ಮುಸ್ಲಿಮ್ ಮತಗಳು ತಮಗೆ ಬರುವುದಿಲ್ಲವೋ ಎಂದು ಹೆದರಿ ಮುಸಲ್ಮಾನರನ್ನು ಓಲೈಸಲು “ ನಾನು ಹಿಂದುವೇ ಅಲ್ಲ, ನಾನು ಹಿಂದುವಾಗಿರುವುದು ನನ್ನ ದುರ್ದೈವ” ಎನ್ನುವ  ಇವರನ್ನು  ಮುಸಲ್ಮಾನರೂ ನಂಬುವುದಿಲ್ಲವೆಂಬ ಸತ್ಯ ಇವರಿಗೆ ಗೊತ್ತಿಲ್ಲ. “ ನಮ್ಮ ಓಟಿಗಾಗಿ ತಮ್ಮವರನ್ನೇ ಹೀಯಾಳಿಸುವ ಇವನನ್ನು ಗೆಲ್ಲಿಸಿದರೆ  ನಮಗೆ ಒಳ್ಳೆಯದು ಮಾಡುತ್ತಾನೆಂಬ ನಂಬಿಕೆ ಏನು? ಎಂದು ಮುಸಲ್ಮಾನರೂ ಇವನನ್ನು ದೂರವಿಡುವ ಕಾಲ ದೂರವಿಲ್ಲ.
ಓಟಿನ ರಾಜಕಾರಣ ಬದಿಗಿರಲಿ. ಆದರೆ “ನಾನು ಹಿಂದು” ಎನ್ನಲು ನಾಚಿಕೆ ಪಡಬೇಕೇ?
ಈ ವಿಷಯವನ್ನು  ಭಾರತೀಯರೆಲ್ಲರೂ ಗಟ್ಟಿಮಾಡಿಕೊಳ್ಳ  ಬೇಕು.  ಈ ದೇಶದಲ್ಲಿ ಹುಟ್ಟಿರುವ ನಾನು ಮೊದಲು “ಹಿಂದು” ಅಂದರೆ ಹಿಂದುಸ್ಥಾನದ ಪ್ರಜೆ. ಭಾರತೀಯನೆಂದರೂ ತಪ್ಪಿಲ್ಲ. ನಾವೇಕೆ ಭಾರತೀಯರೆಂದು ಕರೆಯಲ್ಪಡುತ್ತೇವೆಂಬುದಕ್ಕೆ  ಇಲ್ಲಿ ನೋಡಿ

ಉತ್ತರಮ್ ಯತ್ಸಮುದ್ರಸ್ಯ  ಹಿಮಾದ್ರೇಶ್ಚೈವ ದಕ್ಷಿಣಮ್
ವರ್ಷಮ್ ತದ್ ಭಾರತಮ್ ನಾಮ ಭಾರತೀ ಯತ್ರ ಸಂತತಿ:

ಸಾಗರದಿಂದ ಉತ್ತರಕ್ಕೆ ಹಿಮಾಲಯದಿಂದ ದಕ್ಷಿಣಕ್ಕೆ ಇರುವ ಭೂಮಿಗೆ ಭಾರತ ಎಂದು ಕರೆಯುತ್ತೇವೆ. ಭಾರತದಲ್ಲಿ ವಾಸಿಸುವವರು ಭಾರತೀಯರು. ಅಷ್ಟೆ.  ಹಿಂದುಸ್ಥಾನವೆಂದರೆ ಭಾರತ ,ಹಿಂದು ಎಂದರೆ ಭಾರತೀಯ. ಅಷ್ಟೆ. very simple.

ಹೀಗೆ ಋಷಿ ಮುನಿಗಳ   ತಪಸ್ಸಿನಿಂದ ದತ್ತವಾದ ಹಿಂದು ಧರ್ಮ ಏನು ಹೇಳುತ್ತದೆ....

"ಏಕಂ ಸತ್ ವಿಪ್ರಾ: ಬಹುದಾ ವದಂತಿ"

ಸತ್ಯ ಎಂಬುದು ಒಂದೇ, ಅದನ್ನು ಪಂಡಿತರು ಬೇರೆ ಬೇರೆ ರೀತಿಯಲ್ಲಿ ಹೇಳುತ್ತಾರೆ. ಬಹಳ ಸರಳವಾದ ಮಾತಿದು. ಅದರರ್ಥ ಭಗವಂತನೆಂಬುವನು ಒಬ್ಬನೇ. ಅವನನ್ನು ಬೇರೆ ಬೇರೆ ಹೆಸರುಗಳಿಂದ ಕರೆಯುವರು."ದೇವನೊಬ್ಬ ನಾಮ ಹಲವು" ಎಂದರೂ ಇದೇ ಅರ್ಥ ತಾನೇ.
 ನಮ್ಮ ಋಷಿ ಮುನಿಗಳು ಕಂಡುಕೊಂಡ   ಸತ್ಯವಿದು.  ದೇವರನ್ನು ಯಾವ ಹೆಸರಿಂದಲಾದರೂ ಕರೆಯಿರಿ. ಅವನನ್ನು ಬ್ರಹ್ಮ, ವಿಷ್ಣು, ಮಹೇಶ್ವರ ನೆನ್ನಿ. ಕ್ರಿಸ್ತನೆನ್ನಿ. ಕೃಷ್ಣನೆನ್ನಿ. ಅಲ್ಲಾ ಎನ್ನಿ,...ಮಾರಮ್ಮನೆನ್ನಿ ಯಾವ ಹೆಸರಿನಲ್ಲಾದರೂ ಕರೆಯಿರಿ  "ಏಕಂ ಸತ್" .ಸತ್ಯ ಮಾತ್ರ ಒಂದೇ. ಆ ಭಗವಂತ ಮಾತ್ರ ಒಬ್ಬನೇ. ಇದು ಹಿಂದುಧರ್ಮದ  ವೈಶಿಷ್ಠ್ಯ. 
ನನ್ನನ್ನು ನಂಬು, ನನ್ನಿಂದ ಮಾತ್ರವೇ ಮೋಕ್ಷ, ಎಂಬ ವಿಚಾರಕ್ಕೆ ಹಿಂದು ಧರ್ಮದಲ್ಲಿ ಆಸ್ಪದವೇ ಇಲ್ಲ.  ವೇದವು ಕರೆ ಕೊಡುತ್ತದೆ......

ಯತ್ ಪೂರ್ವ್ಯಂ  ಮರುತೋ ಯಚ್ಚ ನೂತನಂ ಯದುದ್ಯತೇ  ವಸವೋ ಯಚ್ಚ ಶಸ್ಯತೇ|
ವಿಶ್ವಸ್ಯ ತಸ್ಯ ಭವಥಾ ನವೇದಸ: ಶುಭಂ ಯಾತಾಮನು ರಥಾ ಅವೃತ್ಸತಾ|| 
ಮನುಷ್ಯನು ಸುಖವಾಗಿ ನೆಮ್ಮದಿಯಿಂದ ಸುಂದರ ಬದುಕನ್ನು ಹೊಂದಬೇಕಾದರೆ ಯಾವ ಮಾರ್ಗದಲ್ಲಿ ಹೋಗಬೇಕೆಂಬುದನ್ನು ಈ ವೇದಮಂತ್ರವು ಅತ್ಯಂತ ಮನೋಜ್ಞವಾಗಿ ತಿಳಿಸಿಕೊಡುತ್ತದೆ. ಮಂತ್ರದ ಭಾವಾರ್ಥ ನೋಡಿ… 
ಹೇ ಮನುಜರೇ, ನಿಮ್ಮ ಬದುಕು ಹೇಗೆ ಸಾಗಿದರೆ ಸುಂದರವಾಗಬಲ್ಲದೆಂಬುದಕ್ಕೆ ಈ ಕೆಲವು ವಿಚಾರಗಳನ್ನು ಗಮನವಿಟ್ಟು ಕೇಳಿ….
ಯಾವುದು ಪ್ರಾಚೀನವೋ ಮತ್ತು ಯಾವುದು ನೂತನವೋ?, ಯಾವುದು  ನಿಮ್ಮ ಅಂತ:ಕರಣದಿಂದ ಉದ್ಭವಿಸುವುದೋ, ಹಾಗೂ   ಯಾವುದು ಶಾಸ್ತ್ರರೂಪದಲ್ಲಿ ಉಪದೇಶಿಸಲ್ಪಡುತ್ತದೋ ಎಲ್ಲಕ್ಕೂ ಕಿವಿಗೊಡು….ಆದರೆ ಯಾವುದು ನಿಮ್ಮನ್ನು ಕಲ್ಯಾಣಮಾರ್ಗದಲ್ಲಿ ನಡೆಸುತ್ತದೋ ಅದರ ಹಿಂದೆ ನಿಮ್ಮ ಜೀವನ ರಥಗಳು ಸಾಗಲಿ…..
ವೇದದ ಈ ಕರೆ ಯಾರಿಗೆ ಬೇಡ ?  ಯಾವ ಕಾಲಕ್ಕೆ ಬೇಡ ?  ಯಾವ ದೇಶಕ್ಕೆ ಬೇಡ? .. ಯಾವುದೇ ಮತ ಗ್ರಂಥಗಳು ಕೊಡುವ ಕರೆಗೂ ವೇದದ ಕರೆಗೂ ತುಲನೆ ಮಾಡುವುದು ಕಷ್ಟವೇನಲ್ಲಾ! ಅಲ್ಲವೇ?  ಈ ಮಾರ್ಗದಲ್ಲಿ ಹೋದರೆ ಮಾತ್ರ ನಿನಗೆ ಮುಕ್ತಿ!! ಎಂದು ವೇದವು ಕರೆ ಕೊಡಲಿಲ್ಲವೆಂಬುದನ್ನು ವಿಚಾರವಂತರು ಗಮನಿಸಬೇಕು. ಅಲ್ಲವೇ?
 ವೇದವನ್ನಾಗಲೀ ಇತರ ಯಾವುದೇ ಪ್ರಾಚೀನ ಗ್ರಂಥವನ್ನಾಗಲೀ ನೋಡಿದಾಗ  ಇಡೀ ವಿಶ್ವದ ಜನರು ಒಂದೇ ಕುಟುಂಬದವರು ಎಂದು ಸಾರುತ್ತದೆ. " ಸರ್ವೇ ಭದ್ರಾಣಿ ಪಶ್ಯಂತು ,ಮಾ ಕಷ್ಚಿತ್ ದು:ಖ ಭಾಗ್ಭವೇತ್" ಎಂದು ಕರೆಕೊಡುವ ಮಂತ್ರಗಳಲ್ಲಿನ ಅರ್ಥ ಬಲು ವಿಶಾಲ ಮನೋಭಾವನೆ ಹೊಂದಿದೆ.

“ಹಿಂದು” ಮತವಾಗಿದ್ದು ಯಾವಾಗ?

ನಾನು ಮುಂಚೆಯೇ ತಿಳಿಸಿದಂತೆ  ಹಿಂದು ಎನ್ನುವುದು  ನಮ್ಮ ರಾಷ್ಟ್ರೀಯತೆಯ ಹೆಸರು. ಈ ರಾಷ್ಟ್ರದ ಹೆಸರು. ಹಿಂದುಸ್ಥಾನದಲ್ಲಿ ಹುಟ್ಟಿದವ ಹಿಂದು ಅಷ್ಟೆ.  ಹಾಗಾದರೆ ಇಲ್ಲಿ ಮುಸಲ್ಮಾನರು, ಕ್ರೈಸ್ತರು, ಸಿಕ್ಖರು, ಭೌದ್ಧರು ಮುಂತಾದವರು ಈ ದೇಶದಲ್ಲಿ ಹುಟ್ಟಿಲ್ಲವೇ? ಅವರೆಲ್ಲಾ ಹಿಂದುಗಳೇ?
ಹೌದು , ಮೊದಲು ಎಲ್ಲರೂ ಹಿಂದುವೇ, ಆನಂತರ  ಅವರವರ ಮತವನ್ನು ಹೇಳಿಕೊಳ್ಳುವುದರಲ್ಲಿ ತಪ್ಪಿಲ್ಲ. “ನಾನು ಹಿಂದು” ನನ್ನ ಪೂಜಾಪದ್ದತಿಯಂತೆ ನಾನು ಕ್ರೈಸ್ತ, ನಾನು ಮುಸ್ಲಿಮ್……ಯಾರು ಬೇಡವೆಂದವರು. “ಏಕಂ ಸತ್, ವಿಪ್ರಾ ಬಹುದಾ ವದಂತಿ” ಎಂದು ತಾನೇ ನಮ್ಮ ಋಷಿಮುನಿಗಳು ಹೇಳಿರುವುದು. ಯಾರೇ ಆಗಲೀ ನಾನು  ಕ್ರೈಸ್ತ ಮತೀಯ, ನಾನು ಮುಸ್ಲಿಮ್ ,ಎಂದು ಹೇಳಿಕೊಳ್ಳುವುದರಲ್ಲಿ ತಪ್ಪಿಲ್ಲ. ಅದು ಅವರ ಪೂಜಾ ಪದ್ದತಿ. “ದೇವನೊಬ್ಬ ನಾಮ ಹಲವು, ಅಷ್ಟೆ. ಕೃಷ್ಣನೆನ್ನುವರು ಕೃಷ್ಣ ನೆನ್ನಲಿ, ಕ್ರಿಸ್ತ ನೆನ್ನುವರು ಕ್ರಿಸ್ತ ಎನ್ನಲಿ. ಆದರೆ ಎಲ್ಲರೂ ಭಾರತೀಯ ಎನ್ನಬಹುದು ಅಥವಾ ಹಿಂದು ಎನ್ನಬಹುದು. ಎರಡೂ ಅಷ್ಟೇ ಸಮಾನ ಪದಗಳು.
ಸಾಮಾನ್ಯವಾಗಿ  ಪೂರ್ವದಿಂದಲೂ ನಮ್ಮನ್ನು ಆರ್ಯರು, ಸನಾತನಿಗಳು, ವೈದಿಕರು ಎನ್ನುವ ರೂಢಿ   ಯಿತ್ತು. ಆರ್ಯ ಎಂದರೆ ಶ್ರೇಷ್ಠ ಎಂದು ಅರ್ಥ ಅಷ್ಟೆ. ದೇವನಿರ್ಮಿತ ದೇಶದಲ್ಲಿರುವವರೆಲ್ಲರೂ ಆರ್ಯರೇ ಹೌದು. ನಮ್ಮದು ಅತ್ಯಂತ ಪುರಾತನವಾದ  ಸಂಸ್ಕತಿಯಾದ್ದರಿಂದ “ಸನಾತನಿ” ಎನ್ನುವ ಹೆಸರು ಬಂತು.ವೇದವನ್ನು ನಂಬುವವರಾದ್ದರಿಂದ ವೈದಿಕರೆಂದೂ ಕರೆಯುತ್ತಾರೆ.
ಸರಿ, ಹಾಗಾದರೆ ಹಿಂದು ಮತವಾಗಿದ್ದು, ಯಾವಾಗ?
ಯಾವಾಗ  ಕ್ರೈಸ್ತರು,  ಮುಸ್ಲ್ಮಾನರು, ತಮ್ಮ ತಮ್ಮ ಮತಗಳಿಗೆ ಇಲ್ಲಿನ ಸನಾತನಿಗಳನ್ನು ಮತಾಂತರ ಮಾಡುತ್ತಾ ಹೋದರು, ಆಗ ಅನಿವಾರ್ಯವಾಗಿ ತಮ್ಮನ್ನು ತಾವು “ಹಿಂದು ಮತೀಯ ” ಎಂಬ ಮತದ ಹೆಸರಲ್ಲಿ ಸಂಘಟಿತರಾಗುತ್ತಾ ಹೋದರು. ಆದರೆ ಇಂದು “ಹಿಂದು” ಎಂಬುದು ರಾಷ್ಟ್ರವಾಚಕವಾಗುವುದರ ಬದಲು  ಮತದ ಹೆಸರಲ್ಲಿ ಹೆಚ್ಚು ಉಪಯೋಗವಾಗುತ್ತಿದೆ.
ಆದರೆ ಈ ದೇಶದಲ್ಲಿಹುಟ್ಟಿರುವ ಎಲ್ಲರೂ ಕೂಡ ಅವರ ಪೂಜಾ ಪದ್ದತಿ ಯಾವುದೇ ಇರಲಿ, ತಮ್ಮನ್ನು ತಾವು  ರಾಷ್ಟ್ರವಾಚಕವಾದ “ಹಿಂದು” ಎಂದು ಕರೆದುಕೊಳ್ಳುವುದರಲ್ಲಿ ಹೆಮ್ಮೆ ಪಡಬೇಕು. ಕಾರಣ ಅಂಥಹ ದೇವನಿರ್ಮಿತ ದೇಶದಲ್ಲಿ ನಮ್ಮ ಜನ್ಮ ವಾಗಿದೆ.  ಇಲ್ಲಿ ಯಾರೂ ಮೇಲಲ್ಲ, ಯಾರೂ ಕೀಳಲ್ಲ. 

Wednesday, February 6, 2013

ದೂರವಾಣಿ ಮೂಲಕ ವೇದಮಂತ್ರ ಕಲಿಯುತ್ತಿರುವ ಅಕ್ಷಯ


ದೂರವಾಣಿ ಮೂಲಕ ಹಾಸನದ ತಾತನಿಂದ ಕಲಿತ ಮಂತ್ರಗಳನ್ನು ಹೇಳುತ್ತಿರುವ ಬೆಂಗಳೂರಿನಲ್ಲಿರುವ ಮೊಮ್ಮಗಳು ಅಕ್ಷಯ:



-ಬಿಂದು ರಾಘವೇಂದ್ರ, ಬೆಂಗಳೂರು.

Wednesday, January 30, 2013

ಭಗವಂತನ ಅವತಾರ

ಭಗವಂತನು ಯಾಕೆ ಅವತಾರವನ್ನು ತಾಳಬೇಕು?ಅದರ ಅವಶ್ಯಕತೆ ಏನಿದೆ?ಸಕಲ ಚರಾಚರಗಳಲ್ಲಿಯೂ ಸ್ವಯಂ ಪ್ರಕಾಶಿತನಾದ ಪರಮಾತ್ಮನು ತಾನು ತನ್ನ ಸಂಕಲ್ಪ ಮಾತ್ರದದಿಂದಲೇ ಸಕಲ ಕಾರ್ಯಗಳನ್ನೂ ಮಾಡಿಸಬಲ್ಲಂಥಹ ಶಕ್ತಿಯೇ ಸ್ವಯಂ ತಾನಾಗಿದ್ದರೂ,ಯಾವುದೋ ಜೀವಿಯಾಗಿ ಮೃತ್ಯುಲೋಕದಲ್ಲಿ ಜನ್ಮ ಎತ್ತಲು ಕಾರಣವೇನು?ಅದರ ಅವಶ್ಯಕತೆ ಇದೆಯೇ?


ಧರ್ಮ ಎನ್ನುವುದು ಒಂದೇ ಅದನ್ನು ಬೇರೆ ಬೇರೆ ಜನ ಸಮುದಾಯಗಳು ತಮ್ಮ ಸಮಾಜಕ್ಕೆ, ದೇಶಕ್ಕೆ ಹಾಗೂ ಅನುಕೂಲಕ್ಕೆ ಹೇಗೆ ಬೇಕೋ, ಅದಕ್ಕೆ ತಕ್ಕಂತೆ ಅಳವಡಿಸಿಕೊಂಡಿದೆ.ಕ್ಷಣಿಕ ಸತ್ಯ, ಅರ್ಧ ಸತ್ಯ, ಪೂರ್ಣ ಸತ್ಯಗಳಲ್ಲಿ, ಸತ್ಯದ ಪ್ರಮಾಣ ಬೇರೆ ಬೇರೆ ಯಾದರೂ, ಅದರ ಸ್ವರೂಪ ಬದಲಾಗುವುದಿಲ್ಲ.ಹಾಗಾಗಿ ಕಲ್ಪನೆಗೂ ಹಾಗೂ ಸತ್ಯಕ್ಕೂ ವ್ಯತ್ಯಾಸವಿದೆ.ದೇವರ ಸ್ವರೂಪ ನಮಗೆ ಕಲ್ಪನೆಗೂ ಸಿಗದಂಥದ್ದು ಇರಬಹುದು.ಆದರೆ,"ನಾಸ್ತಿಕ ಧರ್ಮ" ಎಂಬುದು ಇಲ್ಲ.ಎಲ್ಲರೂ ಒಂದೆಲ್ಲ ಒಂದು ದಿನ ಶುದ್ಧ ನಾಸ್ತಿಕ ತತ್ವಕ್ಕೆ ಹೋಗಿ ತಲುಪಬೇಕಾಗುತ್ತದೆ ಅದೇ ನಶ್ವರ ಸಿದ್ಧಾಂತ.ಆಸ್ತಿಕನಾಗಲೀ,ನಾಸ್ತಿಕನಾಗಲೀ ನಂಬಿಕೆಗಳು ಬೇರೆಯಾದರೂ, ತಲುಪಬೇಕಾದ ಗುರಿ ಒಂದೇ ಆಗಿರುತ್ತದೆ.ನಮ್ಮ ಕುರುಡುತನದಲ್ಲಿ ಆನೆಯ ಸ್ವರೂಪ ವಿವರಿಸಲಾಗದಿದ್ದರೂ ಕೂಡ,ಜ್ಞಾನಿಗಳು, ಋಷಿ, ಮುನಿಗಳು ತಮ್ಮ ಅನ್ಥಶಕ್ತಿಯಿಂದ ಅದನ್ನು ನಮಗೆ ತಿಳಿಯಪಡಿಸಿದ್ದಾರೆ.ಆ ಆಘಾಧತೆಯೂ, ಅತಿ ಸೂಕ್ಷಮವೂ, ಆದಿ, ಅಂತ್ಯ, ರಹಿತವಾದ ದಿವ್ಯ ಶಕ್ತಿಯನ್ನು ಸಾಕಾರ ಮಾಡಿಕೊಂಡವರಿಗೆನೂ ಕಡಿಮೆ ಇರುವುದಿಲ್ಲ ಏಕೆಂದರೆ ಬೇರೆಲ್ಲಾ ದೇಶಗಳು ಕರ್ಮಭೂಮಿಯಾಗಿದ್ದರೆ ಭಾರತ ಧರ್ಮಭೂಮಿ.ಅದಕ್ಕೆ ನಮ್ಮಲ್ಲಿ ಋಷಿ ಪರಂಪರೆ ಇತ್ತು.ಹಾಗೆಯೇ ಅವತಾರಗಳಿಗೂ ಕೂಡ ನಿದರ್ಶನವಿದೆ.ಅದನ್ನು ಆತ್ಮಜ್ನಾನಿಗಳೇ ನಮಗೆ ತಿಳಿಸಿರುತ್ತಾರೆ. "ಅವತಾರ" ಎನ್ನುವುದು ಬರೀ ಕಲ್ಪನೆಯಲ್ಲ.ಆದರೆ ಏಕೆ ಭಗವಂತ ಅವತಾರ ತೆಗೆದುಕೊಳ್ಳುತ್ತಾನೆ? ಎಂದರೆ,ಮನುಷ್ಯಮಾತ್ರರಾಗಿ ರೂಪದಲ್ಲಿದ್ದರೂ,ಮಾನವ ರೂಪದಲ್ಲಿ ನಡೆಸುತ್ತಿರುವ ಅಧರ್ಮಿಗಳಿಗೆ ಮಾನವ ರೂಪದಲ್ಲಿಯೇ ಪಾಠಕಲಿಸಲೆಂದು.ಆಗ ಮಾತ್ರಾ ಅಧರ್ಮಿಗಳ ದುರಹಂಕಾರ ಅಳಿಯಲು ಸಾಧ್ಯ ಎಂದು.ಭಗವಂತನಿಂದಾ ಬೇರೆಯಾದ ಆತ್ಮ ತಾನು ಯಾರೆಂದು ಅರಿತು ಮತ್ತೆ ಅವನಲ್ಲಿ ಸಾಯುಜ್ಯ ಹೊಂದುವವರೆಗೆ, ಪ್ರತಿ ಜೀವಿಯೂ ತಾವು ಹೊಂದಿರುವ ದೇಹದ ಇಂದ್ರಿಯಗಳ ವಾಸನೆಯಿಂದಾ, ಮನಸ್ಸು, ಬುದ್ಧಿಯಿಂದಾ ಮಾಡಲ್ಪಟ್ಟ ಕರ್ಮಾನುಸಾರವಾಗಿ, ಅವರವರ ಫಲಗಳನ್ನು ಅನುಭವಿಸುತ್ತಾರೆ. ಅದರಲ್ಲಿ ಭಗವಂತನ ಹಸ್ತಕ್ಷೇಪ ಇರುವುದೇ ಇಲ್ಲ.ಇಲ್ಲದಿದ್ದರೆ ಅಧರ್ಮ ಮಾಡುವ ಪ್ರಶ್ನೆಯೇ ಉದ್ಭವಿಸುತ್ತಿರಲಿಲ್ಲ.ಹಾಗಾಗಿ ಅವತಾರ ಬರೀ ಕಲ್ಪನೆಯಲ್ಲ. ಅದು ನಿಜವಾದ ಸಂಗತಿ.ಮನುಷ್ಯನಿಗೆ ತಾನು ಎಕೆ ಹುಟ್ಟಿದ್ದೇನೆ ಎಂಬ ಅರಿವು ಯಾರಿಗೂ ಇರುವುದಿಲ್ಲ. ಕೇವಲ ಹುಡುಕಾಟ ಇರುತ್ತದೆ ಅಷ್ಟೇ. ಅದಕ್ಕಾಗಿಯೇ ಈ ಮನುಷ್ಯ ಎಂಬ ಪ್ರಾಣಿ ಏನು ಮಾಡಬೇಕೆಂದು ತೋಚದೆ ತೋಚಿದ್ದನ್ನೆಲ್ಲಾ ಮಾಡುತ್ತಿರುತ್ತಾನೆಆದ್ದರಿಂದಲೇ ವೈವೀಧ್ಯತೆ ಇರುತ್ತದೆ.ಏಕೆಂದರೆ ಅದೇ ಪರೋಕ್ಷವಾದ ಹುಡುಕಾಟವಾಗಿರುತ್ತದೆ. ಆದರೆ,ಅವತಾರಿಗಳಲ್ಲಿ ತಮ್ಮ ಜನ್ಮದ ಉದ್ದೇಶದ ಅರಿವು ಸ್ಪಷ್ಟವಾಗಿ ಇರುತ್ತದೆ. ಹಾಗೂ ಪ್ರಕೃತಿಯ ಅಧೀನವಾಗಿ ಇರುವುದಿಲ್ಲ. ಇದೇ ಅವತಾರಿಗಳಿಗೂ ನಮ್ಮ ನಿಮ್ಮಂಥ ಹುಲುಮಾನವರಿಗೂ ಇರುವ ವ್ಯತ್ಯಾಸ.

Tuesday, January 29, 2013

ವಿವೇಕವಾಣಿ




     ವೇದಗಳೆಂದರೆ ಗ್ರಂಥಗಳಲ್ಲ. ಅವು ವಿವಿಧ ಅವಧಿಗಳಲ್ಲಿ ವಿವಿಧ ವ್ಯಕ್ತಿಗಳು ಸಂಗ್ರಹಿಸಿದ ಆಧ್ಯಾತ್ಮಿಕ ನಿಯಮಗಳ ಭಂಡಾರ. ಗುರುತ್ವಾಕರ್ಷಣ ಶಕ್ತಿಯ ನಿಯಮವನ್ನು ಕಂಡು ಹಿಡಿಯುವ ಮೊದಲೇ ಅದು ಹೇಗೆ ಇದ್ದಿತ್ತೋ ಮತ್ತು ಮಾನವ ಜನಾಂಗ ಅದನ್ನು ಮರೆತರೂ ಅದು ಹೇಗೆ ಇರುವುದೋ, ಹಾಗೆಯೇ ಆಧ್ಯಾತ್ಮಿಕ ಪ್ರಪಂಚವನ್ನು ನಿಯಂತ್ರಿಸುವ ಈ ನಿಯಮಗಳೂ ಇರುವುವು.
     By the Vedas no books are meant. They mean the accumulated treasury of spiritual laws discovered by different persons in different times. Just as the law of gravitation existed before its discovery, and would exist if all humanity forgot it, so is it with the laws that govern the spiritual world.
-ಸ್ವಾಮಿ ವಿವೇಕಾನಂದ.
     ಆಧ್ಯಾತ್ಮಸಾಧನೆಯ ಉತ್ತುಂಗ ಸ್ಥಿತಿ ತಲುಪಿದ್ದ ಶ್ರೀ ರಾಮಕೃಷ್ಣರ ಪೂರ್ಣಾನುಗ್ರಹ ಪಡೆದ ವಿವೇಕಾನಂದರು ಶಾಸ್ತ್ರಾಧ್ಯಯನ ಸಂಪನ್ನರೂ ಆಗಿದ್ದರು. ಸಮಾಜದೊಂದಿಗೆ ಏಕೀಭಾವ ಹೊಂದಿದ್ದ ಅವರು ಆ ವಿಷಯದಲ್ಲಿ ಎಷ್ಟು ತಾದಾತ್ಮ್ಯ ಹೊಂದಿದ್ದರೆಂದರೆ, ಅವರಿಗೆ ಅದು ಕೇವಲ ವೈಚಾರಿಕ ಧೋರಣೆಯಾಗಿರದೆ ವೈಯಕ್ತಿಕ ಶ್ರದ್ಧೆಯ ವಿಷಯವೂ ಆಗಿತ್ತು. ಈ ಕಾರಣದಿಂದಲೇ ಅವರು ಇಹಲೋಕ ತ್ಯಜಿಸಿ ನೂರು ವರ್ಷಗಳ ಮೇಲಾದರೂ ಇಂದಿಗೂ ಅವರ ವಿಚಾರಗಳು ಜೀವಂತವಾಗಿವೆ ಮತ್ತು ಮಾರ್ಗದರ್ಶಿಯಾಗಿವೆ.

Monday, January 28, 2013

ಸದ್ಭಾವನೆ !


Sudhakar sharma1.JPG

ಮನದಲ್ಲಿ ಹೊಕ್ಕ ವಿಚಾರ ನಮ್ಮಲ್ಲಿ ಏನೆಲ್ಲಾ ಭಾವನೆ ಉಂಟು ಮಾಡಬಹುದು! ನೀವೇ  ನೋಡಿ. ಶ್ರೀ  ವಿಶ್ವನಾಥ ಕಿಣಿಯವರು ವಾಸವಿರುವುದು ಪೂನಾದಲ್ಲಿ. ವೇದಸುಧೆಯಲ್ಲಿ ಸುಧಾಕರ ಶರ್ಮರ ಉಪನ್ಯಾಸಗಳನ್ನು  ಕೇಳಿ, ಅವರ ಭಾವಚಿತ್ರವನ್ನು ನೋಡಿ ಅವರ ಮನಸ್ಸಿನಲ್ಲಿ ಹೇಗೆ ಅನ್ನಿಸಿದೆ, ನೋಡಿ.

-ಹರಿಹರಪುರ ಶ್ರೀಧರ್



Aadaraneeya Shreedhar,

From day one of listening and viewing of Shree Sudhakar Sharma, my mind is saying like -
You know this person, he is familiar to you; like that.
Some 2 months back it was like a flash to me - The similarity is with none other than with
the idol of Lord Shree Vedavyasa, which was worshiped by our Gurus and society.
Kindly view the attachment. the similarity i found were

1. Hair and beard style

2. Sitting posture including the aasana and mudra of hand.

This may feel odd as we are speaking of non-vigraha aradhane and the similarity is non other than lord Vedavyasa 

This is the main reason i haven't sent you the mail so far. But I couldn't resist my self as both have close reference to the 'Veda'.


Thanxz and Regards