ತೋಚಿದ್ದು-ಗೀಚಿದ್ದು-ಭಾಗ-1
ನಾನೆಂಬುದು ನಾನಲ್ಲ,
ನನದೆಂಬುದು ನನದಲ್ಲ,
ನನ್ನವರೆಂಬುವರು ನನ್ನವರಲ್ಲ,
ಆದರೂ ಈ ಸತ್ಯ ನಾ ತಿಳಿದಿಲ್ಲ!
*** *** ***
ಬದುಕುವಾಸೆ ವರ್ಷ ನೂರು,
ಅಂದು ಕೊಂಡದ್ದು ನೂರು,
ಕನಸು ಕಂಡಿದ್ದು ನೂರು,
ಆದರೂ ಆಗಲಿಲ್ಲ ಚೂರು-ಪಾರು!
*** *** ***
ಬರುವಾಗ ಒಂಟಿ,
ಹೋಗುವಾಗ ಒಂಟಿ,
ನಡುವಿನಲೇಕೆ ಈ ಜಂಟಿ?
*** *** ***
ನನದೆಲ್ಲವೂ ಸರಿ
ನಾ ನುಡಿವುದೆಲ್ಲವೂ ಸರಿ
ನಾ ಮಾಡುವುದೆಲ್ಲವೂ ಸರಿ
ಹೌದಲ್ಲವೇ? ನೀವೇನಂತೀರಿ?
ಖಂಡಿತಾ ಅಲ್ಲ! ಸಧ್ಯಕ್ಕೆ ನೀ ಪಕ್ಕಕ್ಕೆ ಸರಿ!!
*** *** ***
ನನ್ನ ನಿತ್ಯಾನುಷ್ಠಾನದ ಮೂಲ ಜಪಮಂತ್ರ 'ಬೇಕು'
ಎಲ್ಲವೂ ಬೇಕು, ಎಲ್ಲವೂ ನನಗೇ ಬೇಕು,
ಆದರೂ ತಿಳಿಯದಾಗಿದೆ, 'ನನಗೇನು ಬೇಕು'
ಯಾರಾದರೂ ತಿಳಿಸುವಿರಾ ಈ ಬೇಕಿಗೊಂದು ಬ್ರೇಕು?
*** *** ***
ಬದುಕಬೇಡ ನೀ ನೂರು ವರುಷ
ಖಂಡಿತಾ ತರಲಾರದು ಅದು ನಿನಗೆ ಹರುಷ
ಬದುಕಾಗುವುದು ನಿತ್ಯ ಗೋಳಾಟದ ಬೇಗುದಿ
ತೊಲಗಿದರೆ ಸಾಕಪ್ಪಾ ಎಂದು ಕಾಯ್ವರೇ ಬಲು ಮಂದಿ!
*** *** ***
ದಿನಾ ನಡೆಯುತ್ತೇನೆ, ದಿನಾ ಎಡವುತ್ತೇನೆ
ದಿನಾ ನುಡಿಯುತ್ತೇನೆ, ದಿನಾ ತೊದಲುತ್ತೇನೆ
ದಿನಾ ಅಳುತ್ತೇನೆ, ದಿನಾ ನಗುತ್ತೇನೆ
ದಿನದಿನದ ಬಾಳಿನ ಅನುಭವವೆ ಇದೇ ತಾನೆ?
*** *** ***
ಒಳಗೆ ಜ್ವಾಲಾಮುಖಿ, ಹೊರಗೆ ಹಸನ್ಮುಖಿ,
ಒಳಗೆ ನಾನಾ ಜಂಜಾಟದ ನಡುವೆಯೂ ಜೀವನ್ಮುಖಿ,
ಬದುಕುವುದು ನನಗಲ್ಲ, ಪರರಿಗೆ,
ಅದುವೇ ಸದಾ ಇರಲಿ ನನ ಪಾಲಿಗೆ!
*** *** ***
ಕಡೆಗಣಿಸಬೇಡ ನಿನ್ನೀ ದೇಹವನು
ಅದೇ ಆ ಭಗವಂತನ ಅನುಪಮ ಸೃಷ್ಠಿ
ಸದಾ ಇರಲಿ ಸ್ವಸ್ಥ ದೇಹ, ಸ್ವಸ್ಥ ಮನಸ್ಸು
ಅದುವೇ ಇಹಲೋಕದಿಂದ ಪರಲೋಕಕ್ಕೊಯ್ಯುವ ಸಾಧನ ಸಂಪತ್ತು!
*** *** ***
ಸುರಿಯುತಿಹುದು ಮಳೆ
ತಂಪಾಗಿಹುದು ಇಳೆ
ಬಸಿರೊಡೆಯಿತು ಧರೆ,
ಹೊದ್ದಿತು ಹಸಿರಿನಾ ಝರಿ-ಸೀರೆ!
*** *** ***
ನಿನಗಿರಲು ಅಧಿಕಾರ
ಇರುವುದು ವಂದಿ ಮಾಗದರ ಜೈಜೈಕಾರ
ಅಧಿಕಾರ ಹೋದೊಡನೆ ವಂದಿ ಮಾಗದರು ಮಾಯ
ಕಾಲ್ಗೆ ಬೀಳುವವರಿಲ್ಲ, ಕಾಲೆಳೆಯುವವರೇ ಎಲ್ಲ!
*** *** ***
ಒಳಗೆ ತುಂಬಿದಾ ನಗು, ಹೊರಬಾರದ ನಗು,
ಒಳಗೆ ತುಂಬಿದಾ ಹರುಷ, ಹೊರಗೆ ಬರೀ ವರ್ಷ
ಒಳಗೆ ತುಂಬಿದಾ ಭಾವನೆಗಳು, ಹೊರಗೆ ಬರೀ ಗೋಜಲುಗಳು
ಉಕ್ಕಬಾರದೇ ಈ ಅಗ್ನಿಪರ್ವತ, ಉಗುಳಬಾರದೇ ತನ್ನೊಡಲಿನ ತುಡಿತಗಳ?
*** *** ***
ಒಳಗೊಂದು ಮುಖ, ಹೊರಗೆ ನಾನಾ ಮುಖ
ಒಳಗೆ ಒಂದೇ ಭಾವನೆ, ಹೊರಗೆ ಹರಿವುದು ನಾನಾ ಭಾವನೆ
ಒಳಗೆಲ್ಲ ತಳಮಳ-ಕಳವಳ, ಹೊರಗೆ ಮಾತ್ರ ಫಳಫಳ
ಒಳಗೆಲ್ಲ ಬರೀ ಬೇಗುದಿ, ಹೊರಗೆ ತೋರಿಕೆಯ ನೆಮ್ಮದಿ
ಒಳಗಿದೆ ಎಡವಿದ ನೋವು, ಹೊರಗೆ ಮಾತ್ರ ಸತ್ಯದ ಸಾವು
ನನಗಿರಲಿ ಎಲ್ಲವೂ, ಉಳಿದವರಿಗೇಕೆ ಅನ್ಯಥಾ ಎಲ್ಲವೂ?
*** *** ***
ನನಗ್ಯಾರಿಲ್ಲ ನಾನೊಬ್ಬನೇ ಎಲ್ಲ
ಎಲ್ಲವೂ ಇದೆ ಆದರೆ ನನಗೇನಿಲ್ಲ
ಹೊಳೆ ದಾಟಿದ ಮೇಲೆ ಅಂಬಿಗ ಮಿಂಡ
ಅಂಬಿಗನ ಬಾಳಿನ ಪರಿ ನನ ಬಾಳೂ ದಂಡ!
*** *** ***
ನೊಂದು ಮೂಕಾಗಿ
ಬೆಂದು ಬೆಂಡಾಗಿ
ಸೋತು ಸುಣ್ಣಾಗಿ, ಸುಟ್ಟು ಕರಕಲಾಗಿ
ರೋಧಿಸುತಿಹುದೀ ಜೀವ
*** *** ***
ಬಳಸಿದರು ನನ್ನನ್ನು ಕಬ್ಬಿನ ಜೆಲ್ಲೆಯಂತೆ
ಬಳಸಿ ಮೂಲೆ ಸೇರಿಸಿದರು ಕಸಪೊರಕೆಯಂತೆ
ಮೊಸರನ್ನ ತಿಂದು ನನ ಮೂತಿಗೆ ಸವರಿದರು ಕೋತಿಯಂತೆ
ಎಸೆದರು ಉಂಡಾದ ಮೇಲೆ ಬಾಳೆಎಲೆಯ ಪರಿಯಂತೆ!
*** *** ***
ಮಾತಾಡಿ ಕೆಟ್ಟರು ಕೆಲವರು
ಮಾಡಿ ಕೆಟ್ಟರು ಕೆಲವರು
ಮಾತಾಡಿ-ಮಾಡಿ ಕೆಟ್ಟವರೂ ಕೆಲವರು
ಮಾತಾಡದೇ, ಮಾಡದೇ ಜಾಣರಾದರು ಹಲವರು!
*** *** ***
ದುರ್ಬಳಿಸಿಹರು ಎನ್ನ ಸಹನೆಯನ್ನ
ದುರ್ಬಳಿಸಿಹರು ಎನ್ನ ಮೌನವನ್ನ
ದುರ್ಬಳಿಸಿಹರು ಎನ್ನ ಮೃದು ಮನಸ್ಸನ್ನ
ನಾನೀಗ ಬರೀ ಹಳಸಿದ ಚಿತ್ರಾನ್ನ!
*** *** ***
ಋಣದಿಂದ ಬಂತು ಸಂಬಂಧ
ಸಂಬಂಧದಿಂದ ಹೆಚ್ಚಿತು ಋಣಬಂಧ
ಅದುವೇ ಜೀವ-ಜೀವನದ ಋಣಾನುಬಂಧ
ಅದುವೇ ತಪ್ಪಿಸಿಕೊಳ್ಳಲಾರದ ಪಾಶ-ಬಂಧ!
*** *** ***
///// ಆನೋ ಭದ್ರಾಃ ಕ್ರತವೋ ಯಂತು ವಿಶ್ವತಃ ////// ಕೃಣ್ವಂತೋ ವಿಶ್ವಮಾರ್ಯಂ //// //// ಮಾತಾ ಭೂಮಿಃ ಪುತ್ರೋಹಂ ಪೃಥಿವ್ಯಾಃ /////
Thursday, August 12, 2010
Wednesday, August 11, 2010
ವೇದೋಕ್ತ ಜೀವನ ಪಥ
ಜೀವನ ಬುನಾದಿ -14
ಪರಮ ವೈಜ್ಞಾನಿಕವಾದ ವೇದಗಳು, ಶ್ರದ್ಧೆಯನ್ನು ನಿಜವಾದ ಶ್ರದ್ಧೆಯಾಗಿ ಉಳಿಸಿಕೊಳ್ಳುವ ದಿವ್ಯಪಥವನ್ನು ತೋರಿ, ಯಾವ ಬಗೆಯ ಭೇಧ ಭಾವಗಳಿಗೂ ಎಡೆಯಿಲ್ಲದಂತೆ ಮಾಡಿ, ಪೃಥ್ವಿಯ ಸರ್ವಮಾನವರಿಗೂ ಮಾನವತ್ವದ ವಿಕಾಸ ಮಾಡಿಕೊಲ್ಳುವ ಬಗೆಯನ್ನು ಬಣ್ಣಿಸಿ ಹೇಳುತ್ತವೆ. ವೇದಗಳಲ್ಲಿ ಮತಮತಾಂತರಗಳ ಗೊಂದಲವಿಲ್ಲ, ಮಾನವ ಜಾತಿಯನ್ನು ಹರಿದು ಹಂಚಿಹಾಕುವ ಹೊಂಚಿಲ್ಲ. ವೇದಗಳನ್ನು ಹಿಂದೂಗಳ ಶಾಸ್ತ್ರವೆಂದು ಕರೆಯುವುದು ವೇದಗಳ ಔನ್ನತ್ಯಕ್ಕೆ ಅಪಮಾನ ಮಾಡಿದಂತೆಯೇ ಸರಿ. ಈಸ್ವರೀಯ ವೇದಗಳು ಸರ್ವಮಾನವರ ಸಂಪತ್ತು. ವೇದಗಳು ಜೀವಮಾತ್ರರನ್ನು -ಇನ್ನು ಮಾನವಮಾತ್ರರೆಂದು ಬೇರೆ ಹೇಳಬೇಕೇನು?- ಅಮರನಾದ ಪ್ರಭುವಿನ ಮಕ್ಕಳೆಂದು ಕರೆಯುತ್ತವೆ:-
ಯುಜೇ ವಾಂ ಬ್ರಹ್ಮ ಪೂರ್ವ್ಯಂ ನಮೋಭಿರ್ವಿ
ಶ್ಲೋಕ ಏತು ಪಥ್ಯೇವ ಸೂರೇಃ|
ಶೃಣ್ವಂತು ವಿಶ್ವೇ ಅಮೃತಸ್ಯ ಪುತ್ರಾ ಆ ಯೇ ಧಾಮಾನಿ ದಿವ್ಯಾನಿ ತಸ್ಥುಃ|| (ಯಜು.11.5)
ನರನಾರಿಯರೇ! [ವಾಮ್] ನಿಮ್ಮಿಬ್ಬರನ್ನೂ [ಪೂರ್ವ್ಯಂ ಬ್ರಹ್ಮಯುಜೇ] ಅನಾದಿ ಭಗವದ್ವಾಣಿಯೊಂದಿಗೆ ನಿಯೋಜಿಸುತ್ತೇನೆ. [ಸೂರೇ ಪಥ್ಯಾ ಇವಾ] ಜ್ಞಾನಿಯ ಮಾರ್ಗದಲ್ಲಿ ನಡೆದಂತೆ [ನಮೋಭಿಃ] ವಿನಯದಿಂದ [ಶ್ಲೋಕಃ ವಿ ಏತು] ನಿಮ್ಮ ಕೀರ್ತಿ ಹರಡಲಿ. [ಯೇ] ಯಾರು [ದಿವ್ಯಾನಿ ಧಾಮಾನಿ ಆತಸ್ಥುತುಃ] ದೇವನಿರ್ಮಿತ ನೆಲೆಗಳಲ್ಲಿ ನೆಲೆಸಿರುವರೋ [ಅಮೃತಸ್ಯ ವಿಶ್ವೇ ಪುತ್ರಾಃ] ಆ ಅಮರ ಪ್ರಭುವಿನ ಮಕ್ಕಳೆಲ್ಲರೂ [ಶೃಣ್ವಂತು] ಆಲಿಸಲಿ. ವೇದಗಳ ದೃಷ್ಟಿಯಲ್ಲಿ ಮಾನವರೆಲ್ಲಾ ಭಗವದ್ಪುತ್ರರೇ. ಅಷ್ಟೇ ಅಲ್ಲ ಮಾನವ ಗೌರವವನ್ನು ವೇದಗಳು ಸಾರುತ್ತಿರುವ ರೀತಿಯೂ ಅದ್ಭುತವೇ.
ಪರಮ ವೈಜ್ಞಾನಿಕವಾದ ವೇದಗಳು, ಶ್ರದ್ಧೆಯನ್ನು ನಿಜವಾದ ಶ್ರದ್ಧೆಯಾಗಿ ಉಳಿಸಿಕೊಳ್ಳುವ ದಿವ್ಯಪಥವನ್ನು ತೋರಿ, ಯಾವ ಬಗೆಯ ಭೇಧ ಭಾವಗಳಿಗೂ ಎಡೆಯಿಲ್ಲದಂತೆ ಮಾಡಿ, ಪೃಥ್ವಿಯ ಸರ್ವಮಾನವರಿಗೂ ಮಾನವತ್ವದ ವಿಕಾಸ ಮಾಡಿಕೊಲ್ಳುವ ಬಗೆಯನ್ನು ಬಣ್ಣಿಸಿ ಹೇಳುತ್ತವೆ. ವೇದಗಳಲ್ಲಿ ಮತಮತಾಂತರಗಳ ಗೊಂದಲವಿಲ್ಲ, ಮಾನವ ಜಾತಿಯನ್ನು ಹರಿದು ಹಂಚಿಹಾಕುವ ಹೊಂಚಿಲ್ಲ. ವೇದಗಳನ್ನು ಹಿಂದೂಗಳ ಶಾಸ್ತ್ರವೆಂದು ಕರೆಯುವುದು ವೇದಗಳ ಔನ್ನತ್ಯಕ್ಕೆ ಅಪಮಾನ ಮಾಡಿದಂತೆಯೇ ಸರಿ. ಈಸ್ವರೀಯ ವೇದಗಳು ಸರ್ವಮಾನವರ ಸಂಪತ್ತು. ವೇದಗಳು ಜೀವಮಾತ್ರರನ್ನು -ಇನ್ನು ಮಾನವಮಾತ್ರರೆಂದು ಬೇರೆ ಹೇಳಬೇಕೇನು?- ಅಮರನಾದ ಪ್ರಭುವಿನ ಮಕ್ಕಳೆಂದು ಕರೆಯುತ್ತವೆ:-
ಯುಜೇ ವಾಂ ಬ್ರಹ್ಮ ಪೂರ್ವ್ಯಂ ನಮೋಭಿರ್ವಿ
ಶ್ಲೋಕ ಏತು ಪಥ್ಯೇವ ಸೂರೇಃ|
ಶೃಣ್ವಂತು ವಿಶ್ವೇ ಅಮೃತಸ್ಯ ಪುತ್ರಾ ಆ ಯೇ ಧಾಮಾನಿ ದಿವ್ಯಾನಿ ತಸ್ಥುಃ|| (ಯಜು.11.5)
ನರನಾರಿಯರೇ! [ವಾಮ್] ನಿಮ್ಮಿಬ್ಬರನ್ನೂ [ಪೂರ್ವ್ಯಂ ಬ್ರಹ್ಮಯುಜೇ] ಅನಾದಿ ಭಗವದ್ವಾಣಿಯೊಂದಿಗೆ ನಿಯೋಜಿಸುತ್ತೇನೆ. [ಸೂರೇ ಪಥ್ಯಾ ಇವಾ] ಜ್ಞಾನಿಯ ಮಾರ್ಗದಲ್ಲಿ ನಡೆದಂತೆ [ನಮೋಭಿಃ] ವಿನಯದಿಂದ [ಶ್ಲೋಕಃ ವಿ ಏತು] ನಿಮ್ಮ ಕೀರ್ತಿ ಹರಡಲಿ. [ಯೇ] ಯಾರು [ದಿವ್ಯಾನಿ ಧಾಮಾನಿ ಆತಸ್ಥುತುಃ] ದೇವನಿರ್ಮಿತ ನೆಲೆಗಳಲ್ಲಿ ನೆಲೆಸಿರುವರೋ [ಅಮೃತಸ್ಯ ವಿಶ್ವೇ ಪುತ್ರಾಃ] ಆ ಅಮರ ಪ್ರಭುವಿನ ಮಕ್ಕಳೆಲ್ಲರೂ [ಶೃಣ್ವಂತು] ಆಲಿಸಲಿ. ವೇದಗಳ ದೃಷ್ಟಿಯಲ್ಲಿ ಮಾನವರೆಲ್ಲಾ ಭಗವದ್ಪುತ್ರರೇ. ಅಷ್ಟೇ ಅಲ್ಲ ಮಾನವ ಗೌರವವನ್ನು ವೇದಗಳು ಸಾರುತ್ತಿರುವ ರೀತಿಯೂ ಅದ್ಭುತವೇ.
Tuesday, August 10, 2010
ಎಲ್ಲಿಯ ಸಂಬಂಧ ?

ಚಿತ್ರ ಋಣ : ಅಂತರ್ಜಾಲ
ಎಲ್ಲಿಯ ಸಂಬಂಧ ?
ಮಾನವ ಜೀವನ ಭಾವನೆಗಳ ಸರಕೊಂಡಿ ಬೆಸೆದಿಹ ಸಂಕೋಲೆ
ನಾವಿದನರಿತರು ಹೊರಬರಲಾರೆವು
ಕಂಡೂ ತೂಗುವ ಉಯ್ಯಾಲೆ
ಹುಟ್ಟುವುದೆಲ್ಲೋ ಸಾವು ಅದೆಲ್ಲೋ
ಗೊತ್ತಿರದಾ ಹಲಪುಟಗಳಿವು
ಒಟ್ಟಿಗೆ ಇರಲೂ ಒಮ್ಮನಸಿಲ್ಲದ
ಉತ್ತರ ರಹಿತ ಪ್ರಶ್ನೆಗಳು
ಬಂದಿಹೆವಿಲ್ಲಿ ಬರಿಗೈಯ್ಯಲ್ಲಿ
ಬಂಧನ ಮರೆತು ಮೆರೆಯುವೆವು
ಸಂದುವೆವಲ್ಲಿ ಬರಿಮೈಯ್ಯಲ್ಲಿ
ಅಂದಿಗೆ ಬಿಡುಗಡೆ ಕಾಣುವೆವು !
ನಾನೊಬ್ಬಣ್ಣ ನೀನೋ ತಮ್ಮ
ಅಪ್ಪಾ ಅಮ್ಮಾ ಕಣ್ಣೊಡೆಯೆ
ಈ ದಿಬ್ಬಣವು ಇಲ್ಲಿಗೆ ಮಾತ್ರ
ಯಾರಿಹರು ನೀ ಹೊರನಡೆಯೆ ?
ಯಾರ ಮಗನು ನೀ ಯಾರ ಮಗಳು ನೀ ?
ಯಾರಿಗೆ ನೀನು ಯಜಮಾನ ?
ಬಾರಿ ಬಾರಿ ನೀ ಕೇಳಿಕೊ ಇದನೇ
ಸಾರುವೆ ನಿನಗೆ ಬಹುಮಾನ !
--- [ ನಿಮ್ಮೊಡನೆ ವಿ.ಆರ್.ಭಟ್ ವಿಭಾಗದ ' ಚಿಂತನಶೀಲ ಕವನಗಳು' ಸಂಕಲನದಿಂದ ]
ಮೂಢ ಉವಾಚ -2
ಲೋಭ
ಸ್ನೇಹ ಪ್ರೀತಿಯಲು ಲಾಭವನೆ ಅರಸುವರು |
ಕಿಂಚಿತ್ತು ಪಡೆಯಲು ಶಾಶ್ವತವ ಕಳೆಯುವರು ||
ವಿಶ್ವಾಸದಮೃತಕೆ ವಿಷವ ಬೆರೆಸುವರಿಹರು |
ಇಂಥವರ ಸಂಗದಿಂ ದೂರವಿರು ಮೂಢ||
ನಾನತ್ವ
ತಾವೆ ಮೇಲೆಂಬರು ಇತರರನು ಹಳಿಯುವರು |
ಪರರೇಳಿಗೆಯ ಸಹಿಸರು ಕಟುಕಿ ಮಾತಾಡುವರು ||
ಅರಿಯರವರು ಇತರರಿಗೆ ಬಯಸುವ ಕೇಡದು |
ಎರಡಾಗಿ ಬಂದೆರಗುವುದೆಂಬುದನು ಎಲೆ ಮೂಢ ||
ಬಯಕೆ
ಬಯಕೆಗೆ ಕೊನೆಯಿಲ್ಲ ಬಯಕೆಗೆ ಮಿತಿಯಿಲ್ಲ |
ಬಯಕೆ ಬೀಜಾಸುರನ ಸಂತತಿಗೆ ಸಾವಿಲ್ಲ ||
ಬಯಕೆ ಜೀವನವು ಬಯಸುವುದು ತಪ್ಪಲ್ಲ |
ಸ್ವಬಲವೇ ಹಂಬಲಕೆ ಬೆಂಬಲವು ಮೂಢ ||
ಸ್ನೇಹ ಪ್ರೀತಿಯಲು ಲಾಭವನೆ ಅರಸುವರು |
ಕಿಂಚಿತ್ತು ಪಡೆಯಲು ಶಾಶ್ವತವ ಕಳೆಯುವರು ||
ವಿಶ್ವಾಸದಮೃತಕೆ ವಿಷವ ಬೆರೆಸುವರಿಹರು |
ಇಂಥವರ ಸಂಗದಿಂ ದೂರವಿರು ಮೂಢ||
ನಾನತ್ವ
ತಾವೆ ಮೇಲೆಂಬರು ಇತರರನು ಹಳಿಯುವರು |
ಪರರೇಳಿಗೆಯ ಸಹಿಸರು ಕಟುಕಿ ಮಾತಾಡುವರು ||
ಅರಿಯರವರು ಇತರರಿಗೆ ಬಯಸುವ ಕೇಡದು |
ಎರಡಾಗಿ ಬಂದೆರಗುವುದೆಂಬುದನು ಎಲೆ ಮೂಢ ||
ಬಯಕೆ
ಬಯಕೆಗೆ ಕೊನೆಯಿಲ್ಲ ಬಯಕೆಗೆ ಮಿತಿಯಿಲ್ಲ |
ಬಯಕೆ ಬೀಜಾಸುರನ ಸಂತತಿಗೆ ಸಾವಿಲ್ಲ ||
ಬಯಕೆ ಜೀವನವು ಬಯಸುವುದು ತಪ್ಪಲ್ಲ |
ಸ್ವಬಲವೇ ಹಂಬಲಕೆ ಬೆಂಬಲವು ಮೂಢ ||
ನಮ್ಮ ಮನೆಯಲ್ಲಿ ಫ್ಯುನೆರಲ್ ಫಂಕ್ಷನ್!!
ಕೆ.ಪಿ.ಟಿ.ಸಿ.ಎಲ್ ಗೆ ಹೊಸದಾಗಿ ಆಯ್ಕೆಯಾಗಿರುವ ನಾಲ್ಕು ಜನ ಸಹಾಯಕ ಇಂಜಿನಿಯರ್ ಗಳು ನಾನು ಕೆಲಸ ಮಾಡುವ ಹಾಸನ ಪವರ್ ಸ್ಟೇಶನ್ ಗೆ ನಿನ್ನೆ ತರಬೇತಿಗಾಗಿ ಬಂದು ವರದಿಮಾಡಿಕೊಂಡರು. ಮದ್ಯಾಹ್ನ ೧.೩೦ ರಿಂದ ೨.೩೦ ರ ವರಗೆ ಅವರುಗಳಿಗೆ ಊಟಕ್ಕಾಗಿ ಬಿಡುವಿತ್ತು. ಮೂರು ಜನರು ಸಮಯಕ್ಕೆ ಸರಿಯಾಗಿ ಊಟ ಮುಗಿಸಿ ಸ್ಟೇಶನ್ ಗೆ ಬಂದರು. ಒಬ್ಬರು ಮಾತ್ರ ಐದು ನಿಮಿಷ ತಡವಾಗಿ ಬಂದರು. ಎಲ್ಲರೊಡನೆ ಮಾತನಾಡುತ್ತಾ ಸಹಜವಾಗಿ " ಎಲ್ಲರ ಊಟವಾಯ್ತಾ?’ ಎಂದೆ. ಎಲ್ಲರೂ ಆಯ್ತು ಎಂದರು. ತಡವಾಗಿ ಬಂದ ಆಕೆ ಮಾತ್ರ " ಊಟ ಆಗಿಲ್ಲ, ನಮ್ಮ ಮನೆಯಲ್ಲಿ ಏನೋ ಫಂಕ್ಷನ್ ಇದೆ ಸರ್, ಆದ್ದರಿಂದ ತಡವಾಗಿದೆ, ಎಂದರು. ಭೀಮನ ಅಮಾವಾಸ್ಯೆ ಹಬ್ಬವನ್ನು ಕೆಲವರು ನಿನ್ನೆ, ಕೆಲವರು ಇಂದು ಆಚರಿಸಿರುವುದರಿಂದ " ಹಬ್ಬದ ಗಡಿಬಿಡಿಯಿಂದ ತಡವಾಯ್ತಾ? ಅಂದೆ. " ಇಲ್ಲಾ ಸರ್ , ನಮ್ಮ ಮನೆಯಲ್ಲಿ ಫ್ಯುನೆರಲ್ ಫಂಕ್ಷನ್! "
ನನಗೋ ಗಾಭರಿ! ಪಾಪ, ಯಾರು ಮೃತರಾಗಿದ್ದಾರೋ! ಅಂತಹಾ ಪರಿಸ್ಥಿತಿಯಲ್ಲಿ ಬಂದುಬಿಟ್ಟಿದ್ದಾರಲ್ಲಾ! -ಅಂತಾ ಯೋಚಿಸಿದವನೇ " ಯಾರಮ್ಮಾ? ಅಂದೆ. "ನಮ್ಮ ಅಜ್ಜಿದೂ ಸರ್" ಅಂದರು.
-ಮುಖ ನೋಡಿದರೆ ಅಂತಾ ದು:ಖವೇನಿಲ್ಲಾ, ನಾನು ಊಹಿಸಿದೆ -ಹುಡುಗಿ ಏನೋ ತಪ್ಪಾಗಿ ಹೇಳಿದ್ದಾಳೆಂದು
- "ಮನೆಯಲ್ಲಿ ಅಜ್ಜಿಯ ಶ್ರಾದ್ಧವೇನಮ್ಮಾ?"-ಅಂದೆ
-ಹೌದು ಸಾರ್
-ಮತ್ತೆ ಫ್ಯುನೆರಲ್ ಅಂದ್ಯಲ್ಲಾ?
-ಏನು ಹೇಳಬೇಕು ,ಅಂತಾ ಗೊತ್ತಾಗಲಿಲ್ಲ ಸಾರ್.
----------------
ನೋಡಿ ನಮ್ಮ ವಿದ್ಯಾವಂತ ಯುವಕರ ಪರಿಸ್ಥಿತಿ!
ಬಿಇ ನಲ್ಲಿ ಒಳ್ಳೆಯ ಮಾರ್ಕ್ಸ್ ತಗೊಂಡು ಕೆಲಸ ದಕ್ಕಿಸಿದ್ದಾಗಿದೆ. ಆದರೆ ಸಾಮಾನ್ಯ ಜ್ಞಾನ!?
ಪಾಪ, ಆಕೆಗೆ ನಮ್ಮಜ್ಜಿ ತಿಥಿ ಅಂತಾನೋ, ವೈದೀಕ ಅಂತಾನೋ ಅಥವಾ ಶ್ರಾದ್ಧ ಅಂತಾನೋ ಹೇಳೋದಕ್ಕೆ ಸಂಕೋಚ, ಇಂಗ್ಲೀಶ್ ನಲ್ಲಿ ಹೇಳೋಕೇ ಹೋಗಿ ಆದ ಆಭಾಸ ಇದು! ಏನಂತೀರಾ?
ನನಗೋ ಗಾಭರಿ! ಪಾಪ, ಯಾರು ಮೃತರಾಗಿದ್ದಾರೋ! ಅಂತಹಾ ಪರಿಸ್ಥಿತಿಯಲ್ಲಿ ಬಂದುಬಿಟ್ಟಿದ್ದಾರಲ್ಲಾ! -ಅಂತಾ ಯೋಚಿಸಿದವನೇ " ಯಾರಮ್ಮಾ? ಅಂದೆ. "ನಮ್ಮ ಅಜ್ಜಿದೂ ಸರ್" ಅಂದರು.
-ಮುಖ ನೋಡಿದರೆ ಅಂತಾ ದು:ಖವೇನಿಲ್ಲಾ, ನಾನು ಊಹಿಸಿದೆ -ಹುಡುಗಿ ಏನೋ ತಪ್ಪಾಗಿ ಹೇಳಿದ್ದಾಳೆಂದು
- "ಮನೆಯಲ್ಲಿ ಅಜ್ಜಿಯ ಶ್ರಾದ್ಧವೇನಮ್ಮಾ?"-ಅಂದೆ
-ಹೌದು ಸಾರ್
-ಮತ್ತೆ ಫ್ಯುನೆರಲ್ ಅಂದ್ಯಲ್ಲಾ?
-ಏನು ಹೇಳಬೇಕು ,ಅಂತಾ ಗೊತ್ತಾಗಲಿಲ್ಲ ಸಾರ್.
----------------
ನೋಡಿ ನಮ್ಮ ವಿದ್ಯಾವಂತ ಯುವಕರ ಪರಿಸ್ಥಿತಿ!
ಬಿಇ ನಲ್ಲಿ ಒಳ್ಳೆಯ ಮಾರ್ಕ್ಸ್ ತಗೊಂಡು ಕೆಲಸ ದಕ್ಕಿಸಿದ್ದಾಗಿದೆ. ಆದರೆ ಸಾಮಾನ್ಯ ಜ್ಞಾನ!?
ಪಾಪ, ಆಕೆಗೆ ನಮ್ಮಜ್ಜಿ ತಿಥಿ ಅಂತಾನೋ, ವೈದೀಕ ಅಂತಾನೋ ಅಥವಾ ಶ್ರಾದ್ಧ ಅಂತಾನೋ ಹೇಳೋದಕ್ಕೆ ಸಂಕೋಚ, ಇಂಗ್ಲೀಶ್ ನಲ್ಲಿ ಹೇಳೋಕೇ ಹೋಗಿ ಆದ ಆಭಾಸ ಇದು! ಏನಂತೀರಾ?
Monday, August 9, 2010
ವೇದೋಕ್ತ ಜೀವನ ಪಥ
ಜೀವನ ಬುನಾದಿ -13
ಈ ಶ್ರದ್ಧಾ-ಮೇಧಾ ಸಮನ್ವಯ ವೇದಗಳ ವೈಶಿಷ್ಟ್ಯ. ವೇದಾನುಯಾಯಿಗಳ ಗುರುಮಂತ್ರವಾದ ಗಾಯತ್ರೀ ಜೀವನದ ಉತ್ಕರ್ಷದ ದಿಕ್ಕನ್ನು ತೋರಿಸುತ್ತದೆ.
ಭೂರ್ಭುವಃ ಸ್ವಃ ತತ್ಸವಿತುರ್ವರೇಣ್ಯಂ ಭರ್ಗೋದೇವಸ್ಯ ಧೀಮಹಿ|
ಧಿಯೋ ಯೋ ನಃ ಪ್ರಚೋದಯಾತ್|| (ಯಜು.36.3)
[ಸವಿತುಃ ದೇವಸ್ಯ] ಸೃಜನ ಕರ್ತೃವೂ ಪ್ರೇರಕನೂ ಆದ, ಪ್ರಕಾಶಮಯ ಪ್ರಭುವಿನ [ತತ್ ವರೇಣ್ಯಂ ಭರ್ಗಃ] ಆ ಸ್ವೀಕರಣೀಯವಾದ, ಪಾಪಭಸ್ಮಕಾರಿಯಾದ ತೇಜಸ್ಸನ್ನು, [ಧೀಮಹಿ] ಧ್ಯಾನಿಸುತ್ತೇವೆ, ದರಿಸುತ್ತೇವೆ. [ಯಃ] ಆ ಸ್ವಾಮಿಯು [ನಃ ಧಿಯಃ] ನಮ್ಮ ಬುದ್ಧಿಗಳನ್ನು ಹಾಗೂ ಕರ್ಮಗಳನ್ನು [ಪ್ರಚೋದಯಾತ್] ಪ್ರೇರಿಸಲಿ.
ಈ ಶ್ರದ್ಧಾ-ಮೇಧಾ ಸಮನ್ವಯ ವೇದಗಳ ವೈಶಿಷ್ಟ್ಯ. ವೇದಾನುಯಾಯಿಗಳ ಗುರುಮಂತ್ರವಾದ ಗಾಯತ್ರೀ ಜೀವನದ ಉತ್ಕರ್ಷದ ದಿಕ್ಕನ್ನು ತೋರಿಸುತ್ತದೆ.
ಭೂರ್ಭುವಃ ಸ್ವಃ ತತ್ಸವಿತುರ್ವರೇಣ್ಯಂ ಭರ್ಗೋದೇವಸ್ಯ ಧೀಮಹಿ|
ಧಿಯೋ ಯೋ ನಃ ಪ್ರಚೋದಯಾತ್|| (ಯಜು.36.3)
[ಸವಿತುಃ ದೇವಸ್ಯ] ಸೃಜನ ಕರ್ತೃವೂ ಪ್ರೇರಕನೂ ಆದ, ಪ್ರಕಾಶಮಯ ಪ್ರಭುವಿನ [ತತ್ ವರೇಣ್ಯಂ ಭರ್ಗಃ] ಆ ಸ್ವೀಕರಣೀಯವಾದ, ಪಾಪಭಸ್ಮಕಾರಿಯಾದ ತೇಜಸ್ಸನ್ನು, [ಧೀಮಹಿ] ಧ್ಯಾನಿಸುತ್ತೇವೆ, ದರಿಸುತ್ತೇವೆ. [ಯಃ] ಆ ಸ್ವಾಮಿಯು [ನಃ ಧಿಯಃ] ನಮ್ಮ ಬುದ್ಧಿಗಳನ್ನು ಹಾಗೂ ಕರ್ಮಗಳನ್ನು [ಪ್ರಚೋದಯಾತ್] ಪ್ರೇರಿಸಲಿ.
Subscribe to:
Posts (Atom)