Pages

Saturday, September 29, 2012

‘ವೇದಗಳು ಎಲ್ಲ ಕಾಲಕ್ಕೂ ಪ್ರಸ್ತುತ’-ಮಾಧ್ಯಮ ಸಂವಾದದಲ್ಲಿ ವೇದಾಧ್ಯಾಯಿ ಶ್ರೀ ಸುಧಾಕರ ಶರ್ಮರು


ಹಾಸನ, ಸೆ. ೨೯: ವೇದಗಳು ಹಳಸಲು ಎಂದಾಗಲಿ, ಕಾಲ ಮಿತಿಯುಳ್ಳ ಅಪ್ರಸ್ತುತ ವಿಷಯವೆಂದಾಗಲಿ ತಿಳಿಯುವುದೇ ಅಜ್ಞಾನ ಹಾಗೂ ತಪ್ಪು ಕಲ್ಪನೆಯಾಗಿದೆ; ವೇದಗಳು ಎಲ್ಲ ಕಾಲಕ್ಕೂ ಪ್ರಸ್ತುತವೇ ಆಗಿವೆ ಎಂದು ಬೆಂಗಳೂರಿನ ವೇದಾಧ್ಯಾಯಿ ಸುಧಾಕರ ಶರ್ಮರು  ಪ್ರತಿಪಾದಿಸಿದರು.

ಭಾನುವಾರ ವೇದಗಳ ಕುರಿತಾದ ಮುಕ್ತ ಸಂವಾದ ನಡೆಸಿಕೊಡಲಿಕ್ಕಾಗಿ ಇಂದು ನಗರಕ್ಕೆ ಭೇಟಿ ನೀಡಿದ್ದ ಅವರು, ಇಂದು ಪತ್ರಿಕಾ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಏರ್ಪಡಿಸಿದ್ದ ‘ಮಾಧ್ಯಮ ಸಂವಾದ’ದಲ್ಲಿ ಭಾಗವಹಿಸಿ ವೇದಗಳ ಕುರಿತಾದ ಹತ್ತು ಹಲವು ಪ್ರಶ್ನೆಗಳಿಗೆ ಉತ್ತರಿಸಿದರು.

ಹುಟ್ಟಿದಂದಿನಿಂದ ಹಿಡಿದು ಸಾಯುವವರೆಗೂ ಮಾನವ ಜೀವಿಯ ಜತೆಯಾಗಿಯೇ ಇರುವ ಹಾಗೂ ಇರಬೇಕಾದ ಹಲವಾರು ಸತ್ಯ ಸಂಗತಿಗಳ ಕುರಿತು ತಿಳಿವಳಿಕೆ, ಜ್ಞಾನ ಹಾಗೂ ಮುನ್ನಡೆಯಲು ಮಾರ್ಗದರ್ಶನ ಮಾಡುವುದರಿಂದ ವೇದಗಳು ಎಂದೆಂದಿಗೂ ಪ್ರಸ್ತುತವೇ ಎಂದು ಹಲವು ನಿದರ್ಶನಗಳ ಸಹಿತ ತಿಳಿಸಿಕೊಟ್ಟ ಅವರು, ಮತ್ತೊಬ್ಬರನ್ನು ಹಾಳು ಮಾಡುವ ಗುಣ, ಹಿಂಸೆ, ತಾರತಮ್ಯ ಅಥವಾ ಭೇದ ಭಾವ ಇತ್ಯಾದಿ ಯಾವುದೇ ನಕಾರಾತ್ಮಕ ಅಂಶಗಳು ವೇದಗಳಲ್ಲಿಲ್ಲ ಎಂದು ತಿಳಿಸಿದರು. ಮನು ಸ್ಮೃತಿ ಸೇರಿದಂತೆ ಹಲವಾರು ಸ್ಮೃತಿಗಳು ಆಯಾ ಕಾಲ ಕಾಲಮಾನಗಳಿಗೆ ತಕ್ಕಂತೆ ರಚಿತವಾದ ನಿಯಮಗಳೇ ಹೊರತು ಅವು ಪ್ರಸ್ತುತವಾಗುವುದಿಲ್ಲ ಹಾಗೂ ಹಲವಾರು ಕಲಬೆರಕೆ ಅಂಶಗಳೂ ಸಹ ಸೇರಿರುವುದರಿಂದ ಅವು ಪರಮ ಪ್ರಮಾಣವೂ ಆಗುವುದಿಲ್ಲ; ಆದರೆ ಮೂಲ ವೇದಗಳು ಮಾತ್ರ ಎಲ್ಲ ವಿಷಯಗಳಿಗೂ ಪರಮ ಪ್ರಮಾಣವಾಗುತ್ತವೆ. ಏಕೆಂದರೆ ವೇದಗಳೊಂದಿಗೆ ವ್ಯಾಕರಣ, ಶಿಕ್ಷಾ, ಛಂದಸ್ಸು, ಜ್ಯೋತಿಷ (ಖಗೋಳ ವಿಜ್ಞಾನವೇ ಹೊರತು ಈಗಿನ ಫಲ ಜ್ಯೋತಿಷ್ಯ ಅಲ್ಲ), ನಿರುಕ್ತ ಮತ್ತು ಕಲ್ಪ ಎಂಬ ಈ ೬ ವೇದಾಂಗಗಳ ಚೌಕಟ್ಟಿನ ನಡುವೆ ವೇದಗಳು ಬಂಧಿಸಲ್ಪಟ್ಟಿರುವುದರಿಂದ ಅವು ಸುರಕ್ಷಿತವಾಗಿವೆ. ಯಾವುದೇ ಕಲಬೆರಕೆಯಾಗಲಿ; ತಿದ್ದುಪಡಿಯಾಗಲಿ; ಬದಲಾವಣೆಯಾಗಲಿ ಮಾಡಲು ಸಾಧ್ಯವಾಗಿಲ್ಲ; ಸಾಧ್ಯವಾಗುವುದೂ ಇಲ್ಲ. ಹೀಗಾಗಿ ಅವರು ಪರಮ ಪ್ರಮಾಣವೇ ಸರಿ; ಆದರೆ ಇದೇ ಮಾತನ್ನು ಇತರೆ ಪುರಾಣ ಪುಣ್ಯ ಕಥೆಗಳ ಬಗ್ಗೆ ಹೇಳುವಂತಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಹಲವು ಸಮರ್ಥನೆಗೊಂದಿಗೆ ಉತ್ತರ ಬಿಡಿಸಿಟ್ಟರು.

       ಬ್ರೀಟೀಷರ  ಮೆಕಾಲೆ ಪ್ರಣೀತವಾದ ಇಂದಿನ ಶಿಕ್ಷಣ ವ್ಯವಸ್ಥೆಯಿಂದ ಯಾರ ಉದ್ಧಾರವೂ ಸಾಧ್ಯವಿಲ್ಲ. ಈಗಿನ ಎಲ್.ಕೆ.ಜಿ.ಯಿಂದ ಹಿಡಿದು ಸ್ನಾತಕೋತ್ತರ ಪದವಿವರೆಗಿನ ಯಾವುದೇ ಸರ್ಟಿಫಿಕೇಟ್ ಆಧಾರಿತ ಶಿಕ್ಷಣದಲ್ಲಿ ಹೊರಗಿನ ವಿಷಯಗಳನ್ನು ಬಲವಂತವಾಗಿ ಮನುಷ್ಯನ ಮೆದುಳಿಗೆ ತುರುಕುವುದಾಗಿದೆ. ಆದ್ದರಿಂದ ಅದು ನಿಜವಾದ ಶಿಕ್ಷಣವೇ ಅಲ್ಲ. ಮನುಷ್ಯನೊಳಗಿನ ಪ್ರತಿಭೆ ಅಥವಾ ಶಕ್ತಿಯನ್ನು ಸಮಾಜದ ಉದ್ಧಾರಕ್ಕಾಗಿ ಹೊರಗೆ ಹಾಕುವುದೇ ನಿಜವಾದ ಶಿಕ್ಷಣ. ಆದರೆ ಅದು ನಡೆಯುತ್ತಿಲ್ಲ. ಈಗೆಲ್ಲಾ ಉಲ್ಟಾ ಶಿಕ್ಷಣವಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ವಿಷಾದಿಸಿ, ಶಾಲೆಯ ಮೆಟ್ಟಿಲನ್ನೂ ಹತ್ತದವರು ಪ್ರತಿಭಾವಂತರಾಗಿ ಸಮಾಜ ಸುಧಾರಣೆ ಮಾಡಿದವರ ಪಟ್ಟಿಯನ್ನೇ ಮುಂದಿಟ್ಟರು!
            ವೇದಗಳು ಜಗತ್ತಿನ ಸರ್ವರಿಗಾಗಿಯೇ ಇವೆ; ವೇದ ಎಂದರೆ ಜ್ಞಾನ ಎಂದರ್ಥ. ಅವು ಎಲ್ಲೂ ಜಾತಿ ಪದ್ಧತಿ, ಲಿಂಗ ಭೇದ, ಮೂರ್ತಿ ಪೂಜೆಗಳನ್ನು ಹೇಳಿಲ್ಲ; ಅವೆಲ್ಲ ಶತಮಾನಗಳಿಂದೀಚೆಗೆ ಹುಟ್ಟಿಕೊಂಡ ಸ್ವಾರ್ಥ ಲಾಲಸೆಯ ಪಿಡುಗುಗಳಾಗಿವೆ. ವೇದಗಳು ವಾಸ್ತವವಾಗಿ ವೇದಗಳು ವರ್ಣಗಳ ಕುರಿತು ಹೇಳುತ್ತವೆ; ವರ್ಣ ಎಂದರೆ ಜಾತಿಯಲ್ಲ; ಅದು ‘ಆಯ್ಕೆ’ ಎಂದರ್ಥ. ಸಾಮಾಜಿಕ ಅನಿಷ್ಟಗಳಾದ ಅಜ್ಞಾನ, ಅನ್ಯಾಯ, ಅಭಾವ ಮತ್ತು ಆಲಸ್ಯಗಳ ವಿರುದ್ಧ ಹೋರಾಡಲು ಯಾರಿಗೆ ಯೋಗ್ಯತೆ ಇದೆಯೋ; ಯಾರು ಆ ರೀತಿ ಹೋರಾಟ ಮಾಡಲು ‘ಆಯ್ಕೆ’ ಮಾಡಿಕೊಳ್ಳುವರೋ ಅಂತಹವರಿಗೆ ಕ್ರಮವಾಗಿ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ ಮತ್ತು ಶೂದ್ರ ಎಂದು ಹೆಸರು. ಅಂತಹ ಮನೋಭಾವ ಹುಟ್ಟಿನಿಂದಲೇ ಬರಬೇಕೆಂದೇನೂ ಇಲ್ಲ; ಯೋಗ್ಯತೆಯಿಂದ ಗಳಿಸಬೇಕು. ಈ ನಾಲ್ವರಲ್ಲಿ ಯಾರೂ ಜೇಷ್ಠರೂ ಅಲ್ಲ; ಕನಿಷ್ಠರೂ ಅಲ್ಲ. ಸಮಾಜೋದ್ಧಾರಕ್ಕೆ ಈ ಎಲ್ಲರೂ ಅಗತ್ಯವಾಗಿ ಬೇಕಾದವರೇ ಆಗಿದ್ದಾರೆ. ಹೀಗಾಗಿ ಈ ಅರ್ಥದಲ್ಲಿ ವರ್ಣಾಶ್ರಮಗಳು ಎಂದೆಂದಿಗೂ ಪ್ರಸ್ತುತ ಎಂದು ಶರ್ಮಾಜಿ ವ್ಯಾಖ್ಯಾನಿಸಿದರು.
           ಅರ್ಥಪೂರ್ಣವಾಗಿ ನಡೆದ ಈ ಸಂವಾದ ಕಾರ್ಯಕ್ರಮದಲ್ಲಿ ‘ವೇದ ಭಾರತೀ’ ಸಂಚಾಲಕರುಗಳಾದ ಹರಿಹರಪುರ ಶ್ರೀಧರ್, ಕವಿ ನಾಗರಾಜ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಲೀಲಾವತಿ ಹಾಜರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಪ್ರಭಾಕರ ಸ್ವಾಗತಿಸಿ, ವಂದಿಸಿದರು.

Thursday, September 27, 2012

ವೇದಾಧ್ಯಾಯೀ ಶ್ರೀ ಸುಧಾಕರಶರ್ಮ ಕಿರು ಪರಿಚಯ


     ಈಗ್ಗೆ ೧ ವರ್ಷದ ಹಿಂದೆ ‘ಖತಾರ್’ ಎಂಬ ಖಾಸಗಿ ಧಾರ್ಮಿಕ ಟಿ.ವಿ. ವಾಹಿನಿಯಲ್ಲಿ ವಿವಿಧ ಮತ ಧರ್ಮಗಳ ಗುರುಗಳ ನಡುವೆ ಧಾರ್ಮಿಕ ಚರ್ಚೆಯೊಂದು ನೇರ ಸಂವಾದ ರೂಪದಲ್ಲಿ ನಡೆದಿತ್ತು. ಆ ಗುರುಗಳ ನಡುವೆ ‘ಬದುಕುವ ಕಲೆ’ ಕಲಿಸುವ ಓರ್ವ ಗುರು ಭಾರತ ದೇಶವನ್ನು ಪ್ರತಿನಿಧಿಸಿದ್ದರು. ಆದರೆ ಪರಸ್ಪರ ವಾದ ವಿವಾದ ಸಾಗಿದಂತೆ ನಮ್ಮ ಗುರುಗಳಿಗೆ ಸೋಲುಂಟಾಯಿತು! ಈ ಮಹನೀಯರು ನಮ್ಮ ಮನುಕುಲದ ಜ್ಞಾನ ಭಂಡಾರವೆನಿಸಿದ ವೇದಗಳನ್ನು ಬದಿಗಿಟ್ಟು, ನಮ್ಮ ಪರಂಪರೆ ನಡುವೆ ಸಾಗಿ ಬಂದಿರುವ ಕೆಲಸಕ್ಕೆ ಬಾರದ ಪುರಾಣಗಳು-ಪುಣ್ಯ ಕಥೆಗಳನ್ನು ಆಧರಿಸಿ ತಮ್ಮ ವಾದ ಮಂಡಿಸಲು ಯತ್ನಿಸಿದ್ದೇ ಅವರ ಸೋಲಿಗೆ ಕಾರಣವಾಯಿತು. ಅವರ ಜಾಗದಲ್ಲಿ ಪಂಡಿತ್ ಸುಧಾಕರ ಚತುರ್ವೇದಿಗಳೋ ಅಥವಾ ಅವರ ಶಿಷ್ಯ ಸುಧಾಕರ ಶರ್ಮರೋ ಇದ್ದಿದ್ದರೆ ಅದರ ಕಥೆಯೇ ಬೇರೆಯಾಗುತ್ತಿತ್ತು! ಅಂದಹಾಗೆ ಯಾರು ಈ ಸುಧಾಕರ ಶರ್ಮ?


     ಪ್ರಳಯದ ಭೀತಿ, ವಾಸ್ತು, ಜ್ಯೋತಿಷ್ಯ, ವ್ರತಾಚರಣೆ, ವಿಶೇಷ ಪೂಜೆ ಅವುಗಳಿಂದ ಸಿಗುತ್ತದೆನ್ನುವ ಪ್ರತಿಫಲ ಇತ್ಯಾದಿ ಕುತೂಹಲಕಾರಿ ವಿಷಯಗಳನ್ನು ತಿಳಿಯಲು ಕಾತರರಾಗುವ ನಾವು ಟಿ.ವಿ. ಮುಂದೆ ಕುಳಿತು ಅಂತಹ ಕಾರ್ಯಕ್ರಮಗಳನ್ನು ಎವೆಯಿಕ್ಕದೆ ವೀಕ್ಷಿಸುತ್ತೇವೆ. ಇಂತಹ ಅಸಂಬದ್ಧ ಪುರಾಣಗಳು, ಪುಣ್ಯ ಕಥೆಗಳು, ಪೂಜೆ, ಪುನಸ್ಕಾರದಂತಹ ವಿಷಯಗಳಾವುವೂ ವೇದದಲ್ಲಿಲ್ಲ; ಜಗತ್ತಿನಲ್ಲಿ ಮನುಷ್ಯ ಹೇಗೆ ಬದುಕಬೇಕು ಎಂಬುದನ್ನು ಬೋಧಿಸುವ ‘ಮನುಕುಲದ ಸಂವಿಧಾನ’ವೇ ವೇದ ಎಂಬ ಸತ್ಯ ಸಂಗತಿಗಳನ್ನು ವೇದ ಮಂತ್ರಗಳ ನಿಜವಾದ ಅರ್ಥ ಬಿಡಿಸಿಟ್ಟು ತಿಳಿಸಿಕೊಡುವ ದಾರ್ಶನಿಕರೇ ವೇದಾಧ್ಯಾಯಿ ಸುಧಾಕರಶರ್ಮ! ‘ಚಂದನ’ ವಾಹಿನಿಯಲ್ಲಿ ಪ್ರತಿ ಭಾನುವಾರ ಬೆಳಗ್ಗೆ ೯-೩೦ ರಿಂದ ಪ್ರಸಾರವಾಗುತ್ತಿರುವ ‘ಹೊಸ ಬೆಳಕು’ ಧಾರಾವಾಹಿಯ ಕೇಂದ್ರ ಬಿಂದು- ಒಂದೇ ಮಾತಿನಲ್ಲಿ ಹೇಳಬೇಕೆಂದರೆ ವೇದ, ವಿಜ್ಞಾನ ಹಾಗೂ ವೈಚಾರಿಕತೆ- ಈ ಮೂರನ್ನೂ ಮೇಳೈಸಿಕೊಂಡಿರುವ ಅಪರೂಪದ ವಿಶಿಷ್ಟ ಬಹುಮುಖ ವ್ಯಕ್ತಿತ್ವದ ಜ್ಞಾನ ವೃದ್ಧ ಈ ವ್ಯಕ್ತಿ!!
     ಪ್ರಸ್ತುತ ಭಾರತ ದೇಶ ಸಾಗುತ್ತಿರುವ ಹಾದಿಯನ್ನು ಹಿನ್ನೆಲೆಯಾಗಿಟ್ಟುಕೊಂಡು ವೇದಗಳ ಕುರಿತು ಚರ್ಚಿಸಲು ಹೊರಟಾಗ ಯಾರಾದರೂ ಮೂಗು ಮುರಿದರೆ ಅಥವಾ ‘ಅನಿಷ್ಟಕ್ಕೆಲ್ಲ ಶನೇಶ್ವರ ಹೊಣೆ’ ಎಂಬಂತೆ ವೇದಗಳನ್ನು ದೂಷಿಸಿದರೆ ಅದು ಸಹಜ ಹಾಗೂ ತಪ್ಪು ಅವರದಲ್ಲ! ಏಕೆಂದರೆ ವೇದಗಳ ಕುರಿತು ಶತ ಶತಮಾನಗಳಿಂದಲೂ ಹರಿದುಬಂದ ತಪ್ಪು ಕಲ್ಪನೆಗಳು, ಪ್ರಕ್ಷಿಪ್ತಗಳು, ಅರೆಬೆಂದ ಎರವಲು ಜ್ಞಾನ, ಗೊಡ್ಡು ಸಂಪ್ರದಾಯಗಳು, ವಿಚಾರವಿಲ್ಲದ ಆಚರಣೆಗಳು, ಜೀವನ ಶೈಲಿ ಇತ್ಯಾದಿ ಅನಿಷ್ಟ ಕಲಸು ಮೇಲೋಗರಗಳ ನಡುವೆ ಭಾರತೀಯರು ಬೆಳೆದು ಬಂದಿರುವ ಬಗೆಯೇ ಇದಕ್ಕೆ ಕಾರಣ. ವೇದಗಳು ವಜ್ರವಿದ್ದಂತೆ; ಆದರೆ ಅಜ್ಞಾನದಿಂದಾಗಿ ವಜ್ರವನ್ನು ತಿಪ್ಪೆಗೆ ಎಸೆಯಲಾಗಿದೆ; ಅದು ವಜ್ರದ ತಪ್ಪಲ್ಲವಲ್ಲ!? ಜಗತ್ತಿಗೇ ಶಾಂತಿ ಪಾಠ ಹೇಳಿದ ನಮ್ಮ ದೇಶದ ಸದ್ಯದ ಪರಿಸ್ಥಿತಿಗೆ ಕೈಗನ್ನಡಿಯಾಗಿ ಖತಾರ್ ಟಿ.ವಿ. ಪ್ರಕರಣ ರೂಪದಲ್ಲಿ ಇನ್ನೊಂದು ವಿಪರ್ಯಾಸ ಸೇರ್ಪಡೆಯಾಯಿತಷ್ಟೆ.
   ವೇದಾಧ್ಯಾಯಿ ಎಂದ ಕೂಡಲೇ ಸಂತನೋ, ಮುನಿಯೋ ಅಥವಾ ಯಾವುದೋ ಮಠದ ಸ್ವಾಮೀಜಿಯೋ ಎಂದೇನೂ ಭಾವಿಸಬೇಕಾಗಿಲ್ಲ. ಬಹುಮುಖ ವಿದ್ಯಾರ್ಹತೆ- ಅಂದರೆ ವಿಜ್ಞಾನ. ಸಂಸ್ಕೃತ ಹಾಗೂ ಲೆಕ್ಕ ಶಾಸ್ತ್ರ (ಐ.ಸಿಡಬ್ಲ್ಯುಎ) ಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅವರು ವೇದಾಧ್ಯಾಯಿಯೂ ಆಗಿದ್ದು ಸಾಮಾನ್ಯರಲ್ಲಿ ಅಸಾಮಾನ್ಯ ಎಂದು ಧಾರಾಳವಾಗಿ ಹೇಳಬಹುದು! ಈ ಹಿಂದೆ ಪ್ರಜಾವಾಣಿಯಲ್ಲಿ ಪತ್ರಕರ್ತರಾಗಿದ್ದ ದಿ. ಎನ್. ಶ್ರೀಕಂಠಯ್ಯ ಅವರ ಪುತ್ರರಾದ ಶ್ರೀಯುತರು, ಮಹಾತ್ಮ ಗಾಂಧಿಯವರ ನಿಕಟವರ್ತಿ, ಸ್ವಾತಂತ್ರ್ಯ ಹೋರಾಟಗಾರ ಹಾಗೂ ಚತುರ್ವೇದಗಳ ಪಂಡಿತ ಸುಧಾಕರ ಚತುರ್ವೇದಿ ಅವರ ಶಿಷ್ಯರಾಗಿದ್ದಾರೆ. ಇವರ ಇಡೀ ಸುಖೀ ಕುಟುಂಬವೇ ವೇದೋಕ್ತ!
     ೧೯೭೩ ರಿಂದಲೂ ಬೆಂಗಳೂರು ಆಕಾಶವಾಣಿಯ ನಾಟಕ ಕಲಾವಿದರೂ, ಹಲವು ಮಹತ್ವದ ಕೃತಿಗಳ ರಚನಾಕಾರರೂ ಆಗಿರುವ ಶರ್ಮ ಅವರು ನಮ್ಮ ಪರಂಪರೆಯಲ್ಲಿ ಸಾಗಿಬಂದಿರುವ ಅನಿಷ್ಟ ಆಚರಣೆಗಳು, ಗೊಡ್ಡು ಸಂಪ್ರದಾಯಗಳ ಕಟ್ಟಾ ವಿರೋಧಿಯಾಗಿರುವುದರಿಂದ ‘ಖಂಡಿತವಾದಿ ಲೋಕ ವಿರೋಧಿ’ ಎಂಬಂತೆ ಸಂಪ್ರದಾಯಸ್ಥ ವೈದಿಕರ ಕೆಂಗಣ್ಣಿಗೂ ಗುರಿಯಾಗಿದ್ದಾರೆ. ‘ಮದುವೆ-ಏಕೆ-ಯಾವಾಗ-ಹೇಗೆ?’, ‘ಮೃತ್ಯುವೇ ನಮಸ್ಕಾರ’, ‘ಜ್ಯೋತಿಷಿಗಳೇ ಸತ್ಯದ ಕೊಲೆ ಮಾಡಬೇಡಿ!’, ‘ವಾಸ್ತು ಬೀಳದಿರಿ ಬೇಸ್ತು!"; ‘ಜನಿವಾರದಲ್ಲಿ ಬ್ರಾಹ್ಮಣ್ಯವಿಲ್ಲ’ ಇತ್ಯಾದಿ ಮಹತ್ವದ ಕೃತಿಗಳ ರಚನಾಕಾರರಾದ ಇವರು ಕರ್ನಾಟಕದಾದ್ಯಂತ ಹಾಗೂ ಪಕ್ಕದ ಆಂಧ್ರ ಪ್ರದೇಶದಲ್ಲೂ ವೇದಗಳ ಕುರಿತು ನಿರಂತರ ಉಪನ್ಯಾಸ ಹಾಗೂ ಪ್ರವಚನಗಳನ್ನು ನೀಡುತ್ತಿದ್ದಾರೆ.
     ವೇದಗಳ ಕುರಿತಾದ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಮಹತ್ವಪೂರ್ಣ ಪ್ರಬಂಧಗಳನ್ನು ಮಂಡಿಸಿರುವ ಶರ್ಮಾಜಿ, ವೇದ ಮಂತ್ರಾರ್ಥಗಳ ವಿವರಣೆ ಸಹಿತವಾಗಿ ಬ್ರಾಹ್ಮಣೇತರರು, ಮಹಿಳೆಯರು ಹಾಗೂ ಬಾಲಕಿಯರಿಗೂ ಸಹ ಉಪನಯನ ಸಂಸ್ಕಾರ ಮಾಡಿಸಿದ್ದಾರೆ; ಮಾಡಿಸುತ್ತಾರೆ! ವ್ಯಕ್ತಿತ್ವ ವಿಕಸನ, ಕೌಟುಂಬಿಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಕೌನ್ಸಿಲಿಂಗ್ (ಸಮಾಲೋಚನೆ) ಮಾಡುವ ಶ್ರೀಯುತರನ್ನು, ರಾಜ್ಯದ ಅನೇಕ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ಟಿ.ವಿ. ಮಾಧ್ಯಮಗಳು ಹಲವು ಕಾರ್ಯಕ್ರಮಗಳ ಮೂಲಕ ಪರಿಚಯಿಸಿವೆ; ಅವರ ಲೇಖನಗಳನ್ನು ಪ್ರಕಟಿಸುತ್ತಿವೆ ಹಾಗೂ ತಮ್ಮ ಕಾರ್ಯಕ್ರಮಗಳಿಗೆ ಬಳಸಿಕೊಳ್ಳುತ್ತಿವೆ.
     ಬೆಂಗಳೂರು ನಿವಾಸಿಗಳಾಗಿರುವ ಶ್ರೀಯುತರು, ತಮ್ಮ ಮಕ್ಕಳನ್ನು ಹೊರಗಿನ ಯಾವುದೇ ಶಾಲೆಗಳಿಗೂ ಕಳುಹಿಸದೆ ಮನೆಯಲ್ಲೇ ಗುರುಕುಲ ಮಾದರಿ ವೇದ ಶಿಕ್ಷಣ ಕೊಡಿಸಿದ್ದು, ಯಾವ ಪದವೀಧರರಿಗಿಂತಲೂ ಕಡಿಮೆಯಿಲ್ಲದೆ ಒಂದು ಕೈ ಹೆಚ್ಚಾಗಿಯೇ ಬುದ್ಧಿವಂತರನ್ನಾಗಿ ಬೆಳೆಸಿದ್ದಾರೆಂದರೆ ಅಚ್ಚರಿಯೇ ಸರಿ!
-ಎಚ್.ಎಸ್. ಪ್ರಭಾಕರ, ಹಿರಿಯ ಪತ್ರಕರ್ತರು,
ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಪತ್ರಕರ್ತರ ಸಂಘ,
ಎಚ್.ಆರ್.ಎಸ್. ಕಾಂಪೌಂಡ್, ೬ನೇ ಕ್ರಾಸ್,
ಕೆ.ಆರ್. ಪುರಂ, ಹಾಸನ-೫೭೩ ೨೦೧

ಸಿರ್ಸಿಯ ವೇದಾಧ್ಯಾಯೀ ಶ್ರೀ ಪರಮೇಶ್ವರ್ ಅವರ ಬಿಚ್ಚು ಮಾತುಗಳು



ವೇದಸುಧೆಯ ಅಭಿಮಾನಿಗಳಾದ ಸಿರ್ಸಿಯ ವೇದಾಧ್ಯಾಯೀ ಶ್ರೀ ಪರಮೇಶ್ವರ್  ಇವರು ಸಂಸ್ಕೃತ MA ಪದವೀದರರು. ಸಿರ್ಸಿಯಲ್ಲಿ ವೈದಿಕ ವೃತ್ತಿ ಮಾಡುತ್ತಿರುವ ಶ್ರೀಯುತರು ದಿನದಲ್ಲಿ ಬಹುಭಾಗವನ್ನು ಅಧ್ಯಯನಕ್ಕಾಗಿ ಮೀಸಲಿಟ್ಟಿರುವುದು ಅವರ ಮಾತುಗಳಲ್ಲಿ ವ್ಯಕ್ತವಾಗುತ್ತದೆ. ಶ್ರೀಯುತರೊಡನೆ ಅಂತರ್ಜಾಲದಲ್ಲಿ ಕರೆಮಾಡಿ ನಮ್ಮ ಸಂಭಾಷಣೆಯನ್ನು ಅವರ ಅನುಮತಿ ಪಡೆದು ರೆಕಾರ್ಡ್ ಮಾಡಿರುವೆ. ಇಲ್ಲಿ ಪ್ರಕಟಿಸುವುದಾಗಿ ನಾನು ಶ್ರೀಯುತರ ಗಮನಕ್ಕೆ ತಂದಿಲ್ಲವಾದರೂ ವೇದಸುಧೆಯೊಡನೆ ಮಾಡಿದ ಸಂವಾದ ನಿಮಗಾಗಿ ತಾನೇ.  ಶ್ರೀಯುತರು ಈ ಮೇಲ್ ಮೂಲಕ ವ್ಯಕ್ತಪಡಿಸಿದ ಅವರ ಅಭಿಪ್ರಾಯಗಳ ಜೊತೆಗೆ ಸಂಭಾಷಣೆಯ ಆಡಿಯೋ ಇಲ್ಲಿದೆ.
ಶ್ರಿಧರರೆ,
ವೈದಿಕರ (ಪುರೋಹಿತರ) ಇಂದಿನ ಪರಿಸ್ಥಿತಿಗೆ ನಾಕಂಡಂತೆ ಮುಖ್ಯವೆನಿಸುವ ಕಾರಣಗಳು...
     ೧ ಅತೃಪ್ತಿ.
        ಸಾಮಾಜಿಕ ಏರು ಪೇರುಗಳಿಗೆ ನೇರವಾಗಿ ಬಲಿಯಾದ ಪುರೋಹಿತರು ಅತೃಪ್ತರಾಗಿದ್ದಾರೆ. ಗೌರವಮಾತ್ರದಿಂದ ಜೀವನ ನಿರ್ವಹಣೆ ಕಷ್ಟಸಾಧ್ಯ! ಪೌರೋಹಿತ್ಯವನ್ನು ಉದ್ಯೋಗ ಎನ್ನಲು ಸಾಧ್ಯವಾಗುತ್ತಿಲ್ಲಾ! ಹಾಗಂತ ಇವರು ನಿರುದ್ಯೋಗಿಗಳೂ ಅಲ್ಲ!
    ೨ ವಿದ್ಯಾರ್ಹತೆ ಕೊರತೆ.
      ಎಲ್ಲೂ ಸಲ್ಲದವ ಇಲ್ಲಿ ಸಲ್ಲುತ್ತಾನೆ! ಇಲ್ಲಿ ಯಾರೂ ಪ್ರಶ್ನಿಸುವುದಿಲ್ಲಾ ಎಂಬ ವಿಶ್ವಾಸ. ಅಲ್ಲದೆ ಇಲ್ಲಿ ಓದಿದವನೂ-ಓದದವನೂ ಸಮಾನ ಸಂಮಾನಕ್ಕೆ ಒಳಗಾಗುತ್ತಾನೆ. ಸ್ವತಃ ಯಜಮಾನನಿಗೂ ವೈದಿಕದ ಜ್ಞಾನವಿಲ್ಲದಿರುವುದು. ಹೀಗೆ ಇಬ್ಬರಲ್ಲೂ ಅರ್ಹತೆ ಪ್ರಶ್ನಾತೀತವಾಗಿದೆ!!!
    ೩ ಅನಧಿಕೃತ ಸ್ಥಿತಿ.
       ಈ ಸಮಾಜದಲ್ಲಿ ಪುರೋಹಿತನ ನಿಲುವು ಅಧಿಕೃತವಾಗಿಲ್ಲ. ಎಲ್ಲಕಡೆಯಿಂದ ಮುಚ್ಚುಮರೆ ತುಂಬಿದೆ. (ಜಾತಿ-ಮತ-ಪಂಥ-ಮಡಿ-ಮೈಲಿಗೆ-ಬುಧ್ಧಿವಾದ-ಬುಧ್ಧಿಜೀವಿಗಳವಾದ-ಶ್ರದ್ಧೆ-ನಂಬಿಕೆ ಇತ್ಯಾದಿ)
    ೪ ಭವಿಷ್ಯವಾದಿಗಳ ಅಟ್ಟಹಾಸ.
       ಇಂದು ಭವಿಷ್ಯವಾದಿಗಳು ವೈದ್ಯರಂತೆಯೂ, ವೈದಿಕರು ಔಷಧಿವಿತರಕರಂತೆಯೂ ಆಗಿದ್ದಾರೆ. ಸಂಸ್ಕಾರವೋ, ಚಿತ್ತಶುದ್ಧಿಯೋ ಮೂಲವಾಗಬೇಕಿದ್ದ ಕರ್ಮ, ಇಂದು ಸ್ವಾರ್ಥ ಸಾಧನೆಗೆ ಹೆಚ್ಚು ಬಳಕೆಯಾಗುತ್ತಿದೆ.
     ೫ ಆಡಂಬರ ಮತ್ತು ಸಾಂಪ್ರದಾಯಿಕತೆ.
       ಆಡಂಬರ ಮುಖ್ಯವಾಗಿ ಸಂಸ್ಕಾರಕರ್ಮಗಳು ಅರ್ಥಹೀನವಾಗಿವೆ. ಮತ್ತು ಸಾಂಪ್ರದಾಯಿಕ ಆಚರಣೆ ಜನಜನಿತವಾಗಿ, ಅಲ್ಲಲ್ಲಿ ಹೊಸ ಹೊಸ ಸಂಪ್ರದಾಯಗಳು ಎದ್ದು, ಕರ್ಮವನ್ನೇ ತಿಂದುಹಾಕಿವೆ.
ಇನ್ನು ವೇದೋಕ್ತ ಕರ್ಮಗಳು ಎಂಬ ವಿಷಯವಾಗಿ...
ಶ್ರುತಿವಿಹಿತ ಕರ್ಮಗಳನ್ನು ಶ್ರೌತಕರ್ಮಗಳೆಂದೂ, ಸ್ಮೃತಿವಿಹಿತಕರ್ಮಗಳನ್ನು ಸ್ಮಾರ್ತಕರ್ಮಗಳೆಂದೂ ವಿಂಗಡಿಸಿದ್ದಾರೆ. ಹೆಚ್ಚಾಗಿ ನಮ್ಮ ಆಚರಣೆ ಸ್ಮಾರ್ತವೇ ಆಗಿದೆ. ಹೀಗೆ ಹಿನ್ನೆಲೆಯಿರುವ ಕರ್ಮ ಮುನ್ನೆಡೆಗೆ ಕಾರಣ ಎಂಬಲ್ಲಿ ಸಂಶಯವಿಲ್ಲಾ!
ಶ್ರುತಿ - ಸ್ಮೃತಿ - ಸೂತ್ರ - ಕಾರಿಕಾ - ಪ್ರಯೋಗ ಈ ಕ್ರಮದಲ್ಲಿ ಕರ್ಮಕ್ಕೆ ಹತ್ತಿರವಾದದ್ದು ಪ್ರಯೋಗ. ಸೂತ್ರಾದಿಯಾಗಿ ಪ್ರಯೋಗಾಂತ ಗ್ರಂಥಗಳು ಕಲ್ಪಗ್ರಂಥಗಳು. ಈ ಕಲ್ಪಗಳನ್ನು ಆಧರಿಸಿಬಂದ ಕರ್ಮಗಳನ್ನು ಮಾನ್ಯವೆಂದೂ, ಕಪೋಲ ಕಲ್ಪಿತ ಕರ್ಮಗಳನ್ನು ಅಮಾನ್ಯವೆಂದೂ ನಿರ್ಧರಿಸೋಣ ಅಲ್ಲವೇ!!!???

Sunday, September 23, 2012

ನಮ್ಮ ಆಚರಣೆಗಳು, ಸಂಪ್ರದಾಯಗಳು ವೇದೋಕ್ತವೇ?

'ವೇದಸುಧೆ'ಯ ಓದುಗರಿಗೆ ಹಾಗೂ ಎಲ್ಲಾ ವೇದಾಭ್ಯಾಸಿಗಳಿಗೆ
ನಮಸ್ಕಾರಗಳು.
ದಿನಾಂಕ 30-09-2012ರಂದು ಹಾಸನದಲ್ಲಿ ಒಂದು ಒಳ್ಳೆಯ ವಿಚಾರ ಪ್ರಚೋದಕ ಕಾರ್ಯಕ್ರಮವಿದೆ. ಆಹ್ವಾನ ಪತ್ರಿಕೆ ಇದೋ ಇಲ್ಲಿದೆ. ಬಿಡುವು ಮಾಡಿಕೊಂಡು ಭಾಗವಹಿಸಿ. ಬರುವ ಕುರಿತು ಪೂರ್ವಭಾವಿಯಾಗಿ ತಿಳಿಸಬಹುದೇ?






ಕಾರ್ಯಕ್ರಮದಲ್ಲಿ ಪಾಲ್ಗೊಳ್ಲಲು ಸಂಪರ್ಕಿಸಿ: ಹರಿಹರಪುರಶ್ರೀಧರ್: 9663572406 ಕವಿ ನಾಗರಾಜ್:9448501804 ಈ ಮೇಲ್: vedasudhe@gmail.com

ಉಪದೇಶದಿಂದ ಸ್ವಭಾವ ಬದಲಾಯಿಸುವುದು ಸಾಧ್ಯವಿಲ್ಲ

ಸ್ವಭಾವೋ ನೋಪದೇಶೇನ ಶಕ್ಯತೇ ಕರ್ತುಮನ್ಯಥಾ ।
ಸುತಪ್ತಮಪಿ ಪಾನೀಯಂ ಪುನರ್ಗಚ್ಚತಿ ಶೀತತಾಮ್ ॥

ಉಪದೇಶ ಮಾಡುವುದರಿಂದ ಒಬ್ಬನ ಸ್ವಭಾವವನ್ನು ಬದಲಾಯಿಸುವುದು ಸಾಧ್ಯವಿಲ್ಲ ನೀರನ್ನು ಚೆನ್ನಾಗಿ ಕುದಿಸಿದರೂ ಕೂಡಾ ಮತ್ತೆ ಅದು ತಣ್ಣಗೇ ಆಗುತ್ತದೆ. 



Saturday, September 22, 2012

ಅಂತರ್ಜಾಲದಲ್ಲಿ ವೇದಪಾಠದ ಬಗ್ಗೆ ಅಭಿಮಾನಿಗಳ ಅನಿಸಿಕೆಗಳು

Rudresh
August 27, 2012 at 10:23 pm 
ನಮಸ್ತೆ
ನಿಜವಾಗಿಯು ನಾವೆಲ್ಲರೂ ಅರಿಯುವ, ಅರಿತುಕೊಳ್ಳಬೇಕಾದ ವೇದಗಳ ಬಗೆಗಿನ ಕುರಿತ ಪಾಠದ ಅಗತ್ಯತೆ ಇದೆ ಎಂದು ನನಗೆ ಅನ್ನಿಸಿದೆ, ನನಗೆ ಪಾಠದ ಆಡಿಯೋ ಕ್ಲಿಪ್ ಗಳ ಅವಶ್ಯಕತೆ ಇದೆ. ದಯವಿಟ್ಟು ನನ್ನ ಇ-ಮೇಲ್ ವಿಳಾಸಕ್ಕೆ ಸನ್ಮಾನ್ಯರು ಕಳುಹಿಸಿಕೊಂಡುವಿರೆಂದು ನಂಬಿರುತ್ತೇನೆ
ನಮಸ್ಕಾರಗಳೊಂದಿಗೆ
-------------------------------------------------------
Suresh N Ranganath
Great idea… please send it to ennarsuresh@gmail.com Thank you.
------------------------------------------------------------
ಪ್ರೀತಿಯ ಶ್ರೀಧರ್,
ನಮನಗಳು, ಕಳೆದ ಸುಮಾರು ಒಂದು ವರ್ಷಕ್ಕೂ ಮೀರಿ ನಿಮ್ಮನ್ನು ಸಂಪರ್ಕಿಸಲಾಗಲಿಲ್ಲ,
ಕ್ಷಮಿಸಿ. ಜೀವನದ ಅನೇಕ ಸಂಗತಿಗಳು,ಸಂಭಂದಗಳು, ನನ್ನನ್ನು ಅನೇಕ ಒಳ್ಳೆಯ ಸಂಗತಿ ಗಳಿಂದಲೂ ವಿಮುಖ ಗೊಳಿಸಿತು, ಹಾಗಾಗಿ ನನಗೆ ನಾನೇ ಒಂಟಿ ಆದೆ. ನನಗೆ ವೇದಾಧ್ಯಾಯೀ ಶ್ರೀ ವಿಶ್ವನಾಥಶರ್ಮರು ನೀಡುತ್ತಿರುವ ವೇದಪಾಠವನ್ನು ( ಆಡಿಯೋ -ಧ್ವನಿ ಶ್ರಾವ್ಯ) ವನ್ನು ದಯವಿಟ್ಟು ಕಳುಹಿಸಿ, ಖಂಡಿತಾ ವೇದಪಾಠದ ಎಲ್ಲಾ ಆಡಿಯೋ ಗಳನ್ನೂ, ಮುಂದೂ ಕಳುಹಿಸುತ್ತಿರಿ.
ವಂದನೆಗಳೊಂದಿಗೆ,
ಬಿ. ಎಸ್ಸ್. ಲಕ್ಷ್ಮೀ ನಾರಾಯಣ ರಾವ್.
ಮೈಸೂರು
--------------------------------------------------------------------
Dayananda
August 21, 2012 at 8:46 pm 
ವೇದ ಪಾಠ ಕೇಳಿ ಜನ್ಮ ಸಾರ್ಥಕ ಮಾಡಿಕೊಳ್ಳುವುದಕ್ಕೆ ಸದಾವಾಕಾಶ ಮಾಡಿಕೊಟ್ಟಿದಕ್ಕೆ ಧನ್ಯವಾದಗಳು
----------------------------------------------------------
– ಹೌದು, ಶರ್ಮರು ಹೇಳಿಕೊಡುತ್ತಿರುವ ಪಾಠವನ್ನು ಪ್ರತೀ ವಾರ ಇಲ್ಲಿ ಪ್ರಕಟಿಸಿದರೆ ಒಳ್ಳೇದು.
-Santhosh Sharma
------------------------------------------------------------------------
manjunath g s
August 20, 2012 at 11:35 pm
ಒಳ್ಳೆಯ ಶ್ಲಾಘನೀಯ ಪ್ರಯತ್ನ. ಮುಂದುವರೆಯಲಿ. ಪ್ರಖರ ಪ್ರಸರಣವೇ ಆಗಬೇಕಿದೆ. ಅಪ್ಲೋಡ್ ಮಾಡುತ್ತಿರಿ. ಶರ್ಮರ ಧ್ವನಿ, ವಿಚಾರ ಎರಡೂ ಸ್ಪಷ್ಟವಿದೆ. ಮತ್ತಷ್ಟು ಜನರಿಗೆ ಈ ಮೂಲಕವೇ ಹಂಚೋಣ.
------------------------------------------------------------------------
I am thrilled to see vedasudhe.I would like to subscribe and receive all lessons please.
Please enroll me as a member
RAMESH RAO
Bangalore
------------------------------------------------------------------------------
sudha
August 24, 2012 at 4:11 pm 
ನನಗೆ ಒಳ್ಳೆಯದಾಗಲಿ ಎಂದು ಮಹಾತ್ಮ ರೊಬ್ಬರು ಇದನ್ನು ಹೇಳಿಕೊಟ್ಟರು .ನಾನು ದಿನವೂ ಹೇಳಿಕೊಳ್ಳುತ್ತೇನೆ .ಇದರ ಅರ್ಥ ಏನು ಎಂದು ಕೇಳಲು ಹೋಗಲಿಲ್ಲ ಅವರನ್ನು . ಇಲ್ಲಿ ಹೇಗೆ ಹೇಳುವುದು ,ಏನು ಅರ್ಥ ಎಂದು ತಿಳಿದು ಸಂತೋಷವಾಯ್ತು .
ಧನ್ಯವಾದಗಳು .
------------------------------------------------------------------------
ನಿಮ್ಮ ಪ್ರಯತ್ನ ಶ್ಲಾಘನೀಯವಾದದ್ದು. ನಾನು ಬೆಂಗಳೂರಿನಲ್ಲಿರುವುದರಿಂದ ವೇದಪಾಠಕ್ಕೆ ಹಾಜರಾಗಲು ಆಗುತ್ತಿಲ್ಲ. ದಯಮಾಡಿ ನನಗೆ ಇ-ಮೆಯಿಲ್ ಮೂಲಕ ಪಾಠ ಗಳನ್ನು ಕಳಿಸಬೇಕೆಂದು ಕೇಳಿಕೊಳ್ಳುತ್ತೇನೆ.
ತಮ್ಮ ವಿಶ್ವಾಸಿ,

ರಮೇಶ್ ಮಾವಿನಕುರ್ವೆ
----------------------------------------------------------
Sir ,
I am interested in learning the Vedas . I request you to kindly mail
me the Veda pathas from the beginning .

I thank you in advance

Milan Mahale
------------------------------------------------------------
ನಮಸ್ಕಾರಗಳು,

ನಾನು ಬೆಂಗಳೂರಿನಲ್ಲಿರುವುದರಿಂದ ಈ ವೇದ ಪಾಠದಲ್ಲಿ ಭಾಗವಹಿಸಲಾಗುವುದಿಲ್ಲ. ದಯವಿಟ್ಟು ನನಗೂ ಸಹಾ ಈ ಮೈಲ್ ಮೂಲಕ ಪಾಠವನ್ನು ಕಳುಹಿಸಿ.

ಧನ್ಯವಾದಗಳು,
ಗಿರೀಶ್ ನಾಗಭೂಷಣ
(gireeshdn@live.com)
-----------------------------------------------------------------
ಶ್ರೀಯುತ ಶ್ರೀಧರ್ ಅವರಿಗೆ ನನ್ನ ನಮಸ್ಕಾರಗಳು. ವೇದ ಪಾಠವನ್ನು ಕಲಿಸಲು ನವ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತಿರುವುದು ನಿಜಕ್ಕೂ ಸಂತೋಷದ ವಿಷಯ. ಇಂದೇ ನಾನು ಈ ವೆಬ್ ಸೈಟ್ ನೋಡಿದ್ದು. ನನಗೆ ಇದನ್ನು ಅತ್ಯಂತ ಖುಷಿ ಆಗುತ್ತಿದ್ದೆ. ವೇದವನ್ನು ನಿಜವಾದ ಅರ್ಥದಲ್ಲಿ ತಿಳಿಯಲು ನಾನು ಉತ್ಸುಕನಾಗಿದ್ದೇನೆ. ದಯವಿಟ್ಟು ವೇದ ಪಾಠದ ಮೊದಲ ಕಂತಿನಿಂದ ಇಲ್ಲಿಯವರೆಗಿನ ಎಲ್ಲ ಪಾಠಗಳನ್ನು ದಯವಿಟ್ಟು ಕಳುಹಿಸಿಕೊಡಿ ಎಂದು ತಮ್ಮಲ್ಲಿ ಕೋರುತ್ತಿದ್ದೇನೆ.
ಅನಂತ ಧನ್ಯವಾದಗಳೊಂದಿಗೆ
ಮನೋಜ್ ಬಿ ಎ
-------------------------------------------------------------
ಶ್ರೀಯುತ ಶ್ರೀಧರ್ ರವರಿಗೆ ಮಾಡುವ ವ೦ದನೆಗಳು.

ನೀವು  ಹಿ೦ದೂ ಧರ್ಮದ ಬಗ್ಗೆ ವಹಿಸುವ ಕಾಳಜಿ ನನಗೆ ಅತ್ಯಾನ೦ದ ಹಾಗೂ ಆಶ್ಯರ್ಯವನ್ನು ಉ೦ಟು ಮಾಡುತ್ತದೆ.

ಕಾರಣ ನಾನು ರಿಟೈರ್ ಆಗಿದ್ದರೂ ಸಮಯ ಹೊ೦ದಿಸಿಕೊಳ್ಳಲು ಚಡಪಡಿಸಿಕೊಳ್ಳೂತ್ತಾ ಇದ್ದೇನೆ. ಹಾಗೂ ನಿಮ್ಮ


ವೇದ ಸುಧೆಯ ನ್ನು ತೀರ್ಥ, ಪ್ರಸಾದದ ಹಾಗೆ ಸವಿಯುತ್ತಿದ್ದು ಅದನ್ನು ಊಟ(ಭೋಜನ)ದ ಹಾಗೆ ಸವಿಯಲು

ಸಮಯವಿಲ್ಲವೆ೦ದು ನ೦ತರ ವೆ-೦ದು ಪೋಸ್ಟ್ ಪೋನ್ ಮಾಡುತ್ತಿದ್ದಾ ಇದ್ದೇನೆ. ಕಾರಣ ಗಳು ಹಲವಾರು.

ಒಮ್ಮೆ ನಿಮ್ಮನ್ನು ಮುಖತಾ ಭೇಟಿಯಾಗುವೆ.

ಧನ್ಯವಾದಗಳು.

ಮಾಳ ಮುಕು೦ದ ಚಿಪಳೂಣಕರ್.
--------------------------------------------------------------------
 i am one of your recipient of your vedaptha & i following your blog , web site since one year. good going.

 My name : k venugopal bellary.
----------------------------------------------------------------
Gurugale!
Nimma ee prayatna safalavaagali endu devaralli prarthane.EE deshadalle idu prathama endu nanna bhavaane

Vandanegalu
SHivaprasad
----------------------------------------------------------------
ಹರೇ ರಾಮ್,

ಆತ್ಮಿಯ ಶ್ರೀಧರ್ ಅವರೇ,

ನಿಮ್ಮ ಅಂತರ್ಜಾಲದ ವೇದ ಉಪನ್ಯಾಸ ವ್ಯೆವಸ್ಥೆಯಿಂದ ದೂರದಲ್ಲಿ ಇರುವ ನಮ್ಮಂತಹ ಕನ್ನಡಿಗರಿಗೆ ತುಂಬಾ ಅನುಕೂಲವಾಗಿದೆ. ಇದಕ್ಕಾಗಿ ನಾವು ನಿಮಗೆ ಚಿರಋಣಿ.
ಇ-ಮೇಲ್ ಮುಖಾಂತರ ವೇದ ಪಾಠ ಸಿಗುತ್ತಿರುವುದು ನಮಗೆ ಬಹಳ ಸಂತೋಷವಾಗಿದೆ. ನಾವು ವೇದಗಳ ಬಗ್ಗೆ ತಿಳಿಯಲು ಉತ್ಸುಕರಾಗಿದ್ದೇವೆ.
ದಯವಿಟ್ಟು ವೇದಪಾಠವನ್ನು ಈ ನಮ್ಮ ಕೆಳಗಿನ ಇ-ಮೇಲ್ ವಿಳಾಸಕ್ಕೆ ಕಳುಹಿಸಿ.

alavandimath@gmail.com
pradeep.hedge@gmail.com

ಧನ್ಯವಾದಗಳೊಂದಿಗೆ,
ಶಿವರಾಜ್ ಆಳವಂಡಿಮಠ
ಪ್ರದೀಪ್ ಹೆಗಡೆ

London, UK
-------------------------------------------------------------------------
ನಮಸ್ತೆ ಶ್ರೀ ಶ್ರೀಧರ್ ರವರಿಗೆ. ಈಗಷ್ಟೇ ವೇದಸುಧೆಯ ತಾಣವನ್ನು ನೋಡಿ ನಿಮಗೆ ಕೋರಿಕೆ ಕಳುಹಿಸುತ್ತಿದ್ದೇನೆ. ವೇದಪಾಠವನ್ನು ಹೀಗೂ ತಿಳಿಯಬಹುದೆ೦ಬ ಕಲ್ಪನೆಯೂ ಇರಲಿಲ್ಲ. ವೇದವೆ೦ದರೆ ಸ೦ಸ್ಕೃತ ಬಲ್ಲವರಿಗೆ ಮಾತ್ರ ಎ೦ದು ತಿಳಿದಿದ್ದೆ. "ಶ್ರೀ ಸುಧಾಕರ ಶರ್ಮರ " ವೇದವನ್ನು ಹೇಗೆ ಅರ್ಥಮಾಡಿಕೊಳ್ಳಬೇಕು ಎ೦ಬ ನಿಮ್ಮ ಲೇಖನವನ್ನು ಓದಿ , ಎಲ್ಲರೂ ವೇದಗಳನ್ನು ತಿಳಿಯಬಹುದು ಎ೦ಬ ಆಶಯ ಮೂಡಿದೆ. ಬಹಳ ಉತ್ತಮವಾದ ಕಾರ್ಯ ಸರ್. ಶುಭವಾಗಲಿ.

ದಯವಿಟ್ಟು ನನಗೆ ವೇದಪಾಠದ ಮೊದಲ ಕ೦ತುಗಳಿ೦ದ ಇಲ್ಲಿಯವರೆಗೆ ನಡೆದ ಕ೦ತುಗಳನ್ನು ಮೈಲ್ ಮಾಡಿ ಎ೦ದು ಕೋರಿಕೊಳ್ಳುತ್ತಿದ್ದೇನೆ. ಹಾಗೂ ವೇದಪಾಠಕ್ಕೆ ಈ-ಚ೦ದಾದಾರನಾಗಲು ಬಯಸಿದ್ದೇನೆ.

ಪ್ರಣಾಮಗಳೊ೦ದಿಗೆ,
ರವಿಶಂಕರ್
--------------------------------------------------------------------
ಶ್ರೀಯುತ ಹರಿಹರಪುರಶ್ರೀಧರ್ ಅವರಿಗೆ ನಮಸ್ಕಾರಗಳು,

ವೆಧಸುಧೆ ತಾಣವನ್ನು ನಾನು ಬಹಳ ಗಂಭಿರವಾಗಿ ಮತ್ತು ಸಂತೋಷದಿಂದ ಹಿಂಬಾಲಿಸುತಿದ್ದೇನೆ. ಈಗಷ್ಟೇ ಶುರುವಾಗಿರುವ ವೇದ ಪಾಠ (ವೇದ ಪಾಠ - ೩) ಕೇಳಿದೆ. ಆದರೆ ಕೊಟ್ಟಿರುವ ೩ ಕೊಂಡಿಗಳು ಪೂರ್ಣ ಆವೃತ್ತಿಯನ್ನು ಒಳಗೊಂಡಿಲ್ಲ. ದಯವಿಟ್ಟು ಎಲ್ಲ ಪಾಟಗಳನ್ನು ಅಂತರ್ಜಾಲದ ಮೂಲಕ ನಾವು ಪೂರ್ತಿಯಾಗಿ ಕೇಳುವ / ಕಲಿಯುವ ಅವಕಾಶ ಮಾಡಿಕೊಡಿ.

ಅನಂತ ಪ್ರನಾಮಗಳೊಂದಿಗೆ,
ಭಾರತ್
ಬೆಂಗಳೂರು