Pages

Monday, March 8, 2010

ಬೆಳಕಿನ ಕಿಂಡಿ

ವೇದವು ಯಾರ ಸ್ವತ್ತು?
ಇಂದು ವೇದದ ಬಗೆಗೆ ತಪ್ಪು ಕಲ್ಪನೆಗಳೇ ಹೆಚ್ಚು.ವೇದವು ಯಾರ ಸ್ವತ್ತು? ಬ್ರಾಹ್ಮಣರು ಮಾತ್ರ ಕಲಿಯ ಬೇಕೆ? ಅಥರ್ವಣವೇದದಲ್ಲಿ ಈ ಬಗ್ಗೆ ಏನು ಹೇಳಿದೆ? ಈ ಬಗ್ಗೆ ನೋಡೋಣ.

ಪ್ರಜಯಾ ಸ ವಿಕ್ರಿಣೀತೇ
ಪಶುಭಿಶ್ಚೋಪದಸ್ಯತಿ|
ಯ ಆರ್ಷೇಯೇಭ್ಯೋ ಯಾಚದ್ಭ್ಯೋ
ದೇವಾನಾಂ ಗಾಂ ನ ದಿತ್ಸತಿ||

[ಅಥರ್ವ.೧೨.೪.೨]

ಅರ್ಥ:
ಯಾವನು ಆರ್ಷೇಯರಾದ ಅಂದರೆ ಪರಮಋಷಿಯಾದ ಪರಮಾತ್ಮನ ಮಕ್ಕಳಾದ ಜ್ಞಾನಯಾಚನೆ ಮಾಡುವ ಜನರಿಗೆ, ವಿದ್ವಜ್ಜನರ ಸಂಪತ್ತಾದ ವೇದವಾಣಿಯನ್ನು ಕೊಡಲು ಇಚ್ಛಿಸುವುದಿಲ್ಲವೋ, ಅವನು ಮಕ್ಕಳು-ಮರಿಗಳೊಂದಿಗೆ ಮಾರಿಹೋಗುತ್ತಾನೆ. ಮತ್ತು ತನ್ನ ಪಶು ಸಂಪತ್ತಿನೊಂದಿಗೆ ನಷ್ಟ-ಭ್ರಷ್ಟನಾಗಿ ಹೋಗುತ್ತಾನೆ.
ಇದು ವೇದ ವಾಣಿ. ಇನ್ಯಾರ ಅಪ್ಪಣೆ ಬೇಕು?
ವೇದವನ್ನು ಕಲಿಯಲು ಒಂದಿಷ್ಟು ಕಟ್ಟುಪಾಡುಗಳು ಬೇಡವೇ? ಅರ್ಹತೆ ಬೇಡವೇ? ಯಾವುದೇ ವಿದ್ಯೆಯನ್ನು ಕಲಿಯಲು ಒಂದಿಷ್ಟು ಕಟ್ಟುಪಾಡುಗಳೂ ಬೇಕು, ಅರ್ಹತೆಯೂ ಬೇಕು.ಹಾಗಾದರೆ ಕಟ್ಟುಪಾಡುಗಳೇನು? ವೇದವನ್ನು ಕಲಿಯಲಿಚ್ಛಿಸುವವನು ಮಾಂಸಾಹರಿಯಾಗಿದ್ದರೆ ಮೊದಲು ಮಾಂಸಾಹಾರ ತ್ಯಜಿಸಬೇಕು.ವೇದವನ್ನು ಕಲಿಯುವ ತೀವ್ರ ಇಚ್ಛೆ ಹೊಂದಿರಬೇಕು.ಅರ್ಹತೆ ಏನು? ಉಪನಯನ ಸಂಸ್ಕಾರವಾಗಬೇಕು. ಕಲಿಯಬೇಕೆಂಬ ಇಚ್ಛೆ ತೀವ್ರ ವಾದರೆ ಗುರುವು ದೊರೆಯುತ್ತಾನಷ್ಟೇ ಅಲ್ಲ,ಬೇಕಾದ ಸಿದ್ಧತೆ ಮಾಡಿಸುತ್ತಾನೆ.ಈಗಾಗಲೇ ಅಂತಹ ಗುರುಗಳು ನಮ್ಮ ಮಧ್ಯೆಯೇ ಇದ್ದಾರೆ.ಉಪಯೋಗವಾಗಬೇಕಷ್ಟೆ.