Pages

Wednesday, July 28, 2010

ವೇದೋಕ್ತ ಜೀವನ ಪಥ

ಜೀವನ ಬುನಾದಿ -10
ಅಥರ್ವ ವೇದ ಭಕ್ತನ ಬಾಯಿಯಿಂದ ಪ್ರಭುವಿನ ಮುಂದೆ ಈ ಬೇಡಿಕೆಯನ್ನು ಮೂಡಿಸುತ್ತದೆ:
ಮೇಧಾಂ ಸಾಯಂ ಮೇಧಾಂ ಪ್ರಾತ್ರರ್ಮೇಧಾಂ ಮಧ್ಯಂದಿನಂ ಪರಿ|
ಮೇಧಾಂ ಸೂರ್ಯಸ್ಯ ರಶ್ಮಿಭರ್ವಚಸಾ ವೇಶಯಾಮಹೇ||
(ಅಥರ್ವ.6.108.5)
[ಸಾಯಂ] ಸಂಜೆ, [ಮೇಧಾಂ] ಬುದ್ಧಿಯನ್ನು [ಆವೇಶಯಾಮಹೇ] ಜೀವನಗಳಿಗೆ ಇಳಿಸಿಕೊಳ್ಳುತ್ತೇವೆ. [ಪ್ರಾತಃ] ಬೆಳಿಗ್ಗೆ [ಮೇಧಾಂ] ಬುದ್ಧಿಯನ್ನು ಜೀವನಗತಮಾಡಿಕೊಳ್ಳುತ್ತೇವೆ. [ಮಧ್ಯಂದಿನಂ ಪರಿ] ಮಧ್ಯಾಹ್ನದಲ್ಲಿಯೂ [ಮೇಧಾಂ] ಬುದ್ಧಿಶಕ್ತಿಯನ್ನೇ ತುಂಬಿಕೊಳ್ಳುತ್ತೇವೆ. [ಸೂರ್ಯಸ್ಯ ರಶ್ಮಿ ಭಿಃ] ಸೂರ್ಯನ ಕಿರಣಗಳೊಂದಿಗೆ [ವಚಸಾ] ವಿದ್ವಜ್ಜನರ ಉಪದೇಶ ವಚನಗಳಿಂದ [ಮೇಧಾಂ ಆವೇಶಯಾಮಹೇ] ಬುದ್ಧಿಯನ್ನು ಬಾಳಿಗೆ ಬೆಸೆದುಕೊಳ್ಳುತ್ತೇವೆ. ಬೇರೆ ಮತ-ಮತಾಂತರಗಳ ಶಾಸ್ತ್ರಗಳಿಗೂ, ಭಗವದ್ದತ್ತವಾದ ವೈಜ್ಞಾನಿಕ ಶಾಸ್ತ್ರಗಳಾದ ವೇದಗಳಿಗೂ ಇರುವ ವ್ಯತ್ಯಾಸವಿದೇ. ಭಕ್ತನು ಭಗವಂತನಲ್ಲಿ ಸ ಮೇ ಶ್ರದ್ಧಾಂ ಚ ಮೇಧಾಂ ಚ ಜಾತವೇದಾ| ಪ್ರ ಯಚ್ಛತು|| (ಅಥರ್ವ.19.64.1) [ಸ ಜಾತವೇದಾ] ಆ ಸರ್ವವ್ಯಾಪಕ ಸರ್ವಜ್ಞನಾದ ಭಗವಂತನು [ಮೇ] ನನಗೆ [ಶ್ರದ್ಧಾಂ ಚ ಮೇಧಾಂ ಚ ಪ್ರಯಚ್ಛತು] ಶ್ರದ್ಧೆಯನ್ನೂ ಬುದ್ಧಿಯನ್ನೂ ಕರುಣಿಸಲಿ - ಎಂದೇ ಬಿನ್ನಹ ಮಾಡಿಸುತ್ತದೆ. ಬುದ್ಧಿಸಂಗತವಾದ ವೇದಗಳು ಎಷ್ಟು ಸೊಗಸಾಗಿ ಶ್ರದ್ಧೆಗೆ ಸಲ್ಲಬೇಕಾದ ಸ್ಥಳವನ್ನು ನಿರೂಪಿಸುತ್ತದೆ ನೋಡಿರಿ.

ಮತ್ತೇನೂ ಬೇಡ..

ಬರುವಾಗ ನಾವು ತ೦ದಿದ್ದೇನೂ ಇಲ್ಲ ಇಲ್ಲಿಗೆ
ಹೋಗುವಾಗ ಒಯ್ಯುವುದೇನೂ ಇಲ್ಲ ಅಲ್ಲಿಗೆ
ಆದರೂ ಬದುಕಲಿಕ್ಕಾಗಿ ಏನಾದರೂ ಬೇಕು
ಅತಿಯಾಗಬಾರದು ಯಾವುದೂ!
ಪ್ರೀತಿಯಿರಲಿ,ನ೦ಬಿಕೆಯಿರಲಿ,
ನಾನು-ನನ್ನವರೆನ್ನದೆ ಎಲ್ಲರೂ
ನನ್ನವರೆ೦ಬ ವಿಶ್ವಾಸವಿರಲಿ
ಯಾರನ್ನೂ ಹೊತ್ತುಕೊಳ್ಳಲೂಬಾರದು
ಇಳಿಸಲೂ ಬಾರದು!
ಎಲ್ಲರೊಳೂ ಒ೦ದಾಗಿ ಸ್ವ೦ತಿಕೆಯ ಮೆರೆಯಬೇಕು,
ಬದುಕಿನ ಬ೦ಡಿಯ ನೊಗವ ಸಮನಾಗಿ ಎಳೆದು,
ಪರಸ್ಪರ ವಿಶ್ವಾಸದಲಿ ಒಟ್ಟಿಗೇ
ಉ೦ಡೆದ್ದು ಕೈತೊಳೆಯಬೇಕು!
ಸಮಪಾಲು-ಸಮಬಾಳು
ಹ೦ಚಿ ತಿನ್ನುವ ಸೌಭಾಗ್ಯ,
ಮುಖದಲೊ೦ದು ಸ೦ತಸದ ನಗು
ಬಾಯ್ತು೦ಬಾ ಮಾತು,
ತು೦ಬಿದ ಹೃದಯದ ಹಾರೈಕೆ
ಮತ್ತೇನು ಬೇಕು ಸ೦ತಸದ ನೆಲೆಗೆ,
ಬದುಕ ಕಟ್ಟಿಕೊಳ್ಳುವುದು ನಾವು
ನಮ್ಮ ಬೇಡಿಕೆಯ ಅರಿವು ನಮಗಿರಬೇಕು
ಮತ್ತೇನೂ ಬೇಡ,ಅಷ್ಟಿದ್ದರೆ ಸಾಕು!