Pages

Tuesday, May 31, 2011

ದೇಹದಾನ - ಕೆಲವು ಮಾಹಿತಿಗಳು


Valves from the heart of a brain-dead 40-day- old infant have saved two other children from premature death in a hospital here. The infant’s eyes were also donated for cornea grafting.
[ಚಿತ್ರ ಕೃಪೆ: ಬಿ.ಬಿ.ಸಿ]


A doctor in India is steadying his nerves to dissect his father's embalmed body to help anatomy students' research at a medical college.
**************
'ಸಂಪದ' ತಾಣದಲ್ಲಿ ನನ್ನ ಲೇಖನಕ್ಕೆ ಶ್ರೀ ಗಣೇಶರು ನೀಡಿದ ಪ್ರತಿಕ್ರಿಯೆ ಹೀಗಿದೆ:
ಕವಿನಾಗರಾಜರೆ,
ನೂರಾರು ವರ್ಷ ಆರೋಗ್ಯವಂತರಾಗಿ ಬಾಳಿ ಎಂದು ಮೊದಲಿಗೆ ಹಾರೈಸುವೆ. ನಿಮ್ಮ ಅಂಗಾಂಗ ದಾನ,ದೇಹದಾನದ ನಿರ್ಧಾರಕ್ಕೆ ಜೈ. ಕೊನೆಯಲ್ಲಿ ಹೇಳಿದ ಮಾತು ತುಂಬಾ ಚೆನ್ನಾಗಿದೆ-"...ವಾಸ್ತವತೆ ಅರಿತಲ್ಲಿ, ಬದುಕಿನ ಮಹತ್ವ ತಿಳಿದಲ್ಲಿ ನನ್ನ ಈ ಬಯಕೆ ನಿಜವಾಗಿ ಬದುಕುವ ಬಯಕೆ ಎಂಬುದು ಅರ್ಥವಾಗಬಹುದು." ನಿಮ್ಮ ಮುಕ್ತಕಗಳು ನಾಗರತ್ನಮ್ಮನವರು ಹೇಳಿದಂತೆ ಅನರ್ಘ್ಯ ರತ್ನಗಳು.
ಮೈಲಾರ ಶರ್ಮ ಹಾಗೂ ಅವರ ಕುಟುಂಬದವರು ಇತರರಿಗೆ ಆದರ್ಶಪ್ರಾಯರು.
-ಗಣೇಶ.
****************
'ದೇಹದಾನ' ಕುರಿತು ಮಿತ್ರ ಶ್ರೀ ಗಣೇಶರು 'ಸಂಪದ'ದಲ್ಲಿ ಬರೆದ ಲೇಖನವನ್ನು ಅವರ ಅನುಮತಿ ನಿರೀಕ್ಷಿಸಿ ಇಲ್ಲಿ ಪ್ರತಿ ಮಾಡಿರುವೆ:
'ದೇಹದಾನ'
     "ಕಳೆದ ವರ್ಷ ಮಾರ್ಚ್‌ನಲ್ಲಿ ನನ್ನ ತಾಯಿಯವರು ಆಸ್ಪತ್ರೆಯಲ್ಲಿ ನಿಧನರಾದಾಗ ನಡೆದ ಘಟನೆ : ೫೨ ವರ್ಷ ತಾಯಿಯನ್ನು ಹೆಚ್ಚು ಕಮ್ಮಿ ಕ್ಷಣವೂ ಬಿಟ್ಟಿರದ ತಂದೆಯವರು, ತಾಯಿಯ ಬಳಿ ಸ್ವಲ್ಪ ಹೊತ್ತು ನಿಂತು ನೋಡಿ, ಹೊರಬಂದು, ನನ್ನನ್ನು ಕರೆದು, "ಅಮ್ಮನ ದೇಹದಾನ ಮೆಡಿಕಲ್ ಕಾಲೇಜ್‌ಗೆ ಮಾಡುವಂತೆ ಡಾಕ್ಟ್ರಿಗೆ ತಿಳಿಸು" ಎಂದರು. ನನಗೆ ಆಗ ಏನು ಹೇಳುವುದು, ಏನು ಮಾಡುವುದು ತೋಚಲೇ ಇಲ್ಲ. " ಈ ದೇಹದಲ್ಲಿ ಏನಿದೆ? ಅವಳು ನಮ್ಮೆಲ್ಲರ ಹೃದಯದಲ್ಲಿರುವಳು. ನಾಳೆ ಹೇಗೂ ಸುಡುವರು,ಅದರ ಬದಲು..."ಎಂದೆಲ್ಲಾ ತಮ್ಮ ದುಃಖ ನುಂಗಿ ಹೇಳುತ್ತಲೇ ಇದ್ದರು. ಸಿನೆಮಾ ನಟ ಲೋಕೇಶ್‌ರ ನಿಧನಾನಂತರ ಅವರ ದೇಹವನ್ನು ಮೆಡಿಕಲ್ ಕಾಲೇಜ್‌ಗೆ ದಾನ ನೀಡಿದ್ದು ಗೊತ್ತಿತ್ತು. http://www.chitraloka.com/flash-back/137-memories-tragedies/1754-body-donated-to-hospital.html  ಮನಸ್ಸನ್ನು ಎಷ್ಟು ಗಟ್ಟಿ ಮಾಡಿದರೂ ನನ್ನಿಂದ ಒಪ್ಪಲು ಸಾಧ್ಯವಾಗಲಿಲ್ಲ. ತಮ್ಮ ತಂಗಿಯ ಅಭಿಪ್ರಾಯ ಕೇಳಿ ಬರುವೆ ಎಂದು ತಂದೆಯ ಬಳಿ ಹೇಳಿ ಬಂದೆ. ಎಲ್ಲರೂ ಬೇಡ ಎಂದು ಒತ್ತಾಯಿಸಿದ್ದರಿಂದ ಅಪ್ಪ ಸುಮ್ಮನಾದರು.
     ನಂತರವೂ ಪ್ರತಿದಿನ ನಮ್ಮಲ್ಲಿ ನಡೆಯುವ ಕ್ರಿಯಾಕರ್ಮಗಳ ಬಗ್ಗೆ ತಂದೆಯವರು ವಿರೋಧಿಸುತ್ತಲೇ ಇದ್ದರು. "ಬದುಕಿರುವಾಗ ನೀನು ಚೆನ್ನಾಗಿ ನೋಡಿರುವೆ. ಅದು ಮುಖ್ಯ. ಇದೆಲ್ಲಾ ವ್ಯರ್ಥ..." ಎಂದು ಹೇಳುತ್ತಿದ್ದರು.
ಒಂದೆರಡು ತಿಂಗಳ ನಂತರ ತಂದೆಯವರು ಒಂದು ಅರ್ಜಿ ತಂದು ಸಹಿ ಹಾಕಲು ಹೇಳಿದರು. ನೋಡಿದರೆ ಅವರ ದೇಹದಾನದ ಅರ್ಜಿ. ಒಬ್ಬ ಡಾಕ್ಟರ್ ಮಗ ತನ್ನ ತಂದೆಯ ದೇಹವನ್ನೇ ಬಗೆದು ಮಕ್ಕಳಿಗೆ ಪಾಠ ಮಾಡಿದರೆ, http://www.bbc.co.uk/news/world-south-asia-11710741 ನಾನು ದೇಹದಾನದ ಅರ್ಜಿಗೇ ಸಹಿ ಹಾಕಲು ಹಿಂದೇಟು ಹಾಕಿದೆ.
     ಆರೋಗ್ಯವಂತರಾಗೇ ಇದ್ದ ನನ್ನ ತಂದೆಯವರು ಎಪ್ರಿಲ್ ೨೫ರಂದು ನಮ್ಮಲ್ಲಿ (ಕೊನೆಯ) ಊಟಮಾಡಿ, ತಂಗಿ ಮನೆಗೆ ಹೋದವರು, ಎಪ್ರಿಲ್ ೨೯ರಂದು ಮನೆಯಲ್ಲಿ ಮಲಗಿದ್ದಂತೆ ತೀರಿದರು. ದುಃಖದಲ್ಲಿದ್ದವನಿಗೆ ದೇಹದಾನವಾಗಲಿ, ಅಂಗಾಂಗ ದಾನವಾಗಲೀ ನೆನಪಾಗಲೇ ಇಲ್ಲ. ತೀರಿಹೋದ ೪೧ ದಿನದ ಮಗುವಿನ ಹೃದಯದ ಕವಾಟ ದಾನದಿಂದಾಗಿ ೨ ಮಕ್ಕಳಿಗೆ ಜೀವದಾನ ಎಂಬ ಪತ್ರಿಕಾ ವರದಿ ಇದೇ ೨೨ನೇ ತಾರೀಕಿನಂದು ಓದಿದೆ. http://www.manipalworldnews.com/news_local.asp?id=3249 ಕವಾಟ ದಾನದ ಬಗ್ಗೆ ಮಗುವಿನ ತಂದೆತಾಯಿಯ ಮನವೊಲಿಸಿದ Mohan (Multi Organ Harvesting Aid Network) foundation ಪ್ರಯತ್ನ ನಿಜಕ್ಕೂ ಪ್ರಶಂಸನೀಯ. http://www.mohanfoundation.org/  ಆದರ್ಶ ಅಧ್ಯಾಪಕರಾಗಿದ್ದ ತಂದೆಯವರು ಸಾವಲ್ಲೂ ಆದರ್ಶರಾಗಲು ನಾನು ಬಿಡಲಿಲ್ಲ..
-ಗಣೇಶ
*******
ಮಿತ್ರ ಗಣೇಶರೇ, ನಿಮ್ಮ ಪ್ರಾಮಾಣಿಕ ಅನಿಸಿಕೆಗೆ ವಂದಿಸುವೆ.

No comments:

Post a Comment