Pages

Tuesday, January 6, 2015

ಹಾಸನ ವೇದಭಾರತೀ,ಸಹಕಾರದೊಡನೆ ರಾಜ್ಯದಲ್ಲಿಯೇ ಮೊದಲ ಬಾರಿಗೆ ಒಂದು ಸಾವಿರ ಜನರ ಸಾಮೂಹಿಕ ಅಗ್ನಿಹೋತ್ರ




ಹಾವೇರಿ  ಸಮೀಪ ಮಲಗುಂದದಲ್ಲಿ ಪೂಜ್ಯ ಚಿದ್ರೂಪಾನಂದಸರಸ್ವತೀ ಸ್ವಾಮೀಜಿಯವರ ಆಶ್ರಮದಲ್ಲಿ  ದಿನಾಂಕ 10.2.2015 ರಂದು ಒಂದು ಸಾವಿರ ಜನರಿಂದ ಸಾಮೂಹಿಕ ಅಗ್ನಿಹೋತ್ರ ನಡೆಯಲಿದ್ದು ಆಸಕ್ತರು ಪಾಲ್ಗೊಳ್ಳಲು ಅವಕಾಶವಿದೆ. ಹಾಸನದಿಂದ ಸುಮಾರು ಒಂದು ನೂರು ವೇದಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ದಿನಾಂಕ 9.2.2015 ರಂದು ಸೋಮವಾರ ರಾತ್ರಿ 12.30 ಕ್ಕೆ ಹಾಸನದಿಂದ ರೈಲಿನಲ್ಲಿ ಹೊರಟು 10.2.2015 ಬೆಳಿಗ್ಗೆ 6.00 ಕ್ಕೆ  ಹಾವೇರಿ ತಲುಪಿ, ಅಲ್ಲಿಂದ ಆಶ್ರಮದ ಬಸ್ ಗಳಲ್ಲಿ  ಕಾರ್ಯಕ್ರಮ ಸ್ಥಳಕ್ಕೆ ಕರೆದುಕೊಂಡು ಹೋಗುವ ವ್ಯವಸ್ಥೆ ಇರುತ್ತದೆ. ಅಂದೇ ರಾತ್ರಿ 10.30 ಕ್ಕೆ ಹಾವೇರಿಯಿಂದ ರೈಲಿನಲ್ಲಿ ಹೊರಟು ಬೆಳಿಗ್ಗೆ 4.30 ಕ್ಕೆ ಹಾಸನಕ್ಕೆ ಹಿಂದಿರುಗಬಹುದಾಗಿದೆ. ಆಸಕ್ತರು ರೈಲಿನಲ್ಲಿ ಹೋಗಿಬರುವ  ಪ್ರಯಾಣದ ಖರ್ಚು ಒಬ್ಬರಿಗೆ  ರೂ 400.00 ನ್ನು ದಿನಾಂಕ 15.1.2015 ರೊಳಗೆ ಹರಿಹರಪುರಶ್ರೀಧರ್, ಮೊಬೈಲ್ ನಂಬರ್-9663572406,  ಈಶಾವಾಸ್ಯಮ್, ಶಕ್ತಿ ಗಣಪತಿ ದೇವಾಲಯ ರಸ್ತೆ, ಹೊಯ್ಸಳನಗರ, ಹಾಸನ-ಇವರಿಗೆ ತಲುಪಿಸಿ ಅಗ್ನಿಹೋತ್ರಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದಾಗಿರುತ್ತದೆ.
ಈ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ ಆಸಕ್ತರು ಪಾಲ್ಗೊಳ್ಳಲು    ಅವಕಾಶವಿದ್ದು ಪಾಲ್ಗೊಳ್ಳ  ಬಯಸುವವರು ಮೇಲ್ಕಂಡ ನನ್ನ ಮೊಬೈಲ್ ಗೆ ಕರೆಮಾಡಿ ತಿಳಿಸಲು ಕೋರುವೆ. ಮೇಲೆ ತಿಳಿಸುವ ರೈಲು ಮೈಸೂರು-ಧಾರವಾಡ ಟ್ರೈನ್ ಆಗಿದ್ದು ಅದು  ರಾತ್ರಿ 10.30 ಕ್ಕೆ ಮೈಸೂರು ಬಿಟ್ಟು ರಾತ್ರಿ 12.30ಕ್ಕೆ ಹಾಸನ ತಲುಪುತ್ತದೆ.ಅದೇ ರಲಿನಲ್ಲಿ ಹಾಸನದಿಂದ ನಾವು ನೂರು ಜನರು ಹೊರಟು ಹಾವೇರಿಯನ್ನು ಬೆಳಿಗ್ಗೆ 6.00 ಕ್ಕೆ ತಲುಪುತ್ತೇವೆ. ಅಲ್ಲಿಂದ ಆಶ್ರಮದ ಬಸ್ ನಲ್ಲಿ ಮಲಗುಂದಕ್ಕೆ ಹೋಗುವ ವ್ಯವಸ್ಥೆ ಎಲ್ಲರಿಗೂ ಇದೆ.
ಬೆಂಗಳೂರಿನಿಂದ ಹಾಗೂ ಉಳಿದ ನಗರಗಳಿಂದಲೂ ಹಾವೇರಿಗೆ ರೈಲು ವ್ಯವಸ್ಥೆ ಇದೆ. ಹಾವೇರಿಯಿಂದ ಆಶ್ರಮದ ವ್ಯವಸ್ಥೆಯಲ್ಲಿ ಮಲಗುಂದ ಕ್ಕೆ ಹೋಗ ಬೇಕೆಂದರೆ ಬೆಳಿಗ್ಗೆ 6.00 ಗಂಟೆಗೆ ಹಾವೇರಿ ತಲುಪಿರಬೇಕು. ಸಮಯ ವೆತ್ಯಾಸದಲ್ಲಿ ಹಾವೇರಿ ತಲುಪಿದರೆ ಹಾವೇರಿಯಿಂದ  ಅಕ್ಕಿಆಲೂರಿಗೆ KSRTC ಬಸ್ ನಲ್ಲಿ ಬಂದು ಅಲ್ಲಿಂದ ಆಟೋರಿಕ್ಷಾದಲ್ಲಿ ಮಲಗುಂದ ಆಶ್ರಮ ತಲುಪಬಹುದು.

No comments:

Post a Comment