Pages

Monday, November 2, 2015

ಗೋವಂಶ ಉಳಿಸಿ, ಬೆಳಸಿ, ಗೋವನ್ನು ರಕ್ಷಿಸಿ-ಎನ್ನುವುದು BJP ಶ್ಲೋಗನ್ ಆಗಬೇಕೇ?


ಅಬ್ಬಾ!ಒಂದುಕಾಲದಲ್ಲಿ ಸೂರ್ಯೋದಯಕ್ಕೆ ಮುಂಚೆ ಹಾಸಿಗೆಯಿಂದೆದ್ದು ಮನೆಯ ಒಂದು ಭಾಗದಲ್ಲಿರುತ್ತಿದ್ದ ಕೊಟ್ಟಿಗೆಯಲ್ಲಿನ ಗೋವುಗಳ ದರ್ಶನ ಮಾಡಿ ಮುಖ ತೊಳೆದು , ಸೂರ್ಯೋದಯ   ವಾಗುತ್ತಿದ್ದಂತೆ ಮನೆಯ ಹೊರಗೆ ಸೂರ್ಯದೇವನಿಗೆ ಕೈ ಮುಗಿದು ಆರಂಭವಾಗುತ್ತಿದ್ದ ದಿನಚರಿ!! ಇದು ಸಾಮಾನ್ಯವಾಗಿ  ನಮ್ಮ ಎಲ್ಲಾ ಹಳ್ಳಿ ರೈತರ ಜೀವನ ಪದ್ದತಿ! ಸೋಮವಾರಗಳಲ್ಲಿ ಎತ್ತಿನ ಬದಲು ಪತಿಪತ್ನಿಯರೇ ನೊಗ ಹೊತ್ತು ಭೂಮಿ ಉಳುತ್ತಿದ್ದುದು ಸಾಮಾನ್ಯ ದೃಶ್ಯ!
ಗೋವೆಂದರೆ ಅಷ್ಟು ಭಕ್ತಿ. ಗೋಮಾತಾ ಪ್ರತ್ಯಕ್ಷ ದೇವತೆ. ಯಾರಿಗೆ ಈ ವಿಷಯ ಗೊತ್ತಿಲ್ಲ? ಸಿದ್ರಾಮಯ್ಯನವರಿಗೆ ಗೊತ್ತಿಲ್ಲವೇ? ಉಳಿದ ರಾಜಕಾರಣಿಗಳಿಗೆ ಗೊತ್ತಿಲ್ಲವೇ?
ರಾಜಕೀಯಕ್ಕಾಗಿ ಏನೆಲ್ಲಾ ಮಾತಾಡ್ತಾರೆ? ಏನೆಲ್ಲಾ ಮಾಡ್ತಾರೆ?
ರಸ್ತೆಯಲ್ಲಿ ಸಹಭೋಜನ ಮಾಡಿ-ಅಲ್ಲಿ ಗೋಮಾಂಸ ತಿನ್ನುತ್ತಾರೆ! ಪುರಭವನದೆದುರು, ಜಿಲ್ಲಾಧಿಕಾರಿಗಳ ಕಚೇರಿ ಎದಿರು ಗೋಮಾಂಸದೂಟಮಾಡುತ್ತಾರೆ!!
ಛೆ! ಛೇ!!
ಇದೇನಿದು? ಏನಾಯ್ತು ಈ ರಾಜಕಾರಣಿಗಳಿಗೆ?
ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತ. ಕಾಂಗ್ರೆಸ್ಸಿನ ನಮ್ಮ ಮುಖ್ಯ ಮಂತ್ರಿ ಹೇಳ್ತಾರೆ- " ಇದುವರೆವಿಗೆ ನಾನು ಗೋಮಾಂಸ ತಿಂದಿಲ್ಲ. BJP ಯವರಿಗೆ ಬುದ್ಧಿ ಕಲಿಸಲು ಗೋಮಾಂಸವನ್ನು ತಿನ್ನುವೆ. ಹಂದಿ ಮಾಂಸವನ್ನೂ ತಿನ್ನುವೆ.
ಸ್ವಾಮಿ, ಮುಖ್ಯಮಂತ್ರಿಗಳೇ
ನೀವು ಮುಖ್ಯಮಂತ್ರಿಗಳಾಗಲು ಕರ್ನಾಟಕದ ಮತದಾರ ಕಾರಣ. BJP ಯವರಿಗೆ ಚಾಲೆಂಜ್ ಮಾಡಲು ಗೋಮಾಂಸ ತಿನ್ನುತ್ತೇನೆಂದರೆ ಅದರರ್ಥವೇನು? ಸಾಮಾನ್ಯಮತದಾರನ ಭಾವನೆಗೆ ಅದೆಷ್ಟು ಪೆಟ್ಟು ಬೀಳುತ್ತದೆಂದು ಯೋಚಿಸಿದ್ದೀರಾ?
ಈಗಾಗಲೇ ನಮ್ಮ ಸಾಮಾಜಿಕ ಸ್ವಾಸ್ಥ್ಯ ಹದಗೆಟ್ಟಿರುವುದು ಸಾಲದೇ? ಇನ್ನೂ ಅದೆಷ್ಟು ಹದಗೆಡಬೇಕು? ನಾಡಹಸು ಎತ್ತುಗಳ ವಂಶ ಕೊನೆಯಾದರೆ ಅದೆಂತಹ ಘೋರಪರಿಣಾಮ ಬೀರುತ್ತದೆಂಬ ವಿವೇಚನೆ ನಿಮಗಿದೆಯೇ?
ದನಗಳ ಗೊಬ್ಬರದಿಂದ ಬೆಳೆಯುತ್ತಿದ್ದ ಬೆಳೆ ಹೇಗಿರುತ್ತಿತ್ತು?
ಮನೆಯಲ್ಲಿ ಒಂದು ಜೊತೆ ಎತ್ತು ಒಂದು ಕರಾವಿನ ಹಸು ಇದ್ದರೆ ಒಂದು ಎಕರೆ ಜಮೀನಿನಲ್ಲಿ ರೈತ ಎಷ್ಟು ಆನಂದವಾಗಿ ಬಾಳ್ಮೆ ನಡೆಸುತ್ತಿದ್ದರು!!
ಜೋಡೆತ್ತಿನ ಗಾಡಿ!!
ನೇಗಿಲಿನಿಂದ ಉಳುಮೆ!!
ದನಗಳ ಗೊಬ್ಬರ!
ಕರಾವಿನ ಹಸು!!
ಈ  ವಾಕ್ಯಗಳು ನೆನಪಾದಾಗ ನಿಮ್ಮ ಕಣ್ಣು ತೇವಗೊಳ್ಳಲಿಲ್ಲವೆಂದರೆ ಈ ನೆಲದ ವಾಸನೆ ಮರೆತು ಹೋಗಿದೆ ಎಂದೇ ಭಾವಿಸಬೇಕಾಗುತ್ತದೆ!!
ಇದೇ ನಾಡದನಗಳ ಸಗಣಿ, ಗಂಜಲಗಳು ಹಲವಾರು ರೋಗಗಳಿಗೆ ರಾಮಬಾಣ!! ಎನ್ನುವುದು ಇತ್ತೀಚಿನ ಸಂಶೋಧನೆ!!!!
ಆದರೆ ಇದೇ ನಾಡದನಗಳ ಉಸಿರಿನ ವಾಸನೆಯಿಂದಲೇ ಮನೆಯಲ್ಲಿ ಆರೋಗ್ಯ ನೆಲೆಸುತ್ತಿತ್ತು! ಎಂಬುದು ನಮ್ಮ ಹಿರಿಯರ ಅನುಭವ!!
ಸ್ವಾಮಿ,
ನಿಮ್ಮ  ರಾಜಕಾರಣಕ್ಕಾಗಿ ಸಮಾಜದ ಸ್ವಾಸ್ಥ್ಯವನ್ನು ನಾಶಮಾಡಬೇಡಿ.
ಇಡೀ ವಿಶ್ವವು ನಮ್ಮ ಕಡೆ ನೋಡುತ್ತಿದೆ! ಎಂಬ ಎಚ್ಚರ ನಿಮಗೂ ಇರಲಿ. ವಿಶ್ವವು ನಮ್ಮನ್ನು ಗೌರವಿಸಲು  ಪ್ರಮುಖ ಕಾರಣ ಏನೆಂಬುದರ ಅರಿವು ನಿಮಗಿಲ್ಲವೇ?
ಇಂದಿನ ಯುವಕರಿಗೆ ಈ ನೆಲದ ಮಣ್ಣಿನ ವಾಸನೆ ಗೊತ್ತಿಲ್ಲ. ಅದೆಲ್ಲಾ ರಾಸಾಯನಿಕ ಗೊಬ್ಬರದಿಂದ ಗಬ್ಬೆದ್ದು ಹೋಗಿದೆ! ಪಾಶ್ಚಿಮಾತ್ಯ ಸಂಸ್ಕೃತಿಯ ಅನುಕರಣೆಯಿಂದ ನಮ್ಮ ನಿಜ ಸಂಸ್ಕೃತಿಯ ಅರಿವೇ ಇಲ್ಲವಾಗಿದೆ.
ಇಂದಿನ ನನ್ನ ಪ್ರೀತಿಯ ಯುವ ಮಿತ್ರರೇ!

ನಾವೆಲ್ಲಾ ಅಮ್ಮನ ಹಾಲು ಕುಡಿದದ್ದು ಒಂದೆರಡು ವರ್ಷ. ಆಮೇಲೇ?
 ಮನೆಯಲ್ಲಿರುತ್ತಿದ್ದ ನಾಡಹಸುವಿನ ಕೆಚ್ಚಲಿಗೆ ಬಾಯಿಹಾಕಿ ಚಪ್ಪರಿಸಿದವರು ನಾವು!!
ನಮ್ಮ    ಆಯುಶ್ಯ ಇನ್ನೇನು ಮುಗಿಯುತ್ತಾ ಬಂತು!  ನಮ್ಮ   ತಲೆಮಾರು ಮಾಯವಾಗುದಕ್ಕೆ ಮುಂಚೆಯೇ  ನಮ್ಮ ಗತವೈಭವಗಳೆಲ್ಲಾ ಮಾಯವಾಗುತ್ತಿವೆ!!
ಓಹ್! ಗತ ವೈಭವ ಎಂದಾಗ ನೀವು ಅಣಕಿಸುತ್ತೀರ, ಅಲ್ವಾ?
ಹೌದು, ಇಂದಿನಂತೆ ಕಂಪ್ಯೂಟರ್, ಮೊಬೈಲ್, ಟಿ.ವಿ. ನಮ್ಮ ಕಾಲದಲ್ಲಿರಲಿಲ್ಲ. ಕಾರ್ ಗಳ ಓಡಾಟವೂ ಇರಲಿಲ್ಲ.
ಜೊತೆ ಜೊತೆಗೆ  ನಮ್ಮ ಕಾಲದಲ್ಲಿ ಮಕ್ಕಳು ಕನ್ನಡಕ ಹಾಕುತ್ತಿರಲಿಲ್ಲ!
ಬಿ.ಪಿ. ಶುಗರ್  ಖಾಯಿಲೆ ಗೊತ್ತಿರಲಿಲ್ಲ!!
ಅಂದಿನ ಕಾಲದಲ್ಲಿ  ತಿಂಗಳಲ್ಲಿ    ಒಂದು ಕ್ವಿಂಟಾಲ್ ಅಕ್ಕಿ ಖರ್ಚಾಗುತ್ತಿದ್ದ ಮನೆಯಲ್ಲಿ ಇಂದು 10 ಕೆ.ಜಿ. ಅಕ್ಕಿ ಖರ್ಚಾಗುತ್ತಿಲ್ಲ.
ಅಂದು ಹಸಿವಿತ್ತು. ಆರೋಗ್ಯವಿತ್ತು. ಅನ್ನ ರುಚಿಸುತ್ತಿತ್ತು
ಇಂದು ಹಸಿವಿಲ್ಲ. ಆರೋಗ್ಯವಿಲ್ಲ. ಅನ್ನ ರುಚಿಸುವುದಿಲ್ಲ!!
ಇದು ಸತ್ಯವೋ? ಸುಳ್ಳೋ ನೀವೇ ಹೇಳಿ. ನಿಮಗೆ ಊಹಿಸಲು ಕಷ್ಟವಾದೀತು. ಬದುಕಿದ್ದರೆ  ನಿಮ್ಮ       ಅಜ್ಜ-ಅಜ್ಜಿ ಅಥವಾ ನಿಮ್ಮ ಅಪ್ಪ-ಅಮ್ಮನನ್ನು ಕೇಳಿ. ಸತ್ಯವನ್ನು ತಿಳಿದುಕೊಳ್ಳಿ.
ಗೋವಂಶ ಉಳಿಸಿ, ಬೆಳಸಿ, ಗೋವನ್ನು ರಕ್ಷಿಸಿ-ಎನ್ನುವುದು BJP ಶ್ಲೋಗನ್ ಆಗಬೇಕೇ? ಇನ್ನುಳಿದ ಪಕ್ಷಗಳು ಈ ನೆಲದ ಸಂಸ್ಕೃತಿಯ ವಿರೋಧಿಗಳೇ?