Pages

Thursday, January 20, 2011

ವೇದಸುಧೆಯ ವಾರ್ಷಿಕೋತ್ಸವಕ್ಕೆ ಬನ್ನಿ

ಆತ್ಮೀಯ ವೇದಸುಧೆಯ ಅಭಿಮಾನಿ ಬಂಧುಗಳೇ, ನಮಸ್ತೆ,
    ವೇದಸುಧೆಯ ಪ್ರಥಮ ವಾರ್ಷಿಕೋತ್ಸವದ ಆಮಂತ್ರಣ ಇಲ್ಲಿದೆ. ದಯಮಾಡಿ ನಿಮ್ಮ  ಅಂಚೆಯ ವಿಳಾಸವನ್ನು ವೇದಸುಧೆಗೆ ಮೇಲ್ ಮಾಡಿದರೆ ಅಂಚೆಯ ಮೂಲಕ ಕೂಡ ನಿಮಗೆ ಆಮಂತ್ರಣ ಪತ್ರಿಕೆಯನ್ನು  ಕಳುಹಿಸಿಕೊಡಲಾಗುವುದು. ವಾರ್ಷಿಕೋತ್ಸವವು ಹಾಸನದಲ್ಲಿ ನಡೆಯುತ್ತಿರುವುದರಿಂದ ಈಗಾಗಲೇ ವೇದಸುಧೆಯ ಸಂಪರ್ಕದಲ್ಲಿರುವವರಿಗೆ  ಹಾಸನ ಬಹಳ ದೂರವೇನೂ ಆಗಲಾರದೆಂದು ಭಾವಿಸುವೆ.ಆದರೂ ಸಕಾಲಕ್ಕೆ ನೀವು ಬರಬೇಕಾದ್ದರಿಂದ ಕೆಳಗಿನ  ಕೆಲವು ಅಂಶಗಳನ್ನು ವೇದಸುಧೆಗೆ ಮೇಲ್ ಮೂಲಕ ತಿಳಿಸಿದರೆ ಸಾಧ್ಯವಾದಷ್ಟೂ ಉತ್ತಮ ವ್ಯವಸ್ಥೆ ಮಾಡಲಾಗುವುದು. ಬೆಂಗಳೂರಿನಿಂದ ಹಾಗೂ ಶಿವಮೊಗ್ಗಗಳಿಂದ ಬರುವವರು  ನಿಮ್ಮೂರಿನ ಬಸ್ ನಿಲ್ದಾಣದಿಂದ ಮುಂಜಾನೆ 5.30 ಕ್ಕೆ ಬಸ್ ನಲ್ಲಿ ಹೊರಟರೆ  ಸಕಾಲದಲ್ಲಿ ಹಾಸನ ತಲುಪಬಹುದು. ಸ್ವಂತ ಕಾರ್ ನಲ್ಲಿ ಬರುವವರಿಗೆ ಮೂರುವರೆ ಇಂದ ನಾಲ್ಕು ಗಂಟೆ ಬೇಕಾಗಬಹುದು.
ಆಮಂತ್ರಣದಲ್ಲಿ ಕಾರ್ಯಕ್ರಮಗಳ ವಿವರ ಇದೆ. 
ಇತರೆ ವ್ಯವಸ್ಥೆ ಗಳು:
* ಉಪಹಾರ: ಪ್ರಾತ: ಕಾಲ 8.30 ರಿಂದ 9.15
* ಚಹ/ಕಾಫೀ/ಬಾದಾಮಿ ಹಾಲು: ಕಾರ್ಯಕ್ರಮದ ನಡುವೆ ಬೆಳಿಗ್ಗೆ 11.00 ಕ್ಕೆ
ಮತ್ತು  ಮಧ್ಯಾಹ್ನ 4.00 ಕ್ಕೆ
* ಭೋಜನ: ಮಧ್ಯಾಹ್ನ 1.30 ರಿಂದ 2.30
* ಸಮಾರಂಭದ ಸ್ಥಳದಲ್ಲಿ ವೇದದ ಸಾಹಿತ್ಯಗಳು ಮಾರಾಟಕ್ಕೆ ಲಭ್ಯವಿರುತ್ತದೆ.
*  ಹಾಸನ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಾದ ಬೇಲೂರು, ಹಳೇಬೀಡು ಮತ್ತು ಶ್ರವಣ ಬೆಳಗೊಳ  ಗಳನ್ನು ನೋಡಬಯಸುವವರಿಗೆ ಬಾಡಿಗೆ ಕಾರ್ ವ್ಯವಸ್ಥೆ ಬೇಕಾದರೆ ಮುಂಚಿತವಾಗಿ ತಿಳಿಸಿ.
* ಶನಿವಾರ ರಾತ್ರಿ ಬರುವವರಿಗೆ ಉಳಿಯುವ ಮತ್ತು ಊಟೋಪಚಾರದ ಸಾಮಾನ್ಯ ವ್ಯವಸ್ಥೆ ಇರುತ್ತದೆ. ವಿಶೇಷವಾಗಿ ಹೋಟೆಲ್ ನಲ್ಲಿ ರೂಮ್ ಮಾಡಬಯಸುವವರು ಮುಂಚಿತವಾಗಿ ತಿಳಿಸಿದರೆ ಆರಕ್ಷಣೆ ಮಾಡಲಾಗುವುದು. 
----------------------------------------

*  ಹೆಸರು:
*  ಊರು:
*  ಮೊಬೈಲ್ ನಂಬರ್:
*  ನಿಮ್ಮೊಡನೆ ಎಷ್ಟು ಜನ ಬರುವರು?
*  ಯಾವ ಸಮಯಕ್ಕೆ ಹಾಸನ ತಲುಪುವಿರಿ?
*  29.1.2011 ರಂದು ರಾತ್ರಿ ಹಾಸನದಲ್ಲಿ  ವಸತಿ ವ್ಯವಸ್ಥೆ ಬೇಕೇ?
*  ನಿಮ್ಮ ಸ್ನೇಹಿತರುಗಳನ್ನು ಆಹ್ವಾನಿಸಲು ನಿಮಗೆ ಹೆಚ್ಚು ಆಮಂತ್ರಣ    
ಪತ್ರಿಕೆಗಳು ಬೇಕೆ?










ವಾರ್ಷಿಕೋತ್ಸವ ಬೆಳಗಿನ ಅವಧಿ


1. ವೇದಘೋಷ: 9.30-9.35
2. ಸ್ವಾಗತ ಪರಿಚಯ: 9.35-9.40
3. ಪ್ರಾಸ್ತಾವಿಕನುಡಿ: 9.40-9.50
4. ದೀಪ ನೃತ್ಯ ಮತ್ತು ಉದ್ಘಾಟನೆ: 9.50-10.00
5. ಉದ್ಘಾಟನಾ ಭಾಷಣ: 10.00-10.10
6. ಸಿ.ಡಿ ಪರಿಚಯ: 10.10-10.20
7. ಸಿ.ಡಿ ಬಿಡುಗಡೆ: 10.20-10.25
8. ಅಧ್ಯಕ್ಷರ ನುಡಿ: 10.25-10.35
9. ಚಹಾ ವಿರಾಮ: 10.35-10.40
10. ವಯೊಲಿನ್ ವಾದನ: 10.40-11.10
11. ವಿಚಾರ ಸಂಕಿರಣ   [1 ಗಂಟೆ]

11.10-12.30
12.ಗೀತಗಾಯನ [ 20 ನಿಮಿಷ]
13. ಸುಧಾಕರ    
      ಶರ್ಮರನುಡಿ:
 12.30- 1.20
14. ಅಭಿನಂದನೆ: 1.20-1.25
15. ಶಾಂತಿಪಾಠ: 1.25-1.30

Wednesday, January 19, 2011

ವಿಶೇಷ ಉಪನ್ಯಾಸ

ರಾಷ್ಟ್ರ ಗೌರವ ಸಂರಕ್ಷಣ ಪರಿಷತ್ ,ಹಾಸನ ಜಿಲ್ಲಾ ಘಟಕದ  ಸಂಚಾಲಕರಾದ ಶ್ರೀ ಕೆ.ವಿ ರಾಮಸ್ವಾಮಿ ಮತ್ತು ಶ್ರೀ ಟಿ.ವಿ ನಟರಾಜ್ ಇವರು  ವೇದಸುಧೆ ವಾರ್ಷಿಕೋತ್ಸವದ ಹಿಂದಿನ ಸಂಜೆ ಒಂದು ಉತ್ತಮವಾದ ಉಪನ್ಯಾಸ ಕಾರ್ಯಕ್ರಮವನ್ನು ಹಾಸನದಲ್ಲಿ ಏರ್ಪಡಿಸಿರುತ್ತಾರೆ. ವೇದಸುಧೆಯ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳುವ ಅಭಿಮಾನಿಗಳು ಈ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳುವ ಸದವಕಾಶ. ಹೊರಊರುಗಳಿಂದ ಅಂದು ಬರುವ ಅಭಿಮಾನಿಗಳಿಗೆ ಊಟೋಪಚಾರದ ಹಾಗೂ ಉಳಿಯುವ ವ್ಯವಸ್ಥೆ ಮಾಡಲಾಗುವುದು. ಒಂದೆರಡು ದಿನ ಮುಂಚಿತವಾಗಿ ತಿಳಿಸಿದರೆ ವ್ಯವಸ್ಥೆ ಮಾಡಲು ಅನುಕೂಲವಾದೀತು.
----------------------------------------------------------------

ರಾಷ್ಟ್ರ ಗೌರವ ಸಂರಕ್ಷಣ ಪರಿಷತ್
ಹಾಸನ ಜಿಲ್ಲಾ ಘಟಕ
ಬೆಂಗಳೂರಿನ
 ವೇದಾಧ್ಯಾಯೀ ಸುಧಾಕರಶರ್ಮರಿಂದ
ವಿಶೇಷ ಉಪನ್ಯಾಸ
ವಿಷಯ:
“ಮಾನವಕುಲದ ಅಭ್ಯುದಯಕ್ಕಾಗಿ ವೇದದ ಅನಿವಾರ್ಯತೆ”

ದಿನಾಂಕ: 29.01.2011 ಶನಿವಾರ ಸಂಜೆ 6.00 ಗಂಟೆಗೆ

ಸ್ಥಳ: ಶ್ರೀ ಭಾರತೀತೀರ್ಥ ಸಭಾಂಗಣ
ಶೃಂಗೇರಿ ಶ್ರೀ ಶಂಕರಮಠದ ಆವರಣ, ಹಾಸನ

ಮಿತ್ರರೊಡಗೂಡಿ ಬನ್ನಿ

C.S.ಕೃಷ್ಣಸ್ವಾಮಿ
 ಅಧ್ಯಕ್ಷರು

K.V. ರಾಮಸ್ವಾಮಿ                          T.V.ನಟರಾಜ ಪಂಡಿತ್
ಸಂಚಾಲಕರು                                  ಸಂಚಾಲಕರು

Tuesday, January 18, 2011

॥ निर्वाण षटकम्॥

मनो बुद्ध्यहंकारचित्तानि नाहम् न च श्रोत्र जिह्वे न च घ्राण नेत्रे
न च व्योम भूमिर् न तेजॊ न वायु: चिदानन्द रूप: शिवोऽहम् शिवॊऽहम् ॥
न च प्राण संज्ञो न वै पञ्चवायु: न वा सप्तधातुर् न वा पञ्चकोश:
न वाक्पाणिपादौ न चोपस्थपायू चिदानन्द रूप: शिवोऽहम् शिवॊऽहम् ॥
न मे द्वेष रागौ न मे लोभ मोहौ मदो नैव मे नैव मात्सर्य भाव:
न धर्मो न चार्थो न कामो ना मोक्ष: चिदानन्द रूप: शिवोऽहम् शिवॊऽहम् ॥
न पुण्यं न पापं न सौख्यं न दु:खम् न मन्त्रो न तीर्थं न वेदा: न यज्ञा:
अहं भोजनं नैव भोज्यं न भोक्ता चिदानन्द रूप: शिवोऽहम् शिवॊऽहम् ॥
न मृत्युर् न शंका न मे जातिभेद: पिता नैव मे नैव माता न जन्म
न बन्धुर् न मित्रं गुरुर्नैव शिष्य: चिदानन्द रूप: शिवोऽहम् शिवॊऽहम् ॥
अहं निर्विकल्पॊ निराकार रूपॊ विभुत्वाच्च सर्वत्र सर्वेन्द्रियाणाम्
न चासंगतं नैव मुक्तिर् न मेय: चिदानन्द रूप: शिवोऽहम् शिवॊऽहम् ॥

ವೇದಸುಧೆ ವಾರ್ಷಿಕೋತ್ಸವ ಯೋಜಿತ ವೇಳಾ ಪಟ್ಟಿ

ವಾರ್ಷಿಕೋತ್ಸವ ಬೆಳಗಿನ ಅವಧಿ


1. ವೇದಘೋಷ: 9.30-9.35
2. ಸ್ವಾಗತ ಪರಿಚಯ: 9.35-9.40
3. ಪ್ರಾಸ್ತಾವಿಕನುಡಿ: 9.40-9.50
4. ದೀಪ ನೃತ್ಯ ಮತ್ತು ಉದ್ಘಾಟನೆ: 9.50-10.00
5. ಉದ್ಘಾಟನಾ ಭಾಷಣ: 10.00-10.10
6. ಸಿ.ಡಿ ಪರಿಚಯ: 10.10-10.20
7. ಸಿಡಿ ಬಿಡುಗಡೆ: 10.20-10.25
8. ಅಧ್ಯಕ್ಷರ ನುಡಿ: 10.25-10.35
9. ಚಹಾ ವಿರಾಮ: 10.35-10.40
10. ವಯೊಲಿನ್ ವಾದನ: 10.40-11.10
11. ವಿಚಾರ ಸಂಕಿರಣ   [1 ಗಂಟೆ]

11.10-12.30
12.ಗೀತಗಾಯನ [ 20 ನಿಮಿಷ]
13. ಸುಧಾಕರ    
      ಶರ್ಮರನುಡಿ:
 12.30- 1.20
14. ಅಭಿನಂದನೆ: 1.20-1.25
15. ಶಾಂತಿಪಾಠ: 1.25-1.30

Monday, January 17, 2011

"ನಿಜವ ತಿಳಿಯೋಣ"

30.01.2011 ರಂದು ಹಾಸನದಲ್ಲಿ ನಡೆಯಲಿರುವ ವೇದಸುಧೆಯ ವಾರ್ಷಿಕೋತ್ಸವದಲ್ಲಿ ವೇದಾಧ್ಯಾಯೀ ಶ್ರೀ ಸುಧಾಕರಶರ್ಮರ "ನಿಜವ ತಿಳಿಯೋಣ" ಪ್ರವಚನ ಮಾಲಿಕೆ ಸಿಡಿ ಬಿಡುಗಡೆಯಾಗಲಿದ್ದು ಬೇಲೂರಿನ ವೇದಾಧ್ಯಾಯೀ ಶ್ರೀ ವಿಶ್ವನಾಥಶರ್ಮರು ಅದರ ಪರಿಚಯವನ್ನು ಮಾಡಿಕೊಡಲಿದ್ದಾರೆ. ಅದರ ಒಂದು ಕ್ಲಿಪ್ ವೇದಸುಧೆಯ ಅಭಿಮಾನಿಗಳಿಗಾಗಿ



ಸತ್ಯಪಥವ ಹುಡುಕಬೇಕಲ್ಲಾ!

ನಮ್ಮ ಸಮಾಜ ಬಲು ವಿಚಿತ್ರ. ಬೆಳಗಿನಿಂದ ರಾತ್ರಿಯವರೆಗೂ ದುಡಿದು ಸೋತು ಸೊಪ್ಪಾಗಿ ರಾತ್ರಿ ಮನೆಗೆಬಂದು ಹಾಸಿಗೆಯಲ್ಲಿ ಕಾಲು ಚಾಚುವವರು ಕೆಲವರು. ಅವರಿಗೆ ದುಡಿಮೆಯೇ ಜೀವನ.ಇಂತವರು ಯಾವಾಗಲಾದರೊಮ್ಮೆ ಸಾವಿರಾರು ರೂಪಾಯಿಗಳನ್ನು ಖರ್ಚುಮಾಡಿ ಯಾವುದಾದರೂ ದೇವಾಲಯಗಳಲ್ಲಿ ಸೇವೆ ಮಾಡಿಸಿ ಸಮಾಧಾನ ಪಡುವುದುಂಟು. ಇನ್ನೊಂದು ವರ್ಗವಿದೆ.ಜೀವನದಲ್ಲಿ ನೈತಿಕ ಮೌಲ್ಯಗಳನ್ನುಳನ್ನು ಬಿಟ್ಟು ವಾಮಮಾರ್ಗಗಳಲ್ಲಿ ಹಣ ಸಂಪಾದಿಸುವುದು, ಆದರೆ ಧಾರ್ಮಿಕ ಕೆಲಸಗಳಿಗೆ ಸಾವಿರಾರು ರೂಪಾಯಿ ಖರ್ಚು ಮಾಡುವುದು. ಮತ್ತೊಂದು ವರ್ಗವಿದೆ. ಪ್ರಾಮಾಣಿಕವಾಗಿ ದುಡಿದು ನಮ್ಮ ಪರಂಪರೆಯಲ್ಲಿ ಬಂದಿರುವ ಎಲ್ಲಾ ವ್ರತಾಚರಣೆಗಳು, ಹಬ್ಬ ಹರಿದಿನಗಳನ್ನು ಆಚರಿಸುತ್ತಾ ತಾವು ಆಚರಿಸುತ್ತಿರುವ ಯಾವ ಆಚರಣೆಯನ್ನೂ ವೈಜ್ಞಾನಿಕವಾಗಿ ವಿಶ್ಲೇಷಿಸದೆ ಸುಮ್ಮನೆ ಅನುಸರಿಸುವುದು. ಇದು ದೊಡ್ಡ ಸಮೂಹ. ನಮ್ಮ ಹಿಂದಿನವರು ಹೀಗೆ ಮಾಡುತ್ತಿದ್ದರು. ನಾವೂ ಮಾಡುತ್ತೇವೆ. ನಮ್ಮ ಮಕ್ಕಳಿಗೂ ಮಾಡಲು ಕಲಿಸುತ್ತೇವೆ, ಎನ್ನುವ ಈ ವರ್ಗ ಯಾವುದಕ್ಕೂ ತಲೆ ಕೆಡಸಿಕೊಳ್ಳುವುದಿಲ್ಲ. ಭಯದಿಂದ ಧರ್ಮಾಚರಣೆ ಮಾಡುವ ಕೆಲವರು. ಪ್ರತೀ ವರ್ಷವೂ ತಮ್ಮ ಮನೆದೇವರಿಗೆ ಯಾತ್ರೆ ಮಾಡುವ ಕೆಲವರು ಕಾರಣಾಂತರದಿಂದ ಒಂದು ವರ್ಷ ಯಾತ್ರೆ ಮಾಡದಿದ್ದಾಗ ಅವರ ಮನೆಯಲ್ಲಿ ಯಾವುದಾದರೂ ಅಪತ್ತು ಎದುರಾದರೆ ಅದಕ್ಕೆ ಅವರು ಮನೆ ದೇವರ ದರ್ಶನವನ್ನು ಮಾಡದಿದ್ದುದೇ ಕಾರಣವೆಂದು ತಿಳಿದು ತಪ್ಪು ಕಾಣಿಕೆಯನ್ನು ತಮ್ಮ ಮನೆಯೆ ಪೂಜಾಗೃಹದಲ್ಲಿ ದೇವರ ಮುಂದಿಟ್ಟು " ಭಗವಂತಾ, ನನ್ನ ತಪ್ಪು ಕ್ಷಮಿಸಿ ನಮ್ಮ ಮನೆಯನ್ನು ಕಾಪಾಡು, ಮುಂದಿನ ವರ್ಷ ಮನೆಮಂದಿಯೆಲ್ಲಾ ಬಂದು ನಿನ್ನ ಸೇವೆ ಮಾಡಿಸಿ ಕೊಂಡು ಬರುತ್ತೇವೆಂದು" ಮನ: ಪೂರ್ವಕ ದೇವರಲ್ಲಿ ಬೇಡುವ ಒಂದು ಮುಗ್ಧ ವರ್ಗ.
ಭಗವಂತನ ಪೂಜೆಯನ್ನು ನೂರಾರು ರೀತಿಯಲ್ಲಿ ತಮ್ಮದೇ ಸರಿ ಎನ್ನುತ್ತಾ ನಿತ್ಯವೂ ತಮ್ಮದೇ ರೀತಿಯಲ್ಲಿ ಪೂಜೆಮಾಡುವ ಹಲವಾರು ಸಮೂಹ. ಅಷ್ಟೇ ಅಲ್ಲ, ಧರ್ಮದ, ದೇವರ, ಮತದ, ಮಠದ ಹೆಸರಲ್ಲಿ ಬಡಿದಾಡುವ ಗುಂಪುಗಳು.
ನಿತ್ಯವೂ ಪುರಾಣ ಪಠಣ-ಶ್ರವಣ ಮಾಡುತ್ತಾ,ಇದೇ ಸರಿಯಾದ ಮಾರ್ಗವೆಂದು ಭಾವಿಸಿರುವ ಒಂದು ಸಮೂಹ. ಪುರಾಣವೇ ಸುಳ್ಳು, ಅದು ಬರೀ ಕಟ್ಟುಕಥೆ ಎನ್ನುವ ಒಂದು ಗುಂಪು.ಇಷ್ಟೇ ಅಲ್ಲ, ಇನ್ನೂ ಸಾಕಷ್ಟು ಗೊಂದಲಗಳು.ಇವುಗಳ ಮಧ್ಯೆದಲ್ಲೇ ಇದ್ದು ಸತ್ಯಪಥವ ಹುಡುಕಬೇಕಲ್ಲಾ! ಹಿಂದಿನಿಂದ ನಡೆದು ಬಂದಿರುವ ಎಲ್ಲವನ್ನೂ ಸಾರಾಸಗಟಾಗಿ ತಿರಸ್ಕರಿಸದೆ, ಕುರುಡು ಆಚರಣೆ ಎಂದು ಮನವರಿಕೆ ಆದದ್ದನ್ನು ಬಿಡುತ್ತಾ, ಯಾವುದು ಅನೈತಿಕವೆಂದು ನಮ್ಮ ಅಂತರಾತ್ಮ ತಿಳಿಯುತ್ತದೋ ಅದರಿಂದ ದೂರವಿರುತ್ತಾ, ಒಂದು ಸತ್ಯದ ಹಾದಿಯಲ್ಲಿ ಸಾಗುವುದೇ ಒಂದು ಮಹಾನ್ ಯಜ್ಞ. ಅಂತಾ ಒಂದು ಯಾತ್ರೆಯಲ್ಲಿ ಸಾಗುವುದೇ ವೇದಸುಧೆಯ ಉದ್ಧೇಶ. ಹಲವು ಗೊಂದಲಗಳು ಎದುರಾದರೂ ಸತ್ಯದ ಶೋಧನೆಯಲ್ಲಿ ಮುಂದುವರೆಯೋಣ ಬನ್ನಿ.ಇದೊಂದು ಸತ್ಯದ ಹಾದಿಯನ್ನು ಹುಡುಕುವ ವೇದಿಕೆಯಾದ್ದರಿಂದ ಯಾರು ಏನೇ ಅಭಿಪ್ರಾಯ ಹೊರಹಾಕಿದರೂ ಅದರ ಬಗ್ಗೆ ವಿಮರ್ಷೆ ಮಾಡೋಣ. ಯಾವುದನ್ನೂ ವೈಯಕ್ತಿಕನೆಲೆಯಲ್ಲಿ ನೋಡದೆ ವೈಚಾರಿಕ ಹಿನ್ನೆಲೆಯಲ್ಲಿ ಚರ್ಚಿಸಿದಾಗ ಒಂದಲ್ಲಾ ಒಂದು ದಿನ ಋಜುಮಾರ್ಗದಲ್ಲಿ ಸಾಗುವುದು ಯಾರಿಗೂ ಕಷ್ಟವಾಗಲಾರದು.